ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ನೀಡಿ


Team Udayavani, Jun 13, 2019, 5:00 AM IST

t-23

ವಿಶ್ವಾದ್ಯಂತ ಹಲವರು ಜನ ಅಲ್ಬಿನಿಸಂ (ಬಿಳಿ ತೊನ್ನು) ರೋಗದಿಂದ ಬಳಲುತ್ತಿದ್ದಾರೆ. ಅಲ್ಬಿನಿಸಂ ಅನ್ನು ಸಾಮಾಜಿಕವಾಗಿ ಮತ್ತು ವೈದ್ಯಕೀಯವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದ್ದು, ಮೂಢನಂಬಿಕೆಗಳಿಂದ ಪ್ರಭಾವಿತಗೊಂಡಿದೆ. ಇದೊಂದು ದೇವರ ಶಾಪ ಎಂಬ ತಪ್ಪು ಕಲ್ಪನೆ ಜನರಲ್ಲಿ ಬಿಂಬಿತಗೊಂಡಿದ್ದು, ಇದರಿಂದ ಅವರು ಸಾಮಾಜಿಕ ಕಳಂಕವಾಗಿ ಬದುಕುವಸ್ಥಿತಿ ನಿರ್ಮಾಣವಾಗಿದೆ. ಅಲ್ಬನಿಸಂ ಹೊಂದಿರುವವರು ಯಾವುದೋ ನಿರ್ದಿಷ್ಟ ಸಮುದಾಯದವರು ಎಂಬ ತಪ್ಪು ಕಲ್ಪನೆ ನಮ್ಮದಾಗಿದ್ದು ಇದು ಒಂದು ಆನುವಂಶಿಕ ಸ್ಥಿತಿಯಾಗಿದೆ. ಕೆಲವರು ದೇಹದಲ್ಲಿ ಸಾಮಾನ್ಯವಾಗಿ ಬೇಕಾದ ವರ್ಣದ್ರವ್ಯ (ಬಣ್ಣ) ಇಲ್ಲದೆ ಜನಿಸುತ್ತಾರೆ. ಇದರಿಂದ ಅವರ ಶರೀರದಲ್ಲಿ ಕಣ್ಣಿನ ಚರ್ಮ, ಕೂದಲಿನ ಬಣ್ಣದಲ್ಲಿ ವ್ಯತ್ಯಾಸ ಕಂಡು ಬರುವುದಲ್ಲದೆ ತುಂಬಾ ತೆಳುವಾದ ಚರ್ಮವನ್ನು ಹೊಂದಿರುತ್ತಾರೆ.

ಕಣ್ಣುಗಳ ಮೇಲೆ ಪರಿಣಾಮ
ಕೆಲವರಿಗೆ ಅಲ್ಬಿನಿಸಂ ಕಣ್ಣುಗಳ ಮೇಲೆ ಮಾತ್ರ ಪರಿಣಾಮ ಬೀರುತ್ತದೆ .ಇದನ್ನು ಆಕ್ಯುಲರ್‌ ಅಲ್ಬಿನಿಸಂ ಎನ್ನಲಾಗುತ್ತದೆ. ಇಂಥವರು ಸಾಮಾನ್ಯವಾಗಿ ನೀಲಿ ಕಣ್ಣುಗಳನ್ನು ಹೊಂದಿದ್ದು ಕೆಲವು ಸಂದರ್ಭ ಕಣ್ಣಿನ ಭಾಗ ಬಹಳ ಕಡಿಮೆ ಬಣ್ಣವನ್ನು ಹೊಂದಿರುತ್ತದೆ. ಇದರಿಂದ ಕಣ್ಣಿನ ನರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಕೂಡ ಇರುತ್ತದೆ.

ಇದು ಸಾಮಾನ್ಯವಾಗಿ ಹುಟ್ಟಿನಿಂದ ಬರುವ ಕಾಯಿಲೆಯಾಗಿದ್ದು, ಯಾವುದೇ ರೀತಿಯಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದಿಲ್ಲ. ಇದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಬದಲಾಗಿ ಅವರು ಸೂರ್ಯನ ಕಿರಣಗಳಿಂದ ರಕ್ಷಣೆ ಪಡೆಯುವುದು ದೊಡ್ಡ ಸವಾಲಾಗಿದೆ.

ಅಲ್ಬನಿಸ್‌ಂ ಹೊಂದಿರುವವರು ಹದಿಹರೆಯದಲ್ಲಿ ಕೆಲವೊಮ್ಮೆ ಹತಾಶೆ, ದುಃಖದಿಂದ ಬಳಲುತ್ತಾರೆ. ಅಂತಹ ಸಂದರ್ಭಗಳಲ್ಲಿ ಕುಟುಂಬದವರು, ಸ್ನೇಹಿತರು ಇವರಿಗೆ ಸ್ವಾಂತನ ಹೇಳಬೇಕಾಗುತ್ತದೆ. ಇವರಿಗೆ ನೈತಿಕ ಸ್ಥೈರ್ಯ ತುಂಬುವುದೇ ಸಮಾಜದ ಬಹುದೊಡ್ಡ ಉಪಕಾರವಾಗುತ್ತದೆ.

ಇದೆಲ್ಲ ಕಾರಣಗಳಿಂದ ಈ ರೋಗದ ಬಗ್ಗೆ ಜಾಗೃತಿ ವಹಿಸುವ ನಿಟ್ಟಿನಲ್ಲಿ 2014 ಡಿಸೆಂಬರ್‌ 18ರಂದು ಜನರಲ್ ಅಸೆಂಬ್ಲಿ ಜೂ. 13ರಂದು ಅಂತಾರಾಷ್ಟ್ರೀಯ ಅಲ್ಬಿನಿಸಮ್‌ ಜಾಗೃತಿ ದಿನವಾಗಿ ಘೋಷಿಸಿತು.

ಸವಾಲುಗಳಿಗೆ ಮುಕ್ತಿ ಸಿಗಲಿ
ಇಂದು ಅಲ್ಬನಿಸಂ ತಾರತಮ್ಯತೆಯಿಂದ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಸವಾಲುಗಳಿಗೆ ಮುಕ್ತಿ ನೀಡಬೇಕು. ಇಂದಿಗೂ ಕೆಲವು ರಾಷ್ಟ್ರಗಳಲ್ಲಿ ಉಳ್ಳವರ ದಾಳಿಗೆ ಇವರು ಬಲಿಯಾಗುತ್ತಿದ್ದಾರೆ .ಇದೆಲ್ಲವೂ ಕೊನೆಗೊಳ್ಳಲಿ ಎಂಬುದು ಈ ದಿನದ ಆಚರಣೆಯ ಉದ್ದೇಶ.

ಯಾಕಾಗಿ ಆಚರಿಸುತ್ತೇವೆ?
ಈ ದಿನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು ಆಚರಿಸುತ್ತೇವೆ. ಇದು ಜನರಲ್ಲಿ ಮಾನವೀಯ ಮೌಲ್ಯವನ್ನು ಹುಟ್ಟುಹಾಕಿ ಜನರಲ್ಲಿ ಜಾಗೃತಿ ಮೂಡಿಸುತ್ತದೆ.

ಈ ವರ್ಷದ ಥೀಮ್‌ ಅನ್ನು ಇನ್ನು ಪ್ರಬಲವಾಗಿ ಎಂಬ ವಿಷಯದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇದರ ಪ್ರಕಾರ ವಿಶ್ವದಾದ್ಯಂತ ಇರುವ ಅಲ್ಬಿನಿಸಂ ವ್ಯಕ್ತಿಗಳೊಂದಿಗೆ ಏಕತೆ ಸಾಧಿಸುವುದು ಮತ್ತು ಅವರ ಸಾಧನೆಗೆ, ಧನಾತ್ಮಕ ಯೋಚನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎನ್ನುವುದು ಈ ವರ್ಷದ ಥೀಮ್‌ನ ಸಾರವಾಗಿದೆ.

ಜಗತ್ತಿನಲ್ಲಿ ಪ್ರತಿಯೊಬ್ಬರೂ ಸಮಾನರು. ಮೈ ಬಣ್ಣಗಳಿಂದ ತಾರತಮ್ಯ ಮಾಡುವುದು ತರವಲ್ಲ. ಅಲ್ಬಿನಿಸಂ ಇರುವ ವ್ಯಕ್ತಿಗಳನ್ನು ಕೂಡ ಸಮಾಜದಲ್ಲಿ ಅಪಹಾಸ್ಯವಾಗಿ ಕಾಣದೆ ಪ್ರೀತಿಯಿಂದ ಕಾಣಿರಿ. ಅವರು ಅನುಭವಿಸುತ್ತಿರುವ ಕಷ್ಟಗಳಿಗೆ ಸ್ವಲ್ಪವಾದರೂ ಮುಕ್ತಿ ದೊರಕಿದಂತಾಗುತ್ತದೆ. ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಸ್ಥಾನಮಾನ ಲಭ್ಯವಾಗಬೇಕು ಎಂಬುದೇ ನಮ್ಮ ಆಶಯ.

ಏಕತೆ ಸಾಧಿಸುವ ಉದ್ದೇಶ
ಈ ವರ್ಷದ ಥೀಮ್‌ ಅನ್ನು ಇನ್ನು ಪ್ರಬಲವಾಗಿ ಎಂಬ ವಿಷಯದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಇದರ ಪ್ರಕಾರ ವಿಶ್ವದಾದ್ಯಂತ ಇರುವ ಅಲ್ಬಿನಿಸಂ ವ್ಯಕ್ತಿಗಳೊಂದಿಗೆ ಏಕತೆ ಸಾಧಿಸುವುದು ಮತ್ತು ಅವರ ಸಾಧನೆಗೆ, ಧನಾತ್ಮಕ ಯೋಚನೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎನ್ನುವುದು ಈ ವರ್ಷದ ಥೀಮ್‌ನ ಸಾರವಾಗಿದೆ.

  • ಪ್ರೀತಿ ಭಟ್ ಗುಣವಂತೆ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.