ಮಾನವೀಯ ಮೌಲ್ಯವುಳ್ಳ ವೈದ್ಯ ಸೇವೆಯೇ ಆದರ್ಶ: ಡಾ| ಗಂಗಾಧರ್‌


Team Udayavani, Jun 13, 2019, 5:00 AM IST

t-15

ಬೆಳ್ತಂಗಡಿ: ವೈದ್ಯಕೀಯ ವೃತ್ತಿಯು ಇತರ ವೃತ್ತಿಗಳಂತೆ ಹಣ ಗಳಿಕೆಯ ರೂಪಾಂ ತರವಲ್ಲ. ವೈದ್ಯರಿಂದ ಸಮಾಜವು ನಿರೀಕ್ಷಿಸುವ ಮಾನವೀಯ ಮೌಲ್ಯವುಳ್ಳ ಸೇವೆಯಾಗಿ ನೀಡುವಲ್ಲಿ ಯುವ ವೈದ್ಯರು ಸಮಾಜಕ್ಕೆ ಆದರ್ಶ ರಾಗಿರಬೇಕು ಎಂದು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯ ನಿರ್ದೇಶಕ ಡಾ| ಬಿ.ಎನ್‌. ಗಂಗಾಧರ್‌ ಹೇಳಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜು ನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 25ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೇವಲ ಅಲೋಪತಿ ಮಾತ್ರವಲ್ಲದೆ ಪ್ರಕೃತಿ ಚಿಕಿತ್ಸೆ, ಯೋಗ ಆರೋಗ್ಯ ಸಂರಕ್ಷಣೆಗೆ ಅನಿ ವಾರ್ಯವೆಂದು ಜನರಿಗೆ ಅರಿವಾಗಿದೆ. ಭಾರತ ದಲ್ಲಿ ಸೀಮಿತವಾಗಿದ್ದ ಯೋಗವು ಕಳೆದ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಪಸರಿಸಿದೆ. ವಿಶ್ವ ಯೋಗ ದಿನಾಚರಣೆ ಮೂಲಕ ಯೋಗಕ್ಕೆ ವಿಶೇಷ ಮನ್ನಣೆ ಲಭಿಸಿದೆ ಎಂದರು.

ಸಮಾರಂಭಕ್ಕೆ ಚಾಲನೆ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್‌ಡಿಎಂ ಧಾರವಾಡ ವಿ.ವಿ.ಯ ಕುಲಪತಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ರೋಗಿಯ ಸಮಸ್ಯೆ ಆಲಿಸುವ ತಾಳ್ಮೆ ವೈದ್ಯರಲ್ಲಿರುವುದು ಮುಖ್ಯ. ರೋಗಿಗಳ ಸಮಸ್ಯೆಗೆ ಕಿವಿಯಾಗಿ ಅವರ ಮನಸ್ಥೈರ್ಯ ಹೆಚ್ಚಿಸುವ ಕಾರ್ಯ ಮಾಡಬೇಕು ಎಂದರು.

ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ನಿರತರಾಗಿದ್ದಾರೆ. ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಶ್ವದ 130 ದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೆಗ್ಗಡೆ ಹರ್ಷ ವ್ಯಕ್ತಪಡಿಸಿದರು.

ಕಳೆದ 25 ವರ್ಷಗಳಲ್ಲಿ ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರ ಮಾಹಿತಿ ಒಳಗೊಂಡ “ಆರ್ಷಪ್ರವರ’ ಪುಸ್ತಕವನ್ನು ಡಾ| ಹೆಗ್ಗಡೆ ಬಿಡುಗಡೆಗೊಳಿಸಿದರು. ಹೇಮಾವತಿ ವೀ. ಹೆಗ್ಗಡೆ, ಕಾರ್ಯ ದರ್ಶಿಗಳಾದ ಡಿ. ಹಷೇದ್ರ ಕುಮಾರ್‌, ಡಾ| ಬಿ. ಯಶೋವರ್ಮ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ| ಪ್ರಶಾಂತ್‌ ಶೆಟ್ಟಿ ಸ್ವಾಗತಿಸಿದರು. ಯೋಗ ವಿಭಾಗದ ಡೀನ್‌ ಶಿವಪ್ರಸಾದ್‌ ಶೆಟ್ಟಿ ವಂದಿಸಿದರು. ಅಂಕಿತ್‌ ಪಾಂಡೆ ಹಾಗೂ ಪ್ರಿಯದಾ ಪೌಲ್‌ ನಿರೂಪಿಸಿದರು.

ಚಿನ್ನದ ಪದಕ
ಒಟ್ಟು 28 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, 96 ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಐವರು ಚಿನ್ನದ ಪದಕ ಪಡೆದರು. ಸ್ನಾತಕೋತ್ತರ ವಿಭಾಗದ ನ್ಯಾಚುರೋಪತಿಯಲ್ಲಿ ಡಾ| ಜೋಸ್ನಾ ಕೆ.ಜೆ. ಮತ್ತು ಡಾ| ವಿವೇಕ್‌ ಎಚ್‌., ಯೋಗದಲ್ಲಿ ಸಪ್ನಾ ಕೆ., ಜಾಸ್ಮಿನ್‌ ಡಿ’ಸೋಜಾ ಜಿಂದಾಲ್‌ ಫೌಂಡೇಶನ್‌ನ ಚಿನ್ನದ ಪದಕ ಪಡೆದರು. ಪದವಿಯಲ್ಲಿ ಡಾ| ಭೀರಾಮ್‌ ಸುಧಾಂಶಿ ಅವರು ಜಿಂದಾಲ್‌ ಫೌಂಡೇಶನ್‌ ಹಾಗೂ ಪ್ರಸಿಡೆಂಟ್‌ ಗೋಲ್ಡ್‌ ಮೆಡಲ್‌ ಸೇರಿ ಮೂರು ಚಿನ್ನದ ಪದಕಕ್ಕೆ ಭಾಜನರಾದರು. ವರ್ಷದ ಅತ್ಯುತ್ತಮ ವಿದ್ಯಾರ್ಥಿಯಾಗಿ ಡಾ| ಕೌಶಿಕ್‌ ಗುಪ್ತ ಹೊರಹೊಮ್ಮಿದರು.

 ಎಸ್‌ಡಿಎಂ ವೈದ್ಯಕೀಯ ವಿ.ವಿ.
ಧಾರವಾಡದಲ್ಲಿ ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ, ವೈದ್ಯಕೀಯ ಕಾಲೇಜು, ನರ್ಸಿಂಗ್‌ ಕಾಲೇಜು ಮತ್ತು ಸಂಶೋಧನ ಕೇಂದ್ರವನ್ನು ಸೇರಿಸಿಕೊಂಡು ಎಸ್‌ಡಿಎಂ ವೈದ್ಯಕೀಯ ವಿ.ವಿ. ಪ್ರಾರಂಭಿಸಲಾಗಿದೆ. ಮುಂದೆ ಎಲ್ಲ ವಿದ್ಯಾಸಂಸ್ಥೆಗಳನ್ನು ವಿಶ್ವವಿದ್ಯಾಲಯಕ್ಕೆ ಸಂಯೋಜನೆ ಮಾಡಲಾಗುವುದು.
 -ಡಾ| ಡಿ. ವೀರೇಂದ್ರ ಹೆಗ್ಗಡೆ
ಧರ್ಮಾಧಿಕಾರಿ, ಎಸ್‌ಡಿಎಂ ಧಾರವಾಡ ವಿ.ವಿ.ಯ ಕುಲಪತಿ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.