ಬಿಸಿಯೂಟಕ್ಕೆ ತಾವೇ ತರಕಾರಿ ಬೆಳೆಯುವ ಮಕ್ಕಳು

ರಾಮಕುಂಜ ಪ್ರೌಢಶಾಲೆಯಲ್ಲಿ ಸಾವಯವ ತರಕಾರಿ; ಕೃಷಿ ಸಂಸ್ಕೃತಿ ಉಳಿಸುವ ವಿಶಿಷ್ಟ ಪ್ರಯತ್ನ

Team Udayavani, Aug 21, 2019, 5:00 AM IST

16

ಕಡಬ: ಕೃಷಿ ಸಂಸ್ಕೃತಿಯಿಂದ ಯುವ ಸಮುದಾಯ ದೂರ ಸರಿಯುತ್ತಿರುವ ಕಾಲಘಟ್ಟದಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಶಾಲಾ ವಠಾರದಲ್ಲಿ ಸಾವಯವ ತರಕಾರಿ ತೋಟ ಮಾಡುವ ಮೂಲಕ ಕೃಷಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದೆ. ಎರಡು ವರ್ಷಗಳಿಂದ ಇಲ್ಲಿ ಬೀಜ ಬಿತ್ತುವಲ್ಲಿಂದ ಫಸಲು ಕೊಯ್ಯುವ ತನಕ ಎಲ್ಲ ಕೆಲಸಗಳನ್ನು ವಿದ್ಯಾರ್ಥಿಗಳೇ ನಿರ್ವಹಿಸುತ್ತಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ತಾಜಾ ತರಕಾರಿ
ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಹುಟ್ಟೂರು ರಾಮಕುಂಜದಲ್ಲಿ ಅವರದೇ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧೀನದಲ್ಲಿರುವ ಈ ಅನುದಾನಿತ ಪ್ರೌಢಶಾಲೆಯು ಸಂಸ್ಕಾರದೊಂದಿಗೆ ಶಿಕ್ಷಣ ಎನ್ನುವ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿದೆ. ಸುಮಾರು 430 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸಂಸ್ಥೆಯಲ್ಲಿ ತಮ್ಮ ಮಧ್ಯಾಹ್ನದ ಉಚಿತ ಬಿಸಿಯೂಟಕ್ಕೆ ವಿದ್ಯಾರ್ಥಿಗಳೇ ತರಕಾರಿ ಬೆಳೆಯುತ್ತಿದ್ದಾರೆ.

ಅಡುಗೆಗೆ ತರಕಾರಿ ಕಡಿಮೆಯಾದರೆ ಮಾತ್ರ ಖರೀದಿಸಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಕೃಷಿಯತ್ತ ಒಲವು, ರೈತರ ಕಷ್ಟಗಳ ಬಗ್ಗೆ ಅರಿವು ಮೂಡಿಸುವುದು, ಕೈ ಕೆಸರಾದರೆ ಬಾಯಿ ಮೊಸರು ಎನ್ನುವ ನಾಣ್ಣುಡಿಯನ್ನು ಅರ್ಥೈಸುವ ಉದ್ದೇಶ ಈ ಯೋಜನೆಯಲ್ಲಿ ಅಡಕವಾಗಿದೆ.

ಇಲ್ಲಿನ ಇನ್ನೊಂದು ವಿಶೇಷವೆಂದರೆ, ತರಕಾರಿ ಬೆಳೆಯನ್ನು ಸಾವಯವ ಗೊಬ್ಬರ ಬಳಸಿಯೇ ಮಾಡಲಾಗುತ್ತಿದೆ. ಅದಕ್ಕಾಗಿ ಶಾಲೆಗೆ ಹತ್ತಿರವಿರುವ ಮನೆಗಳಿಂದ ಬರುವ ವಿದ್ಯಾರ್ಥಿಗಳು ಮನೆಯಿಂದ ಸಗಣಿ ತರುವ ಯೋಜನೆ ರೂಪಿಸಲಾಗಿದೆ. ಕಟ್ಟಿಗೆಯಿಂದ ಸಿಗುವ ಬೂದಿಯನ್ನೂ ಬಳಸಿಕೊಳ್ಳಲಾಗುತ್ತಿದೆ. ಪ್ರಸ್ತುತ ಅಲಸಂಡೆ, ಬೆಂಡೆ, ಬದನೆ ಹಾಗೂ ದೀವಿ ಹಲಸು ಬಳಕೆಗೆ ಸಿಗುತ್ತಿದ್ದು, ತೊಂಡೆ ಹಾಗೂ ಬಸಳೆ ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಸಿಗಲಿದೆ. ಶಾಲೆಯ 9ನೇ ತರಗತಿಯ ಕೃಷಿಯಲ್ಲಿ ಆಸಕ್ತಿ ಇರುವ ಆಯ್ದ 20 ವಿದ್ಯಾರ್ಥಿಗಳು ತರಕಾರಿ ತೋಟದ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಉಳಿದ ವಿದ್ಯಾರ್ಥಿಗಳೂ ಈ ಕೆಲಸದಲ್ಲಿ ಸಹಕರಿಸುತ್ತಾರೆ. ಮುಖ್ಯ ಶಿಕ್ಷಕ ಸತೀಶ್‌ ಭಟ್ ಅವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಹಾಗೂ ಶಿಕ್ಷಕಿ ಪುಷ್ಪಾವತಿ ತರಕಾರಿ ತೋಟದ ಕೆಲಸಗಳಿಗೆ ನೇತೃತ್ವ ನೀಡುತ್ತಿದ್ದಾರೆ.

ಇಸ್ರೇಲ್ ಕೃಷಿಯ ಆಸಕ್ತಿಸ್ವಾವಲಂಬಿಯಾಗಿ ಬದುಕಲು ಕೃಷಿ ಸಹಕಾರಿ. ರೈತರ ಪರಿಶ್ರಮ ಅರಿವಾಗ ಬೇಕಾದರೆ ಪ್ರತಿಯೊಬ್ಬರೂ ಸ್ವಲ್ಪ ಮಟ್ಟಿಗಾದರೂ ಕೃಷಿಯಲ್ಲಿ ತೊಡಗ ಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೃಷಿ ಕಾಯಕದ ಸ್ಫೂರ್ತಿ ತುಂಬುವ ಪ್ರಯತ್ನ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಸ್ರೇಲ್ ದೇಶದಲ್ಲಿ ಜನಪ್ರಿಯವಾಗಿರುವ ಕಡಿಮೆ ಮಣ್ಣು ಹಾಗೂ ನೀರನ್ನು ಬಳಕೆ ಮಾಡಿ ಬೆಳೆ ತೆಗೆಯುವ ವಿಶಿಷ್ಟ ಕೃಷಿ ಪದ್ಧತಿಯನ್ನು ನಮ್ಮ ಶಾಲೆಯ ತರಕಾರಿ ತೋಟದಲ್ಲಿಯೂ ಪ್ರಯೋಗ ನಡೆಸಬೇಕೆಂಬ ಉದ್ದೇಶವಿದೆ.
– ಸತೀಶ್‌ ಭಟ್, ಮುಖ್ಯ ಶಿಕ್ಷಕರು

ಜೀವನ ಶಿಕ್ಷಣತರಗತಿಯೊಳಗಿನ ಪಾಠದೊಂದಿಗೆ ಜೀವನ ಶಿಕ್ಷಣವೂ ಸಿಗುತ್ತಿದೆ. ಮಣ್ಣಿನೊಂದಿಗೆ ಕೆಲಸ ಮಾಡುವುದೇ ಖುಷಿ. ಅದರಲ್ಲಿಯೂ ತರಕಾರಿ ತೋಟದಲ್ಲಿ ನಾವು ಬೆಳೆಸಿದ ಗಿಡಬಳ್ಳಿಗಳು ಹೂವು ಬಿಟ್ಟು ಫಸಲು ಬಂದಾಗ ಸಿಗುವ ಸಂತೋಷವೇ ಬೇರೆ.
– ಶ್ರೀಕಾಂತ್‌ ಗೋಳಿತೊಟ್ಟು 9ನೇ ತರಗತಿ ವಿದ್ಯಾರ್ಥಿ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.