ಚರಂಡಿ ಇಲ್ಲದೆ ಮಳೆ ನೀರಿಗೆ ಕೊಚ್ಚಿಹೋದ ಡಾಮರು ರಸ್ತೆ


Team Udayavani, Jul 14, 2019, 5:00 AM IST

y-19

ಕೆಯ್ಯೂರು: ಕೆಯ್ಯೂರು ಗ್ರಾಮದ ಕಣಿಯಾರುಮಲೆ-ಕೌಡಿಚ್ಚಾರು ರಸ್ತೆ ದುರಸ್ತಿ ಹಾಗೂ ಡಾಮರು ಕಾಮಗಾರಿ 50 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ಆದರೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆ ಮೇಲೆಯೇ ಹರಿದು ಒಂದೇ ತಿಂಗಳಲ್ಲಿ ಡಾಮರು ಕಿತ್ತು ಹೋಗಿದೆ ಎಂದು ಗ್ರಾಮಸಭೆಯಲ್ಲಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ದೇವಿನಗರದ ಅಂಬೇಡ್ಕರ್‌ ಭವನದಲ್ಲಿ ಕೆಯ್ಯೂರು ಗ್ರಾಮ ಪಂಚಾಯತ್‌ನ ಪ್ರಸ್ತುತ ಸಾಲಿನ ಪ್ರಥಮ ಗ್ರಾಮಸಭೆ ಆಯೋಜಿಸಲಾಗಿತ್ತು. ಮಾರ್ಗದರ್ಶಿ ಅಧಿಕಾರಿಯಾಗಿ ಡಾ| ಪ್ರಕಾಶ್‌ ಭಾಗವಹಿಸಿದ್ದರು. ಕೆಯ್ಯೂರು ಗ್ರಾ.ಪಂ. ಅಧ್ಯಕ್ಷ ಬಾಬು ಬಿ. ನೇತೃತ್ವ ವಹಿಸಿದ್ದರು.

ಗುತ್ತಿಗೆದಾರರು ಸಮರ್ಪಕ ಚರಂಡಿ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಮಳೆಯ ನೀರು ರಸ್ತೆಯಲ್ಲಿಯೆ ಹರಿದು ಡಾಮರು ಕಿತ್ತು ಹೋಗಿದೆ. ರಸ್ತೆಯನ್ನು ಯೋಗೀಶ್‌ ಪೂಜಾರಿ ನಿರ್ವಹಿಸಿದ್ದಾರೆ ಎಂದು ಗ್ರಾಮಸ್ಥರು ಹೇಳಿದರು. ಉತ್ತರಿಸಿದ ಜಿ.ಪಂ. ಸಹಾಯಕ ಎಂಜಿನಿಯರ್‌ ಶ್ರುತಿ, ಈ ಬಗ್ಗೆ ಗುತ್ತಿಗೆದಾರರಿಗೆ ತಿಳಿಸಿ ಸರಿಪಡಿಸಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮಸ್ಥ ಜಯಂತ ಪೂಜಾರಿ ಕೆಂಗುಡೇಲು, ಮುಂದಿನ ಗ್ರಾಮಸಭೆಯೊಳಗೆ ಸರಿಪಡಿಸಿ ಎಂದರು.

ಮೊಬೈಲ್‌ ಕೊಡಬೇಡಿ
ಸ್ಮಾರ್ಟ್‌ ಫೋನ್‌ ಬಳಕೆಯಿಂದ ಒಳ್ಳೆಯದು, ಕೆಟ್ಟದ್ದು ಎರಡೂ ಇದೆ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್‌ ಫೋನ್‌ಗಳನ್ನು ಕೊಡಬೇಡಿ. ಅಪರಿಚಿತರು ಯಾರೇ ಕಂಡುಬಂದರೂ ಮಾಹಿತಿ ನೀಡಿ ಎಂದು ಕೆಯ್ಯೂರು ಬೀಟ್‌ ಪೊಲೀಸ್‌ ಅಧಿಕಾರಿ ವಿನಯಕುಮಾರ್‌ ಮನವಿ ಮಾಡಿದರು.

ಲೋಕೋಪಯೋಗಿ ಇಲಾಖೆಗೆ ಪತ್ರ: ತೀರ್ಮಾನ
ಕುಂಬ್ರ, ಬೆಳ್ಳಾರೆ ಮುಖ್ಯ ರಸ್ತೆಯಲ್ಲಿಯೂ ಚರಂಡಿ ವ್ಯವಸ್ಥೆ ಇಲ್ಲದೆ ಮಳೆನೀರು ರಸ್ತೆಯ ಮೇಲೆಯೇ ಹರಿಯುತ್ತಿದೆ. ಇದರಿಂದ ರಸ್ತೆ ಬದಿಯಲ್ಲಿ ದೊಡ್ಡ ದೊಡ್ಡ ಹೊಂಡಗಳಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗಿದೆ. ಹಲವರು ಬಿದ್ದು ಗಾಯಗೊಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ಎಂದು ದಂಬೆಕಾನ ಸದಾಶಿವ ರೈ ಹೇಳಿದರು. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಪತ್ರ ಬರೆಯುವುದೆಂದು ನಿರ್ಣಯಿಸಲಾಯಿತು.

ಕುಂಬ್ರ ಜೆ.ಇ.ಗೆ ಅಭಿನಂದನೆ
ಕಣಿಯಾರು ಕಾಲನಿಯ 21 ಮನೆಗಳಿಗೆ ಮತ್ತು ಅರಿಕ್ಕಿಲದ 31 ಮನೆಗಳಿಗೆ ಪ್ರತ್ಯೇಕ ಟಿ.ಸಿ. ಒದಗಿಸಿ ಹಲವು ವರ್ಷಗಳ ಬೇಡಿಕೆ ಈಡೇರಿಸಿದ ಕುಂಬ್ರ ಜೆಇ ನಿತ್ಯಾನಂದ ತೆಂಡೂಲ್ಕರ್‌ ಅವರಿಗೆ ಗ್ರಾ.ಪಂ. ಸದಸ್ಯರಾದ ಕಿಟ್ಟ ಅಜಿಲ ಕಣಿಯಾರು, ಹನೀಪ್‌ ಕೆ.ಎಂ. ಅಭಿನಂದನೆ ಸಲ್ಲಿಸಿದರು.

ಅಪಾಯಕಾರಿ ಮರ ತೆರವುಗೊಳಿಸಿ
ಕೆಯ್ಯೂರು ಗ್ರಾಮದ ಬೊಳಿಕಲ ಪರಿಸರದಲ್ಲಿ ವಿದ್ಯುತ್‌ ತಂತಿಗಳಿಗೆ ತಾಗಿ ಕೊಂಡು ಹಲವು ಮರ ಗಳಿವೆ. ಅವುಗಳನ್ನು ಶೀಘ್ರ ಕಡಿಯುವಂತೆ ಶೇಖರ್‌ ಬೊಳಿಕಲ ಅವರು ಪ್ರಸ್ತಾವಿಸಿದರು. ಕೆಯ್ಯೂರು ದೇವಿನಗರ ದ್ವಾರದ ಸಮೀಪ ಅಳವ ಡಿಸಲಾದ ಹಂಪ್‌ ಗಮನಿಸದೆ ಕೆಲವು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದಾರೆ. ಹೀಗಾಗಿ ಅದನ್ನು ತೆಗೆದು ಚಿಕ್ಕ ಹಂಪ್‌ ಅಳವಡಿಸಬೇಕು ಎಂದು ಜಯಂತ ಪೂಜಾರಿ ಹೇಳಿದರು.

ಪ್ಲಾಟಿಂಗ್‌ ಆಗ್ತಾ ಇಲ್ಲ
ಕೆಲವು ತಿಂಗಳಿಂದ ಜಾಗದ ಪ್ಲಾಟಿಂಗ್‌ ಆಗ್ತಾ ಇಲ್ಲ. ಇದರಿಂದ ತುಂಬಾ ತೊಂದರೆಯಾಗಿದೆ. ಪ್ಲಾಟಿಂಗ್‌ ಆಗದೆ ಕನ್ವರ್ಷನ್‌ ಮಾಡಲು ಆಗುವುದಿಲ್ಲ ಎಂದು ಸುಬ್ರಹ್ಮಣ್ಯ ಮಠ ಬೊಳಿಕಲ ಹೇಳಿದರು. ಪಂಚಾಯತ್‌ ದಾರಿಗಳನ್ನು ಗುರುತು ಮಾಡಿ ಎಂದು ಕೃಷ್ಣಪ್ಪ ಪೂಜಾರಿ ಕಣಿಯಾರೋಡಿ ಆಗ್ರಹಿಸಿದರು. ಈ ಬಗ್ಗೆ ಸರ್ವೆ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.

ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಉಪಾಧ್ಯಕ್ಷ ರಾಧಾಕೃಷ್ಣ ಗೌಡ ಕೆಯ್ಯೂರು, ಸದಸ್ಯರಾದ ಮೋಹನ್‌ ರೈ ಬೇರಿಕೆ, ಅಬ್ದುಲ್‌ ಖಾದರ್‌ ಮೇರ್ಲ, ಕಿಟ್ಟ ಅಜಿಲ ಕಣಿಯಾರು, ಹನೀಫ್ ಕೆ.ಎಂ., ಸುಮಿತ್ರಾ ಪಲ್ಲತ್ತಡ್ಕ, ರಾಧಿಕಾ ಮಾಡಾವು, ಲಾವಣ್ಯಾ ರೈ, ವಿಮಲಾ ದೇರ್ಲ, ಗೀತಾ ಕಣಿಯಾರು, ಪದ್ಮಾವತಿ ಪಳ್ಳತ್ತಡ್ಕ, ಅಮಿತಾ ಎಚ್‌.ರೈ ಉಪಸ್ಥಿತರಿದ್ದರು. ಗ್ರಾ.ಪಂ. ಸಿಬಂದಿ ಶಿವ ಪ್ರಸಾದ್‌ ವರದಿ ಮಂಡಿಸಿ, ಸುಬ್ರಹ್ಮಣ್ಯ ಕೆ.ಎಂ. ಸ್ವಾಗತಿಸಿದರು. ಕಾರ್ಯದರ್ಶಿ ಸುರೇಂದ್ರ ರೈ ಇಳಾಂತಜೆ ವಂದಿಸಿದರು. ಗ್ರಾ.ಪಂ. ಸಿಬಂದಿ ರಾಕೇಶ್‌ ಬೊಳಿಕಲ, ದರ್ಮಣ್ಣ, ಜ್ಯೋತಿ, ಮಾಲತಿ ಮತ್ತಿತರರು ಸಹಕರಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.