507 ಮನೆಗಳ ಪರಿಹಾರ ವಿತರಣೆ ಕಾರ್ಯ ಪೂರ್ಣ

ಬಂಟ್ವಾಳ ತಾಲೂಕು ನೆರೆ ಪ್ರಕರಣ

Team Udayavani, Sep 10, 2019, 5:42 AM IST

y-28

ಸಾಂದರ್ಭಿಕ ಚಿತ್ರ

ಬಂಟ್ವಾಳ: ತಾಲೂಕಿನಲ್ಲಿ ಕಳೆದ ತಿಂಗಳಿನ ಪ್ರವಾಹದಿಂದ ತೊಂದರೆಗೊಳಗಾದ ಒಟ್ಟು 507 ಕುಟುಂಬಗಳಿಗೆ ತಲಾ 10 ಸಾವಿರ ರೂ. ಪರಿಹಾರ ವಿತರಿಸಲಾಗಿದೆ. ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪದಿಂದ 133 ಮನೆಗಳಿಗೆ ಹಾನಿಯಾದ ಪ್ರಕರಣಗಳನ್ನು ಗುರುತಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರವಾಹ ಪ್ರದೇಶಗಳ ಅಧ್ಯಯನಕ್ಕಾಗಿ ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ಸಂದರ್ಭ, ಪ್ರವಾಹದ ನೀರು ಮನೆಗೆ ನುಗ್ಗಿ ತೊಂದರೆಯಾದವರಿಗೆ ತತ್‌ಕ್ಷಣ 10 ಸಾವಿರ ರೂ.ಗಳ ಪರಿಹಾರ ವಿತರಿಸುವಂತೆ ಆದೇಶಿಸಿದ್ದರು. ಅದರಂತೆ ಬಂಟ್ವಾಳದ 14 ಗ್ರಾಮಗಳ ಒಟ್ಟು 507 ಮನೆಗಳ 2,339 ಮಂದಿ ತೊಂದರೆ ಅನುಭವಿಸಿದ್ದು, ಅಂತಹ ಕುಟುಂಬಗಳಿಗೆ ತತ್‌ಕ್ಷಣ ಪರಿಹಾರ ತಲುಪಿದೆ.

ನೀರು ಬಂದು ತೊಂದರೆ
ಬಂಟ್ವಾಳ ತಾಲೂಕು ಆಡಳಿತ ಹೇಳುವ ಪ್ರಕಾರ, ತತ್‌ಕ್ಷಣದ ಪರಿಹಾರ ಪಡೆ ದಿರುವ ಬಹುತೇಕ ಮನೆ ಗಳಿಗೆ ನೀರು ಬಂದು ತೊಂದರೆಯಾಗಿರುವುದು ಬಿಟ್ಟರೆ ಯಾವುದೇ ರೀತಿಯ ಹಾನಿಯಾಗಿಲ್ಲ. ಹೀಗಾಗಿ ಪ್ರಾಕೃತಿಕ ವಿಕೋಪದಿಂದ ಹಾನಿಯಾಗಿರುವ ಮನೆ ಗಳಿಗೆ ಪರಿಹಾರ ಬಾಕಿ ಇದೆ. ತಾಲೂಕಿನಲ್ಲಿ ಜೂನ್‌ ಅಂತ್ಯ ದವರೆಗೆ ಒಟ್ಟು 91 ಸಣ್ಣಪುಟ್ಟ ಪ್ರಕರಣ ಗಳಿಗೆ 5.06 ಲ.ರೂ. ಪರಿಹಾರ ವಿತರಿಸಲಾಗಿದೆ. ಆದರೆ ಜುಲೈ ತಿಂಗಳ ಕೊನೆಯ ವಾರ ಹಾಗೂ ಆಗಸ್ಟ್‌ ತಿಂಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ.

ಹಾನಿಯಾದ ಮನೆಗಳ ವಿವರ
ಸರಕಾರವು ಪ್ರವಾಹ ಹಾಗೂ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಮನೆಗಳಿಗೆ ಅದರ ಹಾನಿಯ ಪ್ರಮಾಣದ ಶೇಕಡಾವಾರು ಲೆಕ್ಕಾಚಾರದಲ್ಲಿ ಪರಿಹಾರ ಮೊತ್ತವನ್ನು ನಿಗದಿಪಡಿಸಿದ್ದು, ಶೇ. 15ರಿಂದ ಶೇ. 25 ಮನೆ ಹಾನಿಯಾದವರಿಗೆ 25 ಸಾವಿರ ರೂ., ಶೇ. 75 ವರೆಗೆ ಹಾನಿಯಾದವರಿಗೆ 1 ಲಕ್ಷ ರೂ. ಹಾಗೂ ಅದಕ್ಕಿಂತ ಹೆಚ್ಚಿನ ಹಾನಿಯಾದವರಿಗೆ 5 ಲಕ್ಷ ರೂ. ಪರಿಹಾರ ಸಿಗಲಿದೆ. ತಾಲೂಕಿನಲ್ಲಿ ಪ್ರಸ್ತುತ ಶೇ. 15 ರಿಂದ ಶೇ. 25 ಹಾನಿಯಾದ 66 ಮನೆಗಳು, ಶೇ. 26ರಿಂದ ಶೇ. 75ರ ವರೆಗೆ ಹಾನಿಯಾದ 46 ಮನೆಗಳು ಹಾಗೂ ಶೇ. 75ರಿಂದ ಶೇ. 100 ಹಾನಿಯಾದ ಒಟ್ಟು 21 ಮನೆಗಳನ್ನು ಗುರುತಿಸಿದ್ದು, ಒಟ್ಟು 133 ಮನೆಗಳಿಗೆ ಹಾನಿಯಾಗಿದೆ ಎಂದು ತಾಲೂಕು ಆಡಳಿತ ವಿವರ ನೀಡುತ್ತದೆ.

ತತ್‌ಕ್ಷಣ ಪರಿಹಾರ ವಿವರ
ಪ್ರವಾಹದಿಂದ ನೀರು ನುಗ್ಗಿ ತೊಂದರೆಗೊಳಗಾದ ಕುಟುಂಬಗಳಿಗೆ ತತ್‌ಕ್ಷಣದ ಪರಿಹಾರ ವಿತರಿಸಲಾಗಿದ್ದು, ಪಾಣೆಮಂಗಳೂರು ಗ್ರಾಮದಲ್ಲಿ 138 ಮನೆಗಳು, ಬಂಟ್ವಾಳ ಕಸ್ಬಾದಲ್ಲಿ 105, ಕಡೇಶ್ವಾಲ್ಯದಲ್ಲಿ 9, ಬರಿಮಾರಿನಲ್ಲಿ 3, ಅಮಾಡಿಯಲ್ಲಿ 17, ಬಂಟ್ವಾಳ ಮೂಡದಲ್ಲಿ 101, ಪುದುವಿನಲ್ಲಿ 15, ಸಜಿಪನಡುವಿನಲ್ಲಿ 27, ಸಜಿಪಮುನ್ನೂರಿನಲ್ಲಿ 8, ಪೆರ್ನೆ/ಬಿಳಿಯೂರಿನಲ್ಲಿ 10, ಮಣಿನಾಲ್ಕೂರಿನಲ್ಲಿ 3, ನಾವೂರಿನಲ್ಲಿ 56, ತುಂಬೆಯಲ್ಲಿ 13 ಹಾಗೂ ಸಜಿಪಮೂಡದಲ್ಲಿ 2 ಮನೆಗಳು ಸಹಿತ ಒಟ್ಟು 507 ಮನೆಗಳಿಗೆ ತಲಾ 10 ಸಾವಿರ ರೂ.ಗಳ ಪರಿಹಾರ ಮೊತ್ತವನ್ನು ನೀಡಲಾಗಿದೆ.

 ಹಾನಿ ವಿವರ ದಾಖಲೀಕರಣ
ತಾಲೂಕಿನಲ್ಲಿ ಪ್ರವಾಹ ಬಂದು ತೊಂದರೆಯಾದ 507 ಕುಟುಂಬಗಳಿಗೆ ಪರಿಹಾರ ಮೊತ್ತ ಹಾಗೂ ಕಿಟ್‌ ವಿತರಣೆ ನಡೆದಿದೆ. ಉಳಿದಂತೆ ತಾಲೂಕಿನಲ್ಲಿ ಹಾನಿಯಾದ ಮನೆಗಳ ವಿವರವನ್ನು
ಪೋರ್ಟಲ್‌ಗೆ ದಾಖಲೀಕರಣ ಮಾಡಲಾಗಿದ್ದು, ರಾಜೀವ್‌ ಗಾಂಧಿ ವಸತಿ ನಿಗಮದಿಂದ ಅನುದಾನ ಹಂತ ಹಂತವಾಗಿ ಬಿಡುಗಡೆಯಾಗುತ್ತದೆ.
 -ರಶ್ಮಿ ಎಸ್‌.ಆರ್‌., ತಹಶೀಲ್ದಾರ್‌, ಬಂಟ್ವಾಳ

  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.