ಗುತ್ತಿಗೆದಾರರ ನಿರ್ಲಕ್ಷ್ಯ: ಸಮಸ್ಯೆಯಾದ ಅಭಿವೃದ್ಧಿ ಕಾಮಗಾರಿ


Team Udayavani, Jun 20, 2019, 5:00 AM IST

d-10

ಪುಂಜಾಲಕಟ್ಟೆ: ಬಿ.ಸಿ. ರೋಡ್‌ – ಪುಂಜಾಲಕಟ್ಟೆ ಸಂಪರ್ಕದ ರಾ.ಹೆ. 73ರಲ್ಲಿ ದ್ವಿಪಥ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಮಳೆಗಾಲ ಆರಂಭದಲ್ಲಿ ಕಾಮಗಾರಿಯಿಂದ ರಸ್ತೆ ಬದಿಯ ಮನೆ, ಅಂಗಡಿ ಮುಂಗಟ್ಟುಗಳು ಸಮಸ್ಯೆ ಎದುರಿಸುತ್ತಿವೆ. ಕಳೆದ ಒಂದು ವರ್ಷದಿಂದ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕೆಲವೊಂದು ತೊಂದರೆ ಗಳು ಸ್ಥಳೀಯ ನಿವಾಸಿಗಳನ್ನು ಕಾಡಲಾರಂಭಿಸಿದೆ. ಕಾಮಗಾರಿ ಚುರುಕು ಪಡೆಯು ತ್ತಿದ್ದಂತೆಯೇ ಮಳೆಯೂ ಆರಂಭ ವಾಗಿರುವುದರಿಂದ ಸ್ಥಳೀಯರಿಗೆ ಸಮಸ್ಯೆ ತಂದೊಡ್ಡಿದೆ. ಗುತ್ತಿಗೆ ಕಂಪೆನಿಗೆ ರಸ್ತೆ ಕಾಮಗಾರಿ ಜತೆಗೆ ಈ ಸಮಸ್ಯೆ ಗಳಿಗೂ ಸ್ಪಂದಿಸಬೇಕಾಗಿದೆ.

ಬಿ.ಸಿ. ರೋಡ್‌ನಿಂದ ಪುಂಜಾಲಕಟ್ಟೆ ಯವರೆಗೆ ರಸ್ತೆ ವಿಸ್ತರಣೆ ಕಾಮಗಾರಿ ಹಿನ್ನಲೆಯಲ್ಲಿ ಹೆದ್ದಾರಿ ಇಲಾಖೆಯ ವಿನ್ಯಾಸದ ಪ್ರಕಾರ ಹಲವೆಡೆ ರಸ್ತೆಯನ್ನು ಮಣ್ಣು ಹಾಕಿ ಎತ್ತರಿಸಲಾಗಿದೆ. ಕೆಲವೆಡೆ ರಸ್ತೆ ಬದಿಯ ಗುಡ್ಡಗಳನ್ನು ಜೆಸಿಬಿ ಮೂಲಕ ಅಗೆದು ಇಳಿಜಾರು ಹಾಗೂ ತಗ್ಗು ಪ್ರದೇಶಗಳಿಗೆ ತುಂಬಲಾಗುತ್ತಿದೆ. ಇದೀಗ ಸುರಿಯುತ್ತಿರುವ ಮಳೆಗೆ ರಸ್ತೆ ಪಕ್ಕ ಹಾಕಿರುವ ಮಣ್ಣು ಇಳಿಜಾರು ಮೂಲಕ ಕೆಳ ಭಾಗದಲ್ಲಿರುವ ಮನೆ ಅಂಗಳಕ್ಕೆ ಜಾರಿದ್ದು, ದೂರು ಗಳು ಕೇಳಿ ಬರುತ್ತಿವೆ. ಮನೆಗೆ ಸಂಪರ್ಕಿಸುವ ದಾರಿಯಲ್ಲಿ ಮಣ್ಣು ತುಂಬಿಕೊಂಡು ಸಂಪರ್ಕ ಕಡಿತಗೊಂಡಿದೆ. ತಮ್ಮ ವಾಹನಗಳನ್ನು ಮನೆಯಂಗಳಕ್ಕೆ ಕೊಂಡೊಯ್ಯಲು ಸಾಧ್ಯ ವಾಗದೆ ಎಲ್ಲೆಲ್ಲೋ ಇಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕೆಲವೆಡೆ ರಸ್ತೆ ಪಕ್ಕದ ತೋಟಗಳಿಗೂ ಮಣ್ಣು ಕುಸಿದಿದೆ. ಭಾರೀ ಮಳೆ ಬಂದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸ ಬಹುದು ಎನ್ನುವುದು ಸ್ಥಳೀಯರ ದೂರು.

ಅಂಗಡಿಗಳಿಗೆ ಮಳೆನೀರು
ಎನ್‌.ಸಿ. ರೋಡ್‌ನ‌ಲ್ಲಿ ರಸ್ತೆ ವಿಸ್ತರಣೆಗೊಂಡಿದ್ದು, ಸರಿ ಯಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಮತ್ತು ಅಂಗಡಿಗಳಿಗೆ ನೀರು ನುಗ್ಗು ತ್ತಿದೆ. ಮಳೆಗಾಲದಲ್ಲಿ ಇಂತಹ ಸಮಸ್ಯೆ ತಲೆದೋರುವ ಬಗ್ಗೆ ಉದಯವಾಣಿ ಮಳೆಗಾಲ ಆರಂಭಕ್ಕೆ ಮುನ್ನ ಎಚ್ಚರಿಸಿತ್ತು.

ವಿದ್ಯುತ್‌ ಕಂಬ ಸ್ಥಳಾಂತರ
ಪುಂಜಾಲಕಟ್ಟೆ ಮೊದಲಾಡೆಗಳಲ್ಲಿ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಕೆಲವೆಡೆ ಹೊಸ ಹಾಗೂ ಎತ್ತರದ ಕಂಬಗಳನ್ನು ಅಳವಡಿಸಲಾಗುತ್ತಿದೆ. ಪುಂಜಾಲಕಟ್ಟೆ ಯ ದೈಕಿನಕಟ್ಟೆ ಬಳಿ ರಸ್ತೆಯನ್ನು ತುಂಬಾ ಎತ್ತರಿಸಲಾಗಿದ್ದು, ಮನೆ ಅಂಗಳದ ಮುಂದಕ್ಕೆ ರಸ್ತೆ ಹಾದು ಹೋಗುತ್ತದೆ. ರಸ್ತೆ ಪಕ್ಕ ಹಾಕಿರುವ ಮಣ್ಣುಗಳು ಕುಸಿಯದಂತೆ ಕಾಂಕ್ರೀಟ್‌ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದರೂ ಮನೆ ಮಂದಿಯಲ್ಲಿ ಭಯ ಮನೆ ಮಾಡಿದೆ.

ರಾಷ್ಟ್ರೀಯ ಹೆದ್ದಾರಿಯ ಸ್ಥಳ ಕಾಯ್ದಿರಿಸುವಿಕೆ ಪ್ರಕಾರ ರಸ್ತೆಗೆ ಅಗತ್ಯವಿರುವಷ್ಟು ಸ್ಥಳವನ್ನು ಬಳಸಿಕೊಳ್ಳಲಾಗಿದೆ. ಕೆಲವೆಡೆ ತಿರುವುಗಳನ್ನು ಸರಿಪಡಿಸಲು ಸ್ಥಳದ ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರು ಸಹಕರಿಸುತ್ತಿಲ್ಲ ಎಂದು ಕಾಮಗಾರಿ ನಿರ್ವಹಿಸುವ ಗುತ್ತಿಗೆ ಕಂಪೆನಿಯ ಸಿಬಂದಿ ತಿಳಿಸಿದ್ದಾರೆ.

ಅಪಾಯ ಆಹ್ವಾನಿಸುತ್ತಿವೆ ಮರಗಳು
ಬಡಗುಂಡಿ ಮೊದಲಾದ ಕಡೆಗಳಲ್ಲಿ ರಸ್ತೆ ಬದಿಯ ಗುಡ್ಡಗಳನ್ನು ಜೆಸಿಬಿ ಮೂಲಕ ಅಗೆದು ತಗ್ಗು ಪ್ರದೇಶಗಳಲ್ಲಿ ರಸ್ತೆ ಇಕ್ಕೆಲಗಳಿಗೆ ತುಂಬಲಾಗುತ್ತಿದೆ. ಅವೈಜ್ಞಾನಿಕ ವಾಗಿ ಮಣ್ಣು ಅಗೆದಿರುವುದರಿಂದ ಮಣ್ಣು ತೆರವುಗೊಳಿಸಿದ ಎತ್ತರದ ಸ್ಥಳದಲ್ಲಿ ಮರಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ರಸ್ತೆಗೆ ಉರುಳಿ ಬೀಳಬಹುದಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕೆಳಭಾಗ ದಲ್ಲಿ ವಿದ್ಯುತ್‌ ತಂತಿಗಳು ಹಾದು ಹೋಗಿದ್ದು, ಅಪಾಯ ಆಹ್ವಾನಿಸುತ್ತಿದೆ.

ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.