ಕಲ್ಮಡ್ಕ – ದೊಡ್ಡತೋಟ ರಸ್ತೆಗಿಲ್ಲ ಬಸ್‌ ಭಾಗ್ಯ


Team Udayavani, Jun 22, 2019, 5:00 AM IST

Udayavani Kannada Newspaper

ಬೆಳ್ಳಾರೆ: ಬೆಳ್ಳಾರೆಯಿಂದ ನಿಂತಿಕಲ್ಲು ಮುಖ್ಯ ರಸ್ತೆಯ ಪಾಜಪಳ್ಳದಿಂದ ಕಲ್ಮಡ್ಕ ಗ್ರಾಮದ ಮೂಲಕ ಅಮರ ಮುಟ್ನೂರು, ದೊಡ್ಡತೋಟ ಮೂಲಕ ಹಾದು ಹೋಗಿ ಸುಳ್ಯಕ್ಕೆ ಸುಲಭವಾಗಿ ತಲುಪಬಹುದಾದ ರಸ್ತೆಯಲ್ಲಿ ಕಲ್ಮಡ್ಕದಿಂದ ಸುಳ್ಯಕ್ಕೆ ಬಸ್‌ ಸೌಲಭ್ಯವಿಲ್ಲದೆ ನಾಗರಿಕರು ತೊಂದರೆ ಅನುಭವಿಸುವಂತಾಗಿದೆ.

ಈ ರಸ್ತೆ ಕುಕ್ಕುಜಡ್ಕ ಮೂಲಕ ಸುಳ್ಯಕ್ಕೆ ಹಾದು ಹೋಗುವ ಮುಖ್ಯ ರಸ್ತೆಯನ್ನು ಸಂಪರ್ಕಿಸುತ್ತದೆ. ಸುಳ್ಯ ಮತ್ತು ಪುತ್ತೂರು ಬಸ್‌ ಡಿಪೋದಿಂದ 9 ಬಸ್‌ಗಳು ಕಲ್ಮಡ್ಕದ ವರೆಗೆ ಬರುತ್ತಿವೆ. ಅಯ್ಯನಕಟ್ಟೆ ಕಳಂಜ ಮಾರ್ಗವಾಗಿಯೂ ಕುಕ್ಕುಜಡ್ಕ ಅಮರ ಪಟ್ನೂರುಗೆ ಕೆಲವು ಬಸ್ಸುಗಳಿವೆ. ಆದರೆ ಕಲ್ಮಡ್ಕದಿಂದ ಕುಕ್ಕುಜಡ್ಕ ಮಾರ್ಗವಾಗಿ ಹಾದು ಹೋಗುವ ರಸ್ತೆಯಲ್ಲಿ ಯಾವುದೇ ಬಸ್‌ಗಳ ಸೌಲಭ್ಯ ಇಲ್ಲ. ಕಲ್ಮಡ್ಕದಿಂದ ಮುಂದೆ ಮತ್ತಿಗುಡ್ಡೆ, ಹಾಸನಡ್ಕ, ಉರುಂಬಿ ಮುಂತಾದ ಊರುಗಳು ಸಿಗುತ್ತವೆ. ಆ ಊರಿನ ಜನ ಸರಕಾರಿ ಬಸ್‌ ನೋಡಬೇಕಾದರೆ 5 ಕಿ.ಮೀ. ದೂರ ನಡೆದು ಬರಬೇಕು. ಈ ರಸ್ತೆಯಲ್ಲಿ ಯಾವುದೇ ಖಾಸಗಿ ಸರ್ವೀಸ್‌ ಬಸ್‌, ಟೆಂಪೋಗಳೂ ಓಡಾಡುವುದಿಲ್ಲ.

ಕಲ್ಮಡ್ಕ ಅಮರ ಮುಟ್ನೂರು, ಮುಪ್ಪೇರ್ಯ ಗ್ರಾಮಗಳನ್ನು ಒಳಗೊಂಡ ನೂರಾರು ಜನರು ನಿತ್ಯ ಓಡಾಟ ನಡೆಸುವ ಈ ರಸ್ತೆ ಸರಕಾರಿ ಬಸ್‌ ಸೌಕರ್ಯದಿಂದ ವಂಚಿತವಾಗಿದೆ. ಕಲ್ಮಡ್ಕದ ಜನರಿಗೆ ತಾಲೂಕು ಕೇಂದ್ರವಾದ ಸುಳ್ಯಕ್ಕೆ ಹೋಗಬೇಕಾದರೆ ಪಾಜಪಳ್ಳ ಮೂಲಕ ಬೆಳ್ಳಾರೆಗೆ ಬರಬೇಕು. ಸುಳ್ಯದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳು ಸಹಿತ ತಾಲೂಕು ಕಚೇರಿ ಗಳಿವೆ. ನ್ಯಾಯಲಯ ಮಾತ್ರವಲ್ಲದೆ ಇನ್ನೂ ಅನೇಕ ಸರಕಾರಿ ಖಾಸಗಿ ಸಂಸ್ಥೆಗಳು ಇವೆ. ನೂರಾರು ವಿದ್ಯಾರ್ಥಿಗಳು ಬಸ್‌ ಪಾಸ್‌ ಮಾಡಿಸಿಕೊಂಡರೂ ಬಸ್‌ ಇಲ್ಲದೆ ಪ್ರಯೋಜನವಿಲ್ಲ. ಶಾಲಾ ಕಾಲೇಜಿಗೆ ಸುಲಭವಾಗಿ ತಲುಪಬಹುದಾದ ದಾರಿ ಇದ್ದರೂ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಮನವಿಗೆ ಸಿಕ್ಕಿಲ್ಲ ಸ್ಪಂದನೆ
ಈ ರಸ್ತೆಯ ಮೂಲಕ ಸರಕಾರಿ ಬಸ್‌ ಸೌಲಭ್ಯಕ್ಕಾಗಿ ಹಲವು ಬಾರಿ ಶಾಸಕರಿಗೆ ಹಾಗೂ ಸಂಬಂಧ ಪಟ್ಟವರಿಗೆ ಮನವಿ ಮಾಡುತ್ತಲೇ ಬಂದಿದ್ದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಇಲ್ಲಿನ ನಾಗರಿಕರು.

ವಿದ್ಯಾಥಿಗಳಿಗೆ ಅನುಕೂಲ

ಕಲ್ಮಡ್ಕದಿಂದ ಸುಳ್ಯಕ್ಕೆ ಬಸ್‌ ಸಂಪರ್ಕವಿದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು. ಈಗ ವಿದ್ಯಾರ್ಥಿಗಳು ಸುತ್ತು ಬಳಸಿ ಸುಳ್ಯ ತಲುಪಬೇಕಾಗಿದ್ದು, ಬಸ್‌ ಸೌಲಭ್ಯವಾದರೆ ವಿದ್ಯಾರ್ಥಿಗಳಿಗೆ ಸಮಯದ ಸದುಪಯೋಗವಾಗುತ್ತಿತ್ತು.

– ಜಯಗಣೇಶ, ವಿದ್ಯಾರ್ಥಿ

ಮನವಿ ಬಂದಿಲ್ಲ

ಡಿಪೋಗೆ ಮನವಿ ಬಂದಿಲ್ಲ. ಮನವಿ ಬಂದಲ್ಲಿ ಪರಿಶೀಲಿಸಿ ವಿಭಾಗೀಯ ಕಚೇರಿಗೆ ತಲುಪಿಸುತ್ತೇವೆ. ಇದು ಹೊಸ ರೂಟ್ ಆದ ಕಾರಣ ಬೇಡಿಕೆಯ ಬಗ್ಗೆ ಪರಿಶೀಲಿಸಬೇಕಿದೆ. – ಸುಂದರ್‌ರಾಜ್‌ ಕೆಎಸ್ಸಾರ್ಟಿಸಿ ಡಿಪೋ ಮ್ಯಾನೇಜರ್‌, ಸುಳ್ಯ

ಬಸ್‌ ಓಡಾಟ ಆರಂಭಿಸಿ

ಸಮರ್ಪಕವಾದ ರಸ್ತೆ ಇದ್ದರೂ ಇಲ್ಲಿ ಬಸ್‌ ಓಡಾಟವಿಲ್ಲ. ದಿನದಲ್ಲಿ ಬೆಳಿಗ್ಗೆ,ಮಧ್ಯಾಹ್ನ,ಸಂಜೆಯಾದರೂ ಮೂರು ಬಾರಿ ಸರಕಾರಿ ಬಸ್‌ ಬಂದರೆ ಸುಳ್ಯಕ್ಕೆ ಸುಲಭವಾಗಿ ತಲುಪಬಹುದು. – ಭಾಸ್ಕರ ಕಲ್ಮಡ್ಕ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.