ಕೃಷಿಕರಿಗೆ ವರದಾನ ಏತ ನೀರಾವರಿ

2 ಕೋಟಿ ರೂ. ಯೋಜನೆ; ಕಾಮಗಾರಿ ಅನುಷ್ಠಾನದಲ್ಲಿ ಅಸಮಾಧಾನ

Team Udayavani, Feb 19, 2020, 5:25 AM IST

skin-31

ನರಿಮೊಗರು ಗ್ರಾ.ಪಂ. ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳಲಿರುವ ಏತ ನೀರಾವರಿ ಯೋಜನೆ.

ಪುತ್ತೂರು: ನೂರಾರು ರೈತರಿಗೆ ಆಶಾದಾಯಕವಾದ ಏತ ನೀರಾವರಿ ಯೋಜನೆಯೊಂದು ನರಿಮೊಗರು ಗ್ರಾ.ಪಂ. ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ. ಆದರೆ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಒಂದಷ್ಟು ಅಸಮಾಧಾನ, ಏಕಪಕ್ಷೀಯ ನೀತಿ ಯೋಜನೆಯ ಫಲವನ್ನು ಹಾಳು ಮಾಡುವ ಭೀತಿ ಕಾಡುತ್ತಿದೆ.

ಕೃಷಿ ತೋಟಗಳಿಗೆ ನೀರುಣಿಸುವ ಸುಮಾರು 2 ಕೋಟಿ ರೂ. ವೆಚ್ಚದ ಈ ಏತ ನೀರಾವರಿ ಯೋಜನೆ ನರಿಮೊಗರು ಗ್ರಾ.ಪಂ. ವ್ಯಾಪ್ತಿಯ ವೀರಮಂಗಲದ ಪುಡಿಂಕನಡ್ಕದಲ್ಲಿ ತಲೆ ಎತ್ತಲಿದೆ. ಕುಮಾರಧಾರಾದಿಂದ 40 ಎಚ್‌.ಪಿ. ಸಾಮರ್ಥ್ಯದ ಪಂಪ್‌ನಿಂದ ನೀರನ್ನು ಮೇಲೆತ್ತಿ ಬೃಹತ್‌ ಟ್ಯಾಂಕ್‌ಗಳ ಮೂಲಕ ಆ ಭಾಗದ ಕೃಷಿ ತೋಟಗಳಿಗೆ ನೀರು ನೀಡುವ ಮಹತ್ವದ ಉದ್ದೇಶವನ್ನು ಈ ಯೋಜನೆಯ ಮೂಲಕ ಹೊಂದಲಾಗಿದೆ. ಜಿಲ್ಲೆಯಲ್ಲಿ ಕಾಲುವೆ ಮೂಲಕ ನೀರು ನೀಡುವುದು ಕಷ್ಟವಾದ ಕಾರಣ ಇದಕ್ಕಾಗಿ ಪೈಪ್‌ಲೈನ್‌ ಅಳವಡಿಕೆ ನಡೆದಿದೆ.

100 ಕುಟುಂಬಗಳಿಗೆ ಪ್ರಯೋಜನ
ಎರಡು ವರ್ಷಗಳ ಹಿಂದೆ ಆಗಿನ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು 100 ಕುಟುಂಬಗಳ ಕೃಷಿಗೆ ಈ ಯೋಜನೆಯಲ್ಲಿ ನೀರು ನೀಡಬಹುದಾಗಿದೆ. ಜತೆಗೆ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರವಾಗಲಿದೆ. ಈ ಭಾಗದಲ್ಲಿ ಹಲವು ಮನೆಗಳಿಗೆ ಈಗಾಗಲೇ ಪೈಪ್‌ಲೈನ್‌ ಅಳವಡಿಕೆ ಮಾಡಲಾಗಿದ್ದು, ಇನ್ನುಳಿದ ಪ್ರದೇಶಗಳಿಗೂ ನೀರು ನೀಡಲು ಅನುಕೂಲವಾಗುವಂತೆ ಎರಡು ಪ್ರತ್ಯೇಕ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ.

ಅಸಮಾಧಾನಕ್ಕೆ ಕಾರಣ
ಈ ಯೋಜನೆಯ ಅನುಷ್ಠಾನದ ಸಂದರ್ಭ ಸ್ಥಳೀಯ ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ನಡೆಸಲಾಗುತ್ತಿದೆ ಎಂಬುದು ಪ್ರಧಾನ ಆರೋಪ. ಏತ ನೀರಾ ವರಿಯ ಪೈಪ್‌ಲೈನ್‌ ಅಳವಡಿಕೆಗಾಗಿ ತಮ್ಮ ವರ್ಗ ಜಾಗ ಬಿಟ್ಟುಕೊಟ್ಟಿರುವ ಸ್ಥಳೀಯರೂ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪ ಡಿಸುತ್ತಿದ್ದಾರೆ. ಸಮಿತಿ ರಚನೆಯಲ್ಲೂ ಸ್ಥಳೀಯ ಫಲಾನುಭವಿಗಳ ಬದಲಿಗೆ ಬೇರೆ ವ್ಯಕ್ತಿಗಳನ್ನು ಆರಿಸಲಾಗಿದೆ. ಸ್ಥಳೀಯಾಡಳಿತ ಗ್ರಾ.ಪಂ.ಗೂ ಈ ಯೋಜನೆ ಕುರಿತು ಮಾಹಿತಿ ನೀಡಿಲ್ಲ ಎಂಬ ಆರೋಪವೂ ವ್ಯಕ್ತವಾಗಿರುವುದು ಯೋಜನೆಯ ಹಿನ್ನಡೆಗೆ ಕಾರಣವಾಗಿದೆ.

ದೂರು ಸಲ್ಲಿಕೆ
ಸ್ಥಳೀಯರಲ್ಲಿದ್ದ ವರ್ಗ ಸ್ಥಳದಲ್ಲಿ ಪೈಪ್‌ಲೈನ್‌ ಅಳವಡಿಕೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ಈಗ ಸಣ್ಣ ನೀರಾವರಿ ಇಲಾಖೆ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದೆ. ಸ್ಥಳೀಯರನ್ನು, ಗ್ರಾ.ಪಂ. ಆಡಳಿತ ವ್ಯವಸ್ಥೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಯೋಜನೆಗೆ ಸ್ಥಳೀಯ ವಾಗಿ ಸಮಿತಿಯೊಂದನ್ನು ರಚಿಸಲಾಗಿದ್ದು, ಫಲಾನುಭವಿಗಳಲ್ಲದವರನ್ನು ಹಾಕಿಕೊಂಡು ರಾಜಕೀಯ ನಡೆಸಲಾಗುತ್ತಿದೆ. ಇದರ ವಿರುದ್ಧ ಗ್ರಾ.ಪಂ.ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಮತ್ತು ಸಣ್ಣ ಕೈಗಾರಿಕಾ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ನರಿಮೊಗರು ಗ್ರಾಮ ಪಂಚಾಯತ್‌ ಸದಸ್ಯ ಬಾಬು ಶೆಟ್ಟಿ ತಿಳಿಸಿದ್ದಾರೆ.

ಸಮಿತಿ ರಚನೆ ಮಾಡಿಲ್ಲ
ಈ ಯೋಜನೆ ಮೂಲ ಸೌಕರ್ಯಗಳಿಗೆ 1.50 ಕೋಟಿ ರೂ. ಹಾಗೂ ಪೈಪ್‌ಲೈನ್‌ ಅಳವಡಿಕೆಗೆ 50 ಲಕ್ಷ ರೂ. ವೆಚ್ಚವಾಗಲಿದೆ. ಈ ಯೋಜನೆಯಲ್ಲಿ ಯಾವುದೇ ಅಧಿಕೃತ ಸಮಿತಿ ರಚನೆ ಮಾಡಲಾಗಿಲ್ಲ. ಆದರೆ ಮಾಹಿತಿ ನೀಡುವ ಸಭೆ ನಡೆಸಲಾಗಿದೆ. ಈ ಯೋಜನೆಯ ನಿರ್ವಹಣೆಯನ್ನು ಸಣ್ಣ ನೀರಾವರಿ ಇಲಾಖೆ ವತಿಯಿಂದಲೇ ನಡೆಸಲಾಗುತ್ತಿದೆ. ಫಲಾನುಭವಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗಿದೆ. ಶೀಘ್ರ ಲೋಕಾರ್ಪಣೆಗೊಳ್ಳಲಿದೆ ಎನ್ನುತ್ತಾರೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ ಆನಂದ್‌.

ನನ್ನ ಕನಸಿನ ಯೋಜನೆ
ಈ ಯೋಜನೆಗಾಗಿ 2 ಕೋಟಿ ಅನುದಾನವನ್ನು ಸಣ್ಣ ನೀರಾವರಿ- ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಒದಗಿಸಿ ಕೊಟ್ಟಿದ್ದೇನೆ. ಇಲ್ಲಿ ಅರಣ್ಯ ಪ್ರದೇಶ, ವರ್ಗ ಜಾಗ ಇದ್ದುದರಿಂದ ಆ ಸಂದರ್ಭದಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆ ಉಂಟಾಗಿ ವಿಳಂಬವಾಗಿತ್ತು. ಇದು ನನ್ನ ಕನಸಿನ ಯೋಜನೆಯಾಗಿದೆ. ಈ ಯೋಜನೆ ಸಂಪೂರ್ಣ ಗೊಂಡಲ್ಲಿ ರೈತರಿಗೆ ಅನುಕೂಲವಾಗಲಿದೆ.
-ಶಕುಂತಳಾ ಟಿ. ಶೆಟ್ಟಿ, ಮಾಜಿ ಶಾಸಕಿ

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.