ದೋಳ್ಪಾಡಿ- ಕೊಜಂಬೇಡಿ: ಸೇತುವೆ ನಿರ್ಮಾಣವೆಂದು?


Team Udayavani, May 16, 2019, 5:50 AM IST

19

ದೋಳ್ಪಾಡಿ - ಕೊಜಂಬೇಡಿ- ಎಡಮಂಗಲ- ಕಡಬ ಸಂಪರ್ಕ ರಸ್ತೆಯ ಸದ್ಯದ ಸ್ಥಿತಿ.

ಕಾಣಿಯೂರು: ಗ್ರಾಮೀಣ ಭಾಗದಲ್ಲಿ ಹಲವೆಡೆ ರಸ್ತೆ ಇದ್ದರೆ ಸೇತುವೆ ಇಲ್ಲ, ಸೇತುವೆ ಇದ್ದರೆ ರಸ್ತೆ ಇಲ್ಲ ಎನ್ನುವ ಪರಿಸ್ಥಿತಿ ಸರ್ವೆ ಸಾಮಾನ್ಯ. ಊರನ್ನು ಸಂಪರ್ಕಿಸುವ ರಸ್ತೆ ಸುಧಾರಿಸಿದರೆ ಗ್ರಾಮವೇ ಅಭಿವೃದ್ಧಿಯಾದಂತೆ. ಆದರೆ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸುವ ಕಾಣಿಯೂರು ಗ್ರಾ.ಪಂ. ವ್ಯಾಪ್ತಿಯ ದೋಳ್ಪಾಡಿ – ಕೊಜಂಬೇಡಿ- ಎಡಮಂಗಲ- ಕಡಬ ಸಂಪರ್ಕ ರಸ್ತೆಗೆ ಸಂಪರ್ಕ ಸೇತುವೆಯ ಭಾಗ್ಯಇನ್ನೂ ಕೂಡಿ ಬಂದಿಲ್ಲ.

ಊರವರಿಂದಲೇ ಅಡಿಕೆ ಪಾಲ
ಇಲ್ಲಿ ಸೇತುವೆ ನಿರ್ಮಾಣವಾಗಬೇಕು ಎನ್ನುವ ಬೇಡಿಕೆ ಹಲವು ವರ್ಷಗಳದ್ದಾಗಿದೆ. ಸೇತುವೆ ನಿರ್ಮಾಣದ ಕನಸು ಹಾಗೆಯೇ ಉಳಿದಿದೆ. ಇದರಿಂದ ಈ ಪ್ರದೇಶದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ಈ ಹೊಳೆಗೆ ಅಡಿಕೆ ಮರದ ಪಾಲವನ್ನು ಊರ ನಾಗರಿಕರು ಕಟ್ಟಬೇಕು. ಈ ಸೇತುವೆ ಮೂಲಕ ನಿತ್ಯ ಸಾಗುವವರ ಸಂಖ್ಯೆ ಹಲವು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಅಡಿಕೆ ಮರದ ಸೇತುವೆಯಲ್ಲಿ ದಾಟಬೇಕು. ಮಳೆಗಾಲದಲ್ಲಿ ಅಪಾಯವನ್ನು ಎದುರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇಲ್ಲಿನದು.

ಸುತ್ತು ಬಳಸಿ ವಾಹನ ಚಾಲಕರು ಪೇಟೆಗೆ ಬರಬೇಕಾದ ಪರಿಸ್ಥಿತಿ ಇಲ್ಲಿಯದ್ದು. ಒಂದು ವೇಳೆ ಈ ಪರಿಸರದಲ್ಲಿ ಯಾರದಾರೂ ಆಕಸ್ಮಿಕವಾಗಿ ಅನಾರೋಗ್ಯಕ್ಕೆ ತುತ್ತಾದರೆ ದೇವರೇ ಗತಿ. ಸಂಪರ್ಕ ಸೇತುವೆಗಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಸಾರ್ವಜನಿಕರು ಹೇಳುತ್ತಾರೆ.

ಶಾಸಕರಿಗೆ ಮನವಿ ಮಾಡಲಾಗಿದೆ
ದೋಳ್ಪಾಡಿ-ಕೊಜಂಬೇಡಿ ಸಂಪರ್ಕಕ್ಕೆ ಸೇತುವೆ ನಿರ್ಮಾಣವಾಗಬೇಕೆನ್ನುವ ಬೇಡಿಕೆ ಇಂದು ನಿನ್ನೆಯದಲ್ಲ. ಈ ಬಗ್ಗೆ ಸುಳ್ಯ ಶಾಸಕರಿಗೆ ಮನವಿ ಮಾಡಲಾಗಿದೆ. ಸೇತುವೆ ನಿರ್ಮಾಣದ ಭರವಸೆಯನ್ನು ಶಾಸಕರು ನೀಡಿದ್ದಾರೆ. ಅಲ್ಲದೆ ಸ್ಥಳಕ್ಕೆ ಜಿ.ಪಂ. ಎಂಜಿನಿಯರ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ದೋಳ್ಪಾಡಿ – ಕೊಜಂಬೇಡಿಯಲ್ಲಿ ಸೇತುವೆ ನಿರ್ಮಾಣವಾದರೆ ಎಡಮಂಗಲದ ಮೂಲಕ ತಾಲೂಕು ಕೇಂದ್ರ ಕಡಬಕ್ಕೆ ಸಂಚರಿಸಲು ಹಾಗೂ ದೋಳ್ಪಾಡಿ ಶಾಲೆಗಳಿಗೆ ಬರಲು ಮಕ್ಕಳಿಗೆ ಸುಲಭ ದಾರಿಯಾಗಲಿದೆ.
– ಉಮೇಶ್‌ ಆಚಾರ್ಯ ದೋಳ್ಪಾಡಿ, ಸದಸ್ಯರು, ಕಾಣಿಯೂರು ಗ್ರಾ.ಪಂ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.