ಕೋಡಿಂಬಾಳ: ಕೋರಿಯಾರ್‌ನಲ್ಲಿ ಮರಳು ದಂಧೆ

ಸುಬ್ರಹ್ಮಣ್ಯ ಪೊಲೀಸರಿಂದ ಕಾರ್ಯಾಚರಣೆ; ಲಾರಿ ವಶ

Team Udayavani, Jun 12, 2019, 10:44 AM IST

1106kdb7

ಕಡಬ: ಕುಮಾರಧಾರಾ ಹೊಳೆಯಿಂದ ಬಳ್ಪ ಗ್ರಾಮದ ಕೇನ್ಯ ಭಾಗದಲ್ಲಿ ಮರಳು ತೆಗೆದು ಕೋಡಿಂಬಾಳದ ಕೋರಿಯಾರ್‌ ಮೂಲಕ ರಾಜಾರೋಷವಾಗಿ ಅಕ್ರಮ ಮರಳು ದಂಧೆಕೋರರು ಮರಳು ಸಾಗಾಟ ನಡೆಸುತ್ತಿದ್ದರೂ ಯಾವುದೇ ಇಲಾಖೆಗಳೂ ಅಕ್ರಮ ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲ ದಿನಗಳ ಹಿಂದೆ ಅಕ್ರಮ ಮರಳುಗಾರಿಕೆಯ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿದ್ದ ಅಕ್ರಮ ಮರಳು ದಂಧೆಕೋರರು ಆ ಬಳಿಕವೂ ಯಾವುದೇ ತೊಡಕಿಲ್ಲದೆ ತಮ್ಮ ದಂಧೆಯನ್ನು ಮುಂದುವರಿಸಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಸುದ್ದಿ ತಿಳಿದ ಪತ್ರಕರ್ತರು ಸ್ಥಳಕ್ಕೆ ತೆರಳಿ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇನ್ಯದಲ್ಲಿ ಮರಳು ತೆಗೆಯಲು ಪಿಡಬುÉ Âಡಿ ಮೂಲಕ ಅನುಮತಿ ಪಡೆದುಕೊಂಡ ಗುತ್ತಿಗೆದಾರರ 1 ಲಾರಿಯನ್ನು ಸಾಗಾಟ ಅನುಮತಿ ಪತ್ರ ಇರಿಸಿಕೊಂಡಿಲ್ಲದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆದರೆ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ನಿರಂತರವಾಗಿ ಮರಳು ಸಾಗಾಟ ಮಾಡುತ್ತಿರುವವರು ಮಾತ್ರ ಯಾವ ಇಲಾಖೆಯವರಿಗೂ ಸಿಕ್ಕಿ ಬೀಳದಿರುವುದು ಸೋಜಿಗದ ಸಂಗತಿಯಾಗಿದೆ.

ಕಾರ್ಯಾಚರಣೆಯ ಬಳಿಕ ಪೊಲೀಸರು ಮತ್ತು ಪತ್ರಕರ್ತರು ಸ್ಥಳದಿಂದ ಹಿಂದಿರುಗಿದ ಸ್ವಲ್ಪ ಹೊತ್ತಿನಲ್ಲೇ ಮತ್ತೆ ಅದೇ ಸ್ಥಳದಿಂದ ಮರಳು ತೆಗೆದು ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಪತ್ರಕರ್ತರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರ ಜತೆ ಸಂಜೆಯ ತನಕವೂ ಸ್ಥಳದಲ್ಲಿದ್ದು, ಅಕ್ರಮ ಮರಳುಗಾರಿಕೆಗೆ ಬ್ರೇಕ್‌ ಹಾಕಿದ್ದಾರೆ. ಸೋಮವಾರ ಅಕ್ರಮ ಮರಳು ದಂಧೆಗೆ ಸಂಬಂಧಿಸಿ ಸ್ಥಳೀಯರಿಬ್ಬರು ಹೊಡೆದಾಟ ನಡೆಸಿಕೊಂಡ ಪ್ರಕರಣದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಗಣಿ ಇಲಾಖೆಯವರು ಎಲ್ಲಿ?
ಕೋರಿಯಾರ್‌ ಮೂಲಕ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಗಣಿ ಇಲಾಖೆಯವರು, ಕಂದಾಯ ಇಲಾಖೆಯವರು ಈ ಕುರಿತು ತಲೆಕೆಡಿಸಿಕೊಂಡಿಲ್ಲ. ಇಲ್ಲಿ ರಾತ್ರಿ ಹಗಲೆನ್ನದೆ ಪಿಕ್‌ಪ್‌, ಮಿನಿ ಲಾರಿ ಸೇರಿದಂತೆ ಸುಮಾರು 25ರಿಂದ 30 ವಾಹನಗಳಲ್ಲಿ ಮರಳು ಸಾಗಿಸಿ ಜನರಿಗೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಸರಕಾರದ ಅವೈಜ್ಞಾನಿಕ ಮರಳು ನೀತಿಯಿಂದಾಗಿ ಅಕ್ರಮ ಮರಳುಗಾರಿಕೆ ಹೆಚ್ಚುತ್ತಿದ್ದು, ಜನರಿಗೆ ಮಾತ್ರ ಮರಳು ಚಿನ್ನದಂತಾಗಿದೆ.

ಅಕ್ರಮಕ್ಕೆ ಸಹಕರಿಸುತ್ತಿರುವ ಕೆಲವು ಇಲಾಖೆಗಳವರು ಹಾಗೂ ಮಧ್ಯವರ್ತಿ ಗಳು ಹಣ ಲೂಟಿ ಹೊಡೆಯುತ್ತಿದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕಣ್ಮುಚ್ಚಿ ಕುಳಿತಿದ್ದಾರೆ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.