ಶಾಂತಿಮೊಗರು ಕಿಂಡಿ ಅಣೆಕಟ್ಟು ನಿರ್ಮಾಣ ಕುಂಠಿತ

ಜನರ ನಿರೀಕ್ಷೆ ಸುಳ್ಳಾಗಿಸಿದ ಆಮೆಗತಿ ಕಾಮಗಾರಿ; ಈ ಬೇಸಗೆಯಲ್ಲೂ ನೀರಿಗೆ ಬರ

Team Udayavani, Mar 19, 2020, 5:34 AM IST

ಶಾಂತಿಮೊಗರು ಕಿಂಡಿ ಅಣೆಕಟ್ಟು ನಿರ್ಮಾಣ ಕುಂಠಿತ

ಶಾಂತಿಮೊಗರಿನಲ್ಲಿ ಕುಮಾರಧಾರಾ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣವಾದರೆ ನೀರಿನ ಸಮಸ್ಯೆ ಪರಿಹಾರ ವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ.

ಬೆಳಂದೂರು: ಕುಮಾರಧಾರಾ ನದಿಗೆ ಶಾಂತಿಮೊಗರು ಎಂಬಲ್ಲಿ ಬೃಹತ್‌ ಕಿಂಡಿ ಅಣೆಕಟ್ಟು ನಿರ್ಮಾಣವಾಗಿ ಮೂರು ದಶಕಗಳ ಬೇಡಿಕೆ ಸಾಕಾರಗೊಂಡು ಬಿರು ಬೇಸಗೆಯಲ್ಲಿ ನೀರಿನ ಸಮಸ್ಯೆ ದೂರವಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಕಿಂಡಿ ಅಣೆಕಟ್ಟಿನ ನಿಧಾನಗತಿಯ ಕಾಮಗಾರಿ ನಿರಾಶೆ ಮೂಡಿಸಿದೆ.

ಸುಳ್ಯ ಶಾಸಕ ಎಸ್‌. ಅಂಗಾರ ವಿಶೇಷ ಮುತುವರ್ಜಿಯಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಮುಖಾಂತರ 7.5 ಕೋಟಿ ರೂ. ಅನುದಾನದ ಕಾಮಗಾರಿ ಪಶ್ಚಿಮವಾಹಿನಿ ಯೋಜನೆಯಲ್ಲಿ ಅನುಷ್ಠಾನವಾಗುತ್ತಿದೆ.

ಕುಮಾರಧಾರಾ ನದಿಗೆ ಸುಬ್ರಹ್ಮಣ್ಯದಲ್ಲಿ ಹಾಗೂ ಉಪ್ಪಿನಂಗಡಿ ಬಳಿ ಎರಡು ಕಿಂಡಿ ಅಣೆಕಟ್ಟುಗಳು ಕುಡಿಯುವ ನೀರಿನ ಬಳಕೆಗೆ ಉಪಯೋಗವಾಗುತ್ತಿದ್ದು, ಶಾಂತಿಮೊಗರುವಿನಲ್ಲಿ ಮೂರನೇ ಹಾಗೂ ಅತಿದೊಡ್ಡ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು.

ಈ ಅಣೆಕಟ್ಟು ನಿರ್ಮಾಣ ಮಾಡಿ ಕುಡಿಯುವ ನೀರಿಗೆ ಬಳಕೆ ಮಾಡುವ ಉದ್ದೇಶವಿದ್ದರೂ ಕೃಷಿ ಬಳಕೆ ಪ್ರಮುಖ ಉದ್ದೇಶವಾಗಿತ್ತು. ಪಶ್ಚಿಮವಾಹಿನಿ ಯೋಜನೆಯಲ್ಲಿ ಜಿಲ್ಲೆಯ ಹಲವೆಡೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡುತ್ತಿದ್ದರೂ ಕೃಷಿ ಬಳಕೆಗೆ ಎಂದು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಈ ಅಣೆಕಟ್ಟು ನಿರ್ಮಾಣವಾಗುತ್ತಿದೆ ಎಂದು ಇಲಾಖಾಧಿಕಾರಿಗಳು ಅಂದು ತಿಳಿಸಿದ್ದರು.

7.5 ಕೋಟಿ ರೂ. ಯೋಜನೆ
ಕುಡಿಯುವ ನೀರಿನ ಬವಣೆ ನೀಗಿಸಬೇಕೆನ್ನುವ ಉದ್ದೇಶದಿಂದ ಸುಳ್ಯ ಶಾಸಕ ಎಸ್‌. ಅಂಗಾರ ಶಿಪಾರಸಿನಂತೆ ಈ ಕಿಂಡಿ ಅಣೆಕಟ್ಟು ಯೋಜನೆಗೆ 7.5 ಕೋಟಿ ರೂ. ಮಂಜೂರುಗೊಂಡು ವ್ಯಯಮಾಡಲಾಗುತ್ತಿದೆ. ನದಿಯ ತಳಮಟ್ಟದಿಂದ ನಾಲ್ಕು ಮೀಟರ್‌ ಎತ್ತರದಲ್ಲಿ ನಿರ್ಮಾಣವಾಗುವ ಈ ಅಣೆಕಟ್ಟು 221 ಮೀಟರ್‌ ಉದ್ದ ಹಾಗೂ ಮೂರು ಮೀಟರ್‌ ಅಗಲವಿರುತ್ತದೆ. ಐವತ್ತಾರು ಕಿಂಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದರಲ್ಲಿ ಸುಮಾರು 18.56 ಎಂಸಿಎಫ್‌ಟಿ ನೀರು ಶೇಖರಣೆಯಾಗಲಿದೆ. ಡಿಸೆಂಬರ್‌ ಆರಂಭದಿಂದ ನದಿಯ ನೀರಿನ ಮಟ್ಟವನ್ನು ನೋಡಿಕೊಂಡು ಹಲಗೆಗಳನ್ನು ಕಿಂಡಿಗಳಿಗೆ ಜೋಡಣೆ ಮಾಡಲಾಗುತ್ತದೆ, ಯಥಾಪ್ರಕಾರ ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದಂತೆ ಹಲಗೆಗಳನ್ನು ತೆಗೆದು ಬಿಡಲಾಗುತ್ತದೆ. ಮಳೆಗಾಲದಲ್ಲಿ ನದಿಯ ನೀರನ್ನು ಯಾವುದೇ ಅಡೆತಡೆಗಳಿಲ್ಲದೆ ಹರಿಯಬಿಡಲಾಗುತ್ತದೆ. ಇದು ಯೋಜನೆಯ ಕಾಮಗಾರಿ ಮುಗಿದ ಬಳಿಕ ಆಗಲಿರುವ ವಿಧಾನ.

ಈ ಕಿಂಡಿ ಅಣೆಕಟ್ಟೆ ನಿರ್ಮಾಣವಾದರೆ ನದಿಯ ಇಕ್ಕೆಳೆಗಳಲ್ಲಿ ಸುಮಾರು ಎರಡರಿಂದ ಮೂರು ಕಿ.ಮೀ. ಸುತ್ತಳತೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ, ಕೃಷಿಕರ ಕೊಳವೆಬಾವಿ, ಕುಡಿಯುವ ನೀರಿನ ಬಾವಿ ಹಾಗೂ ಕೆರೆಗಳಲ್ಲಿ ಬಿರು ಬೇಸಗೆಯಲ್ಲೂ ಸಾಕಷ್ಟು ನೀರು ತುಂಬಿ ತುಳುಕಲಿದೆ. ಕೃಷಿ ಭೂಮಿಗೆ ನೀರುಣಿಸಲು ಪರದಾಡುತ್ತಿರುವ ಈ ಭಾಗದ ರೈತರಿಗೆ ಜಲನಿಧಿ ಒಲಿಯಲಿದೆ.

ಈಡೇರದ ಭರವಸೆ
ಈ ಅಣೆಕಟ್ಟಿನಿಂದ ಪೈಪ್‌ಲೈನ್‌ ಮೂಲಕ ಶಾಂತಿಮೊಗರು ಆಸುಪಾಸಿನ ಕುದ್ಮಾರು, ಸವಣೂರು, ಬೆಳಂದೂರು, ಕಾಣಿಯೂರು, ಪುಣcಪ್ಪಾಡಿ, ಪಾಲ್ತಾಡಿ, ಆಲಂಕಾರು, ಪೆರಾಬೆ, ಕುಂತೂರು ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡುವುದು ಇದರ ಉದ್ದೇಶ.

ಆದರೆ ಕಳೆದ ಬೇಸಗೆಯಲ್ಲಿ ಕಾಮಗಾರಿ ಆರಂಭಿಸಿ ಹೋದ ಗುತ್ತಿಗೆದಾರ ಈವರೆಗೂ ಸ್ಥಳಕ್ಕೆ ಬಂದಿಲ್ಲ. ಕಳೆದ ಬಾರಿ ಕಾಮಗಾರಿ ಆರಂಭಿಸಿ ಪಿಲ್ಲರ್‌ಗಾಗಿ ಕಬ್ಬಿಣವನ್ನು ಅಳವಡಿಸಿ ಹೋಗಿದ್ದಾರೆ. ಈ ಬಾರಿ ನದಿಯಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆಯಾಗಿ ಕಬ್ಬಿಣ ಕಾಣುತ್ತಿದೆ. ಕಳೆದ ಬಾರಿ ಕಾಮಗಾರಿ ಆರಂಭಿಸುವಾಗ 2020ರ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದ ಗುತ್ತಿಗೆದಾರ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇಲ್ಲಿವರೆಗೂ ಇತ್ತ ತಲೆ ಹಾಕಿ ನೋಡಿಲ್ಲ.

ಅಧಿಕಾರಿಗಳಿಗೆ ಸೂಚನೆ
ಕುಮಾರಧಾರಾ ನದಿಗೆ ಶಾಂತಿಮೊಗರು ಎಂಬಲ್ಲಿ ಸೇತುವೆ ಆಗಬೇಕು ಎನ್ನುವ ಜನರ ಬಹುದಿನಗಳ ಬೇಡಿಕೆಯಂತೆ 7.5 ಕೋಟಿ ರೂ.ಗಳ ಯೋಜನೆಗೆ ಅನುದಾನ ನೀಡಲಾಗಿದೆ. ಕಾಮಗಾರಿಯನ್ನು ಶೀಘ್ರ ಮುಗಿಸಿಕೊಡುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-ಎಸ್‌. ಅಂಗಾರ, ಶಾಸಕ, ಸುಳ್ಯ ವಿಧಾನಸಭಾ ಕ್ಷೇತ್ರ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.