ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ

1ನೇ ತರಗತಿಗೆ ಕಳೆದ ವರ್ಷ 1,883; ಈ ವರ್ಷ 1,903 ದಾಖಲು

Team Udayavani, Jul 10, 2019, 5:00 AM IST

s-16

ಪುತ್ತೂರು: ಪ್ರಸ್ತುತ ವರ್ಷಗಳಲ್ಲಿ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪುತ್ತೂರಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಜೂನ್‌ ತಿಂಗಳ ಅಂತ್ಯದವರೆಗೆ ಸರಕಾರಿ ಶಾಲೆಯ 1ನೇ ತರಗತಿಗೆ 1,903 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ತಾಲೂಕಿನ ಖಾಸಗಿ, ಅನುದಾನಿತ ಶಾಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದನೇ ತರಗತಿಗೆ ದಾಖಲಾತಿ ಕಡಿಮೆಯಾದರೂ ಸರಕಾರಿ ಶಾಲೆಗಳಲ್ಲಿ ಮಾತ್ರ ದಾಖಲಾತಿ ಏರಿಕೆಯಾಗಿದೆ. ಕಳೆದ ವರ್ಷ ತಾಲೂಕಿನ 180 ಸರಕಾರಿ ಶಾಲೆಗಳಿಗೆ 1,883 ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ 1,903 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ತಾಲೂಕಿನ ಇತರೆಲ್ಲ ಶಾಲೆಗಳ ಪೈಕಿ ಒಂದನೇ ತರಗತಿಗೆ ಕಳೆದ ವರ್ಷ 4,837 ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ 4,507 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 300 ಕಡಿಮೆ. ಆದರೆ ಸರಕಾರಿ ಶಾಲೆಗಳ ಒಂದನೇ ತರಗತಿಗೆ ಈ ತನಕ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳು ದಾಖಲಾಗಿದ್ದು, ಇದು ಜೂನ್‌ ತಿಂಗಳ ಅಂತ್ಯದ ಅಂಕಿ-ಅಂಶವಾಗಿದ್ದು ಜುಲೈ ತಿಂಗಳ ವಿವರ ಇನ್ನಷ್ಟೇ ಬರಬೇಕಿದೆ.

ಹಾರಾಡಿಯಲ್ಲಿ ಹೆಚ್ಚು ದಾಖಲಾತಿ
ತಾಲೂಕಿನ ಒಟ್ಟು 180 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ ಕಳೆದ ಬಾರಿ ಚೆರು, ಕಲ್ಯಾರಬೈಲು, ಶಿರಾಡಿ, ಮಚ್ಚಿಮಲೆ ಹೀಗೆ 4 ಶಾಲೆಗಳಲ್ಲಿ ಒಂದನೇ ತರಗತಿಗೆ ಯಾವುದೇ ವಿದ್ಯಾರ್ಥಿಗಳು ದಾಖಲಾಗಿರಲಿಲ್ಲ. ಆದರೆ ಈ ಬಾರಿ ನನ್ಯ ಶಾಲೆಗೆ ಮಾತ್ರ ಶೂನ್ಯ ದಾಖಲಾತಿಯಾಗಿದೆ. ಕಳೆದ ಬಾರಿ ಹಾರಾಡಿ ಶಾಲೆಗೆ ಅತಿ ಹೆಚ್ಚು 57 ವಿದ್ಯಾರ್ಥಿಗಳು ದಾಖಲಾಗಿದ್ದು, ಒಟ್ಟು ಹಿರೇಬಂಡಾಡಿ,

ಉಪ್ಪಿನಂಗಡಿ ಹಾಗೂ ಕಾವು ಶಾಲೆಗೆ ತಲಾ 41 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಬಾರಿ ಹಾರಾಡಿ ಶಾಲೆಗೆ ಅತಿ ಹೆಚ್ಚು ಅಂದರೆ 81 ವಿದ್ಯಾರ್ಥಿಗಳು ದಾಖಲಾಗಿದ್ದು, ಕುಂಬ್ರ, ಉಪ್ಪಿನಂಗಡಿ, ನೆಲ್ಯಾಡಿ, ಕೆಯ್ಯೂರು, ಹಿರೇಬಂಡಾಡಿ, ಆಲಂಕಾರು ಶಾಲೆಗಳಲ್ಲಿ 50ಕ್ಕಿಂತ ಅಧಿಕ ವಿದ್ಯಾರ್ಥಿಗಳು ಸೇರಿಕೊಂಡಿದ್ದಾರೆ.

ವಯಸ್ಸಿನ ಮಿತಿ ಕಾರಣ?
2017-18ನೇ ಸಾಲಿನಲ್ಲಿ ಒಂದನೇ ತರಗತಿಗೆ ವಿದ್ಯಾರ್ಥಿಗಳು ದಾಖಲಾಗಬೇಕಾದರೆ ವಿದ್ಯಾರ್ಥಿಗಳ ವಯಸ್ಸು 5 ವರ್ಷ 6 ತಿಂಗಳಾಗಿರಬೇಕು ಎಂದು ಸರಕಾರ ಆದೇಶಿಸಿದ್ದು, ಅದು ಸರಕಾರಿ ಶಾಲೆಗಳಿಗೆ ಹೊಡೆತ ನೀಡಿತ್ತು. ಆ ರೀತಿ ಬಾಕಿ ಉಳಿದ ವಿದ್ಯಾರ್ಥಿಗಳು ಕಳೆದ ವರ್ಷ ಹಾಗೂ ಈ ವರ್ಷ ವಯಸ್ಸಿನ ಮಿತಿ ದಾಟಿ ನಿಯಮದ ಪ್ರಕಾರ ಸರಕಾರಿ ಶಾಲೆಗಳಿಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿದೆ.

ಆಂಗ್ಲ ಶಿಕ್ಷಣದಿಂದ ಏರಿಕೆಸರಕಾರವು ಈ ಬಾರಿ ಆಯ್ದ ಸರಕಾರಿ ಶಾಲೆಗಳ ಒಂದನೇ ತರಗತಿಯಲ್ಲಿ ಆಂಗ್ಲ ಶಿಕ್ಷಣ ಆರಂಭಿಸಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಜತೆಗೆ ಕಳೆದೆರಡು ವರ್ಷಗಳಲ್ಲಿ ಒಂದನೇ ತರಗತಿಗೆ ವಯಸ್ಸಿನ ಮಿತಿಯ ಕಾರಣದಿಂದಲೂ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. –
ವಿಷ್ಣುಪ್ರಸಾದ್‌ ಸಿ. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು

ಸರಕಾರಿ ಶಾಲೆ: 
1ನೇ ತರಗತಿ

2018-19ರ ದಾಖಲಾತಿ-1,883 2019-20ರ ದಾಖಲಾತಿ-1,903 ಈ ಬಾರಿಯ ಹೆಚ್ಚುವರಿ ದಾಖಲಾತಿ-20
2018-19ರಲ್ಲಿ ತಾಲೂಕಿನ ದಾಖಲಾತಿ

ಒಟ್ಟು ಶಾಲೆಗಳು-314 1-10ನೇ ತರಗತಿಯ ವಿದ್ಯಾರ್ಥಿಗಳು-45,588 1ನೇ ತರಗತಿ ದಾಖಲಾತಿ-4,837
2019-20ರಲ್ಲಿ ತಾಲೂಕಿನ ದಾಖಲಾತಿ

ಒಟ್ಟು ಶಾಲೆಗಳು-315 1-10ನೇ ತರಗತಿಯ ವಿದ್ಯಾರ್ಥಿಗಳು-47,072 1ನೇ ತರಗತಿ ದಾಖಲಾತಿ-4,507

ಕಿರಣ್‌ ಸರಪಾಡಿ

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.