ಸರ್ವಋತು ರಸ್ತೆ, ಸೇತುವೆಗೆ ಬೇಡಿಕೆ


Team Udayavani, May 23, 2019, 5:50 AM IST

s-17

ಕೆಯ್ಯೂರು: ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ ಕಣಿಯಾರು -ಕಜೆಮೂಲೆ-ಒಡಪಲ್ಲ-ಕಳಾಯಿ ರಸ್ತೆಗೆ ಸೇತುವೆ ಸಹಿತ ಸರ್ವಋತು ರಸ್ತೆಯನ್ನಾಗಿ ಪರಿವರ್ತಿಸಬೇಕು ಎನ್ನುವ ಬೇಡಿಕೆಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ. ಹಲವು ಮನವಿಗಳು, ಸ್ಥಳೀಯರು ರಸ್ತೆಗಾಗಿ ಜಾಗ ಬಿಟ್ಟುಕೊಟ್ಟರೂ ಇಲಾಖೆಗಳಿಂದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಹಾಗಾಗಿ ಈ ಬಾರಿಯೂ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳಿಗೆ ಸುತ್ತಾಟವೇ ಗತಿ ಎನಿಸಿದೆ.

100 ಮನೆಗಳಿಗೆ ದಾರಿ
ಈ ರಸ್ತೆಯು ಕಣಿಯಾರು, ಇಳಂತಜೆ, ಅರ್ತ್ಯಡ್ಕ,, ಕಜೆಮೂಲೆ, ಒಡಪಲ್ಲ, ಕಲಾಯಿ, ಪೆರ್ಲಂಪಾಡಿ ಪ್ರದೇಶದ 100ಕ್ಕೂ ಅಧಿಕ ಮನೆಗಳ 500ಕ್ಕೂ ಅಧಿಕ ಮಂದಿಗೆ ಸಂಚಾರ ರಸ್ತೆಯಾಗಿದೆ. ಆದರೆ ರಸ್ತೆ ಅಭಿವೃದ್ಧಿ ಬಗ್ಗೆ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಈ ರಸ್ತೆಯಲ್ಲಿ ಸೇತುವೆ ನಿರ್ಮಾಣದ ಬೇಡಿಕೆ ಇದ್ದು, ಈ ತನಕ ಈಡೇರಿಲ್ಲ. ಹೀಗಾಗಿ ಮಳೆಗಾಲದಲ್ಲಿ ವಾಹನ ಸಂಚಾರ ಸಾಧ್ಯವಾಗುವುದಿಲ್ಲ. ಸ್ಥಳೀಯ ಗ್ರಾ.ಪಂ.ನಿಂದ ಕಾಲುಸಂಕ ನಿರ್ಮಾಣವಾದ ಕಾರಣ ವಿದ್ಯಾರ್ಥಿಗಳ ಸಂಚಾರಕ್ಕೆ ಒಂದಷ್ಟು ಅನುಕೂಲವಾಗಿದೆ.

ಜಾಗ ಕೊಟ್ಟಿದ್ದಾರೆ
ಸರ್ವಋತು ರಸ್ತೆಯನ್ನಾಗಿ ಪರಿವರ್ತಿಸಲು ಸ್ಥಳೀಯರು ಸ್ವಂತ ಸ್ಥಳವನ್ನು ಬಿಟ್ಟುಕೊಟ್ಟಿದ್ದಾರೆ. ಗ್ರಾ.ಪಂ. ಸುಪರ್ದಿಗೆ ನೀಡಿ 3 ವರ್ಷಗಳೇ ಸಂದಿವೆ. ಈ ರಸ್ತೆ ದುರಸ್ತಿಗೆ ಜನರೇ 3.80 ಲಕ್ಷ ರೂ. ವ್ಯಯಿಸಿದ್ದಾರೆ. ಇಷ್ಟಾದರೂ ಶಾಸಕರ, ಸಂಸದರ ಅಥವಾ ಇನ್ನಿತರ ಮೂಲಗಳಿಂದ ಅನುದಾನ ಕಾದಿರಿಸುವ ಯಾವ ಪ್ರಯತ್ನವೂ ನಡೆದಿಲ್ಲ. ಹೀಗಾಗಿ ಕಳೆದ ಹಲವು ವರ್ಷಗಳಿಂದ ಅನುದಾನದ ಕಾರಣದಿಂದ ಬೇಡಿಕೆ ಈಡೇರುತ್ತಿಲ್ಲ ಎಂದು ಸ್ಥಳೀಯರು ದೂರುತ್ತಾರೆ.

ಸುತ್ತಾಟ ತಪ್ಪಲಿದೆ
ಸೇತುವೆ ನಿರ್ಮಾಣವಾದಲ್ಲಿ ಮಳೆಗಾಲದಲ್ಲಿ ಕೆಯ್ಯೂರು ಸಂಪರ್ಕಕ್ಕೆ ಸುಮಾರು 10 ಕಿ.ಮೀ. ಹತ್ತಿರ. ಈಗಂತೂ ಪೆರ್ಲಂಪಾಡಿ ರಸ್ತೆ ಮೂಲಕ ಕೆಯ್ಯೂರಿಗೆ ಸುತ್ತು ಬಳಸಿ ಬರಬೇಕು. ಈ ರಸ್ತೆ ಹಾದು ಹೋಗುವ ಪ್ರದೇಶದಲ್ಲಿ ಒಡಪಲ್ಲ ಕಾಲನಿ, ಕಳಾಯಿ ಕಾಲನಿಗಳಲ್ಲಿ ಸುಮಾರು 60ಕ್ಕೂ ಅಧಿಕ ಪರಿಶಿಷ್ಟ ಜಾತಿ ಕುಟುಂಬಗಳು ವಾಸಿಸುತ್ತಿವೆ. ಕಳೆದ ಐದು ವರ್ಷದಲ್ಲಿ ಬೇಡಿಕೆಗೆ ಸಂಬಂಧಿಸಿ ಶಾಸಕರಿಗೆ, ತಾ.ಪಂ., ಎಂ.ಪಿ., ಕೆಯ್ಯೂರು ಗ್ರಾ.ಪಂ.ಗೆ ಮನವಿ ನೀಡಲಾಗಿದೆ ಎನ್ನುತ್ತಾರೆ ಸ್ಥಳೀಯರು.

 ಮೋರಿಗೆ ಅನುದಾನ
ಗ್ರಾ.ಪಂ.ನಿಂದ ಮೋರಿ ಕಾಮಗಾರಿಗೆ 1 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಕಾಲುಸಂಕ ನಿರ್ಮಾಣಕ್ಕೆ ದೊಡ್ಡ ಮೊತ್ತದ ಅನುದಾನದ ಅಗತ್ಯವಿದ್ದು, ಸಂಸದರ ನಿಧಿ ಅಥವಾ ನಬಾರ್ಡ್‌ ಯೋಜನೆಯಿಂದ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ.
– ಸುಬ್ರಹ್ಮಣ್ಯ ಕೆ.ಎಂ., ಪಿಡಿಒ, ಕೆಯ್ಯೂರು ಗ್ರಾ.ಪಂ.

ವಾಹನ ಓಡಾಟ ಅಸಾಧ್ಯ
ಮಳೆಗಾಲದಲ್ಲಿ ಈ ಪರಿಸರದ ಯಾವುದೇ ವಾಹನವನ್ನು ಓಡಿಸುವಂತಿಲ್ಲ. ಬಾಡಿಗೆ ವಾಹನಗಳು ತೆರಳಲು ಸಾಧ್ಯವಿಲ್ಲ. ಸೇತುವೆ ನಿರ್ಮಾಣ ಅತಿ ಆವಶ್ಯಕವಾಗಿದೆ. ಜನಪ್ರತಿನಿಧಿಗಳು ಬಗ್ಗೆ ಗಮನ ಹರಿಸಬೇಕು. ಜೀವನ ನಿರ್ವಹಣೆಗೆ ಆಟೋರಿಕ್ಷಾ ಓಡಿಸುವವರು ಇದ್ದು, ಮಳೆಗಾಲದಲ್ಲಿ ಮನೆಯಲ್ಲಿ ಕೂರಬೇಕಾದ ಸ್ಥಿತಿ ಇದೆ.
– ಮಧುಸೂದನ ಭಟ್‌ ಕಜೆಮೂಲೆ ಸ್ಥಳೀಯ ನಿವಾಸಿ

– ಗೋಪಾಲಕೃಷ್ಣ ಸಂತೋಷ್‌ನಗರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.