ಚಂದನವನದಲ್ಲಿ ಹರ್ಷಿತ್‌ ಹೆಜ್ಜೆ ಗುರುತು

ಕಿರುತೆರೆಯಲ್ಲಿ ಮಿಂಚಿ ಇದೀಗ ಹಿರಿತೆರೆಗೆ ಲಗ್ಗೆ

Team Udayavani, Jun 15, 2019, 5:00 AM IST

q-15

ಸಾಧನೆಗೆ ಸಣ್ಣ ಸಣ್ಣ ಪ್ರಯತ್ನಗಳೇ ಮೆಟ್ಟಿಲುಗಳು. ಪ್ರಯತ್ನಗಳೇ ನಮ್ಮನ್ನು ಗುರಿಮುಟ್ಟಿಸುತ್ತವೆ. ಸತತ ಪ್ರಯತ್ನದಿಂದ ಗುರಿ ಸೇರುವ ಘಳಿಗೆ ಸಮಿಪಿಸಬಹುದು. ಇದೇ ರೀತಿ ತನ್ನ ಬಣ್ಣ ಬಣ್ಣದ ಕನಸನ್ನು (ನನಸಾಗಿಸಲು) ರಂಗೇರಿಸಲು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ ಪುತ್ತೂರು ತಾಲೂಕಿನ ಹರ್ಷಿತ್‌ ಕಣಿಯಾರು.

ನಗು ಮೊಗದ ಚೆಲುವನಿಗೆ ನಟನಾಗುವ ಕನಸು. ಬಿಬಿಎಂ ಪದವೀಧರರಾದ ಇವರು ತಮ್ಮ ಶಾಲಾ ದಿನಗಳಿಂದಲೇ ನೃತ್ಯ, ನಾಟಕ. ಇಂತಹ ಕಾರ್ಯಕ್ರಮಗಳೆಲ್ಲ ಹೆಚ್ಚಿನ ಒಲವನ್ನು ತೋರುತ್ತಿದ್ದರು. ನಟನಾಗಬೇಕು ಎಂಬ ಕನಸು ಹಚ್ಚ ಹಸುರಾಗಿಯೇ ಉಳಿಯಿತು. ನಟನೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ ಅವರು, ಈ ಕುರಿತು ಹೆಚ್ಚಿನ ತರಬೇತಿ ಪಡೆದರು. ಉಡುಪಿಯಲ್ಲಿ ನಡೆದ ಫಿಲ್ಮ್ ಆಡಿಷನ್‌ನಲ್ಲಿ ಭಾಗವಹಿಸಿ ನಟನೆಯ ಕ್ಷೇತ್ರದಲ್ಲಿ ತಮ್ಮ ಅರ್ಹತೆಯನ್ನು ಸಾಬೀತು ಮಾಡಿದರು.

ಬಣ್ಣದ ಬದುಕಿನ ಕನಸ ಹೊತ್ತ ಹೈದನಿಗೆ ಧಾರವಾಹಿಗಳಲ್ಲಿ ಅವಕಾಶ ತೆರೆದುಕೊಂಡಿತ್ತು. ನಾ ನಿನ್ನ ಬಿಡಲಾರೆ, ಸೀತಾ ವಲ್ಲಭ, ಸರ್ವಮಂಗಲ ಮಾಂಗಲೆ ಸಹಿತ ಹಲವು ಧಾರವಾಹಿಗಳಲ್ಲಿ ಉತ್ತಮವಾಗಿ ಅವಕಾಶಗಳು ಸಿಕ್ಕವು. ನಟನೆಯ ಅನುಭವ ಬೆಳೆಯಲೂ ಸಹಾಯವಾಯಿತು. ಅವಕಾಶಗಳ ಆಶಾವಾದಿಯಾದ ಹರ್ಷಿತ್‌ಗೆ ಈ ಅವಕಾಶಾಗಳು ಜೀವ ತುಂಬಿದವು. ಇದೀಗ ಅವರ ನಟನ ಕೌಶಲವನ್ನು ಗುರುತಿಸಿ ಖ್ಯಾತ ನಿರ್ದೇಶಕ ಕೃಷ್ಣ ವಿ. ಹಾಗೂ ಮಧುಸೂದನ್‌ ಇವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರವೊಂದರಲ್ಲಿ ನಾಯಕ ನಟರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಚಂದನವನಕ್ಕೆ ಲಗ್ಗೆಯಿಟ್ಟಿದ್ದಾರೆ. ಕಿರು ತೆರೆಯಿಂದ ಹಿರಿ ತೆರೆಗೆ ಕಾಲಿಟ್ಟ ಮುಗ್ಧ ಮನದ ಹೈದನಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳುವ ಸೂಚನೆ ಸಿಗುತ್ತಿದೆ.

ಮಗನ ಆಸಕ್ತಿಗೆ ತಂದೆ, ತಾಯಿ ಮತ್ತು ಸಹೋದರನ ಪ್ರೋತ್ಸಾಹ ನೀರೆರೆದಿದೆ. ಸ್ನೇಹಿತರ ಸಹಾಯದಿಂದ ಸಿನೆಮಾದಲ್ಲಿ ಅವಕಾಶ ದೊರಕುವಂತಾಯಿತು ಎಂದು ಹರ್ಷಿತ್‌ ಹೇಳುತ್ತಾರೆ. ತನ್ನಲ್ಲಿರುವ ಪ್ರತಿಭೆ, ಆಸಕ್ತಿ ಹಾಗೂ ನಿರಂತರ ಪ್ರಯತ್ನದ ಫಲವಾಗಿ ಅವಕಾಶಗಳು ತೆರೆದುಕೊಳ್ಳುವ ಸಮಯ ಸಮೀಪಿಸುತ್ತದೆ. ಯಾರು ಸತತವಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೋ, ಅವರಿಗೆ ದಾರಿ ತಾನಾಗಿ ತೆರೆದುಕೊಳ್ಳುತ್ತದೆ. ಕೈ ಕಟ್ಟಿ ಕೂರದೆ ಆತ್ಮ ವಿಶ್ವಾಸದಿಂದ ಮುನ್ನುಗ್ಗುವ ಧೈರ್ಯ ಮಾಡಿದ ಹರ್ಷಿತ್‌, ಸ್ಯಾಂಡಲ್‌ವುಡ್‌ನ‌ಲ್ಲಿ ಮಿಂಚಲು ಸಿದ್ಧರಾಗಿದ್ದಾರೆ.

ನಗುಮೊಗದ ಸರದಾರ
ಮೊದಲ ಪ್ರಯತ್ನದಲ್ಲಿಯೇ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ. ಆದರೆ ಪ್ರಯತ್ನದಿಂದ ಸೋತರೂ ಅದರೊಳಗಿನ ಅನುಭವ ಜೀವನದ ನೈಜತೆಯನ್ನು ಅರ್ಥಮಾಡಿಸುತ್ತದೆ. ಛಲದಿಂದ ಮುನ್ನುಗ್ಗಿದರೆ ಯಾವ ಕಷ್ಟವಾದರೂ ಸರಿಯೇ ದೂರ ಸರಿಯಲೇ ಬೇಕು. ಪ್ರಯತ್ನದಲ್ಲಿ ನಂಬಿಕೆ, ಶ್ರದ್ಧೆ ಇದ್ದರೆ ಪ್ರತಿಯೊಂದು ಹಂತದಲ್ಲಿಯೂ ಗುರಿ ಸೇರುವ ಮೆಟ್ಟಿಲುಗಳು ಕಾಣಿಸುತ್ತವೆ. ತಾನು ಕಂಡ ಕನಸಿಗೆ ಬಣ್ಣದ ರಂಗೋಲಿ ಬಿಡಲು ಚಂದನವನಕ್ಕೆ ಕಾಲಿಟ್ಟ ಹರ್ಷಿತ್‌ ಎಲ್ಲರ ಮನ ಗೆಲ್ಲಲಿ ಹಾಗೂ ಇನ್ನಷ್ಟು ಅವಕಾಶಗಳು ಅವರನ್ನು ಹುಡುಕಿ ಬರುವಂತಾಗಲಿ ಎಂಬುದು ಅವರ ಸ್ನೇಹಿತರ ಹಾರೈಕೆ.

ಭವಿತಾ ಕಣಲ್‌

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.