ಹಳ್ಳ ಅಬ್ಬರಿಸಿದರೆ ಮಕ್ಕಳು ಸೇತುವೆ ದಾಟುವುದು ಕಷ್ಟ

ಕೈಕಂಬ: ನಾಗರಕಟ್ಟೆ ಬಳಿಯ ಕಾಲುಸಂಕವೂ ಕೊಚ್ಚಿ ಹೋಗುವ ಆತಂಕದಲ್ಲಿ ಸ್ಥಳೀಯರು

Team Udayavani, Sep 14, 2019, 5:00 AM IST

es-33

ನಾಗರಕಟ್ಟೆ ಬಳಿ ಹಳ್ಳಕ್ಕೆ ಕಟ್ಟಿರುವ ಕಾಲುಸಂಕ ಆಗಾಗ ಮುಳುಗುತ್ತದೆ.

ಸುಬ್ರಹ್ಮಣ್ಯ: ನಿರಂತರ ಮಳೆಯಿಂದಾಗಿ ಪ್ರತಿ ಮಳೆಗಾಲವೂ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತದೆ. ಇಲ್ಲಿನ ನಾಗರಕಟ್ಟೆ ಹಳ್ಳಕ್ಕೆ ಕಟ್ಟಿರುವ ತಾತ್ಕಾಲಿಕ ಮರದ ಸೇತುವೆ ಮೇಲೆ ನೀರು ಹರಿದು ಮುಳುಗಡೆಯಾಗುತ್ತದೆ. ಮುಳುಗುವ ಭೀತಿ ಜತೆಗೆ ಅಸುರಕ್ಷಿತ ಸೇತುವೆ ಮೇಲೆ ಮಕ್ಕಳು ನಿತ್ಯ ಸರ್ಕಸ್‌ ಮಾಡುತ್ತ ತೆರಳಬೇಕಿದೆ. ಇಲ್ಲಿ ಮಕ್ಕಳು ತೆರಳವಾಗ ಭೀತಿ ಹುಟ್ಟಿಸುತ್ತಿದೆ.

ಬಿಳಿನೆಲೆ ಗ್ರಾಮದ ನಾಗರಕಟ್ಟೆ ಹೊಳೆಗೆ ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಮರದ ಸೇತುವೆ ಶಿಥಿಲಗೊಂಡು ಕುಸಿಯುವ ಭೀತಿಯಲ್ಲಿದೆ. ಕಾಲು ಸಂಕದ ಎರಡು ಬದಿ ಮುಕ್ತವಾಗಿದ್ದು, ಆಧಾರಗಳಿಲ್ಲ. ಎರಡೂ ಬದಿ ಕಂದಕಗಳಿವೆ. ಸಂಕದ ಮಧ್ಯೆ ವಿದ್ಯುತ್‌ ಕಂಬ ಅಳವಡಿಸಿಕೊಳ್ಳಲಾಗಿದೆ. ಸೇತುವೆ ಮೇಲೆ ತೆರಳುವಾಗ ಸುರಕ್ಷತೆ ಇಲ್ಲ. ತಾತ್ಕಾಲಿಕ ಕಾಲು ಸಂಕವೂ ನೆರೆಗೆ ಕೊಚ್ಚಿ ಹೋಗುವ ಹಂತಕ್ಕೆ ತಲುಪಿದ್ದು, ಗಾಣದಗುಂಡಿ, ಬಾಲಡ್ಕ, ಗುಂಡಿಗದ್ದೆ, ಕಾಲಪ್ಪಾಡಿ ಹೊಸೋಕ್ಲು ನಡುತೋಟ ಭಾಗಗಳ ಜನರು ಸಂಕಷ್ಟದಲ್ಲಿದ್ದಾರೆ.

ಹೆಜ್ಜೆಯಿಡಲು ಧೈರ್ಯವಿಲ್ಲ
ಈ ಭಾಗದ ಗ್ರಾಮಸ್ಥರು, ತಮ್ಮ ದೈನಂದಿನ ಬದುಕಿಗಾಗಿ ತಾವೇ ಕಟ್ಟಿಕೊಂಡ ಈ ಮರದ ಸೇತುವೆಯನ್ನೇ ಅವಲಂಬಿಸಿದ್ದಾರೆ. ಆದರೆ ಈ ಮಳೆಗಾಲ ನಾಗರಕಟ್ಟೆ ಹಳ್ಳದ ಪ್ರವಾಹದ ಹೊಡೆತಕ್ಕೆ ಮರದ ಸೇತುವೆ ಮುಳುಗುವ ಮತ್ತು ಕುಸಿಯುವ ಹಂತಕ್ಕೆ ತಲುಪಿದೆ. ಜನ ಆತಂಕದಲ್ಲಿದ್ದಾರೆ. ದುರ್ಬಲ ಮರದ ಸೇತುವೆ ಮೇಲೆ ಭಯದ ಹೆಜ್ಜೆ ಇಡುತ್ತ ತೆರಳುವಾಗ ಭಯ ಹುಟ್ಟುತ್ತದೆ.

60 ಕುಟುಂಬಗಳು
ಕೈಕಂಬದಿಂದ 200 ಮೀ. ದೂರದಲ್ಲಿ ಈ ಸೇತುವೆ ಇರುವುದು. ಸೇತುವೆ ಅವಲಂಬಿತ ಪ್ರದೇಶಗಳ ಒತ್ತೂಟ್ಟಿಗಿರುವ ಹಳ್ಳಿಗಳಲ್ಲಿ 60ಕ್ಕೂ ಅಧಿಕ ಕುಟುಂಬಗಳು ನೆಲೆಸಿವೆ. ಎಲ್ಲ ವರ್ಗದವರು ಇಲ್ಲಿದ್ದಾರೆ. ಕೃಷಿ, ಕೂಲಿಯೇ ಇಲ್ಲಿಯವರ ಜೀವನಾಧಾರ.

ಪುಟ್ಟ ಮಕ್ಕಳು ಕೈಕಂಬ ಪ್ರಾಥಮಿಕ ಶಾಲೆಗೆ ಹೋಗಬೇಕಾದರೆ ಮರದ ಸೇತುವೆ ದಾಟಬೇಕು. ನಾಗರಕಟ್ಟೆ ಬಳಿ ಹಳ್ಳ ಅಬ್ಬರಿಸಿದರೆ ಮಕ್ಕಳು ಸೇತುವೆ ದಾಟುವುದು ಕಷ್ಟ.

ಬೇರೆಡೆಗೆ ಶಾಲಾ ಕಾಲೇಜಿಗೆ ತೆರಳುವವರು, ಕೃಷಿ ಕೂಲಿಗೆಂದು ತೆರಳುವವರು ಸಹ ಈ ಮರದ ಸೇತುವೆ ದಾಟಿಕೊಂಡೆ ಹೋಗಬೇಕು. ನೂರಾರು ವರ್ಷಗಳಿಂದ ಊರಿನ ಜನರೇ ಈ ಮರದ ಸೇತುವೆಯನ್ನು ಶ್ರಮದಾನದ ಮೂಲಕ ನಿರ್ಮಿಸಿಕೊಳ್ಳುತ್ತಿದ್ದಾರೆ. ಯಾವುದೇ ಅನುದಾನಗಳು ಬರುತ್ತಿಲ್ಲ. ಸೇತುವೆ ಬೇಡಿಕೆಗೆ ಸ್ಪಂದನ ಸಿಗದಿರುವ ಕಾರಣ ಅವಲಂಬಿತ ಗ್ರಾಮಸ್ಥರು ಅಕ್ಷರಶಃ ನಲುಗಿಹೋಗಿದ್ದಾರೆ.

ಭಯದ ಬದುಕು
ನಾಗರಕಟ್ಟೆ ಎಂಬ ಗುಡ್ಡಗಾಡು ಹಳ್ಳಿಯ ಜನರನ್ನು ಕಾಡುವ ದೊಡ್ಡ ಸಮಸ್ಯೆ ಎಂದರೆ ಸಂಪರ್ಕ ಸೇತುವೆ. ಇಲ್ಲಿನವರದು ಕಾಡಿನ ಮರೆಯ ಅತ್ಯಂತ ಕಷ್ಟಕರ ಬದುಕು. ವಿದ್ಯುತ್‌, ದೂರವಾಣಿ, ರಸ್ತೆ ಸೌಲಭ್ಯ ಇಲ್ಲ. ಕಾಡಿನ ನಡುವಿನ ಹಾದಿಯೇ ರಹದಾರಿ. ಚುನಾವಣೆ ಬಂದಾಗ ರಾಜಕಾರಣಿಗಳು ನೀಡುವ ಭರವಸೆಗಳು ಅವರೊಂದಿಗೇ ಹೋಗಿರುತ್ತವೆ ಎನ್ನುವುದು ಹಳ್ಳಿಗರ ಆರೋಪ.

ರಸ್ತೆ ಸಿಗಬೇಕಿದ್ದರೆ ಇಲ್ಲಿಯ ಜನ ಕಾಲ್ನಡಿಗೆಯಲ್ಲಿ 10 ನಿಮಿಷ ಸಾಗಬೇಕು. ಈ ಸೇತುವೆ ಸಂಪರ್ಕ ಕಡಿತಗೊಂಡರೆ ನಡುತೋಟ, ಪಿಲಿಕಜೆ ಮೂಲಕ ಕಾಲನಿ ಮಾರ್ಗವಾಗಿ ಕೈಕಂಬ ತಲುಪಬೇಕು. ಇದು ಸುತ್ತು ಬಳಸಿನ ದಾರಿ. ಕಾಡಿನ ನಡುವೆ ದುರ್ಭರ ಬದುಕು ನಡೆಸುತ್ತಿರುವ ಇವರ ಸಂಚಾರಕ್ಕೆ ನಾಗರಕಟ್ಟೆ ಮಾರ್ಗವೇ ಆಸರೆ. ಸೇತುವೆಯೂ ದುರ್ಬಲ ಗೊಂಡಿರುವುದರಿಂದ ಜನರು ಭಯದ ನೆರಳಿನಲ್ಲಿ ಬದುಕು ನಡೆಸುತ್ತಿದ್ದಾರೆ.

ನಮಗೊಂದು ಸೇತುವೆ ಕೊಡಿ
ನಾಗರಕಟ್ಟೆ ಬಳಿ ಹರಿಯುವ ಹಳ್ಳಕ್ಕೆ ಅಡ್ಡಲಾಗಿ ಶಾಶ್ವತ ಸೇತುವೆ ನಿರ್ಮಿಸಿಕೊಡಿ ಎಂಬ ನಮ್ಮ ಬೇಡಿಕೆಯನ್ನು ಯಾರು ಇದುವರೆಗೆ ಪರಿಗಣಿಸಿಲ್ಲ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುವುದರಿಂದ ಮರದ ಕಿರು ಸೇತುವೆ ಮೇಲೆ ಹೆಜ್ಜೆ ಇಡುವುದು ದುಸ್ತರ. ಶಾಲೆಗೆ ಹೋಗುವ ಪುಟ್ಟ ಪುಟ್ಟ ಮಕ್ಕಳ ಜೀವ ಕೈಯಲ್ಲಿ ಹಿಡಿದು ಸಾಗಬೇಕು. ಸಂಬಂಧಿತರು ಗಮನ ಹರಿಸಿ, ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕು. ಹತ್ತಾರು ವರ್ಷಗಳಿಂದ ಸೌಲಭ್ಯ ವಂಚಿತರಾಗಿ ಅತ್ಯಂತ ಸಂಕಷ್ಟದ ಬದುಕು ನಡೆಸುತ್ತಿರುವ ನಮ್ಮೆಡೆಗೆ ಆಡಳಿತ ವ್ಯವಸ್ಥೆ ಕಣ್ಣು ಹಾಯಿಸಬೇಕು.
– ಪ್ರದೀಪ ಕಳಿಗೆ, ಫ‌ಲಾನುಭವಿ

ದೊಡ್ಡ ಮೊತ್ತದ ಅನುದಾನ ಬೇಕು
ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಅಲ್ಲಿಗೆ ಹೆಚ್ಚಿನ ಅನುದಾನದ ಆವಶ್ಯಕತೆ ಇದೆ. ಶಾಸಕರ ಬಳಿ ದೊಡ್ಡ ಮೊತ್ತದ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇವೆ.
– ಶಾರದಾ, ಅಧ್ಯಕ್ಷೆ, ಬಿಳಿನೆಲೆ ಗ್ರಾ.ಪಂ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.