ಮಾಣಿಲ ಶ್ರೀಧಾಮ-ಧರ್ಮಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌


Team Udayavani, Jun 16, 2019, 5:00 AM IST

z-16

ವಿಟ್ಲ: ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನೂತನವಾಗಿ ಪ್ರಾರಂಭ ಗೊಂಡ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಮಾಣಿಲ ಗ್ರಾಮದ ಪಕಳಕುಂಜದಿಂದ ಧರ್ಮಸ್ಥಳಕ್ಕೆ ಪ್ರತಿನಿತ್ಯ ಬಸ್‌ ಸಂಚಾರ ಪ್ರಾರಂಭಿಸಬೇಕೆಂದು ಮಾಣಿಲ ಶ್ರೀಧಾಮ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿತ್ತು. ಸಂಚಾರಕ್ಕೆ ಹಲವು ಅಡೆತಡೆಗಳು ಎದುರಾಗಿತ್ತು. ಬಳಿಕ ಹಲವು ಅಧಿಕಾರಿ ಗಳ, ಜನಪ್ರತಿನಿಧಿಗಳ, ಸಚಿವರ ಜತೆ ಮಾತುಕತೆ ಮಾಡಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್‌ಕುಮಾರ್‌ ಮೂಲಕ ಮನವಿ ಮಾಡಲಾಯಿತು. ಕೊನೆಗೂ ಬಸ್‌ ಸಂಚಾರಕ್ಕೆ ಅನುಮತಿ ದೊರಕಿದೆ.

ಬಸ್ಸಿಗೆ ಪೂಜೆ
ಬೆಳಗ್ಗೆ ಮಾಣಿಲ ಕ್ಷೇತ್ರದಲ್ಲಿ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಬಸ್ಸಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಪಕಳಕುಂಜ ದಲ್ಲಿ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಿಶಾಲ್‌ ಮೋನಿಸ್‌, ಮಾಣಿಲ ಶ್ರೀಗಳು ಪ್ರಥಮ ಸಂಚಾರಕ್ಕೆ ಚಾಲನೆ ನೀಡಿದರು.

ಮಾಣಿಲ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಕುಮಾರ್‌ ಬಾಳೆಕಲ್ಲು, ಉಪಾಧ್ಯಕ್ಷೆ ವಿಶಾಲಾಕ್ಷಿ, ಪೆರುವಾಯಿ ಗ್ರಾ.ಪಂ. ಅಧ್ಯಕ್ಷ ರಾಲ್ಫ್ ಡಿ’ಸೋಜಾ, ಜುಮಾ ಮಸೀದಿ ಅಧ್ಯಕ್ಷ ಮೊಹಿದು ಕುಟ್ಟಿ, ಸಾಮಾಜಿಕ ಹೋರಾಟಗಾರ್ತಿ ಕುಂಞಿಪಾತು, ಗೋಪಾಲಕೃಷ್ಣ ನಾಯಕ್‌, ತಾ.ಪಂ. ಮಾಜಿ ಸದಸ್ಯ ರಾಜೇಂದ್ರನಾಥ ರೈ, ನ್ಯಾಯವಾದಿ ವಿನೋದ್‌ ಪಕಳಕುಂಜ, ಅಶ್ರಫ್‌ ಕಾಮಜಲು, ಉದಯಕುಮಾರ್‌ ಪಕಳಕುಂಜ, ಚಂದ್ರಶೇಖರ್‌, ಪ್ರಭಾಕರ, ರಾಮ ಕುಲಾಲು ಸಾಯ, ವಿನಯ್‌, ಶ್ರೀಧರ್‌ ಬಾಳೆಕಲ್ಲು, ಸುಶೀಲ್‌ ಬಾಳೆಕಾನ, ಸತ್ಯಶಂಕರ್‌ ಭಟ್‌, ಮೀನಾಕ್ಷಿ ಸಾಯ, ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿ ಗೀತಾ ಪುರುಷೋತ್ತಮ, ವಿಟ್ಟಲ ಶೆಟ್ಟಿ ಸುಣ್ಣಂಬಳ, ಶ್ರೀಧಾಮ ಮಿತ್ರ ಮಂಡಳಿ ಅಧ್ಯಕ್ಷ ಯೋಗೀಶ್‌ ಬಾಳೆಕಾನ ಉಪಸ್ಥಿತರಿದ್ದರು.

ವಿಟ್ಲ ಪರಿಸರದವರಿಗೂ ಪ್ರಯೋಜನ
ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಮಾಣಿಲ ಕ್ಷೇತ್ರಕ್ಕೂ ಧರ್ಮಸ್ಥಳ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ. ಹಲವು ಜನರು ತಮ್ಮ ಕಷ್ಟಗಳನ್ನು ನಿವಾರಿಸಲು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಈ ಬಸ್‌ ಸೇವೆ ಭಕ್ತರಿಗೆ ಇನ್ನಷ್ಟು ಪ್ರಯೋಜನವಾಗಲಿದೆ. ಇದರಿಂದ ವಿಟ್ಲ ಪರಿಸರದವರಿಗೂ ಪ್ರಯೋಜನವಾಗಲಿದೆ. ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಎಲ್ಲರೂ ಒಗ್ಗೂಟ್ಟಿನಿಂದ ಕೆಲಸ ಮಾಡಿದಾಗ ಸಾಧ್ಯವಾಗುತ್ತದೆ. ಸಮಾಜದಲ್ಲಿ ಏಕತೆ-ಸಾಮರಸ್ಯ ಉಂಟು ಮಾಡುವ ಕೆಲಸಗಳು ನಡೆಯಬೇಕು ಎಂದರು.

ವೇಳಾಪಟ್ಟಿ
ಪ್ರತಿದಿನ ಬೆಳಗ್ಗೆ 7.30ಕ್ಕೆ ಪಕಳಕುಂಜದಿಂದ ಹೊರಟು ವಿಟ್ಲ, ಉಪ್ಪಿನಂಗಡಿ ರಸ್ತೆಯಾಗಿ ಧರ್ಮಸ್ಥಳಕ್ಕೆ ತಲುಪಲಿದೆ. ಸಂಜೆ 5.30ಕ್ಕೆ ಪಕಳಕುಂಜಕ್ಕೆ ಹಿಂದಿರುಗಲಿದೆ ಎಂದು ಬಸ್ಸಿನ ನಿರ್ವಾಹಕರು ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.