“ಜಾಗ ಸಮಸ್ಯೆ ನಿವಾರಣೆಯಾದಲ್ಲಿ ಕೇಪು ಸಬ್‌ಸ್ಟೇಶನ್‌ ಸ್ಥಾಪನೆ’


Team Udayavani, Aug 22, 2019, 5:00 AM IST

g-16

ವಿಟ್ಲ: ಜಾಗದ ಸಮಸ್ಯೆ ನಿವಾರಣೆಯಾದ ಕೂಡಲೇ ಮೆಸ್ಕಾಂ ಕೇಪು ಸಬ್‌ಸ್ಟೇಶನ್‌ ಸ್ಥಾಪನೆಗೆ ಮುಂದಾಗಲಿದೆ. ಅಪಾಯಕಾರಿ ಮರ ಕಡಿಯುವ ಜವಾಬ್ದಾರಿ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ್ದು. ಮೆಸ್ಕಾಂ ಜವಾಬ್ದಾರಿಯಲ್ಲ. ಪೂರಕ ಸಹಕಾರ ಮೆಸ್ಕಾಂ ನೀಡಲಿದೆ. ಕಂಬ ಸ್ಥಳಾಂತರ ಸಮಸ್ಯೆ ಲೋಕೋಪಯೋಗಿ ಹಾಗೂ ಮೆಸ್ಕಾಂ ಗುತ್ತಿಗೆದಾರರ ನಡುವಿನ ವಿಚಾರವಾಗಿದೆ. ಮಾದರಿ ವಿದ್ಯುತ್‌ ಗ್ರಾಮ ಯೋಜನೆ ಬದಲಾಗಿ ಬೇರೆ ಹೊಸ ಯೋಜನೆಗೆ ಕ್ರಮ ಜರಗಿಸಲಾಗುವುದು ಎಂದು ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ಮಂಜಪ್ಪ ತಿಳಿಸಿದರು.

ಬುಧವಾರ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ವಿಟ್ಲ ಉಪವಿಭಾಗ ಮಟ್ಟದ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆ ನನೆಗುದಿಗೆ
ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಮಾದರಿ ವಿದ್ಯುತ್‌ ಗ್ರಾಮ ಯೋಜನೆ ನನೆಗುದಿಗೆ ಬಿದ್ದಿದೆ. ಕಬಕ-ಸುರತ್ಕಲ್‌ ರಸ್ತೆ ಕಾಮಗಾರಿ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬಗಳನ್ನು ಮೆಸ್ಕಾಂ ಹಾಗೂ ಲೋಕೋಪಯೋಗಿ ಇಲಾಖೆಯ ನಡುವಿನ ಹೊಂದಾಣಿಕೆ ಸಮಸ್ಯೆಯಿಂದ ತೆರವುಗೊಳಿಸಿಲ್ಲ. ಅನಾಹುತ ಮೊದಲೇ ಎಚ್ಚೆತ್ತುಕೊಂಡರೆ ಸಮಸ್ಯೆ ಬರುವುದಿಲ್ಲ ಎಂದು ಸಲಹೆ ನೀಡಿದರು.

ಗ್ರಾಹಕ‌ರಿಗೆ ತೊಂದರೆ
ಮಾಣಿಲ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಕುಮಾರ್‌ ಬಾಳೆಕಲ್ಲು ಮಾತನಾಡಿ, ಮಾಣಿಲ ಗ್ರಾಮವನ್ನು ಕನ್ಯಾನ ಶಾಖೆಗೆ ಸೇರಿಸಲಾಗಿದೆ. ಇದರಿಂದ ಗ್ರಾಹಕ‌ರಿಗೆ ತೊಂದರೆಯಾಗಿದೆ. ತೋಟದ ಮಧ್ಯೆ ತಂತಿಗಳು ಹಾದುಹೋಗುತ್ತಿವೆ. ಅವುಗಳನ್ನು ತೆರವುಗೊಳಿಸಿ ರಸ್ತೆ ಬದಿಯಲ್ಲಿ ಹಾಕಬೇಕು ಎಂದು ಆಗ್ರಹಿಸಿದರು.

ಹಳೆ ಎಚ್‌ಟಿ ತಂತಿ
ಪುಣಚ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್‌ ಶೆಟ್ಟಿ ಬೈಲುಗುತ್ತು ಮಾತನಾಡಿ, ಪುಣಚ ಗ್ರಾಮದಲ್ಲಿ ಹಳೆ ಎಚ್‌ಟಿ ತಂತಿ ಇದ್ದು, ಅಪಾಯ ಆಹ್ವಾನಿಸುತ್ತಿದೆ. ಈ ಬಗ್ಗೆ ಗ2 ವರ್ಷಗಳಿಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಶಾಲೆ ಅಂಗಳದಲ್ಲಿ ವಿದ್ಯುತ್‌ ಪರಿವರ್ತಕ
ಕರೋಪಾಡಿ ಗ್ರಾ.ಪಂ. ಅಧ್ಯಕ್ಷೆ ಬೇಬಿ ಆರ್‌. ಶೆಟ್ಟಿ ಅವರು ಕರೋಪಾಡಿ ಗ್ರಾಮದ ಪದ್ಯಾಣ ಶಾಲೆ ಅಂಗಳದಲ್ಲಿ 11 ಕೆವಿ ವಿದ್ಯುತ್‌ ಪರಿವರ್ತಕ, ತಂತಿ ಬದಲಾಯಿಸುವಂತೆ ಮನವಿ ಸಲ್ಲಿಸಿದರು.

ವಿದ್ಯುತ್‌ ಸಮಸ್ಯೆಗಳಿಗೆ ಸಂಬಂಧಿಸಿ ವಿವಿಧ ಗ್ರಾಮಗಳ ಬಳಕೆದಾರರು ದೂರು, ಅಹವಾಲು ಸಲ್ಲಿಸಿದರು. ಜಿ.ಪಂ. ಸದಸ್ಯ ಎಂ.ಎಸ್‌.ಮಹಮ್ಮದ್‌, ವಿಟ್ಲ ಪ.ಪಂ. ಅಧ್ಯಕ್ಷೆ ದಮಯಂತಿ, ಬಂಟ್ವಾಳ ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಮಚಂದ್ರ, ವಿಟ್ಲ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿ ಯರ್‌ ಪ್ರವೀಣ್‌ ಜೋಷಿ ಉಪಸ್ಥಿತರಿದ್ದರು.

ಕಂದಾಯ ಇಲಾಖೆ – ಗೇರು ನಿಗಮದ ಜಾಗ
ಸಾಮಾಜಿಕ ಕಾರ್ಯಕರ್ತ ರಾಮಣ್ಣ ಶೆಟ್ಟಿ ಪಾಲಿಗೆ ಮಾತನಾಡಿ, ಕೇಪು ಸಬ್‌ಸ್ಟೇಶನ್‌ ನಿರ್ಮಾಣ ಆಗಲಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಕೆಪಿಟಿಸಿಎಲ್‌ ಅಧೀಕ್ಷಕ ರವಿಕಾಂತ್‌ ಕಾಮತ್‌, ಈ ಜಾಗ ಗೇರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ್ದು, ನಮ್ಮ ಬೇಡಿಕೆ ಸ್ಥಳ ಅರಣ್ಯ ಇಲಾಖೆಗೆ ಸೇರಿದೆ. ಬೇರೆ ಜಾಗ ತೋರಿಸಿಕೊಟ್ಟರೆ ಮಾಡಲು ಸಿದ್ಧ ಎಂದು ತಿಳಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಕೃಷಿಕ ಜಯಶ್ಯಾಂ ನೀರ್ಕಜೆ, ಇದು ಅರಣ್ಯ ಇಲಾಖೆಯ ಜಾಗವಲ್ಲ. ಕಂದಾಯ ಇಲಾಖೆ ಹಾಗೂ ಗೇರು ನಿಗಮದ ಜಾಗವಾಗಿದ್ದು, ಸ್ವಲ್ಪ ಜಾಗ ಮಾತ್ರ ಮೂವರು ವ್ಯಕ್ತಿಗಳ ಕುಮ್ಕಿಯಾಗಿದೆ. ಸಂಬಂಧಿತ ಭೂ ದಾಖಲೆಗಳೊಂದಿಗೆ ಈಗಾಗಲೇ ಜಿಲ್ಲಾಧಿಕಾರಿಯವರಿಗೆ

ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಇತ್ಯರ್ಥ ಮಾಡಿದರೆ ಸಮಸ್ಯೆ ಮುಗಿಯುತ್ತದೆ ಎಂದು ತಿಳಿಸಿದರು.

ಅಳಿಕೆ ಗ್ರಾ.ಪಂ. ಅಧ್ಯಕ್ಷ ಪದ್ಮನಾಭ ಪೂಜಾರಿ ಮಾತನಾಡಿ, ಮೆಸ್ಕಾಂ ಗೇರು ನಿಗಮಕ್ಕೆ ಹಣ ಪಾವತಿಸಿದರೆ ಜಾಗವನ್ನು ನೀಡಲು ಅವರು ತಯಾರಿದ್ದಾರೆ ಎಂದು ನಿಗಮ ತಿಳಿಸಿದೆ. ಈ ಬಗ್ಗೆ ಮೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದರು. ರಾಜೀವ ಭಂಡಾರಿ ಕೇಪು ಮಾತನಾಡಿ, ಕೇಪು ಗ್ರಾಮದಲ್ಲಿ ಸಬ್‌ ಸ್ಟೇಶನ್‌ ಅಗತ್ಯವಾಗಿದೆ. ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿದೆ. ಅದು ಆಗದಿರಲು ಇರುವ ಕಾರಣದ ಬಗ್ಗೆ ಸರಕಾರದ ಜತೆ ಮಾತುಕತೆ ನಡೆಸಿ ಇತ್ಯರ್ಥ ಮಾಡಲಾಗುವುದು ಎಂದರು.

ಅಧೀಕ್ಷಕ ಮಂಜಪ್ಪ ಮಾತನಾಡಿ, ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಿ, ಜಾಗದ ಗೊಂದಲ ನಿವಾರಿಸಬೇಕು
ಎಂದು ಸೂಚಿಸಿದರು.

ನಿರಂತರ ಸ್ಪಂದನೆ
ಮೆಸ್ಕಾಂ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಲಿದೆ. ಒಂದು ಜನಸಂಪರ್ಕ ಸಭೆಯಲ್ಲಿ ಬಂದ ದೂರುಗಳು ಮುಂದಿನ ಸಭೆಗೆ ಈಡೇರಿಕೆಯಾಗಬೇಕು.
– ಮಂಜಪ್ಪ, ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.