ಹೆದ್ದಾರಿ ಬದಿ ಹೊಂಚು ಹಾಕುತ್ತಿವೆ ಅಪಾಯಕಾರಿ ಕೆರೆಗಳು!

ಅಪಘಾತಗಳ ಬಳಿಕವೂ ನಾರ್ಣಕಜೆ, ತಳೂರಿನಲ್ಲಿರುವ ಕೆರೆಗಳಿಗೆ ಅಳವಡಿಸಿಲ್ಲ ತಡೆಬೇಲಿ

Team Udayavani, Sep 10, 2019, 5:04 AM IST

y-29

ಗುತ್ತಿಗಾರು: ಪುತ್ತೂರಿನ ಮಡ್ಯಂಗಳದಲ್ಲಿ ಕಾರು ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ಘಟನೆ ಮನದಲ್ಲಿನ್ನೂ ಹಸಿಯಾಗಿರುವಾಗಲೇ ಅಂತಹುದೇ ದುರ್ಘ‌ಟನೆಗಳು ಸಂಭವಿಸಬಹುದಾದ ಎರಡು ಅಪಾಯಕಾರಿ ಸ್ಥಳಗಳು ಸುಬ್ರಹ್ಮಣ್ಯ-ಜಾಲಸೂರು ರಾಜ್ಯ ಹೆದ್ದಾರಿಯ ತಳೂರು ಹಾಗೂ ನಾರ್ಣಕಜೆಯಲ್ಲಿ ಇವೆ.

ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವಂತೆ ಇರುವ ಎರಡು ಕೆರೆಗಳು ಖಾಸಗಿ ಒಡೆತನದಲ್ಲಿದ್ದರೂ ಅದರ ಸುತ್ತ ಯಾವುದೇ ತಡೆಬೇಲಿ ಅಳವಡಿಸದ ಕಾರಣ ಅಪಾಯವನ್ನು ಆಹ್ವಾನಿಸುತ್ತಿವೆ.

ಅನಾಹುತ ತಪ್ಪಿತ್ತು
ತಳೂರಿನ ಬಳಿಯಿರುವ ಕೆರೆಗೆ ಹಲವು ವರ್ಷಗಳಿಂದಲೇ ತಡೆಬೇಲಿಯಿಲ್ಲದೇ ಅಪಾಯಕಾರಿ ಆಗಿದೆ. 50 ಅಡಿಗಳಷ್ಟು ಆಳ ಹಾಗೂ ಗ್ರಾನೈಟ್‌ ಕಲ್ಲಿನ ಮಧ್ಯೆ ಈ ಕೆರೆ ರಚನೆಯಾಗಿದೆ. ಮುಖ್ಯ ರಸ್ತೆಗೆ ಕೆಲವೇ ಅಡಿಗಳ ಅಂತರದಲ್ಲಿ ಈ ಕೆರೆ ಇದೆ. ಕಳೆದ ಬೇಸಗೆಯಲ್ಲಿ ಯಾತ್ರಾರ್ಥಿಗಳ ಕಾರೊಂದು ಈ ಕೆರೆಗೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿತ್ತು. ಅಲ್ಲೇ ಇದ್ದ ಮರಗಳ ಮಧ್ಯೆ ಕಾರು ಸಿಲುಕಿಕೊಂಡ ಕಾರಣ ಭಾರೀ ಅನಾಹುತ ತಪ್ಪಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರು. ಅದಾದ ಬಳಿಕವೂ ಈ ಕೆರೆಗೆ ತಡೆಬೇಲಿ ಅಳವಡಿಸಿಲ್ಲ.

ಕೆರೆಯೊಳಗೆ ಬಿದ್ದಿದ್ದವು ವಾಹನಗಳು
ಮತ್ತೂಂದು ಕೆರೆ ನಾರ್ಣಕಜೆ ಸಮೀಪದ ತಿರುವಿನಲ್ಲಿದ್ದು, ಈ ಕೆರೆಗೆ ಹಲವು ವಾಹನಗಳು ಬಿದ್ದಿವೆ. ಹಿಂದೊಮ್ಮೆ ಈ ಕೆರೆಗೆ ಸವಾರನೊಬ್ಬ ಬೈಕ್‌ ಸಮೇತ ಬಿದ್ದಿದ್ದ. ಬೈಕ್‌ ನೀರಿನಲ್ಲಿ ಮುಳುಗಿದ್ದು, ಸವಾರ ಈಜಿಕೊಂಡು ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದ. ಈ ಕೆರೆಗೆ ಭಾಗಶಃ ತಡೆಬೇಲಿ ಅಳವಡಿಸಿದ್ದರೂ ಅದು ಸುರಕ್ಷಿತ ವಾಗಿಲ್ಲ. ಪೂರ್ಣ ಪ್ರಮಾಣದ ತಡೆಬೇಲಿ ಅಗತ್ಯವಿದ್ದು, ಸಂಭವನೀಯ ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತು ಈ ಕೆರೆಗೆ ತಡೆಬೇಲಿ ಅಳವಡಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತಡೆಬೇಲಿಗೆ ಪ್ರಸ್ತಾವನೆ ಸಲ್ಲಿಕೆ
ನಾರ್ಣಕಜೆ ಹಾಗೂ ತಳೂರಿನ ಅಪಾಯಕಾರಿ ಕೆರೆಗಳಿಗೆ ತಡೆ ಬೇಲಿ ನಿರ್ಮಿಸಲು ಪ್ರಸ್ತಾವನೆ ಕಳುಹಿಸಲಾಗಿದೆ. ಅನುಮೋದನೆ ಬಂದ ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು.
– ಸಣ್ಣೇ ಗೌಡ, ಎಇ, ಲೋಕೋಪಯೋಗಿ ಇಲಾಖೆ ಸುಳ್ಯ

ಕೃಷ್ಣಪ್ರಸಾದ್‌ ಕೊಲ್ಚಾರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.