ಕಲ್ಮಕಾರು ಶೆಟ್ಟಿಕಟ್ಟ: ಬಿದಿರು ಸಂಕವೇ ಆಧಾರ

ಮಳೆಗಾಲದಲ್ಲಿ ಮಕ್ಕಳು ಅಪಾಯಕಾರಿಯಾಗಿ ಹೊಳೆ ದಾಟಬೇಕು

Team Udayavani, Jun 20, 2019, 5:00 AM IST

d-20

ಸುಬ್ರಹ್ಮಣ್ಯ: ಮಳೆಗಾಲ ಆರಂಭವಾಯಿತೆಂದರೆ ಇಲ್ಲಿಯವರಿಗೆ ಸಂಕಷ್ಟದ ಸರಮಾಲೆ ಶುರುವಿಟ್ಟು ಕೊಳ್ಳುತ್ತದೆ. ಮಕ್ಕಳಿಗೆ ಹೊಳೆ ದಾಟುವ ಚಿಂತೆ. ಹೆತ್ತವರಿಗೆ ಮಕ್ಕಳ ಪ್ರಾಣದ ಭೀತಿ. ಅಲುಗಾಡುತ್ತಿರುವ ಬಿದಿರಿನ ತೂಗು ಸೇತುವೆಯ ಮೇಲೆ ಸರ್ಕಸ್‌ ಮಾಡುತ್ತ ತೆರಳಬೇಕಾದ ಸ್ಥಿತಿ ಕಲ್ಮಕಾರು ಗ್ರಾಮದ ಶೆಟ್ಟಿಕಟ್ಟ ನಿವಾಸಿಗಳದು.

ಕಲ್ಮಕಾರು ಗ್ರಾಮದಿಂದ ಅಂಜನಕಜೆ ಕೊಪ್ಪಡ್ಕ ಗುಳಿಕಾನ ಗುಡ್ಡೆಕಾನ ಪೆರ್ಮುಕಜೆ ಪ್ರದೇಶಗಳನ್ನು ತಲುಪಲು ಶೆಟ್ಟಿಕಜೆ ಎನ್ನುವಲ್ಲಿ ಹರಿಯುವ ಹೊಳೆಗೆ ಸೇತುವೆ ನಿರ್ಮಿಸಬೇಕಿದೆ. ಮಳೆಗಾಲದಲ್ಲಿ ಈ ಹೊಳೆ ನೆರೆಯಿಂದ ತುಂಬಿ ಹರಿದು ಸ್ಥಳೀಯರ ಸಂಚಾರಕ್ಕೆ ಅಡಚಣೆ ಯಾಗುತ್ತಿದೆ. ಕಲ್ಮಕಾರು ಅಂಗನವಾಡಿ, ಪ್ರಾಥಮಿಕ ಶಾಲೆ, ಇತರೆಡೆಯ ಶಾಲೆ, ಕಾಲೇಜುಗಳಿಗೆ ತೆರಳುವ ಮಕ್ಕಳು ಹೊಳೆ ದಾಟಿಯೇ ಬರಬೇಕು.

ಬಿದಿರಿನ ತೂಗು ಸೇತುವೆ
ಮಳೆಗಾಲದ ವೇಳೆ ಸ್ಥಳೀಯರು ತಾತ್ಕಾಲಿಕ ಬಿದಿರಿನ ತೂಗುಸೇತುವೆ ನಿರ್ಮಿಸಿಕೊಳ್ಳುತ್ತಾರೆ. ಈ ಬಾರಿ ಮರದ ಸೇತುವೆ ನಿರ್ಮಿಸಲು ನಿವಾಸಿಗಳು ಸಿದ್ಧರಾಗುತ್ತಿದ್ದಾರೆ. ಪ್ರತಿ ಮಳೆಗಾಲದಲ್ಲೂ ತುಂಬಿ ಹರಿಯುವ ಹೊಳೆಯನ್ನು ಅಲುಗಾಡುವ ತೂಗು ಸೇತುವೆಯಲ್ಲಿ ಪುಟ್ಟ ಮಕ್ಕಳು ದಾಟುವಾಗ ಭಯವಾಗುತ್ತದೆ.

ಹೆತ್ತವರು ಪ್ರತಿದಿನ ತಮ್ಮ ಮಕ್ಕಳನ್ನು ಬೆಳಗ್ಗೆ ಸೇತುವೆ ದಾಟಿಸಿ ಕಳುಹಿಸುತ್ತಾರೆ. ಸಂಜೆ ಶಾಲೆ ಬಿಡುವ ಹೊತ್ತಿಗೆ ಮತ್ತೆ ಹೊಳೆ ಬದಿಯಲ್ಲಿ ಬಂದು ನಿಲ್ಲುತ್ತಾರೆ. ಅವರ ಛತ್ರಿ, ಚೀಲಗಳನ್ನು ಪಡೆದು, ಕೈಹಿಡಿದು ಸಂಕವನ್ನು ದಾಟಿಸುತ್ತಾರೆ. ಕಲ್ಮಕಾರು ಶಾಲೆಗೆ ಇರುವಷ್ಟೇ ಇತಿಹಾಸ ಈ ಸಂಕಕ್ಕೂ ಇದೆ. ಇಲ್ಲಿ ತಾತ್ಕಾಲಿಕ ತೂಗುಸೇತುವೆ ನಿರ್ಮಾಣಕ್ಕೂ ಮೊದಲು ಮಕ್ಕಳು ನೆರೆ ನೀರಿನ ಪ್ರಮಾಣದ ಅಂದಾಜಿಲ್ಲದೆ ದಾಟುವ ಪ್ರಯತ್ನ ನಡೆಸಿ ಅಪಾಯಕ್ಕೆ ಸಿಲುಕಿದ ಘಟನೆಗಳು ಸಂಭವಿಸಿದ್ದುಂಟು.

ಹಲವು ಕುಟುಂಬಗಳು ಇಲ್ಲಿವೆ
ಕಲ್ಮಕಾರು – ಅಂಜನಕಜೆ, ಕೊಪ್ಪಡ್ಕ, ಗುಳಿಕಾನ, ಗುಡ್ಡೆಕಾನ, ಪೆರ್ಮುಕಜೆ ಮಧ್ಯೆ ಸಂಪರ್ಕ ಸಾಧಿಸುವ ಈ ಪ್ರದೇಶದಲ್ಲಿ 40ಕ್ಕೂ ಅಧಿಕ ಮನೆಗಳಿವೆ. ಪರಿಶಿಷ್ಟ ಜಾತಿ, ಪಂಗಡಗಳ ಕುಟುಂಬಗಳು ಇಲ್ಲಿವೆ. ಮಲೆಕುಡಿಯ ನಿವಾಸಿಗಳು ಇಲ್ಲಿದ್ದಾರೆ.

ಪಡಿತರ, ಆಹಾರ ಸಾಮಗ್ರಿ, ಅನಾರೋಗ್ಯ ಸಂದರ್ಭದಲ್ಲಿ ಚಿಕಿತ್ಸೆ ಇತ್ಯಾದಿಗಳಿಗೆ ಸೇತುವೆ ಆಶ್ರಯಿಸಿ ತೆರಳಬೇಕು. ಅನಾರೋಗ್ಯ ಪೀಡಿತರನ್ನು ಈ ಸೇತುವೆ ಮೇಲೆ ಕಂಬಳಿಯಲ್ಲಿ ಹೊತ್ತೂಯ್ಯಬೇಕು.
ಪರ್ಯಾಯ ರಸ್ತೆಯಿದ್ದರೂ ಅದಕ್ಕಾಗಿ ಸುತ್ತು ಬಳಸಿ ತೆರಳಬೇಕು. ಅಲ್ಲಿಯೂ ಹೊಳೆ ಸಿಗುತ್ತದೆ. ಅದು ನೆರೆಗೆ ತುಂಬಿ ಹರಿಯುವುದರಿಂದ ಆ ರಸ್ತೆಯೂ ಮಳೆಗಾಲದಲ್ಲಿ ಪ್ರಯೋಜನಕ್ಕೆ ಬರುವು ದಿಲ್ಲ. ಕುಟುಂಬಗಳು ವಾಸವಿರುವ ಈ ಪ್ರದೇಶದ ಸುತ್ತ ಹೊಳೆ ಹರಿಯುತ್ತಿ ರುವುದರಿಂದ ಈ ಊರು ದ್ವೀಪದಂತಿದೆ.

ಸಮಸ್ಯೆ ಪರಿಹಾರವಾಗಿಲ್ಲ
ಜ್ವಲಂತ ಸಮಸ್ಯೆ ಕುರಿತು ಸ್ಥಳೀಯರು ಸಚಿವರು, ಸಂಸದರು, ಶಾಸಕರು ಸಹಿತ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿ ಹೀಗೆ ಎಲ್ಲರ ಗಮನಕ್ಕೆ ತಂದಿದ್ದರೂ ಪ್ರಯೋಜನ ಶೂನ್ಯ. ಗ್ರಾಮ ಸಭೆಗಳಲ್ಲೂ ಚರ್ಚೆ ನಡೆದರೂ ಪರಿಹಾರ ಕಂಡಿಲ್ಲ. ಇಲ್ಲಿರುವ ತಾತ್ಕಾಲಿಕ ಸೇತುವೆಯೂ ಕೈ ಕೊಟ್ಟರೆ ತ್ರಿಶಂಕು ಸ್ಥಿತಿ. ಮಕ್ಕಳಿಗೆ ಶಾಲೆಗೆ ತೆರಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕೆಲವು ಹೆತ್ತವರು ಈ ಸಂಕಷ್ಟ ಬೇಡಪ್ಪ ಅಂತ ತಮ್ಮ ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ, ಹಾಸ್ಟೆಲ್‌ಗ‌ಳಲ್ಲಿ ಬಿಡುತ್ತಿದ್ದಾರೆ.

ತಹಶೀಲ್ದಾರ್‌ ಪ್ರಯತ್ನ
ಇಲ್ಲಿ ಶಾಶ್ವತವಾಗಿ ಸೇತುವೆ ಯೊಂದನ್ನು ನಿರ್ಮಿಸುವಂತೆ 40 ವರ್ಷ ಗಳಿಂದ ಬೇಡಿಕೆ ಇದೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಈ ಭಾಗದ ನಾಗರಿಕರು ಚುನಾವಣೆ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದರು. ಈ ವೇಳೆ ಸುಳ್ಯ ತಹಶೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡಿ, ನಿವಾಸಿಗಳ ಸಮಸ್ಯೆ ಅರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜತೆಗೆ ನಾಗರಿಕರ ಸಮ್ಮುಖ ಸಭೆ ನಡೆಸಿದ್ದರು. ಆದರೆ ಇಲ್ಲಿ ಸೇತುವೆ ನಿರ್ಮಿಸಲು ಬೃಹತ್‌ ಮೊತ್ತದ ಅನುದಾನದ ಆವಶ್ಯಕತೆ ಇರುವುದನ್ನು ಅಧಿಕಾರಿಗಳು ತಿಳಿಸಿದ್ದರು.

ನಿಯೋಗ ತೆರಳುತ್ತೇವೆ
ಮಳೆಗಾಲದಲ್ಲಿ ತಾತ್ಕಾಲಿಕ ಬಿದಿರು ಸೇತುವೆ ನಿರ್ಮಿಸಲು ಪಂಚಾಯತ್‌ ವತಿಯಿಂದ ಹಣ ಒದಗಿಸುತ್ತಿದ್ದೇವೆ. ಶಾಶ್ವತ ಪರಿಹಾರದ ಆವಶ್ಯಕತೆ ಇದೆ. ಇದಕ್ಕೆ ಹೆಚ್ಚಿನ ಅನುದಾನ ಬೇಕಿದೆ. ಶೀಘ್ರ ನಿಯೋಗದ ಮೂಲಕ ಶಾಸಕ, ಸಂಸದರನ್ನು ಭೇಟಿಯಾಗಿ ಸೇತುವೆ ನಿರ್ಮಾಣಕ್ಕೆ ಅನುದಾನ ತರುವ ಪ್ರಯತ್ನ ನಡೆಸುತ್ತೇವೆ.
– ವೀಣಾನಂದ , ಅಧ್ಯಕ್ಷರು, ಕೊಲ್ಲಮೊಗ್ರು ಗ್ರಾ.ಪಂ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.