ಕಣಿಯೂರು-ಪದ್ಮುಂಜ ರಸ್ತೆ ಬಿರುಕಿಗೆ ಕಾಂಕ್ರೀಟ್‌


Team Udayavani, Jun 7, 2018, 4:25 PM IST

7-june-18.jpg

ಬೆಳ್ತಂಗಡಿ : ರಸ್ತೆ ಕಾಮಗಾರಿ ಮುಗಿದಿದೆ. ಉದ್ಘಾಟನೆಗೆ ಇನ್ನೇನು ಕೆಲವು ದಿನಗಳಿರಬೇಕು ಎನ್ನುವಷ್ಟರಲ್ಲಿ ಚುನಾವಣೆ ಘೋಷಣೆಯಾಗಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು. ಈಗ ಮಳೆಯಿಂದಾಗಿ ರಸ್ತೆಯಲ್ಲಿ ಬಿರುಕು ಕಂಡುಬಂದು ಕುಸಿತ ಭೀತಿ ಎದುರಾಗಿತ್ತು. ಇದೀಗ ರಸ್ತೆ ಬಿರುಕಿಗೆ ಕಾಂಕ್ರೀಟ್‌ ಹಾಕಿ ಕ್ರಮ ಕೈಗೊಳ್ಳಲಾಗಿದೆ.

ರಸ್ತೆಯೇ ಇಲ್ಲದ ಊರಲ್ಲಿ ಜನತೆ ಸೇರಿಕೊಂಡು ಖಾಸಗಿಯವರಿಗೆ ಸುಮಾರು ಸುಮಾರು 15.50 ಲಕ್ಷ ರೂ. ನೀಡಿ ಜಮೀನು ಖರೀದಿಸಿದ್ದರು. ರಸ್ತೆ ನಿರ್ಮಾಣಕ್ಕೆ ಸರಕಾರ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಕಣಿಯೂರಿನಿಂದ ನೆಕ್ಕಿಲುವರೆಗಿನ 2.5 ಕಿ.ಮೀ.ಗೆ 1.99 ಕೋಟಿ ರೂ. ಅನು ದಾನ ಬಿಡುಗಡೆ ಮಾಡಿ ಡಾಮರು ಕಾಮಗಾರಿ ನಡೆದಿತ್ತು. ಆದರೆ ಇತ್ತೀಚೆಗೆ ಸುರಿದ ಮಳೆಗೆ ನೀರು ಹರಿದು ಹಾಗೂ ವಾಹನಗಳು ಹೋದ ಪರಿಣಾಮ ಜಾಜಿಬೆಟ್ಟು ಬಳಿ ರಸ್ತೆಯಲ್ಲಿ ಬಿರುಕು ಕಂಡುಬಂದಿತ್ತು.

ರಸ್ತೆ ಕನಸು ಸಾಕಾರ
ಸುಮಾರು 300ಕ್ಕಿಂತಲೂ ಹೆಚ್ಚು ಸಾರ್ವಜನಿಕರು ಪಕ್ಷಾತೀತವಾಗಿ ಶ್ರಮಿಸಿದ ಪರಿಣಾಮ 3 ವರ್ಷಗಳಲ್ಲೇ ರಸ್ತೆ ನಿರ್ಮಾಣ ಕನಸು ಸಾಕಾರಗೊಂಡಿತ್ತು. ರಸ್ತೆಯಿಂದ ಬಂಡಸಾಲೆ, ಪಿಲಿಕುಡೇಲು, ತಾರಿದಡಿ ಎಂಬ ಮೂರು ಕಾಲುದಾರಿಗಳ ಮೂಲಕ ಜನತೆ ಕಣಿಯೂರು – ಪದ್ಮುಂಜ ಜನತೆ ಸಂಪರ್ಕ ಸಾಧಿಸುತ್ತಿದ್ದಾರೆ. ರಸ್ತೆ ಬಿರುಕಿಗೆ ಕಾಂಕ್ರೀಟ್‌ ಹಾಕಲಾಗಿದ್ದು, ಆತಂಕವಿಲ್ಲ ಎಂದು ಯೋಜನಾ ವಿಭಾಗದ ಸ. ಎಂಜಿನಿಯರ್‌ ಉದಯ್‌ ಕುಮಾರ್‌ ತಿಳಿಸಿದ್ದಾರೆ.

ಬಿರುಕಿಗೆ ಕಾಂಕ್ರೀಟ್‌
ಕಾಮಗಾರಿ ನಡೆಸಿದ ಖಾಸಗಿಯವರ ಜಾಗದಲ್ಲಿ ರಸ್ತೆಯಲ್ಲಿ ಬಿರುಕು ಕಂಡುಬಂದಿದೆ. ರಸ್ತೆ ಎತ್ತರಿಸಲು ಮಣ್ಣು ಹಾಕಲಾಗಿದ್ದು, ಮಳೆ ನೀರು ಹೆಚ್ಚಾಗಿ ಹರಿದು ಬಂದ ಕಾರಣ ಬಿರುಕು ಬಿದ್ದಿದೆ ಎನ್ನಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ನೀಡಿ ಪರಿಶೀಲಿಸಿದ್ದು, ಬಿರುಕಿಗೆ ಕಾಂಕ್ರೀಟ್‌ ಹಾಕಲಾಗಿದೆ.

ಕಾಂಕ್ರೀಟ್‌ ವಾಲ್‌ ಶೀಘ್ರ ನಿರ್ಮಾಣ
ರಸ್ತೆ ಆಳದಲ್ಲಿದ್ದುದರಿಂದ ಮಣ್ಣು ಹಾಕಿ ಎತ್ತರಿಸಲಾಗಿತ್ತು. ಇದರಿಂದ ಸಮಸ್ಯೆಯಾಗಿದೆ. ನೀರು ಹರಿದುಹೋಗಲು ಕಾಂಕ್ರೀಟ್‌ ವಾಲ್‌ಗ‌ಳನ್ನು ನಿರ್ಮಿಸುವ ಕಾರ್ಯ ಮಳೆ ನಿಂತ ಕೂಡಲೇ ಮಾಡಲಾಗುತ್ತದೆ. ಬಿರುಕು ಸರಿಪಡಿಸಲಾಗಿದೆ. ಸೂಕ್ತ ನಿರ್ವಹಣೆಯನ್ನೂ ಮಾಡಲಾಗಿದೆ. 5 ವರ್ಷಗಳ ಕಾಲ ನಿರ್ವಹಣೆ ಮಾಡಬೇಕಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತದೆ.
– ಉದಯ್‌ ಕುಮಾರ್‌
ಯೋಜನಾ ವಿಭಾಗದ ಸಹಾಯಕ
ಎಂಜಿನಿಯರ್‌

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.