ಹೆಣ್ಣು ಮಗುವಿನ ಸುರಕ್ಷತೆ ಎಂದಿಗೂ ನಮ್ಮ ಕರ್ತವ್ಯ


Team Udayavani, Jan 24, 2020, 5:50 AM IST

kaa-30

ಹೆಣ್ಮಕ್ಕಳು ಮನೆಯ ಕಣ್ಣಿದ್ದಂತೆ ಆಕೆಯ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಹಾಗಾಗಿ ಪ್ರತಿ ಮನೆಗಳಲ್ಲಿ ಅವಳಿಗೆ ಸೂಕ್ತ ಸ್ಥಾನಮಾನ ಸಿಕ್ಕಿ, ಸಮಾಜದ ಒಬ್ಬ ಗೌರವಯುತ ಪ್ರಜೆಯಾಗಿ ಆಕೆ ಬಾಳಬೇಕು. ಅಂದಾಗ ಮಾತ್ರ ನಮ್ಮ ದೇಶ ಪ್ರಗತಿ ಪಥದಲ್ಲಿ ನಡೆಯಲು ಸಾಧ್ಯ.

“ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೇ ತತ್ರ ದೇವತಾಃ’ ಈ ಶ್ಲೋಕವೇ ಹೇಳುವಂತೆ ಎಲ್ಲಿ ನಾರಿಯನ್ನು ಪೂಜಿಸುತ್ತಾರೋ ಅಲ್ಲಿ ದೇವತೆಗಳು ನೆನೆಸಿರುತ್ತಾರೆ. ಹಾಗೇ ಯಾವ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸರಿಯಾದ ಸ್ಥಾನಮಾನ ನೀಡುತ್ತಾರೋ ಅಲ್ಲಿ ಧರ್ಮ ನೆಲೆಸಿರುತ್ತದೆ ಎಂದು ಬಲ್ಲವರು ಹೇಳುತ್ತಾರೆ. ನಾವೆಲ್ಲರೂ ಹೆಣ್ಣುಮಗುವಿನ ಸುರಕ್ಷತೆ ಬಗ್ಗೆ ಯೋಚಿಸಬೇಕು. ಆಗ ಮಾತ್ರ ಆಕೆ ಯಾವುದೇ ನಿರ್ಭಯವಿಲ್ಲದೆ ಬದುಕಲು ಸಾಧ್ಯ.

ಪ್ರತಿ ಮನೆಯಲ್ಲಿಯೂ ಹೆಣ್ಣು ಮಗುವನ್ನು ಮನೆಯ ಲಕ್ಷ್ಮೀಯಂತೆ ಬೆಳೆಸುತ್ತಾರೆ. ಆಕೆಗೆ ಯಾವುದೇ ರೀತಿ ತೊಂದರೆ ಬರದಂತೆ ಎಚ್ಚರ ವಹಿಸುತ್ತಾರೆ. ಆದರೆ ಇನ್ನು ಕೆಲವೆಡೆ ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ, ಲಿಂಗತಾರತಮ್ಯ, ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಈ ಆಧುನಿಕ ಯುಗದಲ್ಲಿ ಎಷ್ಟೇ ಹೆಣ್ಣು ಮಕ್ಕಳಿಗೆ ಸ್ಥಾನಮಾನ ನೀಡುತ್ತಿದ್ದೇವೆ ಎಂದರೂ ತಂದೆ ತಾಯಿ ತಮ್ಮ ಮಗುವನ್ನು ಶಾಲೆಗೆ ಕಳುಹಿಸಲು, ಆಟವಾಡಲು, ಕೆಲಸಕ್ಕೆ ಕಳುಹಿಸಲು, ಸಂಬಂಧಿಕರ ಮನೆಗೆ ಕಳುಹಿಸಲು ಹೆದರುವ ಪರಿಸ್ಥಿತಿ ಬಂದಿದೆ. ಅದಕ್ಕಾಗಿಯೇ ಈ ಎಲ್ಲ ಸಂಕಷ್ಟಗಳನ್ನು ಮೀರಿ ನಿಲ್ಲಲು ಈ ದಿನವನ್ನು ಆಚರಿಸಲಾಗುತ್ತಿದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ.

ಉದ್ದೇಶ
ಹೆಣ್ಣು ಮ್ಕಕಳು ಸಮಾಜದಲ್ಲಿ ಎದುರಿಸುತ್ತಿರುವ ಎಲ್ಲ ಅಸಮಾನತೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಅವರ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಅರಿವು ಬೆಳೆಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ಜಾಗೃತಿ ದಿನ
ಇಂದಿನ ಕಾಲಘಟ್ಟದಲ್ಲಿ ಹೆಣ್ಣು ಪ್ರತಿಕ್ಷಣ ಶೋಷಣೆಗೆ ಒಳಗಾಗುತ್ತಿದ್ದಾಳೆ. ಇಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳನ್ನು ಜಾಗೃತಗೊಳಿಸುವುದಕ್ಕಾಗಿ ಭಾರತದಲ್ಲಿ ಜ. 24ರಂದು ರಾಷ್ಟ್ರೀಯ ಹೆಣ್ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ 2008ರಿಂದ ಈ ದಿನವನ್ನು ಆಚರಿಸುತ್ತದೆ. ಹೆಣ್ಮಕ್ಕಳ ರಕ್ಷಣೆ, ಲಿಂಗ ತಾರತಮ್ಯ, ಸಮಾಜದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾದ ಜಾಗೃತಿಗೊಳಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.

2019ರಲ್ಲಿ ಉತ್ತಮ ನಾಳೆಗಾಗಿ ಹೆಣ್ಣು ಮಕ್ಕಳನ್ನು ಸಶಕ್ತಗೊಳಿಸುವುದು ಎಂಬ ಥೀಮ್‌ ಅನ್ನು ಇಟ್ಟುಕೊಂಡು ಕಳೆದ ವರ್ಷದ ಈ ದಿನವನ್ನು ಆಚರಿಸಲಾಗಿತ್ತು.

ಅರಿವು ನಮ್ಮಿಂದಲೂ ಸಾಧ್ಯ
ಹೆಣ್ಣು ಮಗುವಿನ ಮಹತ್ವದ ಬಗ್ಗೆ ಹೆತ್ತವರಲ್ಲಿ ಜಾಗೃತಿ ಮೂಡಿಸುವುದು.
ಆರೋಗ್ಯ, ಶಿಕ್ಷಣ ಸಹಿತ ಹೆಣ್ಣು ಮಗು ಎದುರಿಸುವ ಸವಾಲುಗಳನ್ನು ನಿವಾರಿಸುವುದು.
ಲಿಂಗಸಮಾನತೆಯ ಬಗ್ಗೆ ಜಾಗೃತಿ ಜಾಥಾ
14 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ
ಹಿಂದುಳಿದ ಪ್ರದೇಶದ ಮಕ್ಕಳಿಗೆ ಸರಿಯಾದ ಶಿಕ್ಷಣ ವ್ಯವಸ್ಥೆ
ಕಡ್ಡಾಯ ವಿವಾಹ ನೋಂದಣಿ ಮಾಡಿಸಲು ಜಾಗೃತಿ
ಹೆಣ್ಮಕ್ಕಳ ಸುರಕ್ಷತೆಗೆ ಹೆಚ್ಚಿನ ಕ್ರಮ ವಹಿಸುವುದು
ಗರ್ಭಿಣಿಯರಿಗೆ ಪ್ರಸವಪೂರ್ವ ಆರೋಗ್ಯ ಸೇವೆಯ ಸೌಲಭ್ಯ.
ಹೆಣ್ಣು ಮಗುವಿನ ಲಿಂಗಾನುಪಾತ ಕುಸಿಯದಿರಲು ಕಾರ್ಯಯೋಜನೆ
ಮಗುವಿನ ಆರೋಗ್ಯ, ಜೀವನಶೈಲಿ ಸುಧಾರಿಸಲು ಕ್ರಮ

ಹೆಣ್ಮಕ್ಕಳ ಸುರಕ್ಷೆಗಾಗಿ ಹಲವು ಕಾನೂನು
ಹೆಣ್ಣು ಮಗುವಿನ ಸುರಕ್ಷತೆ ಮತ್ತು ಭದ್ರತೆಗಾಗಿ ಸರಕಾರವು ಹಲವಾರು ಕಾನೂನುಗಳನ್ನು ರಚಿಸಿದೆ. ಹೆಣ್ಮಕ್ಕಳಿಗೆ ತೊಂದರೆ ಅಥವಾ ಹಿಂಸೆ ನೀಡಿದರೆ ಅವರ ವಿರುದ್ಧ ಕಠಿನವಾದ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಹೆಣ್ಮಕ್ಕಳ ಸುರಕ್ಷತೆಗೆ ರೂಪಿಸಿರುವ ಕಾನೂನುಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬಾಲ್ಯ ವಿವಾಹ ನಿಷೇಧ ಕಾಯ್ದೆ: ಬಾಲ್ಯ ವಿವಾಹ ತಡೆಗಾಗಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು 2006ರಲ್ಲಿ ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಪ್ರಕಾರ ಬಾಲ್ಯ ವಿವಾಹಕ್ಕೆ ಮುಂದಾಗುವವವರಿಗೆ ಮತ್ತು ಸಂಬಂಧಪಟ್ಟವರಿಗೆ ಕಠಿನ ಶಿಕ್ಷೆ ವಿಧಿಸಲಾಗುತ್ತದೆ.

ಉಚಿತ ಕಡ್ಡಾಯ ಶಿಕ್ಷಣದ ಹಕ್ಕು: ಪ್ರತಿ ಹೆಣ್ಮಗುವಿಗೆ 14 ವರ್ಷದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ 2009 ಅಡಿಯಲ್ಲಿ, 6 ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ನೆರೆಹೊರೆಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣದ ಹಕ್ಕಿದೆ.

ಮೆಡಿಕಲ್‌ ಟರ್ಮಿನೇಶನ್‌ ಆಫ್ ಪ್ರಗ್ನೆನ್ಸಿ ಆ್ಯಕ್ಟ್ (1971): ಈ ಆ್ಯಕ್ಟ್ ನ ಪ್ರಕಾರ ಹೆಣ್ಣು ಗರ್ಭವತಿಯಿದ್ದಾಗ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದೆ. ವೈದ್ಯಕೀಯ ಮುಕ್ತಾಯದ ಗರ್ಭಧಾರಣೆಯ ಕಾಯ್ದೆ (1971) ಅಥವಾ ಎಂಟಿಪಿಎ ಸೆಕ್ಷನ್‌ 3 (4) (ಬಿ) ಪ್ರಕಾರ ಗರ್ಭಿಣಿ ಮಹಿಳೆಯ ಒಪ್ಪಿಗೆಯೊಂದಿಗೆ ಹೊರತುಪಡಿಸಿ ಯಾವುದೇ ಗರ್ಭಧಾರಣೆಯನ್ನು ಮಾಡಲಾಗುವುದಿಲ್ಲ.

ವರದಕ್ಷಿಣೆ ನಿಷೇಧ ಕಾಯ್ದೆ, 1961: ಸಮಾಜದ ಬಹುದೊಡ್ಡ ಪಿಡುಗಾದ ವರದಕ್ಷಿಣೆ ನಿಷೇಧ ಕಾಯ್ದೆಯನ್ನು 1961ರಲ್ಲಿ ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಪ್ರಕಾರ ಮದುವೆ ಸಂದರ್ಭ ಹೆಣ್ಮುವಿನ ಹೆತ್ತವರಲ್ಲಿ ವರದಕ್ಷಿಣೆ ತೆಗೆದುಕೊಳ್ಳುವುದು ಕಾನೂನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ.

ಹೆಣ್ಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದಲ್ಲಿರುವ ಕೆಲವು ಮಹತ್ವದ ಯೋಜನೆಗಳು
1 ಸುಕನ್ಯಾ ಸಮೃದ್ಧಿ ಯೋಜನೆ
2 ಬೇಟಿ ಬಚಾವೋ, ಬೇಟಿ ಪಡಾವೋ
3 ಬಾಲಿಕಾ ಸಮೃದ್ಧಿ ಯೋಜನಾ
4 ಭಾಗ್ಯಲಕ್ಷ್ಮೀ ಬಾಂಡ್‌ ವಿತರಣೆ
5 ಸಿಬಿಎಸ್‌ಇ ಸ್ಕಾಲರ್‌ಶಿಪ್‌ ಸ್ಕೀಮ್‌
6 ಧನಲಕ್ಷ್ಮೀ ಸ್ಕೀಮ್‌
7 ನ್ಯಾಶನಲ್‌ ಸ್ಕೀಮ್‌ ಆಫ್ ಇನ್ಸೆಂಟಿವ್‌ ಟು ಗರ್ಲ್ಸ್‌ ಫಾರ್‌ ಸೆಕೆಂಡರಿ ಎಜುಕೇಶನ್‌

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.