ನರೇಗಾದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ: ಸುಳ್ಯ ಮುಂದು

ಮೂರು ವರ್ಷಗಳಲ್ಲಿ ದ.ಕ. ಜಿಲ್ಲೆಯಲ್ಲಿ 376 ಕಿಂಡಿ ಅಣೆಕಟ್ಟು

Team Udayavani, Jan 31, 2020, 6:10 AM IST

youth-47

ಸುಳ್ಯ: ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಮೂರು ವರ್ಷಗಳಲ್ಲಿ 99 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನದಲ್ಲಿದೆ!

2016-17ರ ಅವಧಿಯಲ್ಲಿ ಆರಂಭ
ಗೊಂಡ ಈ ಯೋಜನೆ ಜಿಲ್ಲೆಯ ಐದೂ ತಾಲೂಕುಗಳಲ್ಲಿ ಪ್ರಗತಿಯಲ್ಲಿದೆ. ಅಂರ್ತಜಲ ಹೆಚ್ಚಿಸುವ ನಿಟ್ಟಿನಲ್ಲಿ ವರ್ಷದಿಂದ ವರ್ಷಕ್ಕೆ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಹೆಚ್ಚುತ್ತಿರುವುದು ಸಕಾರಾತ್ಮಕ ಬೆಳವಣಿಗೆ.

376 ಪೂರ್ಣ
ನರೇಗಾದ ಅನುದಾನ ಪೈಕಿ ಶೇ. 65ರಷ್ಟನ್ನು ಜಲಸಂರಕ್ಷಣೆಗೆ ಬಳಸಬೇಕು ಎಂದು 2016-17ರಲ್ಲಿ ಜಿ.ಪಂ.ನಲ್ಲಿ ಯೋಜನೆ ರೂಪಿಸಿ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ 5 ಕಿಂಡಿ ಅಣೆಕಟ್ಟು ನಿರ್ಮಾಣದ ಗುರಿ ನೀಡಲಾಗಿತ್ತು. ಪ್ರತಿ ಅಣೆಕಟ್ಟಿಗೆ ಗರಿಷ್ಠ 5 ಲಕ್ಷ ರೂ. ಅನುದಾನ ನಿಗದಿಪಡಿಸಲಾಗಿತ್ತು. ಜಿಲ್ಲೆಯಲ್ಲಿ 1,048 ಅಣೆಕಟ್ಟುಗಳ ಗುರಿ ಇದ್ದು, 456 ಕಡೆ ಕಾಮಗಾರಿ ಆರಂಭಗೊಂಡಿದೆ; 376 ಪೂರ್ಣಗೊಂಡು ನೀರು ಸಂಗ್ರಹಿಸಲಾಗಿದೆ.

ಸುಳ್ಯ ಟಾಪರ್‌
ಸುಳ್ಯ ಗುರಿಯಲ್ಲಿ ಗರಿಷ್ಠ ಪ್ರಗತಿ ಸಾಧಿಸಿದೆ. 140ರ ಪೈಕಿ 101ರ ಕಾಮಗಾರಿ ಆರಂಭಗೊಂಡು, 99 ಪೂರ್ಣಗೊಂಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ 240 ಗುರಿಯಲ್ಲಿ 107 ಕಾಮಗಾರಿ ಪ್ರಾರಂಭಗೊಂಡು, 85 ಸಂಪೂರ್ಣಗೊಂಡಿವೆ. ಪುತ್ತೂರು ತಾಲೂಕಿನಲ್ಲಿ 205ರಲ್ಲಿ 78 ಪೂರ್ಣಗೊಂಡಿವೆ. ಬಂಟ್ವಾಳ ತಾಲೂಕಿನಲ್ಲಿ 267ರಲ್ಲಿ 69 ಪೂರ್ಣಗೊಂಡಿವೆ. ಮಂಗಳೂರಿ ನಲ್ಲಿ 196ರಲ್ಲಿ 48 ಕಾಮಗಾರಿ ಆರಂಭಗೊಂಡು 37 ಪೂರ್ಣಗೊಂಡಿವೆ.

13.87 ಕೋ.ರೂ. ಬಳಕೆ
ಐದು ತಾಲೂಕಿನಲ್ಲಿ ಒಟ್ಟು 13.87 ಕೋ.ರೂ. ಅನುದಾನ ಖರ್ಚು ಮಾಡಲಾಗಿದೆ. ಸುಳ್ಯದಲ್ಲಿ 341.55 ಲ.ರೂ., ಬೆಳ್ತಂಗಡಿಯಲ್ಲಿ 280.06 ಲ.ರೂ., ಪುತ್ತೂರಿನಲ್ಲಿ 295.40 ಲ.ರೂ., ಬಂಟ್ವಾಳದಲ್ಲಿ 280.10 ಲ.ರೂ., ಮಂಗಳೂರಿನಲ್ಲಿ 147.63 ಲ.ರೂ. ಅನುದಾನ ಖರ್ಚು ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 171747 ಮಾನವ ದಿನಗಳ ಶ್ರಮ ಬಳಕೆ ಆಗಿದೆ.

ದ.ಕ. ಜಿ.ಪಂನಲ್ಲಿ ಡಾ| ಎಂ.ಆರ್‌. ರವಿ ಅವರು ಮುಖ್ಯ ಕಾರ್ಯನಿರ್ವಾಹಕರಾಗಿದ್ದ ಸಂದರ್ಭ ಜಲಸಂರಕ್ಷಣೆಗಾಗಿ ನರೇಗಾದಲ್ಲಿ ಹೆಚ್ಚಿನ ಮೊತ್ತವನ್ನು ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬಳಸಲು ಉದ್ದೇಶಿಸಲಾಗಿತ್ತು. ಸುಳ್ಯಕ್ಕೆ 140 ಗುರಿ ನೀಡಿದ್ದು, ಮೂರು ವರ್ಷದಲ್ಲಿ 99 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗಿದೆ.
– ಭವಾನಿಶಂಕರ ಎನ್‌. ಇಒ, ಸುಳ್ಯ ತಾ.ಪಂ.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.