ಸಾಹಿತ್ಯದ ತೇರೆಳೆಯಲು ಎಲಿಮಲೆ ಪ್ರೌಢಶಾಲೆ ವಠಾರ ಸಜ್ಜು

ಬಂಟಮಲೆ ತಪ್ಪಲಲ್ಲಿ ಇಂದು ಅಕ್ಷರ ಜಾತ್ರೆ; ಎತ್ತಿನಹೊಳೆ ಜಂಕ್ಷನ್‌ನಿಂದ ಕನ್ನಡ ಭುವನೇಶ್ವರಿ ಮೆರವಣಿಗೆ

Team Udayavani, Jan 19, 2020, 12:40 AM IST

meg-31

ಗುತ್ತಿಗಾರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಎಲಿಮಲೆ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಂಟಮಲೆ ತಪ್ಪಲು ಎಲಿಮಲೆಯ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಜ. 19ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲಿಮಲೆಯಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾಹಿತ್ಯಾಸಕ್ತರ ಸ್ವಾಗತಕ್ಕೆ ಸರ್ವ ಸಿದ್ಧತೆಗಳು ಪೂರ್ಣಗೊಂಡಿವೆ. ದೇವಚಳ್ಳ ಗ್ರಾಮದ ಎಲಿಮಲೆಯ ತುಂಬಾ ಕನ್ನಡ ಧ್ವಜಗಳು, ಬ್ಯಾನರ್‌ಗಳು, ಸ್ವಾಗತ ಕಮಾನುಗಳನ್ನು ಹಾಕಲಾಗಿದ್ದು, ಕನ್ನಡ ಭುವನೇಶ್ವರ ತಾಯಿಯ ವೈಭವದ ನುಡಿತೇರಿಗೆ ಕಾತರದಿಂದ ಕಾಯುತ್ತಿದೆ.

ವೈಭವದ ಮೆರವಣಿಗೆ
ಎಲಿಮಲೆಯ ಎತ್ತಿನಹೊಳೆ ಜಂಕ್ಷನ್‌ನಿಂದ ಎಲಿಮಲೆ ಪ್ರೌಢಶಾಲೆಗೆ ಕನ್ನಡ ಭುವನೇಶ್ವರಿ ಮೆರವಣಿಗೆ ಸಾಗಿ ಬರಲಿದ್ದು, ವಿವಿಧ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಸ್ತಬ್ಧಚಿತ್ರಗಳು, ಕಲಾವಿದರ ನೃತ್ಯ ಪ್ರಕಾರಗಳು ಮೆರವಣಿಗೆಗೆ ರಂಗು ತುಂಬಲಿವೆ. ಸಮ್ಮೇಳನ ನಡೆಯುವ ದಿ| ದೇವಕಿ ವೆಂಕಪ್ಪ ಗೌಡ ವೇದಿಕೆ ಹಾಗೂ ದಿ| ಸುಬ್ರಾಯ ಭಟ್‌ ಕೇರ ಸಭಾಂಗಣವನ್ನು ಸುಂದರವಾಗಿ ಸಿಂಗಾರಗೊಳಿಸಲಾಗಿದ್ದು, ಸಾಹಿತ್ಯ ಪ್ರೇಮಿಗಳಿಗೆ ಕುಳಿತುಕೊಳ್ಳಲು ವಿಶಾಲ ಚಪ್ಪರದ ಅಡಿಯಲ್ಲಿ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಗ್ರಾಮೀಣ ಶೈಲಿಯ ಆತಿಥ್ಯ
ಆಗಮಿಸುವ ಅತಿಥಿ, ಅಭ್ಯಾಗತರು, ಸಾಹಿತ್ಯಾಸಕ್ತರಿಗೆ ಗ್ರಾಮೀಣ ಶೈಲಿಯ ಆತಿಥ್ಯ ವ್ಯವಸ್ಥೆ ಇರಲಿದೆ. ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಇರಲಿದ್ದು, ಊಟದ ಮೆನುವಿನಲ್ಲಿ ಉಪ್ಪಿನಕಾಯಿ, ಅನ್ನ, ಸಾರು, ಸಾಂಬಾರು, ಚಟ್ನಿ, ಪಾಯಸ, ಪಲ್ಯ, ಮಜ್ಜಿಗೆ ಹೀಗೆ ಆರೋಗ್ಯಕರ ಆಹಾರ ಇರಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರವನ್ನು ಪಡೆದುಕೊಳ್ಳಲು ನಿರ್ಧರಿಸಲಾಗಿದೆ.

ಕನ್ನಡ ಅಕ್ಷರ ಜಾತ್ರೆಯಲ್ಲಿ, ಎರಡು ವಿಚಾರಗೋಷ್ಠಿ, ಹೊಸ ಕೃತಿಗಳ ಅನಾವರಣ, ಕವಿಗೋಷ್ಠಿ, ಸಾಧಕರಿಗೆ ಸಮ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಕಲಾವಿದರು ಹಾಗೂ ಜಿಲ್ಲಾ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲಿದ್ದಾರೆ.

1,500 ಜನರ ನಿರೀಕ್ಷೆ
ಸಾಹಿತಿಗಳನ್ನು ನಾಡಿಗೆ ಪರಿಚಯಿಸಿದ ಎಲಿಮಲೆಗೆ ಸಾವಿರಾರು ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಹರಿದು ಬರುವ ನಿರೀಕ್ಷೆ ಇದೆ. ಸುಮಾರು 1,500 ಜನರನ್ನು ನಿರೀಕ್ಷಿಸಲಾಗಿದ್ದು, ಸುಂದರ ಪರಿಸರದಲ್ಲಿ ನಡೆಯುವ ನುಡಿ ಜಾತ್ರೆಗೆ ಬರುವ ಸಾಹಿತ್ಯಾಸಕ್ತರನ್ನು ಎಲಿಮಲೆ ಸಂತಸದಿಂದ ಬರಮಾಡಿಕೊಳ್ಳಲಿದೆ.

ಸಕಲ ವ್ಯವಸ್ಥೆ
ಆಗಮಿಸುವ ಎಲ್ಲ ಸಾಹಿತ್ಯಾಸಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. 1,500 ಜನ ಸೇರುವ ನಿರೀಕ್ಷೆ ನಮ್ಮದು. ಎಲಿಮಲೆ ಪೇಟೆಯಿಂದ ಪ್ರೌಢಶಾಲೆಯವರೆಗೆ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿದ್ದು, ಎಲಿಮಲೆ ಹಿಂದೆಂದೂ ಕಾಣದ ಆತಿಥ್ಯವನ್ನು ನುಡಿಜಾತ್ರೆಯಲ್ಲಿ ನೀಡಲಿದೆ.
– ಶೈಲೇಶ್‌ ಅಂಬೆಕಲ್ಲು , ಕಾರ್ಯಾಧ್ಯಕ್ಷ, ಸ್ವಾಗತ ಸಮಿತಿ

24ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸುಳ್ಯ ಜ. 18: ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನವು ಎಲಿಮಲೆ ಸರಕಾರಿ ಪ್ರೌಢಶಾಲೆ ವಠಾರದಲ್ಲಿ ರವಿವಾರ ನಡೆಯಲಿದೆ. ವಿಮರ್ಶಕ ಕೃ.ಶಾ. ಮರ್ಕಂಜ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ ಎಲಿಮಲೆಯ ಎತ್ತಿನಹೊಳೆಯಿಂದ ಕನ್ನಡ ಭುವನೇಶ್ವರಿ ಮೆರವಣಿಗೆ ನಡೆಯಲಿದ್ದು, ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ ಚಾಲನೆ ನೀಡುವರು. ಬಳಿಕ ಧ್ವಜಾರೋಹಣ ನಡೆಯಲಿದ್ದು, ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ ರಾಷ್ಟ್ರ ಧ್ವಜಾರೋಹಣ, ಕ.ಸಾ.ಪ. ಜಿಲ್ಲಾಧ್ಯಕ್ಷ ಪ್ರದೀಪ್‌ಕುಮಾರ್‌ ಕಲ್ಕೂರ ಪರಿಷತ್‌ನ ಧ್ವಜಾರೋಹಣ, ತಾಲೂಕು ಅಧ್ಯಕ್ಷ ಹರಪ್ರಸಾದ್‌ ತುದಿಯಡ್ಕ ಅವರಿಂದ ಕನ್ನಡ ಧ್ವಜಾರೋಹಣ ನಡೆಯಲಿದೆ. ವಸ್ತು ಮತ್ತು ಪುಸ್ತಕ ಪ್ರದರ್ಶನವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸುವರು. ಸಮ್ಮೇಳನವನ್ನು ಹಿರಿಯ ಪತ್ರಕರ್ತ ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ) ಉದ್ಘಾಟಿಸಲಿದ್ದು, ಶಾಸಕ ಎಸ್‌. ಅಂಗಾರ ಸ್ಮರಣ ಸಂಚಿಕೆ ಅನಾವರಣ ಮಾಡುವರು. ಸಹಾಯಕ ಆಯುಕ್ತ ಡಾ| ಯತೀಶ್‌ ಉಳ್ಳಾಲ್‌ ಹೊಸ ಕೃತಿಗಳನ್ನು ಬಿಡುಗಡೆ ಮಾಡಲಿದ್ದು, ಜಿ.ಪಂ. ಸದಸ್ಯೆ ಆಶಾ ತಿಮ್ಮಪ್ಪ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪೂರ್ವಾಧ್ಯಕ್ಷ ನಿತ್ಯಾನಂದ ಮುಂಡೋಡಿ ಅತಿಥಿಗಳಾಗಿ ಪಾಲ್ಗೊಳ್ಳುವರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಲಲಿತಾಜ ಮಲ್ಲಾರ ಉಪಸ್ಥಿತರಿರುವರು.

ಬಳಿಕ ಕವಿ ಜನಾರ್ದನ ಕಣಕ್ಕೂರು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಅಗಲಿದ ಸಾಹಿತಿ ಯು.ಸು.ಗೌ. ಗುತ್ತಿಗಾರು ಅವರಿಗೆ ನುಡಿ ನಮನ, ವಿಚಾರಗೋಷ್ಠಿ ನಡೆಯಲಿದೆ. ಸಂಜೆ ಸಮಾರೋಪ ನಡೆಯಲಿದ್ದು, ಪ್ರದೀಪ್‌ಕುಮಾರ್‌ ಕಲ್ಕೂರ ಅಧ್ಯಕ್ಷತೆ ವಹಿಸಲಿರುವರು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ| ವರದರಾಜ್‌ ಚಂದ್ರಗಿರಿ ಸಮಾರೋಪ ಭಾಷಣ ಮಾಡುವರು.
ಸುಳ್ಯ ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಸಮ್ಮಾನ ನೆರವೇರಿಸುವರು. ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ತಹಶೀಲ್ದಾರ್‌ ಎನ್‌.ಎ. ಕುಂಞಿ ಅಹ್ಮದ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷೆ ಮೀನಾಕ್ಷಿ ಗೌಡ ಉಪಸ್ಥಿತರಿರುವರು. ಸಾಧಕರಿಗೆ ಸಮ್ಮಾನ ನಡೆಯಲಿದೆ. ಸಮ್ಮೇಳನದಲ್ಲಿ ಕನ್ನಡ ಗೀತಗಾಯನ, ಸಾಂಸ್ಕೃತಿಕ ಸಂಭ್ರಮ, ನಾಟಕ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.