ನೆಕ್ಕರೆ -ಕರಿಯಾಳ ಪರಿಸರ: ಕಸದ ರಾಶಿಯಿಂದ ತೊಂದರೆ
Team Udayavani, May 22, 2019, 5:50 AM IST
ಪುತ್ತೂರು: ಕಸ ವಿಲೇವಾರಿಗೆ ಸಂಬಂಧಿಸಿದಂತೆ ತೆರಿಗೆ ಸಂಗ್ರಹಿಸಿದರೂ ನಗರಸಭೆ ಆಡಳಿತ ಕಸ ವಿಲೇವಾರಿ ಮಾಡದೇ ಇರುವುದರಿಂದ ನೆಕ್ಕರೆ – ಕರಿಯಾಳ ಪರಿಸರದಲ್ಲಿ ಸಾರ್ವಜನಿಕ ಜಾಗಗಳಲ್ಲಿ ಕಸದ ರಾಶಿ ಬೀಳುತ್ತಿವೆ ಎಂದು ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ಆರೋಪಿಸಿದೆ.
ಇತ್ತೀಚೆಗೆ ನೆಕ್ಕರೆ -ಕರಿಯಾಳ ಪ್ರದೇಶದಲ್ಲಿ ಸಾರ್ವಜನಿಕರ ಆಶಯದಂತೆ ಸಹಿ ಸಂಗ್ರಹ ಅಭಿಯಾನವನ್ನೂ ನಡೆಸಲಾಗಿದೆ. ಸಾರ್ವಜನಿಕರು ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿ ತ್ಯಾಜ್ಯ ವಿಲೇವಾರಿಗಾಗಿ ಒತ್ತಡ ತಂದರೂ ಯಾವುದೇ ಸ್ಪಂದನ ದೊರೆತಿಲ್ಲ. ನಗರಸಭೆಯ ಈ ನಿರ್ಲಕ್ಷ್ಯದ ಕಾರ್ಯವೈಖರಿಯಿಂದ ಜನರು ತೋಡಿಗೆ ತ್ಯಾಜ್ಯ ಹಾಕುವುದು ಅನಿವಾರ್ಯವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಮಿತಿ ತಿಳಿಸಿದೆ.
ಸಮಸ್ಯೆಯ ಕುರಿತು ಸಹಾಯಕ ಆಯುಕ್ತರಿಗೆ, ನಗರಸಭೆ ಪೌರಾ ಯುಕ್ತರಿಗೆ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಗಿದೆ. ತ್ಯಾಜ್ಯ ತೋಡಿಗೆ ಬೀಳುತ್ತಿರುವುದರಿಂದ ನದಿ ನೀರು ಮಲಿನಗೊಳ್ಳಲಿದೆ. ಈ ಕಾರಣದಿಂದ ಸಾಂಕ್ರಾಮಿಕ ರೋಗದ ಭೀತಿಯೂ ಇದೆ. ಜನರಿಂದ ಕಸ ಸಂಗ್ರಹಕ್ಕಾಗಿ ತೆರಿಗೆ ಸಂಗ್ರಹಿಸಿ ವಿಲೇವಾರಿ ಮಾಡದೇ ಇರುವುದು ಕರ್ತವ್ಯ ಲೋಪವಾಗಿದ್ದು, ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳ ಬೇಕು ಎಂದು ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್