ಇಂದಿನಿಂದ ಸ್ವಚ್ಛಮೇವ ಜಯತೇ ಆಂದೋಲನ

ಪುತ್ತೂರಿನ ಗ್ರಾಮ ಪಂಚಾಯತ್‌ಗಳಿಂದ 10 ಸಾವಿರಕ್ಕೂ ಅಧಿಕ ಗಿಡಗಳಿಗೆ ಬೇಡಿಕೆ

Team Udayavani, Jun 11, 2019, 5:50 AM IST

b-23

ಪುತ್ತೂರು: ಸ್ವಚ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆಯಡಿ ಸರಕಾರ ಸ್ವಚ್ಛ ಮೇವ ಜಯತೇ ಆಂದೋಲನವನ್ನು ಜೂ. 11ರಿಂದ ಪ್ರಾರಂಭಿಸಲಿದ್ದು, ಇದರಲ್ಲಿ ಗಿಡಗಳನ್ನು ಬೆಳೆಸುವ ಯೋಜನೆಯೂ ಇರುವುದರಿಂದ ಪುತ್ತೂರಿನ ಗ್ರಾ.ಪಂ.ಗಳು ಸಾಮಾಜಿಕ ಅರಣ್ಯ ಇಲಾಖೆಯಿಂದ 10 ಸಾವಿರಕ್ಕೂ ಅಧಿಕ ಗಿಡಗಳಿಗೆ ಬೇಡಿಕೆ ವ್ಯಕ್ತಪಡಿಸಿದೆ.

ಸೋಮವಾರವೇ ಜಿಲ್ಲೆಗೆ ಮುಂಗಾರು ಪ್ರವೇಶದ ಲಕ್ಷಣಗಳು ಕಂಡುಬರುತ್ತಿರು ವುದರಿಂದ ಗಿಡಗಳನ್ನು ನೆಡುವುದಕ್ಕೆ ಇದು ಸೂಕ್ತ ಸಮಯ ಎನಿಸಿದೆ. ಪ್ರತಿ ಗ್ರಾ.ಪಂ.ಗಳು ಪುತ್ತೂರಿನ ಸಾಮಾಜಿಕ ಅರಣ್ಯ ಇಲಾಖೆಗೆ ಇಮೇಲ್‌ ಮೂಲಕ 500, 200, 100 ಗಿಡಗಳಿಗೆ ಬೇಡಿಕೆ ಸಲ್ಲಿಸಿವೆ.

ಸೋಮವಾರವೇ ಸಾಕಷ್ಟು ಗ್ರಾ.ಪಂ.ಗಳು ಇಲಾಖೆಗೆ ಆಗಮಿಸಿ ತಮ್ಮ ಬೇಡಿಕೆಯಂತೆ ಗಿಡಗಳನ್ನು ಸಾಗಾಟ ನಡೆಸಿವೆ. ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಫಲಾನುಭವಿಗಳಿಗೆ ಅರಣ್ಯ ಗಿಡ ನಾಟಿ ಮಾಡಲು 6ಗಿ9 ಅಳತೆ ಗಾತ್ರದ ಚೀಲಗಳಲ್ಲಿ ಸುಮಾರು 22,900 ವಿವಿಧ ಜಾತಿಯ ಗಿಡಗಳನ್ನು ಮುಕ್ವೆಯಲ್ಲಿರುವ ಇಲಾಖಾ ನರ್ಸರಿಯಲ್ಲಿ ಬೆಳೆಸಲಾಗಿದ್ದು, ಇದಕ್ಕೆ ವಿಶೇಷ ಪ್ರೋತ್ಸಾಹ ಧನವೂ ಲಭ್ಯವಾಗಲಿದೆ.ವಿವಿಧ ಜಾತಿಯ ಗಿಡಗಳುಇಲಾಖೆಯ ನರ್ಸರಿಯಲ್ಲಿ ಸಾಗುವಾನಿ, ಹಲಸು, ಹೆಬ್ಬಲಸು, ಮಾವು, ಪುನರ್‌ ಪುಳಿ, ಮಹಾಗನಿ, ಸಂಪಿಗೆ, ಕಿರಾಲ್‌ ಬೋಗಿ, ಶ್ರೀಗಂಧ, ರಕ್ತಚಂದನ, ನೇರಳೆ, ಹಾಲ್‌ವುಡ್ಡಿ, ಶಿವಣೆ, ಬಿಲ್ವಪತ್ರೆ, ನೆಲ್ಲಿ, ಸೀತಾಫಲ, ಬಾದಾಮಿ, ಬೇಂಗ, ಕಾಚು, ಔಷಧಿ ಸಸಿಗಳು, ಬೊಲ್ಪಾಲೆ, ರಾಂಪತ್ರೆ, ಹೆಬ್ಬೇವು ಮೊದಲಾದ ಗಿಡಗಳು ಇಲ್ಲಿ ಲಭ್ಯವಿವೆ.

ಇಲಾಖೆಯು ಆಸಕ್ತ ಫಲಾನುಭವಿಗಳಿಗೆ ಉಚಿತವಾಗಿ ಗಿಡಗಳನ್ನು ನೀಡುವುದರ ಜತೆಗೆ ಗಿಡ ನಾಟಿ ಮಾಡುವುದಕ್ಕೆ ಕೂಲಿ ಪಾವತಿ ಕೂಡ ಯೋಜನೆಯಡಿ ಗಿಡ ಒಂದಕ್ಕೆ ಕೂಲಿ ಹಾಗೂ ಸಾಮಗ್ರಿ ವೆಚ್ಚ ಸೇರಿ ಅಂದಾಜು 55 ರೂ.ನಷ್ಟು ಪಾವತಿಯಾಗುತ್ತದೆ (ಹೊಂಡ ತೋಡಿ, ಮಣ್ಣಿನ ಅಗತೆ ಕೆಲಸ, ಗೊಬ್ಬರ ಹಾಕುವುದು ಇತ್ಯಾದಿ).

ನಿರ್ವಹಣ ವೆಚ್ಚವೂ ಸಿಗುತ್ತದೆ
ಉದ್ಯೋಗ ಖಾತರಿ ಯೋಜನೆಯ ಜಾಬ್‌ ಕಾರ್ಡ್‌ ಮಾಡಿಸಿಕೊಂಡವರಿಗೆ ಪ್ರತಿ ಗಿಡಗಳ ನಾಟಿಗೆ 55ರಿಂದ 60 ರೂ. ಸಿಗಲಿದ್ದು, ಬದುಕಿ ಉಳಿದ ಗಿಡಗಳ ನಿರ್ವಹಣೆಗೆ ಮೊದಲ ವರ್ಷ 10.50 ರೂ. ನಿರ್ವಹಣ ವೆಚ್ಚವೂ ಸಿಗಲಿದೆ. ಗ್ರಾ.ಪಂ.ಗಳಿಗೂ ಇದೇ ಯೋಜನೆಯಲ್ಲಿ ಗಿಡಗಳ ನಾಟಿಗೆ ಅವಕಾಶವಿರುವ ಹಿನ್ನೆಲೆಯಲ್ಲಿ, ತಿಂಗಳಪೂರ್ತಿ ವಿವಿಧ ಕಡೆಗಳಲ್ಲಿ ಗಿಡಗಳನ್ನು ನಾಟಿ ಮಾಡುವ ದೃಷ್ಟಿಯಿಂದ ಹೆಚ್ಚಿನ ಗಿಡಗಳಿಗೆ ಬೇಡಿಕೆ ಇದೆ.

ಸ್ಮಾ ಫ್ಸ್ (ಎಸ್‌ಎಂಎಎಫ್‌) ನಲ್ಲೂ ಅವಕಾಶ
ಸಬ್‌ಮಿಷನ್‌ ಆನ್‌ ಆ್ಯಗ್ರೋಫಾರೆಸ್ಟ್ರಿ (ಎಸ್‌ಎಂಎಎಫ್‌) ಯೋಜನೆಯ ಮೂಲಕವೂ ಗಿಡಗಳ ನಾಟಿಗೆ ಅವಕಾಶವಿದ್ದು, 6ಗಿ9 ಅಳತೆಗೆ 1 ರೂ. ಹಾಗೂ 8ಗಿ12 ಅಳತೆಗೆ 3 ರೂ. ಪಾವತಿಸಿ ಫಲಾನುಭವಿಗಳು ಗಿಡಗಳನ್ನು ಪಡೆಯಬಹುದಾಗಿದೆ. ಇದರಲ್ಲಿ ಬೌಂಡರಿ ಪ್ಲಾಟಿಂಗ್‌ಗೆ ಪ್ರತಿ ಗಿಡಕ್ಕೆ 14 ರೂ., ಒಂದು ಹೆಕ್ಟೇರ್‌ನಲ್ಲಿ 100ರಿಂದ 500ರಂತೆ ಪ್ರತಿಗಿಡಕ್ಕೆ 14 ರೂ., ಒಂದು ಹೆಕ್ಟೇರ್‌ನಲ್ಲಿ 500ರಿಂದ 1000ದಂತೆ ಪ್ರತಿ ಗಿಡಕ್ಕೆ 10 ರೂ., ಒಂದು ಹೆಕ್ಟೇರ್‌ನಲ್ಲಿ 1000ದಿಂದ 1200ರಂತೆ ಪ್ರತಿ ಗಿಡಕ್ಕೆ 7 ರೂ. ಪ್ರೋತ್ಸಾಹ ಧನ ಲಭ್ಯವಾಗಲಿದೆ. ಇದರ ನಿರ್ವಹಣೆಗೂ ನಿರ್ವಹಣ ವೆಚ್ಚ ಸಿಗಲಿದೆ.

ಫಲಾನುಭವಿಗಳು ಹೀಗೆ ಮಾಡಿ
ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ಸಂಬಂಧಿಸಿದ ಗ್ರಾಮ ಪಂಚಾಯತ್‌ಗಳಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿಯನ್ನು ನೋಂದಾಯಿಸಿಕೊಂಡು ಪೂರ್ಣ ವಿಳಾಸ ಹಾಗೂ ಸ್ಥಳದ ವಿವರಗೊಂದಿಗೆ (ಆರ್‌ಟಿಸಿ, ನಕಾಶೆ ಪ್ರತಿ, ಸಣ್ಣ ರೈತ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಬ್ಯಾಂಕ್‌ ಖಾತೆ ವಿವರ, ಆಧಾರ್‌ ಕಾರ್ಡ್‌ ಪ್ರತಿ ಇತ್ಯಾದಿ) ಸಸಿ ಬೇಡಿಕೆ ವಿವರಗಳನ್ನು ಕಚೇರಿಗೆ ಸಲ್ಲಿಸಿ ಗಿಡಗಳನ್ನು ಇಲಾಖೆಯ ಮುಕ್ವೆ ನರ್ಸರಿಯಿಂದ ಪಡೆದುಕೊಳ್ಳಬಹುದಾಗಿದೆ.

 ಗ್ರಾ.ಪಂ.ನಿಂದ ಬೇಡಿಕೆ
ಇಮೇಲ್‌ ಮೂಲಕ ಸಾಕಷ್ಟು ಗ್ರಾ.ಪಂ.ನಿಂದ ಬೇಡಿಕೆ ಬಂದಿದ್ದು, ಸ್ವತ್ಛ ಮೇವ ಜಯತೇ ಆಂದೋಲನ ತಿಂಗಳ ಪೂರ್ತಿ ನಡೆಯುತ್ತಿರುವುದರಿಂದ ವಿವಿಧ ಸ್ಥಳಗಳಲ್ಲಿ ಗ್ರಾ.ಪಂ. ಗಿಡಗಳನ್ನು ನೆಡಲಿದೆ. ಉದ್ಯೋಗ ಖಾತರಿ ಯೋಜನೆಯ ಮೂಲಕ ಇದಕ್ಕೆ ಪ್ರೋತ್ಸಾಹ ಧನ ಪಡೆಯುವುದಕ್ಕೆ ಅವಕಾಶವಿದೆ.
– ವಿದ್ಯಾರಾಣಿ ಪಿ.ಕೆ. ವಲಯ ಅರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ವಿಭಾಗ, ಪುತ್ತೂರು

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.