ಕುಸಿಯುವ ಭೀತಿಯಲ್ಲಿ ಚೆಲ್ಯಡ್ಕ ಮುಳುಗು ಸೇತುವೆ

ಆಧಾರ ಸ್ತಂಭದ ಕಗ್ಗಲ್ಲು ಕೆಳಭಾಗದಲ್ಲಿ ಕಳಚಿ ಹೋಗಿದೆ; ಮಳೆಗಾಲದಲ್ಲಿ ಅಪಾಯ

Team Udayavani, Jun 16, 2019, 9:19 AM IST

z-31

ಈಶ್ವರಮಂಗಲ: ಚೆಲ್ಯಡ್ಕದ ಲ್ಲಿರುವ ಪುತ್ತೂರು ತಾಲೂಕಿನ ಏಕೈಕ ಮುಳುಗು ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ಕುಸಿಯುವ ಭೀತಿ ಎದುರಾಗಿದೆ. ಈ ಸೇತುವೆಯ ಕುರಿತು ಅಧಿಕಾರಿಗಳು ಲಕ್ಷ್ಯ ವಹಿಸಿ ದುರಸ್ತಿ ಮಾಡಿಸಬೇಕು, ಇಲ್ಲವೇ ಮಳೆಗಾಲದಲ್ಲಿ ಹಲವು ಬಾರಿ ಮುಳುಗಡೆಯಾಗುವ ಸೇತುವೆಯ ಬದಲು ಸರ್ವಋತು ಸಂಪರ್ಕ ಸೇತುವೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಬೆಟ್ಟಂಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಚೆಲ್ಯಡ್ಕ ಮುಳುಗು ಸೇತುವೆ ನದಿಯ ತಳದಿಂದ ಕೇವಲ ಐದಾರು ಅಡಿಗಳಷ್ಟು ಎತ್ತರವಿದ್ದು, ಮಳೆಗಾಲದ ಸಂದರ್ಭದಲ್ಲಿ ಆಗಾಗ ಮುಳುಗಡೆಯಾಗುವುದರಿಂದ ಸಂಚಾರ ಸ್ಥಗಿತಗೊಳ್ಳುತ್ತದೆ. ಸೇತುವೆ ಇಕ್ಕೆಲಗಳಲ್ಲಿ ತಡೆಗೋಡೆ ಇಲ್ಲದಿದ್ದರೂ ಈವರೆಗೆ ಅದೃಷ್ಟವಶಾತ್‌ ಜೀವಹಾನಿ ಸಂಭವಿಸಿಲ್ಲ.ಸೇತುವೆ ಮುಳು ಗಡೆಯಾದರೆ ಗುಮ್ಮಟ ಗದ್ದೆ, ಅಜ್ಜಿಕಲ್ಲು, ಚಿಲ್ಮೆತ್ತಾರು, ಬಳೇರಿ ಅಸುಪಾಸಿನ ಜನತೆ ಸಂಪರ್ಕ ಕಳೆದುಕೊಳ್ಳುತ್ತಾರೆ.

ಹಲವು ಖಾಸಗಿ ಬಸ್‌ಗಳು ಇದೇ ರಸ್ತೆಯಲ್ಲಿ ಸಂಚರಿಸಲು ಪರವಾನಿಗೆ ಹೊಂದಿದ್ದು, ಮುಳುಗಡೆ ಸಂದರ್ಭ ಸಂಟ್ಯಾರ್‌ ಮೂಲಕವಾಗಿ ಸಂಚರಿಸಬೇಕಾಗಿದೆ. ದೇವಸ್ಯದಿಂದ ಪುತ್ತೂರು ಮತ್ತು ಚೆಲ್ಯಡ್ಕದಿಂದ ಪಾಣಾಜೆಯವರೆಗೆ ಲೋಕೋಪಯೋಗಿ ಇಲಾಖೆ ರಸ್ತೆಯಾದರೆ ಇದರ ನಡುವೆ ಸುಮಾರು 4 ಕಿ.ಮೀ. ಜಿ.ಪಂ. ರಸ್ತೆಯಾಗಿದೆ. ದೇವಸ್ಯದಿಂದ ಅಜ್ಜಿಕಲ್ಲುವಿನವರೆಗೆ ರಸ್ತೆ ಅಭಿವೃದ್ಧಿಗೊಂಡಿದ್ದು, ಉಳಿದ ಭಾಗದ ರಸ್ತೆ ಅಭಿವೃದ್ಧಿ ಜತೆತೆ ಸರ್ವಋತು ಸೇತುವೆ ಕಾಮಗಾರಿ ಆಗಬೇಕಾಗಿದೆ.

1.50 ಕೋಟಿ ರೂ. ಪ್ರಸ್ತಾವನೆ
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ 1.50 ಕೋಟಿ ರೂ. ವೆಚ್ಚದ ಕಾಮಗಾರಿಯ ಪ್ರಸ್ತಾವನೆಯನ್ನು ನಬಾರ್ಡ್‌ ಮೂಲಕ ಸರಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಈ ಬೇಸಗೆಯಲ್ಲಿ ಮಂಜೂರಾತಿ ಪ್ರಕ್ರಿಯೆ ನಡೆಯದೇ ಇರುವುದರಿಂದ ಸರಕಾರ ಮಟ್ಟದಿಂದ ಅನುಮೋದನೆಗೆ ಬಾಕಿಯಿದೆ.

ಶಿಥಿಲಾವಸ್ಥೆಯಲ್ಲಿದೆ ಮುಳುಗು ಸೇತುವೆ
ಸುಮಾರು 45 ವರ್ಷಗಳ ಹಿಂದೆ ಚೆಲ್ಯಡ್ಕ ಎನ್ನುವಲ್ಲಿ ನಿರ್ಮಾಣ ಮಾಡಿರುವ ಸೇತುವೆ ಈಗ ಶಿಥಿಲಾವಸ್ಥೆಗೆ ತಲುಪಿ, ಕುಸಿಯುವ ಭೀತಿಯಲ್ಲಿದೆ. ಸೇತುವೆ ಆಧಾರ ಸ್ತಂಭದ ಕಗ್ಗಲ್ಲು ಕೆಳಭಾಗದಲ್ಲಿ ಕಳಚಿ ಹೋಗಿದೆ. ಸ್ತಂಭಕ್ಕೆ ಆಳವಡಿಸಿದ ಕಬ್ಬಿಣದ ರಾಡ್‌ಗಳು ನೇತಾಡುತ್ತಿವೆ. ಕಗ್ಗಲ್ಲಿನಿಂದ ನಿರ್ಮಿಸಲಾಗಿದ್ದ ಸೇತುವೆಯ ಆಧಾರ ಸ್ತಂಭದ ಗೋಡೆ ಮಾತ್ರವಲ್ಲದೆ ಸೇತುವೆ ಮೇಲ್ಗಡೆಯೂ ಬಿರುಕು ಕಾಣಿಸುತ್ತಿದೆ. ಮಳೆಗಾಲದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿಸಿದೆ. ಭಾರೀ ಮಳೆ ಸುರಿದರೆ ನೆರೆಯ ನೀರು ತುಂಬಿ ಸೇತುವೆ ಮುಳುಗುವ ಜತೆಗೆ ನೀರಿನೊಂದಿಗೆ ಭಾರೀ ಗಾತ್ರದ ಮರದ ದಿಮ್ಮಿಗಳು ಬಂದು ಸೇತುವೆಗೆ ಬಡಿದರೆ ಕುಸಿಯುವ ಸಾಧ್ಯತೆಯೇ ಹೆಚ್ಚು.

ಸೇತುವೆ ಪರಿಶೀಲಿಸಲಿ
ಕಳೆದ ಮಳೆಗಾಲದಲ್ಲಿ ಬಂಟ್ವಾಳ ಸಮೀಪದ ಮೂಲರಪಟ್ನ ಸೇತುವೆ ಕುಸಿದ ನೆನಪು ಮಾಸುವ ಮೊದಲೇ ಈ ಸೇತುವೆಯೂ ಅಪಾಯದ ಕರೆಗಂಟೆ ಬಾರಿಸುತ್ತಿದ್ದು, ಅಧಿಕಾರಿಗಳು ಸೇತುವೆಯ ಗುಣಮಟ್ಟ ಹಾಗೂ ಧಾರಣ ಸಾಮರ್ಥ್ಯವನ್ನು ಪರೀಕ್ಷಿಸಿ, ಜನ ಹಾಗೂ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕುಸಿಯುವ ಸಾಧ್ಯತೆ ಹೆಚ್ಚು
ಹಲವು ವರ್ಷಗಳ ಕನಸು ನನಸಾಗಿಲ್ಲ. ಮಳೆಗಾಲದಲ್ಲಿ ಪ್ರವಾಹದ ಸಂದರ್ಭ ಅನಾಹುತ ಸಂಭವಿಸುವ ಅಪಾಯವಿದೆ. ಸೇತುವೆ ಕುಸಿಯುವ ಸಾಧ್ಯತೆ ಇರುವುದರಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಇಲ್ಲಿ ಹೊಸದಾಗಿ ಸರ್ವಋತು ಸೇತುವೆ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. – ಸನತ್‌ ಕುಮಾರ್‌ ಸ್ಥಳೀಯ ನಿವಾಸಿ

ಅನುಮತಿ ಬಾಕಿ ಇದೆ
ಇದು ಜಿ.ಪಂ. ರಸ್ತೆಯಾಗಿದೆ. ಲೋಕೋಪಯೋಗಿ ಇಲಾಖೆಯಿಂದ ನಬಾರ್ಡ್‌ 25ನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆ ಕಾಮಗಾರಿ ನಡೆಯುತ್ತದೆ. ಸರಕಾರ ಅನುಮತಿ ನೀಡುವುದು ಬಾಕಿ ಉಳಿದಿದೆ.
– ಪ್ರಮೋದ್‌ ಕುಮಾರ್‌, ಲೋಕೋ ಪಯೋಗಿ ಎಂಜಿನಿಯರ್‌, ಪುತ್ತೂರು

ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.