ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕ್ಯಾಂಟೀನ್‌ ಭಾಗ್ಯ


Team Udayavani, May 14, 2019, 5:00 PM IST

sudi-1

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ ಇನ್ನು ಮುಂದೆ ರೋಗಿಗಳಿಗೆ ಉಪಾಹಾರ ಗೃಹ ಲಭ್ಯವಾಗಲಿದೆ.

ಈಗಾಗಲೇ ಆಸ್ಪತ್ರೆ ಹೊರಾಂಗಣದಲ್ಲಿ 500 ಚದರ ಅಡಿ ವಿಸ್ತೀರ್ಣದಲ್ಲಿ ಹೊಸದಾಗಿ ಕ್ಯಾಂಟೀನ್‌ ಕಟ್ಟಡ ಹಾಗೂ ಹಾಲಿನ ಡೇರಿ/ಹಣ್ಣಿನ ಮಳಿಗೆ ಸೇವೆ ನೀಡಲು ಕಟ್ಟಡ ಸಿದ್ಧಗೊಂಡಿದ್ದು, ಟೆಂಡರ್‌ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಕೆಎಚ್ಎಸ್‌ಡಿಆರ್‌ಪಿ ಎಂಜಿನಿಯರ್‌ ವಿಭಾಗದಿಂದ ಕಟ್ಟಡ ಕೆಲಸ ಪೂರ್ಣಗೊಳಿಸಲಾಗಿದೆ. ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯಿಂದ ಟೆಂಡರ್‌ ಪ್ರಕ್ರಿಯೆ ಕುರಿತು ಪುತ್ತೂರು ಎಸಿ ಅವರಿಗೆ ಅನುಮೋದನೆ ಕಳುಹಿಸಲಾಗಿದೆ. ಆದೇಶ ಜಾರಿಯಾದ ಬಳಿಕ ಕಡಿಮೆ ದರ ಪಟ್ಟಿ ನೀಡಿದವರಿಗೆ ಮೇ ಅಂತಿಮ ವಾರದೊಳಗೆ ಉಪಾಹಾರ ಗೃಹಕ್ಕೆ ಸಮಿತಿಯಿಂದ ಅನುಮತಿ ಸಿಗಲಿದೆ.

ಕನಿಷ್ಠ ದರವಿದ್ದರೆ ಅವಕಾಶ

ಇಡ್ಲಿ, ಅನ್ನ-ಸಾರು, ಅನ್ನ-ರಸಂ, ಚಪಾತಿ-ಪಲ್ಯ ಇರಲಿದ್ದು, ಸರಕಾರದಿಂದ ಇಂತಿಷ್ಟು ಗ್ರಾಂ ಎಂದು ನಿಗದಿಪಡಿಸಿದೆ. ಅತೀ ಕಡಿಮೆ ದರ ನಮೂದು ಮಾಡಿರುವವರಿಗೆ ಟೆಂಡರ್‌ ಲಭ್ಯವಾಗಲಿದ್ದು, ಸಂಘ-ಸಂಸ್ಥೆ, ವಿಧವೆಯರು, ಅಂಗವಿಕಲರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಕ್ಯಾಂಟೀನ್‌ ನಡೆಸಲು ಈಗಾಗಲೇ 6 ಮಂದಿ ಅವಕಾಶ ಕೋರಿರುವವರ ಮನವಿ ಹಾಗೂ ದರಪಟ್ಟಿ ಪ್ರಕ್ರಿಯೆಯನ್ನು ಆರೋಗ್ಯ ರಕ್ಷಾ ಸಮಿತಿ ಎ. 31ರಂದು ಪೂರ್ಣಗೊಳಿಸಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳ್ತಂಗಡಿಯಲ್ಲಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 21 ಜಿಲ್ಲಾ ಆಸ್ಪತ್ರೆಗಳು ಮತ್ತು 146 ತಾಲೂಕು ಆಸ್ಪತ್ರೆಗಳ ಆವರಣದಲ್ಲಿ ಅತೀ ಹೆಚ್ಚಿನ ರಿಯಾಯಿತಿ ದರದಲ್ಲಿ ಕ್ಯಾಂಟೀನ್‌ ಸೌಲಭ್ಯ ಒದಗಿಸುತ್ತಿದೆ. ಜಿಲ್ಲೆಯಲ್ಲಿ ಮೊದಲೆಂಬಂತೆ ಬೆಳ್ತಂಗಡಿ ತಾಲೂಕಲ್ಲಿ ಸೇವೆ ಆರಂಭಿಸುವ ನಿರೀಕ್ಷೆಯಿದೆ. ಆಸ್ಪತ್ರೆಗಳ ಹೊರ ರೋಗಿಗಳಿಗೆ, ಒಳರೋಗಿಗಳಿಗೆ, ರೋಗಿಗಳ ಜತೆಗಿರುವ ಸಹಾಯಕರಿಗೆ ಹಾಗೂ ಆಸ್ಪತ್ರೆ ಡಿ ದರ್ಜೆ ಸಿಬಂದಿ ವರ್ಗಕ್ಕೆ ದಿನಕ್ಕೆ ಸಾವಿರ ಊಟ ಮತ್ತು ಉಪಾಹಾರ ಪೂರೈಸಲು ಅರ್ಹರಿರುವವರನ್ನು ನೇಮಿಸಲು ಈಗಾಗಲೇ ಆರೋಗ್ಯ ರಕ್ಷಾ ಸಮಿತಿಗೆ ಸೂಚಿಸಲಾಗಿದೆ.

ಹಾಲಿನ ಡೇರಿ/ ಹಣ್ಣಿನ ಮಳಿಗೆ

ಸಮೀಪದಲ್ಲೇ ಹಾಪ್‌ಕಾಮ್ಸ್‌ನಿಂದ ಹಣ್ಣಿನ ಮಳಿಗೆ ಹಾಗೂ ನಂದಿನಿ ವತಿಯಿಂದ ಹಾಲಿನ ಉತ್ನನ್ನದ ಮಳಿಗೆಯೂ ಆರಂಭಗೊಳ್ಳಲಿದೆ.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕ್ಯಾಂಟೀನ್‌ ಭಾಗ್ಯ

ಅಂತಿಮ ಹಂತದಲ್ಲಿ

ರೋಗಿಗಳ ಆರೋಗ್ಯ ದೃಷ್ಟಿ ಯಿಂದ ಉತ್ತಮ ಆಹಾರ ಒದಗಿಸುವ ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲೇ ಕ್ಯಾಂಟೀನ್‌ ತೆರೆಯಲಾಗುತ್ತಿದೆ. ಈಗಾಗಲೇ ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿವೆ.
– ಡಾ| ಕಲಾಮಧು ತಾ| ವೈದ್ಯಾಧಿಕಾರಿ, ಬೆಳ್ತಂಗಡಿ

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.