ಕಡಬ: ಅಕ್ರಮ ಗೂಡಂಗಡಿಗಳ ತೆರವಿಗೆ ಗ್ರಾಮ ಪಂಚಾಯತ್‌ ಸಿದ್ಧತೆ

ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುವ ಹಿನ್ನೆಲೆ; ಮಾಲಕರಿಗೆ ನೋಟಿಸ್‌ ಜಾರಿ

Team Udayavani, Dec 6, 2019, 1:16 AM IST

ws-56

ಕಡಬ : ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಪರಂಬೋಕು ಸ್ಥಳಗಳಲ್ಲಿ ಗ್ರಾ.ಪಂ. ಅನುಮತಿ ಪಡೆಯದೆ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ರೀತಿಯಲ್ಲಿ ನಿರ್ಮಾಣಗೊಂಡಿರುವ ಅನಧಿಕೃತ ಗೂಡಂಗಡಿಗಳ ತೆರವಿಗೆ ಕಡಬ ಗ್ರಾ.ಪಂ. ಸಿದ್ಧತೆ ನಡೆಸಿದ್ದು, ಸಂಬಂಧಪಟ್ಟವರಿಗೆ ನೋಟಿಸ್‌ ಜಾರಿಗೊಳಿಸಿದೆ.

ಕಡಬ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾದು ಹೋಗುವ ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ಲೋಕೋಪಯೋಗಿ ರಸ್ತೆಯ ಮಾರ್ಜಿನ್‌ನಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನೀತಿ ತಂಡದವರ ದೂರು ಹಾಗೂ ಗ್ರಾ.ಪಂ. ಸಾಮಾನ್ಯ ಸಭೆಯ ನಿರ್ಣಯದಂತೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾ.ಪಂ. ಪರವಾನಿಗೆ ಇಲ್ಲದೆ ಅನಧಿಕೃತವಾಗಿ ರಸ್ತೆ ಪರಂಬೋಕ್‌ನಲ್ಲಿ ವ್ಯಾಪಾರ ಮಾಡುತ್ತಿರುವ ಗೂಡಂಗಡಿ, ಸೈಕಲ್‌ ಅಂಗಡಿ, ತಳ್ಳು ಗಾಡಿ ಮತ್ತು ಮೊಬೈಲ್‌ ಕ್ಯಾಂಟೀನ್‌ ವ್ಯಾಪಾರಸ್ಥರು ನೋಟಿಸ್‌ ತಲುಪಿದ ಒಂದು ವಾರದೊಳಗೆ ವ್ಯಾಪಾರ ಸ್ಥಗಿತಗೊಳಿಸಿ ಅಂಗಡಿಯನ್ನು ತೆರವುಗೊಳಿಸಬೇಕು. ತಪ್ಪಿದಲ್ಲಿ ಪಂಚಾಯತ್‌ರಾಜ್‌ ಅಧಿನಿಯಮ 1993 ಪ್ರಕರಣ 68, 69, 70ರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

ಕೆಲವು ತಿಂಗಳ ಹಿಂದೆಯೇ ಲೋಕೋಪಯೋಗಿ ಇಲಾಖೆ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ಅನಧಿಕೃತ ಗೂಡಂಗಡಿಗಳ ತೆರವಿಗೆ ಮುಂದಾಗಿತ್ತು. ಆದರೆ ಸಂಬಂಧಪಟ್ಟ ಗ್ರಾ.ಪಂ.ಗಳ ಪೂರಕ ಸ್ಪಂದನೆ ಸಿಗದೆ ಕಾರ್ಯಾಚರಣೆ ಮುಂದುವರಿದಿರಲಿಲ್ಲ. ಕೆಲವು ಕಡೆ ಗ್ರಾ.ಪಂ. ಆಡಳಿತದ ಸಹಕಾರದೊಂದಿಗೆ ಅನಧಿಕೃತ ಗೂಡಂಗಡಿಗಳ ತೆರವು ನಡೆಸಲಾಗಿತ್ತು.

40ಕ್ಕೂ ಹೆಚ್ಚು ಗೂಡಂಗಡಿಗಳು
ಕಡಬ ಪೇಟೆಯಲ್ಲಿ ರಸ್ತೆ ಪರಂಬೋಕಿನಲ್ಲಿ 40ಕ್ಕೂ ಹೆಚ್ಚು ಅನಧಿಕೃತ ಗೂಡಂಗಡಿಗಳು ಕಾರ್ಯಾಚರಿಸುತ್ತಿವೆ ಎಂದು ಗ್ರಾ.ಪಂ. ಮಾಹಿತಿ ತಿಳಿಸಿದೆ. ಅನಧಿಕೃತ ಗೂಡಂಗಡಿ ನಡೆಸುತ್ತಿರುವ ವ್ಯಕ್ತಿಗಳಿಗೆ ವಾರದೊಳಗೆ ವ್ಯಾಪಾರ ಸ್ಥಗಿತಗೊಳಿಸಿ ಅಂಗಡಿ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಲೋಕೋಪಯೋಗಿ ಇಲಾಖಾಧಿಕಾರಿಗಳು ನಿಗದಿಪಡಿಸಿದ ದಿನದಂತೆ ಕಂದಾಯ ಇಲಾಖೆ ಹಾಗೂ ಪೊಲೀಸರ ಸಹಕಾರದೊಂದಿಗೆ ಅಂಗಡಿ ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುವುದು. ರಸ್ತೆಯ ಪಕ್ಕದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಡಕಾಗಿರುವ ತಳ್ಳು ಬಂಡಿ ವ್ಯಾಪಾರಕ್ಕೂ ಅವಕಾಶವಿಲ್ಲ ಎಂದು ಕಡಬ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ತಿಳಿಸಿದ್ದಾರೆ.

ಶೀಘ್ರದಲ್ಲೇ ತೆರವು
ಲೋಕೋಪಯೋಗಿ ರಸ್ತೆಯಗಳ ಪಕ್ಕದಲ್ಲಿ ಸುಗಮ ಸಂಚಾರಕ್ಕೆ ತೊಡಕಾಗುವ ರೀತಿಯಲ್ಲಿ ಅನಧಿಕೃತ ಗೂಡಂಗಡಿಗಳು ತೆರೆದುಕೊಂಡಿರುವ ಕುರಿತು ಸಾಕಷ್ಟು ದೂರುಗಳ ಬರುತ್ತಿವೆ. ಈ ಹಿಂದೆಯೇ ಅಂತಹ ಅನಧಿಕೃತ ಅಂಗಡಿಗಳವರು ತಮ್ಮ ವ್ಯಾಪಾರ ಸ್ಥಗಿತಗೊಳಿಸಿ ಅಂಗಡಿ ರಚನೆಗಳನ್ನು ತೆರವುಗೊಳಿಸಬೇಕೆಂದು ಪ್ರಕಟನೆ ನೀಡಲಾಗಿತ್ತು. ಗ್ರಾ.ಪಂ.ಗಳಿಗೂ ಪತ್ರ ರವಾನಿಸಲಾಗಿತ್ತು. ಕೆಲವು ಕಡೆ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಉಳಿದ ಕಡೆ ಪೊಲೀಸರ ನೆರವಿನೊಂದಿಗೆ ಕಂದಾಯ ಇಲಾಖೆ, ಗ್ರಾ.ಪಂ. ಆಡಳಿತ ಮೂಲಕ ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು.
– ಪ್ರಮೋದ್‌ಕುಮಾರ್‌ ಕೆ.ಕೆ., ಪಿಡಬ್ಲ್ಯೂಡಿ ಎಇ, ಪುತ್ತೂರು

ಅನಧಿಕೃತ ಗೂಡಂಗಡಿಗಳಿಗೆ ನೋಟಿಸ್‌ ಜಾರಿ
ಅನಧಿಕೃತ ಗೂಡಂಗಡಿಗಳ ವಿರುದ್ಧ ಸಾರ್ವಜನಿಕರಿಂದ ಪದೇ ಪದೆ ದೂರುಗಳು ಬರುತ್ತಿವೆ. ಗ್ರಾ.ಪಂ.ಪರವಾನಿಗೆ ಪಡೆದು ಎಲ್ಲ ತೆರಿಗೆ ಪಾವತಿಸಿ, ಬಾಡಿಗೆ ಕೊಠಡಿಗಳಿಗೆ ದುಬಾರಿ ಮುಂಗಡ ಹಾಗೂ ಬಾಡಿಗೆ ನೀಡಿ ಕಾನೂನು ಪ್ರಕಾರ ವ್ಯಾಪಾರ ನಡೆಸುವವರಿಗೆ ಇಂತಹ ಅನಧಿಕೃತ ಅಂಗಡಿಗಳಿಂದಾಗಿ ತೊಂದರೆಯಾಗುತ್ತಿದೆ. ಪೇಟೆಯ ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ ಎಂದು ಸಾಮಾಜಿಕ ಸಂಘಟನೆ ನೀತಿ ತಂಡದ ಪದಾಧಿಕಾರಿಗಳು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಅನಧಿಕೃತ ಗೂಡಂಗಡಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.
– ಬಾಬು ಮುಗೇರ, ಕಡಬ ಗ್ರಾ.ಪಂ. ಅಧ್ಯಕ್ಷ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.