ಕ್ಯಾನ್‌ವಾಸ್‌ ಚಿತ್ರಕಲೆಯಲ್ಲಿ ಸುಳ್ಯದ ಕುವರಿ ಚಂದನಾ ಎತ್ತಿದ ಕೈ

ಕನಸಿನಲ್ಲಿ ಮೂಡಿಬರುವ ಆಕೃತಿಗಳಿಗೆ ಕುಂಚದಲ್ಲಿ ಸುಂದರ ರೂಪ

Team Udayavani, Dec 14, 2019, 4:27 AM IST

xd-17

ವೃತ್ತಿಯಲ್ಲಿ ಎಂಜಿನಿಯರಿಂಗ್‌ ಪದವೀಧರೆ ಚಂದನಾ ಅವರು ತನ್ನ ಕಣ ಕಣದಲ್ಲಿ ಚಿತ್ರಕಲೆಯನ್ನು ಮೈಗೂಡಿಸಿಕೊಂಡಿದ್ದಾರೆ. ಅವರು ತನ್ನ 4ನೇ ವಯಸ್ಸಿನಲ್ಲೇ ಚಿತ್ರಕಲೆಯಲ್ಲಿ ತೊಡಗಿಸಿಕೊಂಡು ಇಂದು ಹೊಸ ಹೊಸ ಆಯಾಮಗಳಲ್ಲಿ ಚಿತ್ರವನ್ನು ಬಿಡುಸುತ್ತಾ ರಾಜ್ಯದೆಲ್ಲೆಡೆ ಗುರುತಿಸಿಕೊಂಡು ತನ್ನ ಹುಟ್ಟೂರಾದ ಸುಳ್ಯಕ್ಕೆ ಕೀರ್ತಿ ತರುತ್ತಿದ್ದಾರೆ.

ಅವರು ಸುಳ್ಯ ಸಮೀಪದ ಕನಕಮಜಲು ಮೂರ್ಜೆ ನಿವಾಸಿಗಳಾದ ಶ್ರೀಧರ್‌ ಮತ್ತು ಸುಧಾ ದಂಪತಿ ಪುತ್ರಿ. ತನಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಲು ಪ್ರೇರಣೆ ನನ್ನ ತಂದೆ ಎಂದು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ತನ್ನ ಕನಸಿನಲ್ಲಿ ಮೂಡಿಬರುವ ಆಕೃತಿಗಳಿಗೆ ಹೊಸದಾದ ರೂಪ ನೀಡುವ ಅವರು ತನ್ನ ಶಾಲಾ ದಿನಗಳಲ್ಲಿ ಚಿತ್ರಕಲಾ ಅಧ್ಯಾಪಕ ಪದ್ಮನಾಭ ಕೊಯನಾಡು ಮತ್ತು ಶ್ರೀಹರಿ ಪೈಂದೋಡಿಯವರ ಮಾರ್ಗದರ್ಶನದಿಂದ ಇಂದು ತನ್ನ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾರೆ.

ವರ್ಲಿ ಚಿತ್ರಕಲೆಗೂ ಸೈ
ಅವರಿಗೆ ಖ್ಯಾತ ಚಿತ್ರಕಲಾ ಮಾಂತ್ರಿಕ ವಿಲಾಸ್‌ ನಾಯಕ್‌ ಸ್ಫೂರ್ತಿಯಾಗಿದ್ದಾರೆ. ತನ್ನ ಪ್ರತಿ ಕಲೆಗೆ ಜೀವ ನೀಡುವಲ್ಲಿ ಪರೋಕ್ಷವಾಗಿ ಅವರ ಅತ್ಯದ್ಭುತ ಚಿತ್ರಕಲೆಗಳು ಪ್ರೇರಣೆ ನೀಡುತ್ತವೆ ಎಂದು ಅವರ ಮೇಲಿನ ಅಭಿಮಾನವನ್ನು ತೋರಿಸಿಕೊಳ್ಳುತ್ತಾರೆ. ಅವರು ಕ್ಯಾನ್‌ವಾಸ್‌ ಪೈಂಟಿಂಗ್‌ ಮತ್ತು ಚಿತ್ರಕಲೆಯ ಜತೆಗೆ ವರ್ಲಿ ಕಲೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಇಂದು ಸುಳ್ಯದ ಆಸುಪಾಸಿನ ಹಲವಾರು ಮನೆಗಳ ಗೋಡೆಗಳಲ್ಲಿ ಇವರ ವರ್ಲಿಕಲೆಯು ರಾರಾಜಿಸುತ್ತಿದೆ. ಹಾಗೇ ಸುಳ್ಯದ ರಂಗ ಮಯೂರಿ ಕಲಾ ಕೇಂದ್ರದ ಗೋಡೆಯಲ್ಲಿ ಇವರ ವರ್ಲಿ ಕಲೆ ಕಲಾರಸಿಕರ ಮನವನ್ನು ಗೆಲ್ಲುತ್ತಿದೆ.

ಸಹೋದರಿಯ ಪ್ರೋತ್ಸಾಹ
ಚಿತ್ರಕಲೆಗೆ ಸದಾ ಪ್ರೋತ್ಸಾಹವನ್ನು ಹಾಗೂ ಅದಕ್ಕೆ ಬೇಕಾಗುವ ವಸ್ತುಗಳನ್ನು ನನಗೆ ಸಹೋದರಿ ಮೃದುಲಾ ಅವರು ಪೂರೈಸುತ್ತಾ ಬಂದಿದ್ದಾರೆ ಎಂದು ಖುಷಿಯಿಂದ ಹೇಳಿಕೊಳ್ಳುತ್ತಾರೆ. ಚಿತ್ರಕಲೆಯೊಂದಿಗೆ ಅವರು ಕ್ರೀಡೆ ಮತ್ತು ನೃತ್ಯ ಕಲೆಯಲ್ಲೂ ಪಳಗಿದ್ದಾರೆ. ಅವರ ನೃತ್ಯ ತಂಡವು ಅಂತಾರಾಷ್ಟ್ರೀಯ ಕಾನ್ಫರೆನ್ಸ್‌ ಅನ್ನು ಪ್ರತಿನಿಧಿಸಿದೆ. ಇತ್ತೀಚೆಗೆ ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನಲ್ಲಿ ಚಿತ್ರಕಲಾ ಕಾರ್ಯಾಗಾರವನ್ನು ನಡೆಸಿಕೊಟ್ಟು ಅಲ್ಲಿನ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಿದ್ದಾರೆ.

ಅವರು ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಪೂರೈಸಿ ಪದವಿ ಪೂರ್ವ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉನ್ನತ ಶಿಕ್ಷಣವನ್ನು ಸುಳ್ಯದ ಕುರುಂಜಿ ವೆಂಕಟರಮಣ ಗೌಡ ತಾಂತ್ರಿಕ ಕಾಲೇಜನಲ್ಲಿ ಪೂರೈಸಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ಇಂಟೀರಿಯರ್‌ ಡಿಸೈನಿಂಗ್‌ ಅಭ್ಯಾಸ ಮಾಡುತ್ತಿದ್ದಾರೆ. ಸಾಧಿಸುವ ಛಲವಿದ್ದರೆ ಯಾವುದೇ ಕೆಲಸವು ಕಠಿನವಲ್ಲ. ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದರೆ ಮನದಲ್ಲಿ ಎಂದೂ ಶಾಂತಿ ನೆಲೆಸಿರುತ್ತದೆ ಹಾಗೂ ಶ್ರದ್ಧೆಯ ಮಟ್ಟವೂ ಹೆಚ್ಚುತ್ತದೆ ಎಂದು ಅನುಭವವನ್ನು ಅವರು ಹಂಚಿಕೊಳ್ಳುತ್ತಾರೆ.

ನೂರಾರು ಚಿತ್ರಗಳ ರಚನೆ
ಅವರದ್ದು ಕ್ಯಾನ್‌ವಾಸ್‌ ಚಿತ್ರ ರಚನೆಯಲ್ಲಿ ಎತ್ತಿದ ಕೈ. ನೂರಾರು ಕ್ಯಾನ್‌ವಾಸ್‌ ಚಿತ್ರಗಳನ್ನು ರಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ತನಗೆ ದೊರಕುವ ಎಲ್ಲ ಬಿಡುವಿನ ವೇಳೆಯನ್ನು ಕಲಾ ಸೌಧದಲ್ಲಿ ಕಳೆಯಲು ಇಚ್ಛಿಸುವ ಅವರು ತನ್ನ ಕನಸಿನಲ್ಲಿ ಮೂಡಿಬರುವ ಆಕೃತಿಗಳಿಗೆ ಅಲ್ಲಿಂದ ಹೊಸ ಸ್ಫೂರ್ತಿಯನ್ನು ಪಡೆಯುತ್ತಾರೆ. ತನ್ನ ಹುಟ್ಟೂರು ಸುಳ್ಯದಲ್ಲಿ ಮುಂದೊಂದು ದಿನ ತನ್ನ ಮೊದಲ ಕಲಾಕೃತಿಗಳ ಸಂಗ್ರಹವನ್ನು ಪ್ರದರ್ಶಿಸಿಸಬೇಕೆಂದು ದೊಡ್ಡ ಕನಸನ್ನು ಹೊತ್ತುಕೊಂಡು ಅದನ್ನು ನನಸಾಗಿಸುವ ಎಲ್ಲ ಪ್ರಯತ್ನಗಳನ್ನು ಸ್ವತಃ ಅವರೇ ಮಾಡಿಕೊಂಡು ಬರುತ್ತಿದ್ದಾರೆ.

ಸ್ವಾತಿ ನಾಯಕ್‌ ಪೆರ್ಲ, ಎಸ್‌ಡಿಎಂ ಕಾಲೇಜು ಉಜಿರೆ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.