ಅಪಾಯಕಾರಿ ಹೊಂಡಕ್ಕೆ ತಡೆಗೋಡೆ ನಿರ್ಮಾಣ
ಶೀಘ್ರ ಸ್ಪಂದನೆ: ನಾಲ್ಕೇ ದಿನಗಳಲ್ಲಿ ಕ್ರಮ ಕೈಗೊಂಡ ಹೆದ್ದಾರಿ ಇಲಾಖೆ
Team Udayavani, Sep 14, 2019, 5:00 AM IST
ಕನಕಮಜಲು ಬಳಿ ನಿರ್ಮಿಸಿದ ತಡೆಗೋಡೆ.
ಕನಕಮಜಲು: ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಕನಕಮಜಲು ಸಮೀಪ ಹೆದ್ದಾರಿ ಬದಿ ಅಪಾಯಕಾರಿ ಹೊಂಡಕ್ಕೆ ತಡೆಗೋಡೆ ನಿರ್ಮಿಸ ಲಾಗಿದೆ. ಸಿಮೆಂಟ್ ಕಲ್ಲುಗಳನ್ನು ಹಾಕಿ ರಸ್ತೆ ಬದಿ ಹೊಂಡಕ್ಕೆ ಅಡ್ಡಲಾಗಿ ತಡೆಗೋಡೆ ಕಟ್ಟಲಾಗಿದೆ.
ಕನಕಮಜಲು ಪೇಟೆಯಿಂದ ಕೃಷಿ ಪತ್ತಿನ ಸಹಕಾರ ಸಂಘದ ರಸ್ತೆ ಮಧ್ಯೆ 100 ಮೀಟರ್ ಅಂತರದಲ್ಲಿ ಅಡಿಕೆ ತೋಟಕ್ಕೆ ಹೊಂದಿಕೊಂಡಂತೆ ಭಾರೀ ಹೊಂಡವೊಂದು ಇದೆ. ಗುಂಡಿ ಬಿಟ್ಟು ಎರಡೂ ಕಡೆ ತಡೆಬೇಲಿ ಹಾಕಲಾಗಿತ್ತು. ಗುಂಡಿ ಮಾತ್ರ ಹೆದ್ದಾರಿಗೆ ತೆರೆದುಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಸಂಚಕಾರವಾಗಿತ್ತು.
ಗುಂಡಿ ಪೊದೆಯಿಂದ ಮುಚ್ಚಿದ್ದು ಹೊಂಡವಿರುವ ಭಾಗ ಚಾಲಕರಿಗೆ ಸರಿಯಾಗಿ ಕಾಣುವುದಿಲ್ಲ ಎನ್ನುವ ಆತಂಕ ಸ್ಥಳೀಯರಲ್ಲಿ ಮನೆ ಮಾಡಿತ್ತು.
ಈ ಕುರಿತು ಸೆ. 9ರಂದು “ಉದಯವಾಣಿ’ ಸುದಿನದಲ್ಲಿ ವರದಿ ಪ್ರಕಟಿಸಲಾಗಿತ್ತು. ಇದಕ್ಕೆ ತ್ವರಿತಗತಿಯಲ್ಲಿ ಸ್ಪಂದಿಸಿದ ಅಧಿ ಕಾರಿಗಳು ಕೇವಲ ನಾಲ್ಕು ದಿನಗಳಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡಿ ದ್ದಾರೆ. ಈ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರ ವಾಗಿದೆ. ತಡೆಗೋಡೆಗೆ ಸುಣ್ಣ ಅಥವಾ ಬಿಳಿ ಬಣ್ಣ ಬಳಿದರೆ ಚಾಲಕರಿಗೆ ದೂರದಿಂದಲೇ ಅರಿವಾಗ ಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ