ಗುತ್ತಿಗೆ ಸಿಬಂದಿಗೆ ಲೋಕೋಪಯೋಗಿ ಇಲಾಖೆ ಮೊರೆ!

ಗ್ಯಾಂಗ್‌ಮನ್‌ಗಳ ಹುದ್ದೆ ರದ್ದು: ಸರಕಾರದ ಆದೇಶದಿಂದ ಇಲಾಖೆ ಕೆಲಸಗಳಿಗೆ ಕುತ್ತು!

Team Udayavani, May 16, 2019, 5:50 AM IST

15

ಚರಂಡಿ, ತಡೆಬೇಲಿ ಕಾಮಗಾರಿ ಬಾಕಿ ಇರುವ ಲೋಕೋಪಯೋಗಿ ರಸ್ತೆ.

ಪುತ್ತೂರು: ಲೋಕೋಪಯೋಗಿ ರಸ್ತೆಗಳನ್ನು ಸುಸ್ಥಿತಿಯಲ್ಲಿಡುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದ ಗ್ಯಾಂಗ್‌ಮನ್‌ ಸಿಬಂದಿ ಹುದ್ದೆಯನ್ನು ಸರಕಾರದ ಮಟ್ಟದಲ್ಲಿ ರದ್ದು ಗೊಳಿಸಿರುವುದರಿಂದ ಇಲಾಖೆ ಒಂದಷ್ಟು ಅಪಖ್ಯಾತಿ ಎದುರಿಸುತ್ತಿದೆ. ಇದನ್ನು ದೂರ ಮಾಡುವ ನಿಟ್ಟಿನಲ್ಲಿ ಇಲಾಖೆ ಗುತ್ತಿಗೆ ಸಿಬಂದಿಯ ಮೊರೆ ಹೋಗಿದೆ.

ಮಳೆಗಾಲ ಆರಂಭವಾದರೆ ಸಾಕು, ಹಾರೆ ಪಿಕ್ಕಾಸು ಹಿಡಿದುಕೊಂಡು ರಸ್ತೆಯ ಎರಡೂ ಭಾಗಗಳ ಚರಂಡಿಗಳನ್ನು ನಿರ್ವಹಣೆ ಮಾಡುತ್ತಿದ್ದ ಲೋಕೋಪಯೋಗಿ ಇಲಾಖೆ ಗ್ಯಾಂಗ್‌ಮನ್‌ ಸಿಬಂದಿ ಹುದ್ದೆಗೆ ಇತಿಶ್ರೀ ಹಾಡಲಾಗಿದೆ. ಇದರ ಪರಿಣಾಮ ಚರಂಡಿಗಳಲ್ಲಿ ಮಣ್ಣು ತುಂಬಿ ರಸ್ತೆಗಳಲ್ಲಿ ಹರಡುವ, ಮಳೆಗಾಲದಲ್ಲಿ ಚರಂಡಿಯಿಂದ ರಸ್ತೆಯಲ್ಲಿ ನೀರು ಹರಿಯುವ ದೃಶ್ಯಗಳು ಎಲ್ಲೆಡೆ ಕಂಡುಬರುತ್ತಿವೆ. ಪಿಡಬ್ಲ್ಯುಡಿ ಇಲಾಖೆಯಲ್ಲಿನ ಗ್ಯಾಂಗ್‌ಮನ್‌ಗಳು ನಿವೃತ್ತಿಯಾದ ಅನಂತರ ಆ ಹುದ್ದೆಯನ್ನೇ ರದ್ದು ಮಾಡಿರುವುದು ಇದಕ್ಕೆಲ್ಲ ಕಾರಣ.

ವಿಭಾಗದಲ್ಲಿದ್ದರು 60 ಮಂದಿ
ಮುಖ್ಯವಾಗಿ ರಸ್ತೆ ಬದಿಯ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಪಿಡಬ್ಲ್ಯುಡಿ ಗ್ಯಾಂಗ್‌ಮನ್‌ಗಳು ನೋಡಿಕೊಳ್ಳುತ್ತಿದ್ದರು.

ರಸ್ತೆ ಹಾಳಾಗದಂತೆ ನೋಡಿಕೊಳ್ಳುತ್ತಿದ್ದ ಇವರ ಕಾಳಜಿಯಿಂದಾಗಿ ರಸ್ತೆಗಳು ಗುಣಮಟ್ಟವನ್ನೂ ಉಳಿಸಿಕೊಳ್ಳುತ್ತಿದ್ದವು. ಕೆಲವು ವರ್ಷಗಳ ಹಿಂದೆ ಪುತ್ತೂರು ಉಪವಿಭಾಗದ ಪಿಡಬ್ಲೂಡಿ ಇಲಾಖೆಯಲ್ಲಿ 60 ಗ್ಯಾಂಗ್‌ಮನ್‌ ಹುದ್ದೆಯಿತ್ತು. ಆದರೆ ಪ್ರತಿ ಗ್ಯಾಂಗ್‌ಮನ್‌ಗಳು ನಿವೃತ್ತಿಯಾದ ಅನಂತರ ಆ ಹುದ್ದೆಗೆ ಹೊಸ ನೇಮಕಗೊಳಿಸುವ ಬದಲು ಹುದ್ದೆ ಅಗತ್ಯ ಇಲ್ಲ ಎನ್ನುವಂತೆ ಹುದ್ದೆಯನ್ನೇ ಸರಕಾರ ರದ್ದು ಮಾಡಿದೆ.

ಲೋಕೋಪಯೋಗಿ ಇಲಾಖೆಯಡಿಯಲ್ಲಿ ಬರುವ ರಸ್ತೆಗಳಿಗೆ 4ರಿಂದ 5 ಗ್ಯಾಂಗ್‌ಮನ್‌ಗಳು ಅಗತ್ಯವಾಗಿದ್ದು, ಪ್ರಸ್ತುತ ಗುತ್ತಿಗೆ ಆಧಾರದಲ್ಲಿ ಚರಂಡಿಗಳನ್ನು ನಿರ್ವಹಣೆ ಮಾಡಲು ಟೆಂಡರ್‌ ಕರೆಯಲಾಗುತ್ತಿದೆ. ಅದು ಮಳೆಗಾಲ ಕಳೆದ ಅನಂತರ ಟೆಂಡರ್‌ ಕರೆಯುವುದರಿಂದ ಸಮಸ್ಯೆಯಾಗುತ್ತಿದೆ. ಚರಂಡಿ ದುರಸ್ತಿ ಕಾಮಗಾರಿ ಗುತ್ತಿಗೆದಾರರಿಗೆ ಸಮಯ ಸಿಕ್ಕಾಗ ನಡೆಸುವ ಕಾಮಗಾರಿಯಾಗಿ ಮಾರ್ಪಟ್ಟಿದೆ.

ಹೊರಗುತ್ತಿಗೆ
ಗ್ಯಾಂಗ್‌ಮ್ಯಾನ್‌ಗಳು ನಿವೃತ್ತಿಯಾದರೆ ಹುದ್ದೆಯೇ ರದ್ದುಗೊಳ್ಳುತ್ತಿರುವುದರಿಂದ ಹೊರಗುತ್ತಿಗೆ ಆಧಾರದಲ್ಲಿ ಚರಂಡಿಗಳನ್ನು ನಿರ್ವಹಣೆ ಮಾಡಲು ಸರಕಾರ ಟೆಂಡರ್‌ನ ಅವಕಾಶ ಕಲ್ಪಿಸುತ್ತಿದೆ. ಈಗ ಗುತ್ತಿಗೆ ಆಧಾರದಲ್ಲಿ ಗ್ಯಾಂಗ್‌ ರಚಿಸುತ್ತಿದ್ದೇವೆ. ಗುತ್ತಿಗೆ ಆಧಾರದಲ್ಲಿ ಸಿಬಂದಿ, ಪಿಕಪ್‌ ವಾಹನವನ್ನು ಬಳಸಿಕೊಂಡು ಮಳೆಗಾಲ ಆರಂಭಕ್ಕೆ ಮೊದಲು ಚರಂಡಿಗಳ ದುರಸ್ತಿ ಕಾರ್ಯ ನಡೆಸಲಾಗುವುದು.
– ಪ್ರಮೋದ್‌ ಕುಮಾರ್‌, ಎಇಇ, ಪಿಡಬ್ಲ್ಯುಡಿ, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.