ಮಂಡೆಕೋಲು ಗ್ರಾಮದಲ್ಲಿ ನಲುವತ್ತಕ್ಕೂ ಅಧಿಕ ಸೈನಿಕರು!


Team Udayavani, Jan 26, 2020, 7:15 AM IST

ras-23

ಸಾಂದರ್ಭಿಕ ಚಿತ್ರ

ಮಂಡೆಕೋಲು: ಗ್ರಾಮೀಣ ಪ್ರದೇಶವಾದ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದಿಂದ 40ಕ್ಕೂ ಅಧಿಕ ಮಂದಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಗ್ರಾಮದಲ್ಲಿ ಒಟ್ಟು 1,303 ಮನೆಗಳಿದ್ದು, 5,600 ಜನಸಂಖ್ಯೆ ಇದೆ. ವಾಯುಸೇನೆ, ಭೂಸೇನೆ, ಸಿಆರ್‌ಪಿಎಫ್, ಬಿಎಸ್ಸೆಫ್ ಮೊದಲಾದ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತ ಯೋಧ ಚೆನ್ನಪ್ಪ ಅತ್ಯಾಡಿ ಅವರ ಇಬ್ಬರು ಪುತ್ರರೂ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇಂಡೋ- ಪಾಕ್‌ ಯುದ್ಧದಲ್ಲಿ ಭಾಗಿ
ವಾಯು ಸೇನೆಯಲ್ಲಿ ಸೇವೆ ಸಲ್ಲಿಸಿದ ದೇರಣ್ಣ ಗೌಡ ಅಡ್ಡಂತಡ್ಕ 1965ರ ಭಾರತ- ಪಾಕಿಸ್ಥಾನ ಯುದ್ಧದಲ್ಲಿ ಭಾಗವಹಿಸಿದ್ದಾರೆ. 1962ರಲ್ಲಿ ಸೇನೆಗೆ ಸೇರಿದ ಸಂದರ್ಭ ಚೀನದೊಡನೆ ಯುದ್ಧ ನಡೆಯುತ್ತಿತ್ತು. ಪಂಜಾಬಿನ ಜಾಲಂಧರ್‌ ಹತ್ತಿರದ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ನಿರ್ವಹಣ ವಿಭಾಗದಲ್ಲಿ 17 ದಿನ ಹಗಲು ರಾತ್ರಿ ಎನ್ನದೆ ದುಡಿದಿದ್ದಾರೆ.

2015ರ ಜೂ. 9ರಂದು ನಡೆದ ಮ್ಯಾನ್ಮಾರ್‌ ಬಾರ್ಡರ್‌ ಆಪರೇಷನ್‌ ತಂಡದಲ್ಲಿ ಮಂಡೆಕೋಲಿನ ರಘುಪತಿ ಉಗ್ರಾಣಿಮನೆ ಪಾಲ್ಗೊಂಡಿದ್ದರು. ನಾಗಾ ರಾಷ್ಟ್ರವಾದಿಗಳ ನೆಲೆಗಳ ಮೇಲಿನ ದಾಳಿಯಲ್ಲೂ ಪಾಲ್ಗೊಂಡಿದ್ದರು. 40 ನಿಮಿಷಗಳ ಕಾಲ ನಡೆದ ಈ ಕಾರ್ಯಾ ಚರಣೆಯಲ್ಲಿ 38 ನಾಗಾ ಬಂಡುಕೋರರನ್ನು ಹತ್ಯೆ ಮಾಡಲಾಗಿತ್ತು.

ದೇರಣ್ಣ ಗೌಡ ಅಡ್ಡಂತಡ್ಕ ಅಧ್ಯಕ್ಷ ರಾಗಿರುವ ಸುಳ್ಯದ ಮಾಜಿ ಸೈನಿಕರ ಸಂಘದ ಸದಸ್ಯರು ಗಣರಾಜ್ಯೋತ್ಸವ ದಿನ ಹಾಗೂ ಸ್ವಾತಂತ್ರ್ಯೋತ್ಸವ ದಿನ ಸುಳ್ಯ ಪ.ಪೂ. ಕಾಲೇಜಿನಲ್ಲಿ ನಡೆಯುವ ಪರೇಡ್‌ನ‌ಲ್ಲಿ ಸತತ 14 ವರ್ಷಗಳಿಂದ ಭಾಗವಹಿಸುತ್ತಿದ್ದಾರೆ.

1971ರ ಡಿ. 3ರ ಮಧ್ಯರಾತ್ರಿಯಲ್ಲಿ ಭಾರತ-ಪಾಕ್‌ ಯುದ್ಧ ಘೋಷಣೆಯಾದ ಸಂದರ್ಭ ಭೂಸೇನೆಯ ಚೆನ್ನಪ್ಪ ಅತ್ಯಾಡಿ ವೈರ್‌ಲೆಸ್‌ ಆಪರೇಟರ್‌ ಆಗಿದ್ದರು. 13 ದಿನಗಳ ಕಾಲ ನಡೆದ ಯುದ್ಧದಲ್ಲಿ ಅವರ ತೊಡೆಗೆ ಗುಂಡು ತಗಲಿತ್ತು. ಗಾಯ ಗೊಂಡಿದ್ದ ಸಂದರ್ಭದಲ್ಲಿ ಹುತಾತ್ಮನಾದೆ ಎಂಬ ಸಂದೇಶ ಮನೆಗೆ ರವಾನೆಯಾಗಿತ್ತು ಎಂದು ಚೆನ್ನಪ್ಪ ಅತ್ಯಾಡಿ ಸ್ಮರಿಸಿಕೊಳ್ಳುತ್ತಾರೆ. ಪಠಾಣ್‌ಕೋಟ್‌ ಆಸ್ಪತ್ರೆಯಿಂದ ದಿಲ್ಲಿಗೆ ತೆರಳಿ ಚಿಕಿತ್ಸೆ ಪಡೆದಿದ್ದರು.

ಮಂಡೆಕೋಲು ಭಾಗದಿಂದ ಸೈನಿಕರಾಗಿ ನಿವೃತ್ತರಾದವರು
ದೇರಣ್ಣ ಅಡ್ಡಂತಡ್ಕ, ಗುರುಪ್ರಸಾದ್‌ ರೈ ಪೇರಾಲ್‌ಗ‌ುತ್ತು, ಉತ್ತಪ್ಪ ಮುಂಡೋಡಿ, ಚೆನ್ನಪ್ಪ ಅತ್ಯಾಡಿ, ಉಮಾನಾಥ್‌ ಪೇರಾಲು, ಹರೀಶ ಸೊರಂಗ, ರಾಘವ ಆಲಂಕಳ್ಯ, ಕುಶಾಲಪ್ಪ ಗೌಡ ಕೆ., ಭರತ ಅತ್ಯಾಡಿ, ಉಮೇಶ ಬೊಳುಗಲ್ಲು, ಉದಯಕುಮಾರ ಕಣೆಮರಡ್ಕ, ಶೇಖರ ಮಣಿಯಾಣಿ, ಸುಭಾಶ್‌ ಸೊರಂಗ, ವಿಶ್ವನಾಥ ಚೌಟಾಜೆ, ರಿಷಿಕುಮಾರ ಪೇರಾಲುಗುತ್ತು, ರಘುಪತಿ ಉಗ್ರಾಣಿಮನೆ.

ಹಾಲಿ ಸೈನಿಕರಲ್ಲಿ ವಿನೋದ ಅತ್ಯಾಡಿ, ಜಗದೀಶ್‌ ಎಂ. ಮಂಡೆಕೋಲು, ಹರಿ ಪ್ರಸಾದ್‌ ಚೋಟಪಾಡಿ, ಗಿರೀಶ ಬಿ., ಹರೀಶ್‌ ಕೆ.ಟಿ., ರವೀಂದ್ರ ಯು.ಎಂ., ಹರಿಪ್ರಸಾದ್‌ ತೋಟಪ್ಪಾಡಿ, ಪವಿನ್‌ ರಾಜ್‌ ಕೆ.ಪಿ., ಹರಿಶ್ಚಂದ್ರ ಬಿ., ರಾಜೇಶ್‌, ರಾಘವ ಮಾವಂಜಿ ಪ್ರಮುಖರು.

ಹೆಮ್ಮೆ, ಸಂತೋಷ
ಒಂದು ಕಾಲಕ್ಕೆ ಕುಗ್ರಾಮವಾಗಿದ್ದ ಮಂಡೆಕೋಲು ಅತಿ ಹೆಚ್ಚು ಕೊಲೆ, ಸುಲಿಗೆ ನಡೆಯುತ್ತಿದ್ದ ಪ್ರದೇಶವೆಂಬ ಕುಖ್ಯಾತಿಗೂ ಒಳಗಾಗಿತ್ತು. ಶಿಕ್ಷಣದಮೂಲಕ ಪರಿಸ್ಥಿತಿ ಸುಧಾರಿಸಿತು. ದೇಶಪ್ರೇಮ ಮೂಡಿಸುವ ನಮ್ಮ ಪ್ರಯತ್ನ ಫ‌ಲ ನೀಡಿತು. ಈ ಭಾಗದಿಂದ ಹೆಚ್ಚು ಸಂಖ್ಯೆಯ ಸೈನಿಕರು ದೇಶಸೇವೆ ಮಾಡುತ್ತಿದ್ದಾರೆ.
– ದೇರಣ್ಣ ಗೌಡ, ಅಡ್ಡಂತಡ್ಕ, ಅಧ್ಯಕ್ಷ, ಮಾಜಿ ಸೈನಿಕರ ಸಂಘ, ಸುಳ್ಯ

ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.