ಕಣ್ಮನ ಸೆಳೆಯುವ ಬಣ್ಣ ಬಣ್ಣದ ಕೊಡೆ


Team Udayavani, Jun 15, 2019, 5:00 AM IST

q-1

ಬಂಟ್ವಾಳ: ಬಣ್ಣ ಬಣ್ಣದ ಕೊಡೆಗಳ ರಾಶಿ ನೋಡಿ ಮಾರುಹೋಗಿ ಖರೀದಿಗೆ ಜನ ಮುಂದಾಗುತ್ತಾರೆ. ಒಂದಷ್ಟು ಚೌಕಾಶಿ ಮಾಡಿ ಬಣ್ಣದ ಕೊಡೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಬಿ.ಸಿ. ರೋಡ್‌ ಜಂಕ್ಷನ್‌ನಲ್ಲಿ ಹೆದ್ದಾರಿ ಬದಿಯಲ್ಲಿ ಕಂಡುಬಂದ ಕೊಡೆ ಗಳ ವ್ಯಾಪಾರದ ದೃಶ್ಯ.

ಬಿ.ಸಿ. ರೋಡ್‌ನ‌ಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತವು ವಿಶಾಲವಾ ಗಿದ್ದು, ಪ್ರಸ್ತುತ ಬಣ್ಣದ ಕೊಡೆಗಳ ವ್ಯಾಪಾರದಿಂದ ಜಂಕ್ಷನ್‌ಗೆ ಹೊಸ ಮೆರುಗು ಬಂದಿದೆ. ಇಲ್ಲಿ ಕಳೆದ ಕೆಲವು ದಿನಗಳಿಂದ ರಾಜಸ್ಥಾನ ಮೂಲದ ವ್ಯಾಪಾರಿಗಳು ಕೊಡೆಗಳ ವ್ಯಾಪಾರ ಮಾಡುತ್ತಿದ್ದು, ವೃತ್ತದ ಆಸುಪಾಸಿನಲ್ಲಿ 5 ಕಡೆಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ.

ಕಳೆದ 5 ವರ್ಷಗಳಿಂದ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಲ್ಲಿ ಬೇರೆ ಬೇರೆ ರೀತಿಯ ವ್ಯಾಪಾರದಲ್ಲಿ ತೊಡಗಿರುವ ಇವರು, ಮಳೆಗಾಲ ಆರಂಭದಲ್ಲಿ ಕೊಡೆಗಳ ವ್ಯಾಪಾರ ಮಾಡುತ್ತಾರೆ. ಮಂಗಳೂರಿನಲ್ಲಿ ಗಾಡಿ ತೊಳೆಯುವ ನೀರಿನ ಪೈಪ್‌, ಬ್ಯಾಗ್‌ಗಳು ಹೀಗೆ ವಿವಿಧ ವ್ಯಾಪಾರದಲ್ಲಿ ತೊಡಗುತ್ತಾರೆ. ಅವರ ತಂಡವೇ ಪ್ರಸ್ತುತ ಬಿ.ಸಿ. ರೋಡ್‌ನ‌ಲ್ಲಿ ವ್ಯಾಪಾರದಲ್ಲಿ ತೊಡಗಿದ್ದು, ಮುಂಬಯಿಯಿಂದ ಕೊಡೆ ಗಳನ್ನು ತಂದು ಮಾರಾಟ ಮಾಡುತ್ತಾರೆ.

ಬಣ್ಣಕ್ಕೆ ಮಾರು ಹೋಗುವ ಗ್ರಾಹಕರಿಂದ ಖರೀದಿ
ರಸ್ತೆ ಬದಿಯಲ್ಲಿ ಉದ್ದಕ್ಕೆ ಕೊಡೆಗಳನ್ನು ಬಿಡಿಸಿ ಇಡಲಾಗಿದ್ದು, ಅವುಗಳು ಗಾಳಿಗೆ ಹಾರದಂತೆ ಹಗ್ಗವನ್ನು ಕಟ್ಟಲಾಗಿದೆ. ಅವುಗಳ ಬಣ್ಣಕ್ಕೇ ಮಾರುಹೋಗಿ ಖರೀದಿಸುವವರಿದ್ದಾರೆ. ಎಲ್ಲ ಕೊಡೆಗಳ ಮೌಲ್ಯ 200 ರೂ. ಆಗಿದೆ.

ರೈನ್‌ಕೋಟ್‌ಗೂ ಡಿಮ್ಯಾಂಡ್‌!
ಇಲ್ಲಿ ರೈನ್‌ಕೋಟ್‌ಗಳ ವ್ಯಾಪಾರವೂ ಭರ್ಜರಿಯಾಗಿ ನಡೆಯುತ್ತಿದೆ. ಜಂಕ್ಷನ್‌ನಲ್ಲಿ ವ್ಯಾಪಾರ ಮಾಡುತ್ತಿರುವ ದಾವಣಗೆರೆ ಹರಪನಹಳ್ಳಿ ಮೂಲದ ವ್ಯಾಪಾರಿ ಸಿದ್ದಪ್ಪ ಅವರನ್ನು ಮಾತನಾಡಿಸಿದಾಗ, “ಮಳೆ ಪೂರ್ಣ ಪ್ರಮಾಣದಲ್ಲಿ ಇನ್ನೂ ಜೋರಾಗಿ ಆರಂಭ ವಾಗದ ಹಿನ್ನೆಲೆಯಲ್ಲಿ ವ್ಯಾಪಾರ ಕೊಂಚ ಕಡಿಮೆ ಇದೆ. ನಾನು ಇದೇ ಮೊದಲ ಬಾರಿಗೆ ಬಿ.ಸಿ. ರೋಡ್‌ಗೆ ಆಗಮಿಸಿದ್ದು, ಮೂರ್ತಿಗಳ ಮಾರಾಟ, ಬಟ್ಟೆ ವ್ಯಾಪಾರ ಹೀಗೆ ಸೀಸನ್‌ಗೆ ಸಂಬಂಧಿಸಿದ ವ್ಯಾಪಾರ ಮಾಡುತ್ತೇನೆ. ಈ ಹಿಂದೆ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದು, ರಾಜ್ಯಾದ್ಯಂತ ತಿರುಗಾಟ ನಡೆಸುತ್ತೇನೆ. ರೂ. 250, 300, 400… ಹೀಗೆ ಬೇರೆ ಬೇರೆ ಮೌಲ್ಯದ ರೈನ್‌ಕೋಟ್‌ಗಳಿದ್ದು, ಗ್ರಾಹಕರು ಚೌಕಾಶಿ ಮಾಡಿಯೇ ಖರೀದಿಸುತ್ತಾರೆ’ ಎಂದರು.

ಉತ್ತಮ ವ್ಯಾಪಾರ
ಕಳೆದ ಒಂದು ವಾರದಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದು, ಉತ್ತಮ ವ್ಯಾಪಾರವಾಗಿದೆ. ಪ್ರಸ್ತುತ ಇಲ್ಲಿ 5 ಕಡೆಗಳಲ್ಲಿ ಕೊಡೆಗಳನ್ನಿಟ್ಟು ಮಾರಾಟ ಮಾಡುತ್ತಿದ್ದೇವೆ. ಪ್ರತಿ ಕೊಡೆಗೂ 200 ರೂ.ನಂತೆ ಮಾರಾಟ ಮಾಡುತ್ತಿದ್ದು, ಬಹುತೇಕ ಗ್ರಾಹಕರು ಚೌಕಾಶಿ ಮಾಡಿ ಕಡಿಮೆ ದರಕ್ಕೆ ಕೇಳುತ್ತಿದ್ದು, ಕೊನೆಗೆ ಸ್ವಲ್ಪ ಡಿಸ್ಕೌಂಟ್‌ ಮಾಡಿ ಕೊಡಬೇಕಾಗುತ್ತದೆ.
– ರಿಂಕು, ಕೊಡೆಗಳ ವ್ಯಾಪಾರಿ

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.