ಹೊಸಗುಂದ ದೇಗುಲಕ್ಕೆ ‘ಹೊಸ ವೈಭವ’ ತಂದ ಪುತ್ತೂರಿನ ದಂಪತಿ!

ಸಾಗರ ತಾಲೂಕು ಹೊಸಗುಂದದಲ್ಲಿ ಶಾಸ್ತ್ರೀ ದಂಪತಿಯ ಪರಿಶ್ರಮದಿಂದಾಗಿ ಗತವೈಭವ ಪಡೆದ ಉಮಾಮಹೇಶ್ವರ ದೇವಾಲಯ.

Team Udayavani, May 10, 2019, 6:00 AM IST

47

ಪುತ್ತೂರು: ಹದಿನೆಂಟು ವರ್ಷಗಳ ಹಿಂದೆ ಮಲೆನಾಡಿನ ಸಾಗರ ತಾಲೂಕಿನ ಹೊಸಗುಂದದಲ್ಲಿ ನೆಲೆಸಿದ ಪುತ್ತೂರಿನ ದಂಪತಿ ಕಾಲಗರ್ಭದಲ್ಲಿ ಸೇರಿಹೋಗಿದ್ದ ಅಲ್ಲಿನ ಐತಿಹಾಸಿಕ ದೇಗುಲವೊಂದನ್ನು ಈಗ ಬೆಳಕಿಗೆ ತಂದು ಸಾಧನೆ ಮಾಡಿದ್ದಾರೆ.

ಅಲ್ಲೊಂದು ಭವ್ಯ ದೇವಾಲಯವಿತ್ತು ಎಂಬುದು ಹೊರ ಜಗತ್ತಿಗೆ ಗೊತ್ತೇ ಇರಲಿಲ್ಲ. ಆದರೆ ಪುತ್ತೂರಿನ ಉದ್ಯಮಿ ಸಿ.ಎಂ.ಎನ್‌. ಶಾಸ್ತ್ರಿ ದಂಪತಿ ನಿವೃತ್ತ ಜೀವನ ಕಳೆಯಲು ಹೊಸಗುಂದಕ್ಕೆ ವಾಸ್ತವ್ಯ ಬದಲಾಯಿಸಿದ ಬಳಿಕ ಚಿತ್ರಣ ಬದಲಾಯಿತು. ಅಲ್ಲಿ ಜಾಗ ಖರೀದಿಸಿದ ಸಂದರ್ಭದಲ್ಲಿ 600 ಎಕ್ರೆಯಷ್ಟು ವಿಶಾಲವಾದ ಕಾಡಿನಲ್ಲಿ ದೇವಸ್ಥಾನದ ಅವಶೇಷಗಳು ಮುಚ್ಚಿ ಹೋಗಿದ್ದವು. ಇದು 1991ರ ಸ್ಥಿತಿ.

ಹುಡುಕಾಡಿದಾಗ ಸಿಕ್ಕಿತು
ಶಾಸ್ತ್ರಿಯವರು ಅಲ್ಲಿ ಕೃಷಿ ಆರಂಭಿಸಿದಾಗ ಕಾಣಿಸಿಕೊಂಡಿದ್ದ ತೊಂದರೆಗಳ ಪರಿಹಾರಕ್ಕೆ ವೇದ ವಿದ್ವಾಂಸ ಕಟ್ಟೆ ಪರಮೇಶ್ವರ ಭಟ್ ಅವರನ್ನು ಸಂಪರ್ಕಿಸಿದಾಗ ಅವರು ಹಳೆಯ ದೇವಸ್ಥಾನ ಇರುವ ವಿಚಾರ ತಿಳಿಸಿದ್ದರು. ಅದರಂತೆ ಶಾಸ್ತ್ರಿ ಅವರು ಕಾಡಿನಲ್ಲಿ ಹುಡುಕಾಟ ನಡೆಸಿದಾಗ ಜೀರ್ಣಾ ವಸ್ಥೆಯ ಶಿವಾಲಯ ಕಣ್ಣಿಗೆ ಬಿತ್ತು. ವಿದ್ವಾಂಸರ ಸೂಚನೆಯಂತೆ ನರ್ಮದಾ ಬಾಣಲಿಂಗವನ್ನೇ ತರಲಾಯಿತು.

ಅದೇ ಕಾಲಕ್ಕೆ ಊರವರೂ ಶಾಸ್ತ್ರಿ ಅವರ ಬಳಿ ಬಂದು ಹಿಂದಿನ ಐತಿಹ್ಯವೊಂದನ್ನು ಹಂಚಿಕೊಂಡರು. ವರದಪುರದ ಶ್ರೀಧರ ಸ್ವಾಮೀಜಿ ಅವರೊಮ್ಮೆ ಹೊಸಗುಂದ ಪ್ರದೇಶಕ್ಕೆ ಬಂದಿದ್ದಾಗ ದೇಗುಲದ ಜೀರ್ಣೋದ್ಧಾರ ಪ್ರಸ್ತಾವಕ್ಕೆ ಒಪ್ಪದೆ, ಹೊರಗಿನಿಂದ ವ್ಯಕ್ತಿಯೊಬ್ಬರು ಬರಲಿದ್ದು, ಅವರೇ ಪುನರುಜ್ಜೀವನ ನೆರವೇರಿಸುವರು, ಆಗ ಸಹಾಯ ನೀಡಿ ಎಂದು ಊರವರಲ್ಲಿ ಹೇಳಿದ್ದರಂತೆ. ಈಗ ಶಾಸ್ತ್ರಿಯವರು ಪುನರುಜ್ಜೀವನಕ್ಕೆ ಕೈಹಾಕಿದ್ದಾರೆ ಎಂಬ ಮಾಹಿತಿ ಊರವರಿಗೆ ತಿಳಿದು ಅವರೂ ಸೇರಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ ಆರಂಭವಾಯಿತು. 2001ರ ಮೇ 4ರಂದು ಪೂಜಾ ಕಾರ್ಯಗಳೂ ಆರಂಭವಾದವು.

ಸುಮಾರು 7 ಕೋಟಿ ರೂ. ವೆಚ್ಚದ ಹೊಸಗುಂದ ದೇವಸ್ಥಾನ ಪುನರುಜ್ಜೀವನದ ಯೋಜನೆ ಪೂರ್ಣ ಗೊಂಡಿದ್ದು, ಮೇ 1 ಮತ್ತು 2ರಂದು ಪುನರ್‌ ಪ್ರತಿಷ್ಠೆ, ಕುಂಭಾಭಿಷೇಕ ಶಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದಿದೆ.

ಪ್ರವಾಸಿ ತಾಣ
ಹೊಸಗುಂದದ 600 ಎಕರೆ ಅರಣ್ಯ ಇಂದು ದೇವರ ಕಾಡಾಗಿ ಬದಲಾಗಿದೆ. ಜಲತಜ್ಞರಾದ ಶ್ರೀಪಡ್ರೆ, ಶಿವಾನಂದ ಕಳವೆ ಅವರ ಸಲಹೆ ಮೇರೆಗೆ ಕಾಡಿನೊಳಗೆ 5 ವರ್ಷಗಳ ಕಾಲ ಜಲಕೊಯ್ಲು ನಡೆದಿದೆ. ಕಾಡೊಳಗೆ ಇದ್ದ 5 ಕೆರೆಗಳು ನೀರಿನಿಂದ ನಳನಳಿಸುತ್ತಿವೆ. ದೇವಸ್ಥಾನದ ಪುಷ್ಕರಿಣಿಯಲ್ಲಿ ಬಿರು ಬೇಸಿಗೆಯಲ್ಲೂ 15ರಿಂದ 20 ಅಡಿಯಷ್ಟು ನೀರಿದೆ.

ಕುವೆಂಪು ವಿವಿಯ ತಜ್ಞರು ಅಧ್ಯಯನ ನಡೆಸಿದ್ದು, 340 ಜಾತಿಯ ಸಸ್ಯ ಪ್ರಭೇದಗಳನ್ನು ಗುರುತಿಸಿದ್ದಾರೆ. ದೇವಸ್ಥಾನ ಸಮಿತಿಯ ವತಿಯಿಂದ 200ಕ್ಕೂ ಅಧಿಕ ಪ್ರಭೇದದ ಸಸ್ಯಗಳನ್ನು ನೆಡಲಾಗಿದೆ. ಹೊಸಗುಂದವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ.

ದೇವಸ್ಥಾನಕ್ಕೆ ಮೂರ್ತ ರೂಪ ಕೊಡಲು ಮುಂದಾದಾಗ ನೆರವಿಗೆ ಬಂದವರು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರು. ಪುರಾತನ ದೇವಸ್ಥಾನವನ್ನು ಪುನರ್‌ ನಿರ್ಮಿಸುವ ಹೊಣೆ ಹೊತ್ತವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು. ಸುಮಾರು 1.5 ಕೋಟಿ ರೂ. ತಗಲಬಹುದಾಗಿದ್ದ ಪುರಾತನ ದೇವಸ್ಥಾನದ ವಿನ್ಯಾಸವನ್ನು ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ ಮೂಲಕ ಕೇವಲ 36 ಲಕ್ಷ ರೂ.ಗಳಲ್ಲಿ ನಿರ್ಮಿಸಿಕೊಟ್ಟರು, ಧರ್ಮಸ್ಥಳದಿಂದ 1 ಲಕ್ಷ ರೂ.ಗಳ ಅನುದಾನವೂ ದೊರೆಯಿತು.

ಡಾ| ಹೆಗ್ಗಡೆಯವರ ಸಹಾಯ
ದೇವಸ್ಥಾನಕ್ಕೆ ಮೂರ್ತ ರೂಪ ಕೊಡಲು ಮುಂದಾದಾಗ ನೆರವಿಗೆ ಬಂದವರು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರು. ಪುರಾತನ ದೇವಸ್ಥಾನವನ್ನು ಪುನರ್‌ ನಿರ್ಮಿಸುವ ಹೊಣೆ ಹೊತ್ತವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು. ಸುಮಾರು 1.5 ಕೋಟಿ ರೂ. ತಗಲಬಹುದಾಗಿದ್ದ ಪುರಾತನ ದೇವಸ್ಥಾನದ ವಿನ್ಯಾಸವನ್ನು ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ ಮೂಲಕ ಕೇವಲ 36 ಲಕ್ಷ ರೂ.ಗಳಲ್ಲಿ ನಿರ್ಮಿಸಿಕೊಟ್ಟರು, ಧರ್ಮಸ್ಥಳದಿಂದ 1 ಲಕ್ಷ ರೂ.ಗಳ ಅನುದಾನವೂ ದೊರೆಯಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.