ಶಾಲೆ ಮುಚ್ಚಲು ಸರಕಾರದ ನೀತಿ ಕಾರಣ

ಕಡಬ ತಾ| ಪ್ರಥಮ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಾರಾಯಣ ಭಟ್‌

Team Udayavani, Feb 29, 2020, 4:26 AM IST

sahitya-sammelana

ರಾಮಕುಂಜ: ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ತಾ.ಪಂ. ಸದಸ್ಯೆ ಜಯಂತಿ ಆರ್‌. ಗೌಡ ಚಾಲನೆ ನೀಡಿದರು.

ರಾಮಕುಂಜ (ಪರಮಪೂಜ್ಯ ವಿಶ್ವೇಶತೀರ್ಥ ವೇದಿಕೆ): ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕವಾಗದೆ ಮುಚ್ಚುವ ಭೀತಿ ಎದುರಾಗಿದೆ. ಹಳ್ಳಿಯ ಕನ್ನಡ ಶಾಲೆಗಳಿಗೆ ಸೌಲಭ್ಯಗಳಿಲ್ಲದೆ ಮಕ್ಕಳೇ ಬರುತ್ತಿಲ್ಲ. ಅವೂ ಬಾಗಿಲು ಮುಚ್ಚುವ ಆತಂಕದಲ್ಲಿವೆ. ಈ ಸ್ಥಿತಿಗೆ ಸರಕಾರದ ನೀತಿಗಳೇ ಕಾರಣ. ಮಕ್ಕಳಿಲ್ಲದೆ ಶಿಕ್ಷಕರಿಲ್ಲ, ಶಿಕ್ಷಕರಿಲ್ಲದೆ ಮಕ್ಕಳಿಲ್ಲ ಎನ್ನುವ ಸತ್ಯವನ್ನು ಸರಕಾರ ಹಾಗೂ ಸಮಾಜ ಅರ್ಥ ಮಾಡಿಕೊಂಡು ಕನ್ನಡ ಶಾಲೆಗಳನ್ನು ಉಳಿಸಬೇಕು ಎಂದು ಕಡಬ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಟಿ. ನಾರಾಯಣ ಭಟ್‌ ಮನವಿ ಮಾಡಿದರು.

ರಾಮಕುಂಜದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಮಕುಂಜ ಶತಮಾನ ಕಂಡ ವಿದ್ಯಾಸಂಸ್ಥೆಗಳಿರುವ ಊರು. ವಿದ್ವಾಂಸರ ನೆಲ. ಪೇಜಾವರ ಶ್ರೀ ವಿಶ್ವೇಶತೀರ್ಥರು ರಾಮಕುಂಜಕ್ಕೆ ನೀಡಿದ ಶೈಕ್ಷಣಿಕ ಕೊಡುಗೆ ದೊಡ್ಡ ಸಂಪತ್ತು. ಅವರಿಗೆ ಸಮರ್ಪಿತವಾಗಿರುವ ಈ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ನನ್ನ ಪಾಲಿಗೆ ಸಿಕ್ಕಿದ ದೊಡ್ಡ ಗೌರವ ಎಂದು ಹೇಳಿದರು.

ಗಟ್ಟಿ ಬೇರಿನ ಭಾಷೆ
ಕನ್ನಡ ಭಾಷೆ ಗಟ್ಟಿ ಬೇರುಗಳನ್ನು ಬಿಟ್ಟಿದೆ. ಆದರೆ, ಭಾಷಾ ಶುದ್ಧಿ, ಶೈಲಿ ಕವಲು ಹಾದಿಯಲ್ಲಿದೆ. ಯಕ್ಷಗಾನ ಕರಾವಳಿಯ ಜನರಲ್ಲಿ ಮೌಲ್ಯಗಳನ್ನು ತುಂಬಿದೆ. ತಾಳಮದ್ದಳೆಯನ್ನು ಜನಸಾಮಾನ್ಯರತ್ತ ಒಯ್ಯಬಲ್ಲ ಸಾಹಸ ನಡೆದಲ್ಲಿ ಮುಂದಿನ ತಲೆಮಾರು ನೈತಿಕತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ನಾರಾಯಣ ಭಟ್‌ ಹೇಳಿದರು.

ಕಲಿಕಾ ಮಾಧ್ಯಮ ಯಾವುದೇ ಇರಲಿ, ಕನ್ನಡ ಮರೆಯಲು ಸಾಧ್ಯವಿಲ್ಲ. ಯಶಸ್ಸು ಪಡೆಯಲು ಇಂಗ್ಲಿಷ್‌ ಒಂದೇ ಸಾಲದು. ಸ್ಥಳೀಯ ಭಾಷೆಯ ಮೇಲೂ ಹಿಡಿತ ವಿರಬೇಕು. ಮಕ್ಕಳು ಸುಲಲಿತವಾಗಿ ಹಲವು ಭಾಷೆಗಳನ್ನು ಕಲಿಯುವ ಸಾಮರ್ಥ್ಯ ಹೊಂದಿದ್ದಾರೆ. ಭಾಷಾ ಸಿದ್ಧಿ ನಮಗೆ ವರವಾಗಲಿ. ಪ್ರತಿ ಮನೆಯಲ್ಲೂ ಪುಟ್ಟ ಗ್ರಂಥಾಲಯವಿರಲಿ ಎಂದು ಆಶಿಸಿದರು.

ಮುಖಪುಟ ಬರೆದ ಬಿಇಒ!
ಶಾಲೆಯಲ್ಲಿ ಅದ್ಭುತ ಕಲ್ಪನೆಗಳು ಸಾಕಾರಗೊಂಡಿವೆ. ಅವುಗಳನ್ನು ನೀವೇಕೆ ಕೃತಿ ರೂಪದಲ್ಲಿ ಇಳಿಸಬಾರದು ಎಂದು ಚೆನ್ನೈಯ ಶಿಕ್ಷಣ ಪ್ರೇಮಿ ಜಗದೀಶ ಅಡಪ ಪ್ರಶ್ನಿಸಿದರು. ವಿ.ಬಿ. ಅರ್ತಿಕಜೆಯವರೂ ಪ್ರೋತ್ಸಾಹ ನೀಡಿದ್ದರಿಂದ “ಉತ್ತಮ ಶಾಲೆಗೊಂದು ಮಾರ್ಗದರ್ಶಿ’ ಕೃತಿ ಹೊರಬಂತು. ಈ ಪುಸ್ತಕದ ಸುಮಾರು 25 ಸಾವಿರ ಪ್ರತಿಗಳು ಮಾರಾಟವಾದವು. ಅಂದಿನ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್‌ ಜಿ.ಎಸ್‌. ಅವರೇ ಅದಕ್ಕೆ ಮುಖಪುಟ ರಚಿಸಿದ್ದರು. “ನಮ್ಮ ಮಕ್ಕಳಿಗೇನು ಕಲಿಸ್ಬೇಕು’ ಕೃತಿಯ ಸುಮಾರು 40 ಸಾವಿರ ಪ್ರತಿಗಳು ಓದುಗರ ಕೈ ಸೇರಿವೆ. ಉಪನಯನ, ಮದುವೆ, ಶಾಲಾ- ಕಾಲೇಜುಗಳ ಕಾರ್ಯ ಕ್ರಮಗಳಲ್ಲಿ ಪುಸ್ತಕಗಳ ಕೊಡುಗೆ ನೀಡುವ ಪದ್ಧತಿ ಬೆಳೆಯಬೇಕು. ಈ ಮೂಲಕ ಸಾಹಿತ್ಯ ಸಮ್ಮೇಳನಗಳ ಆಶಯ ಈಡೇರಬೇಕು ಎಂದು ಹೇಳಿದರು.

ಇಂದು ಪುಸ್ತಕ ಓದುವವರಿಲ್ಲ ಎಂಬ ಟೀಕೆ ಇದೆ. ಐಸ್‌ಕ್ರೀಂ ಗಾಡಿಯ ಹತ್ತಿರ ಹೋದಂತೆ ಪುಸ್ತಕದ ಅಂಗಡಿಗೆ ಯಾರೂ ಹೋಗಲಾರರು. ಇದನ್ನರಿತ ಪುತ್ತೂರು ಜ್ಞಾನಗಂಗಾ ಪುಸ್ತಕ ಮಳಿಗೆಯ ಪ್ರಕಾಶ್‌ ಕೊಡಂಕೀರಿ, ಜನರ ಬಳಿಗೇ ಪುಸ್ತಕಗಳನ್ನು ಹೊತ್ತು ಮಾರುವ ಸಂಚಾರಿ ಪುಸ್ತಕ ಪರಿಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಪುತ್ತೂರು ತಾಲೂಕು ಕಸಾಪ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ ಅವರು ಸಾಹಿತಿ ಅಲ್ಲದಿದ್ದರೂ ಸಾಹಿತ್ಯ ಪರಿಚಾರಕರು. ಈ ಪರಿಸರದ ಲೇಖಕರ ಕೃತಿಗಳನ್ನು ವಿನ್ಯಾಸ ಮಾಡಿ ಕೊಡುವ ಜಯಲಕ್ಷ್ಮೀ ಅವರ ಸೇವೆಯೂ ಅನನ್ಯ ಎಂದು ಶ್ಲಾಘಿಸಿದರು.

ಸಮಾಜವನ್ನು ಸದೃಢವಾಗಿ ಕಟ್ಟಬೇಕಿದ್ದರೆ ವೈದ್ಯ, ಎಂಜಿನಿಯರ್‌, ಧಾರ್ಮಿಕ ನೇತಾರ, ಚಾಲಕ, ಪ್ಲಂಬರ್‌, ಕೃಷಿಕ, ಕೂಲಿಕಾರ್ಮಿಕ ಹೀಗೆ ಎಲ್ಲ ವರ್ಗದ ಜನರಿರಬೇಕು. ಸಾಹಿತ್ಯದಲ್ಲೂ ವಿದ್ವತೂ³ರ್ಣ ಕೃತಿಗಳ ಜತೆಗೆ ಜನಸಾಮಾನ್ಯರು ಓದುವಂತಹ ಪುಸ್ತಕಗಳೂ ಬೇಕು. ಎಲ್ಲೆಲ್ಲೂ ಸ್ಟಾರ್‌ ಹೊಟೇಲ್‌ಗ‌ಳೇ ತುಂಬಿದ್ದರೆ ಸಾಮಾನ್ಯರ ಗತಿಯೇನು?ಎಂದು ಪ್ರಶ್ನಿಸಿದರು.

ಭಾವನಾತ್ಮಕ ನಂಟು
ಪುತ್ತೂರಿನ ಸಾಹಿತ್ಯ ಎಂದರೆ ನೆನಪಾಗುವುದು ಬಾಲವನ ಹಾಗೂ ಡಾ| ಶಿವರಾಮ ಕಾರಂತರು. ಪುತ್ತೂರಿನ ಅವಿಭಾಜ್ಯ ಅಂಗದಂತಿದ್ದ ಕಡಬ ಪುತ್ತೂರಿನಿಂದ ಕಂದಾಯ ಕ್ಷೇತ್ರದ ದೃಷ್ಟಿಯಿಂದ ಬೇರ್ಪಟ್ಟಿರಬಹುದು. ಆದರೆ ಪುತ್ತೂರಿನ ಭಾವನಾತ್ಮಕ ನಂಟು ಬಿಡಲು ಸಾಧ್ಯವಿಲ್ಲ. ಕಡಬ ತಾಲೂಕಿನ ಆಶಾಕಿರಣ ಸುಬ್ರಹ್ಮಣ್ಯ ಕ್ಷೇತ್ರದ ಸೇರ್ಪಡೆ. ಶಾಂತಿ ಮೊಗರು ಸೇತುವೆ ಸವಣೂರು, ಕಾಣಿ ಯೂರನ್ನು ಹತ್ತಿರಕ್ಕೆ ತಂದಿದೆ ಎಂದು ಟಿ. ನಾರಾಯಣ ಭಟ್‌ ಹೇಳಿದರು.

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.