ಇಂದಲ್ಲ ನಾಳೆ ಆರಂಭಗೊಳ್ಳಬಹುದೆಂಬ ನಿರೀಕ್ಷೆಗೆ ತಣ್ಣೀರು ?

ಇಂದಿರಾ ಕ್ಯಾಂಟೀನ್‌ ಮುಚ್ಚುವ ಮಾತು; ಬೆಳ್ತಂಗಡಿಯಲ್ಲಿ ಇನ್ನೂ ಅನುಷ್ಠಾನವೇ ಆಗಿಲ್ಲ

Team Udayavani, Aug 29, 2019, 5:00 AM IST

h-1

ಬೆಳ್ತಂಗಡಿ: ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚ ಲಾಗುತ್ತದೆ, ಮುಚ್ಚುವುದನ್ನು ಕಾಂಗ್ರೆಸ್‌ ವಿರೋಧಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಬೆಳ್ತಂಗಡಿಯಲ್ಲಿ ಕ್ಯಾಂಟೀನನ್ನು ಮುಚ್ಚುವುದಕ್ಕೆ ಅವ ಕಾಶವೇ ಇಲ್ಲ. ಅಂದರೆ ಇಲ್ಲಿ ಕ್ಯಾಂಟೀನ್‌ಇನ್ನೂ ಆರಂಭಗೊಂಡಿಲ್ಲ !

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ ಅನುಷ್ಠಾನಕ್ಕೆ ಕಳೆದ 1 ವರ್ಷದ ಹಿಂದೆಯೇ ಕಾಮ ಗಾರಿ ಆರಂಭಗೊಂಡಿದ್ದು, ಅಂದಿನ ತಹಶೀಲ್ದಾರ್‌ ಮದನ್‌ಮೋಹನ್‌ ಸಿ. ನಿರ್ದೇಶನದಲ್ಲಿ ಭೂಮಿ ಸಮತಟ್ಟು ಕಾರ್ಯ ನಡೆದಿತ್ತು. ಆದರೆ ಒಂದು ವರ್ಷವಾದರೂ ಕ್ಯಾಂಟೀನ್‌ ಆರಂಭಕ್ಕೆ ಅಡಿಪಾಯ ಕೆಲಸ ಮಾತ್ರ ನಡೆದಿದೆ.

ಪ್ರಾರಂಭದಲ್ಲೇ ವಿಘ್ನ !
ಬೆಳ್ತಂಗಡಿ ಬಸ್‌ ನಿಲ್ದಾಣದ ಹಿಂಬದಿ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್‌ ಅನುಷ್ಠಾನದ ದೃಷ್ಟಿಯಿಂದ ಸ್ಥಳ ಸಮತಟ್ಟು ಮಾಡುವ ಕಾರ್ಯ ನಡೆಸಲಾಗಿತ್ತು. ಆದರೆ ಅಲ್ಲಿ ಸಾರ್ವಜನಿಕ ಶೌಚಾಲಯ ಇದೆ ಎಂಬ ಕಾರಣಕ್ಕೆ ಅಲ್ಲಿ ಕ್ಯಾಂಟೀನ್‌ ನಿರ್ಮಿಸಬಾರದು ಎಂದು ವಿರೋಧಗಳು ವ್ಯಕ್ತವಾಗಿದ್ದವು. ಬಳಿಕ ಬೆಳ್ತಂಗಡಿ ಮಿನಿ ವಿಧಾನಸೌಧದ ಸುತ್ತಮುತ್ತಲ ಪ್ರದೇಶದಲ್ಲಿ ಖಾಲಿ ಸ್ಥಳ ಇದೆಯೇ ಎಂದು ಪರಿಶೀಲನೆ ಕಾರ್ಯವೂ ನಡೆದಿತ್ತು. ಅಂತಿಮವಾಗಿ ಜಿಲ್ಲಾಧಿಕಾರಿ ಪ್ರಾರಂಭದಲ್ಲೇ ಗುರುತಿಸಲಾದ ಸ್ಥಳದಲ್ಲೇ ಕ್ಯಾಂಟೀನ್‌ ನಿರ್ಮಿಸುವುದಕ್ಕೆ ಸೂಚನೆ ನೀಡಿದ್ದರು.

ಕಾಮಗಾರಿಯೂ ಆರಂಭ
ರಾಜ್ಯದ ಎಲ್ಲ ಕಡೆಗಳಲ್ಲೂ ಇಂದಿರಾ ಕ್ಯಾಂಟೀನ್‌ ಅನುಷ್ಠಾನ ಕಾರ್ಯ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯೇ ಮಾಡಿದ್ದು, ಅದ ರಂತೆ ಬೆಳ್ತಂಗಡಿಯಲ್ಲೂ ಸ್ಥಳ ಅಂತಿಮಗೊಂಡ ಬಳಿಕ ಕ್ಯಾಂಟೀನ್‌ನ ಕಾಮಗಾರಿಯನ್ನೂ ಆರಂಭಿಸಲಾಗಿತ್ತು. ಪ್ರಸ್ತುತ ಅಡಿಪಾಯ ಕಾಮಗಾರಿ ಮುಗಿದು ಹಲವು ತಿಂಗಳುಗಳೇ ಕಳೆದರೂ ಹಾಗೇ ಬಿಡಲಾಗಿದೆ. ಜತೆಗೆ ಕಾಮಗಾರಿ ಮುಂದು ವರಿಕೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಗುತ್ತಿಗೆ ಮುಕ್ತಾಯ ?
ಕ್ಯಾಂಟೀನ್‌ ಅನುಷ್ಠಾನ ಕಾರ್ಯ ರಾಜ್ಯಮಟ್ಟದಲ್ಲೇ ನಡೆಯುತ್ತಿರುವು ದರಿಂದ ಬೆಳ್ತಂಗಡಿಯಲ್ಲಿ ಯಾವಾಗ ಕ್ಯಾಂಟೀನ್‌ ಆರಂಭಗೊಳ್ಳುತ್ತದೆ ಎಂಬ ಮಾಹಿತಿ ಬೆಳ್ತಂಗಡಿ ಪ.ಪಂ.ನಲ್ಲಾಗಲೀ ಅಥವಾ ದ.ಕ. ಜಿಲ್ಲಾಡಳಿತದ ಬಳಿಯಾಗಲೀ ಇಲ್ಲ. ಅಲ್ಲಿನ ಅಧಿಕಾರಿಗಳ ಬಳಿ ಕೇಳಿದರೆ ಹಿಂದೆ ಅನುಷ್ಠಾನದ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯ ಅವಧಿ ಮುಕ್ತಾಯಗೊಂಡಿರುವ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದು, ಖಚಿತ ಮಾಹಿತಿ ಅವರ ಬಳಿ ಇಲ್ಲ.

ಈ ಹಿಂದೆ ಕಾಮಗಾರಿ ಆರಂಭಿಸಿದ ಸಂಸ್ಥೆಯ ಬಳಿ ಕಾಮಗಾರಿ ಮುಂದುವರಿಸುವ ಕುರಿತು ಕೇಳಿದರೆ ಇಂದು ಬರುತ್ತೇವೆ, ನಾಳೆ ಬರುತ್ತೇವೆ ಎಂದು ಸತಾಯಿಸುವ ಕೆಲಸ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಾರೆ. ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ಮುಚ್ಚುವ ಮಾತುಗಳು ಕೇಳಿ ಬರುತ್ತಿದ್ದರೂ ಇಲ್ಲಿ ಮಾತ್ರ ಕ್ಯಾಂಟೀನ್‌ ಅನುಷ್ಠಾನವೇ ಆಗಿಲ್ಲ.

ಸರಕಾರದಿಂದ ಅನುಷ್ಠಾನ
ಇಂದಿರಾ ಕ್ಯಾಂಟೀನ್‌ನನ್ನು ಅನುಷ್ಠಾನಗೊಳಿಸುವ ಕಾರ್ಯವನ್ನು ಸರಕಾರವೇ ಮಾಡುತ್ತಿದ್ದು, ನಾವು ಆಹಾರ ಪೂರೈಕೆಯ ವ್ಯವಸ್ಥೆಯನ್ನು ಮಾತ್ರ ನೋಡಿಕೊಳ್ಳುತ್ತೇವೆ. ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಅನುಷ್ಠಾನಕ್ಕೆ ಈ ಹಿಂದೆಯೇ ಸರಕಾರದಿಂದ ಅನುಮತಿ ದೊರಕಿದ್ದರೂ ಗುತ್ತಿಗೆ ವಹಿಸಿಕೊಂಡ ಸಂಸ್ಥೆ ಇನ್ನೂ ಅದರ ಕಾಮಗಾರಿ ನಡೆಸಿಲ್ಲ.
 - ಪ್ರಸನ್ನ ವಿ. ನಗರ ಯೋಜನ ನಿರ್ದೇಶಕರು, ದ.ಕ. ಜಿಲ್ಲೆ

 ಬಡವರ ಪರ ಯೋಜನೆ
ಇಂದಿರಾ ಕ್ಯಾಂಟೀನ್‌ ಬಡವರ ಪರ ಯೋಜನೆಯಾಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಲೇ ಬೆಳ್ತಂಗಡಿಯಲ್ಲಿ ಅನುಷ್ಠಾನ ವಿಳಂಬವಾಗಿದೆ. ಅವರು ಹಿಂದೆ ಬಿದ್ದು ಕೆಲಸ ಮಾಡಿದ್ದರೆ, ಕ್ಯಾಂಟೀನ್‌ ಆರಂಭವಾಗುತ್ತಿತ್ತು. ಇದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು.
 - ನವೀನ್‌ಕುಮಾರ್‌ ಕೆ. ಸವಣಾಲು

 ಸರಕಾರದ ವೈಫಲ್ಯ
ತುಳುನಾಡಿನಲ್ಲಿ ಸೂಕ್ತ ಯೋಜನೆ ಕಾರ್ಯಗತಗೊಳಿಸುವಲ್ಲಿ ಸರಕಾರ ವಿಫ‌ಲವಾಗುತ್ತಿದೆ. ಇದಕ್ಕೆ ಬೆಳ್ತಂಗಡಿಯ ಇಂದಿರಾ ಕ್ಯಾಂಟೀನ್‌ ಕೂಡ ಉತ್ತಮ ಉದಾಹರಣೆ. ಜನಪ್ರತಿನಿಧಿಗಳ ವೈಫಲ್ಯ, ಅಧಿಕಾರಿಗಳ ಪಾಳೆಗಾರಿಕೆ ಧೋರಣೆಯೇ ಇದಕ್ಕೆ ಕಾರಣ ಎನ್ನಬಹುದು.
 - ಶೈಲೇಶ್‌ ಆರ್‌.ಜೆ. ಸಿವಿಲ್‌ ಎಂಜಿನಿಯರ್‌, ಬೆಳ್ತಂಗಡಿ

ಟಾಪ್ ನ್ಯೂಸ್

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.