ಕುದ್ರಡ್ಕ – ಪಾಲೆರು ರಸ್ತೆಯಲ್ಲಿ ಒಂದು ವರ್ಷದಿಂದ ಕತ್ತಲು

ಕರೆ ಸ್ವೀಕರಿಸದ ಗುತ್ತಿಗೆದಾರರ ವಿರುದ್ಧ ತಣ್ಣೀರುಪಂತ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

Team Udayavani, Jan 23, 2020, 6:25 AM IST

2101UPG-THANNIRUPANTHA

ಉಪ್ಪಿನಂಗಡಿ: ಕುದ್ರಡ್ಕ- ಪಾಲೆರು ರಸ್ತೆ ಕಾಮಗಾರಿ ಆರಂಭದಿಂದ ದಾರಿ ದೀಪದ ಬೆಳಕು ಕಾಣದೇ ಗ್ರಾಮಸ್ಥರು ಕತ್ತಲಲ್ಲಿ ಕಾಲ ಕಳೆಯುತ್ತಿದ್ದು, ತತ್‌ಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತಣ್ಣೀರುಪಂತ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆದಿದೆ.

ಕಲ್ಲೇರಿಯ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಜಯವಿಕ್ರಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ಪ್ರಸ್ತಾವವಾಯಿತು. ಅಭಿವೃದ್ಧಿ ಅಧಿಕಾರಿ ವರದಿ ಹಾಗೂ ಸುತ್ತೋಲೆಗಳನ್ನು ಓದಿದ ಬಳಿಕ ಸದಸ್ಯರಾದ ಸದಾನಂದ ಶೆಟ್ಟಿ ಮಡಪ್ಪಾಡಿ ಮಾತನಾಡಿ, ಸರಕಾರದ ಯೋಜನೆಯಡಿ ಕುದ್ರಡ್ಕ – ಪಾಲೆರು ರಸ್ತೆಯನ್ನು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾಮಗಾರಿಗಾಗಿ ವಿದ್ಯುತ್‌ ಕಂಬಗಳನ್ನು ಸ್ಥಳಾಂತ ರಿಸಲಾಗಿದೆ. ಇದರಿಂದ 28ಕ್ಕೂ ಅಧಿಕ ದಾರಿದೀಪಗಳು ನಿಷ್ಕ್ರಿಯವಾಗಿವೆ ಎಂದರು.

ಗುತ್ತಿಗೆದಾರರ ವಿರುದ್ಧ ಆಕ್ರೋಶ
ಕೆಲವು ದಾರಿ ದೀಪಗಳನ್ನು ಗ್ರಾ.ಪಂ. ಇತ್ತೀಚೆಗಷ್ಟೇ ಖರೀದಿಸಿದ್ದು, ಅವೂ ಉರಿಯದಂತಾಗಿವೆ. ಇಡೀ ರಸ್ತೆಯಲ್ಲಿ ಬೆರಳೆಣಿಕೆಯಷ್ಟು ದೀಪಗಳು ಮಾತ್ರ ಉರಿಯುತ್ತಿವೆ. ಒಂದು ವರ್ಷದಿಂದ ಗುತ್ತಿಗೆದಾರರು ಮೊಬೈಲ್‌ ಕರೆ ಸ್ವೀಕರಿಸುತ್ತಿಲ್ಲ. ಹೊಸದಾಗಿ ಅಳವಡಿಸಿರುವ ದೀಪಗಳಿಗೆ ಒಂದು ವರ್ಷ ಗ್ಯಾರಂಟಿ ಇದ್ದು, ಕರೆ ಸ್ವೀಕರಿಸಿದರೆ ದೀಪಗಳನ್ನು ಬದಲಿಸಿಕೊಡಬೇಕಾದ ಪರಿಸ್ಥಿತಿ ಮನಗಂಡು ಅವರು ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಈಗ ಗುತ್ತಿಗೆದಾರರನ್ನು ವಿಚಾರಿಸಿದರೆ, ಗ್ಯಾರಂಟಿ ಅವಧಿ ಮುಗಿಯಿತು ಎಂಬ ಕಾರಣ ಹೇಳಿ ನುಣುಚಿಕೊಳ್ಳುತ್ತಿದ್ದಾರೆ. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಿ. ಎಲ್ಲ ದಾರಿದೀಪಗಳೂ ಉರಿಯುವಂತೆ ಮಾಡಲು ಕ್ರಮ ಕೈಗೊಳ್ಳಿ. ಗ್ರಾಮಾಂತರ ಪ್ರದೇಶದಲ್ಲಿ ದಾರಿ ಮಧ್ಯ ಅರಣ್ಯ ಪ್ರದೇಶವಿದ್ದು, ಗ್ರಾಮಸ್ಥರಲ್ಲಿ ಆತಂಕದ ಛಾಯೆ ಆವರಿಸಿದೆ ಎಂದು ಹೇಳಿದರು.

ಆಧಾರ್‌ ತಿದ್ದುಪಡಿಗೆ ಕ್ರಮ ಕೈಗೊಳ್ಳಿ
ಗ್ರಾ.ಪಂ. ಸದಸ್ಯ ಡಿ.ಕೆ. ಅಯೂಬ್‌ ಹಾಗೂ ತಾ.ಪಂ. ಸದಸ್ಯೆ ಕೇಶವತಿ ಮಾತನಾಡಿ, ಗ್ರಾಮಸ್ಥರು ಕಚೇರಿಗಳ ಕೆಲಸಕ್ಕಾಗಿ ಆಧಾರ್‌ ಕಾರ್ಡ್‌ಗಳ ತಿದ್ದುಪಡಿ, ಹೆಸರು ಬದಲಾವಣೆ, ಮೊಬೈಲ್‌ ಸಂಖ್ಯೆ ಸೇರ್ಪಡೆ ಸಹಿತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಆಧಾರ್‌ ತಿದ್ದುಪಡಿ ಮಾಡಿಸಲು ಎರಡು ದಿನಗಳ ಶಿಬಿರ ಹಮ್ಮಿಕೊಳ್ಳಬೇಕು. ಆಧಾರ್‌ ಇಲ್ಲದ ಹೊಸಬರಿಗಾಗಿ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು. ಇದಕ್ಕೆ ಸಮ್ಮತಿಸಿದ ಅಧ್ಯಕ್ಷರು, ಅಧಿಕಾರಿಗಳಿಗೆ ಪತ್ರ ಬರೆದು, ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಡಾಮರು ಕಾಮಗಾರಿಗೆ ಪಟ್ಟು
ಸದಸ್ಯ ಸೂರಪ್ಪ ಬಂಗೇರ ಮಾತನಾಡಿ, ತಮ್ಮ ವಾರ್ಡ್‌ ವ್ಯಾಪ್ತಿಯ ಆನೆಪಳ್ಳ ರಸ್ತೆಯ ಗತಿ ಏನು? ಅನುದಾನ ಒದಗಿಸಿ ಇಲ್ಲವೇ ಡಾಮರು ಕಾಮಗಾರಿ ಕೈಗೊಳ್ಳಿ ಎಂದು ಪಟ್ಟು ಹಿಡಿದರು. ಅನುದಾನ ಬಂದಲ್ಲಿ ಈ ರಸ್ತೆಗೆ ಒದಗಿಸುವುದಾಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಭರವಸೆ ನೀಡಿದರು.

ಜನ ಪ್ರತಿನಿಧಿಗಳಾಗಿ ತಮ್ಮ ಸೇವಾವಧಿ ಮುಗಿಯುವ ಹಂತದಲ್ಲಿದ್ದು, ಈ ಬಾರಿಯ ಗ್ರಾಮಸಭೆಯಲ್ಲಿ ಪ್ರತೀ ವಾರ್ಡ್‌ನಲ್ಲಿ ಸಾಮಾಜಿಕ ಕಾಳಜಿಯಡಿ ಪಂಚಾಯತ್‌ ನೀರುಪೋಲು, ಅನವಶ್ಯಕ ದಾರಿದೀಪ ಉರಿಯುವಿಕೆಯನ್ನು ಕಚೇರಿಯ ಗಮನಕ್ಕೆ ತಂದ ವಾರ್ಡ್‌ ಸದಸ್ಯರನ್ನು ಗುರುತಿಸಿ ಸಮ್ಮಾನಿಸಬೇಕು ಎಂದು ಸದಸ್ಯರು ಪಟ್ಟು ಹಿಡಿದರು. ಇದಕ್ಕೆ ಸರ್ವಾನುಮತದ ಒಪ್ಪಿಗೆಯೂ ಲಭಿಸಿತು. ಆಯಾ ವಾರ್ಡ್‌ ಸದಸ್ಯರೇ ಕಛೇರಿಯ ಗಮನಕ್ಕೆತಂದ ವಾರ್ಡ್‌ ಗೆ ಓರ್ವರನ್ನು ಗುರುತಿಸಿ ಸನ್ಮಾಸಿಬೇಕು ಎಂದು ಬಿಗುಪಟ್ಟು ಹಿಡಿದರು. ಇದಕ್ಕೆ ಸರ್ವಾನುಮತದ ಒಪ್ಪಿಗೆಯು ಸಿಕ್ಕಿದ್ದು ಆಯಾ ವಾರ್ಡ್‌ ಸದಸ್ಯರೇ ಗುರುತಿಸುವಂತೆ ಅಭಿವೃದ್ಧಿ ಅಧಿಕಾರಿ ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಕೇಶವ ನಾಯ್ಕ, ಸದಸ್ಯರಾದ ರಾಕೇಶ, ನವೀನ್‌, ತಾಜುದ್ದೀನ್‌, ಅಬ್ದುಲ್‌ ರಹಿಮಾನ್‌, ಶಾಲೆಟ್‌ ವಾಸ್‌, ಹೇಮಾವತಿ, ಶಕುಂತಳಾ, ಸರೋಜಿನಿ, ಗೀತಾ, ಮೈಮೂನಾ, ಕೈರುನ್ನೀಸಾ, ಭಾರತಿ, ಯಮುನಾ, ಸುಮಾ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಫೆ. 15ರಂದು ಗ್ರಾಮಸಭೆ
ಫೆ. 15ರ ಮುಂಜಾನೆ ಗ್ರಾಮಸಭೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ರುದ್ರಗಿರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಅಬ್ಟಾಸ್‌ ಎಂಬವರು ತಮ್ಮ ತೋಟದ 200ಕ್ಕೂ ಅಧಿಕ ಅಡಿಕೆ ಗಿಡ ಕಡಿದು ಪಟ್ಟಾ ಜಾಗದಲ್ಲಿ ರಾಜರಸ್ತೆಗೆ ಅನುವು ಮಾಡಿಕೊಟ್ಟಿದ್ದು, ಸಾಮಾಜಿಕ ಸಾಮರಸ್ಯದ ಈ ಮಾದರಿ ಕಾರ್ಯವನ್ನು ಗುರುತಿಸಿ, ಅವರನ್ನು ಗ್ರಾಮಸಭೆಯಲ್ಲಿ ಸಮ್ಮಾನಿಸಲು ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.