ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ದುರ್ಮರಣ ; ಓರ್ವ ಗಂಭೀರ
Team Udayavani, Jul 19, 2019, 1:59 PM IST
ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ನಡುವಿನ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಭೀಕರ ಘಟನೆ ಬ್ರಹ್ಮರ ಕೂಟ್ಲು ಟೋಲ್ ಗೇಟ್ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಭಟ್ಟಳದ ಗಾಂಧಿನಗರ ನಿವಾಸಿಗಳೆಂದು ಗುರುತಿಸಲಾಗಿದೆ.
ಮೃತಪಟ್ಟವರ ವಿವರ: ಗೋವಿಂದ (55), ಅವರ ಪತ್ನಿ ಪದ್ಮಾವತಿ (45) ಇವರ ಮಕ್ಕಳಾದ ನಾಗರಾಜ (22) ಮತ್ತು ಗಣೇಶ (28) ಇನ್ನು ಗಾಯಾಳುಗಳಲ್ಲಿ ಶಿವಾನಂದ ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ. ಇನ್ನು ಶಿವಾನಂದ ಅವರ ಪತ್ನಿ ಜ್ಯೋತಿ ಮತ್ತು ಈಕೆಯ ಮಕ್ಕಳಾದ ಎರಡು ವರ್ಷದ ಯಶ್ವಿನ್ ಹಾಗೂ ಒಂದು ವರ್ಷದ ವರ್ಷ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ.
ಘಟನೆಯ ವಿವರ:
ಈ ಎರಡು ಕುಟುಂಬಗಳ ಒಟ್ಟು ಎಂಟು ಜನ ಸದಸ್ಯರು ಗುರುವಾರದಂದು ವಿವಿಧ ದೇವಸ್ಥಾನಗಳ ದರ್ಶನಕ್ಕೆಂದು ಬಾಡಿಗೆ ವಾಹನದಲ್ಲಿ ಹೊರಟಿದ್ದರು. ಆ ಪ್ರಕಾರ ನಿನ್ನೆ ಕೊಲ್ಲೂರು, ಶೃಂಗೇರಿ ಮತ್ತು ಹೊರನಾಡು ಕ್ಷೇತ್ರಗಳ ದರ್ಶನವನ್ನು ಮುಗಿಸಿಕೊಂಡು ದರ್ಮಸ್ಥಳದಲ್ಲಿ ಉಳಿದುಕೊಂಡಿದ್ದರು.
ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ದೇವರ ದರ್ಶನವನ್ನು ಮುಗಿಸಿಕೊಂಡು ಮಂಗಳೂರು ಮೂಲಕ ಭಟ್ಕಳಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಬಿ.ಸಿ.ರೋಡ್ ದಾಟಿ ಬ್ರಹ್ಮರಕೂಟ್ಲು ಬಳಿ ಬರುವ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮೊದಲಿಗೆ ಬುಲೆಟ್ ಟ್ಯಾಂಕರ್ ಗೆ ಅಪ್ಪಳಿಸಿ ಬಳಿಕ ರಸ್ತೆ ಬದಿಯ ತಡೆಗೋಡೆಗೆ ಅಪ್ಪಳಿಸಿದ ಪರಿಣಾಮ ಕಾರಿನ ಬಾಗಿಲುಗಳು ತೆರೆದುಕೊಂಡು ಒಳಗಿದ್ದವರು ರಸ್ತೆಗೆ ಎಸೆಯಲ್ಪಟ್ಟ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.
ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ