ಸಮಗ್ರ ಅಭಿವೃದ್ಧಿಗೆ ಯುವ ಸಮೂಹ ಕೈಜೋಡಿಸಲಿ: ಸಂತೋಷ್‌

"ಸಶಕ್ತ ಭಾರತ ಸದೃಢ ಹೆಜ್ಜೆಗಳು' ರಾಷ್ಟ್ರೀಯ ವಿಚಾರಸಂಕಿರಣ

Team Udayavani, Feb 18, 2020, 1:14 AM IST

ben-45

ಸಶಕ್ತ ಭಾರತ ಸದೃಢ ಹೆಜ್ಜೆಗಳು ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಮಾಳವಿಕಾ ಅವಿನಾಶ್‌ ದೀಪ ಬೆಳಗಿಸಿದರು.

ಕಲ್ಲಡ್ಕ: ದೇಶದ ಪ್ರಜೆಗಳನ್ನು ಸ್ವಾವಲಂಬಿ, ಸಶಕ್ತರನ್ನಾಗಿಸುವ ಬದ್ಧತೆ ಹೊಂದಿರುವ ಸರಕಾರವು ನವ
ಭಾರತದ ಸಂಕಲ್ಪವನ್ನು ಭಾರತೀಯರ ಮುಂದೆ ಇಟ್ಟಿದೆ. ವಿದ್ಯಾರ್ಥಿ ಯುವ ಸಮೂಹ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಕರೆ ನೀಡಿದರು.

ಅವರು ಸೋಮವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಸಶಕ್ತ ಭಾರತ ಸದೃಢ ಹೆಜ್ಜೆಗಳು ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಆರ್ಥಿಕ ಮತ್ತು ರಕ್ಷಣೆಯ ಪಾತ್ರ ವಿಷಯದ ಕುರಿತು ಮಾತನಾಡಿದರು. ಆರ್ಥಿಕವಾಗಿ ಹಿಂದೆ ಬಿದ್ದಿರುವ ಎಲ್ಲರನ್ನೂ ಮುಂದೆ ತರುವ ಕೆಲಸಕ್ಕೆ
ನಾವು ಬದ್ಧರಾಗಬೇಕು. ವ್ಯವಸ್ಥೆಯ ಆಧಾರದಲ್ಲಿ ದೇಶ ಪ್ರಗತಿ ಸಾಧಿಸಬೇಕು. ಅಂತಹ ದಿನಗಳು ಹತ್ತಿರ ಬರುತ್ತಿವೆ ಎಂದು ಸಂತೋಷ್‌ ತಿಳಿಸಿದರು. ಮಂಗಳೂರು ವಿ.ವಿ. ಪ್ರಾಧ್ಯಾಪಕ ಪಿ.ಎಲ್‌. ಧರ್ಮ ಸಮನ್ವಯಕಾರರಾಗಿದ್ದರು.

ಮೋದಿ ನಾಯಕತ್ವ
ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ| ಪ್ರಭಾಕರ್‌ ಭಟ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಿ ಮೋದಿ ನಾಯಕತ್ವ ಸಿಕ್ಕಿರುವುದು ನಮ್ಮ ಭಾಗ್ಯ. ಸದೃಢ ಭಾರತದ ಹೆಜ್ಜೆಗಾಗಿ, ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಉತ್ತಮ ವಿಚಾರಗಳ ಚರ್ಚೆ ಆಗಬೇಕಾಗಿದೆ, ಅದು ವಿದ್ಯಾರ್ಥಿಗಳ ಮೂಲಕ ಯಶಸ್ವಿ ಯಾಗಿ ನಡೆಯಬೇಕು ಎಂದರು.

ರಾಜಕೀಯ ಸಂಚು
ಸಾಮಾಜಿಕ ಕಾರ್ಯಕರ್ತೆ ಬೆಂಗಳೂರಿನ ಮಾಳವಿಕಾ ಅವಿನಾಶ್‌ ದೀಪ ಬೆಳಗಿಸಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹಿಂಸಾ ಪ್ರತಿಭಟನೆಯ ಹಿಂದೆ ವ್ಯವಸ್ಥಿತ ರಾಜಕೀಯದ ಸಂಚಿದೆ. ಮೂರು ತಿಂಗಳಿನ ಸುದೀರ್ಘ‌ ಹೋರಾಟಕ್ಕೆ ಆರ್ಥಿಕ ಸಂಪನ್ಮೂಲ ನೀಡಿದ್ದು ಯಾರು. ಅಶಾಂತಿ ಸೃಷ್ಟಿಸುವುದು ಇದರ ಉದ್ದೇಶವಲ್ಲವೇ ಎಂದು ಪ್ರಶ್ನಿಸಿದರು. ಸಂಘದ ಪ್ರಚಾರಕ ಸುನಿಲ್‌ ಕುಲಕರ್ಣಿ ಸಮನ್ವಯಕಾರರಾಗಿದ್ದರು.

ಮೂರನೇ ವಿಚಾರಗೋಷ್ಠಿಯಲ್ಲಿ ಬೆಂಗಳೂರಿನ ಆರೋಹಿ ರಿಸರ್ಚ್‌ ಫೌಂಡೇಶನ್‌ ನಿರ್ದೇಶಕ ಎಂ.ಎಸ್‌. ಚೈತ್ರ “ಜನಸಂಖ್ಯೆ ಲಾಭವೇ- ಅಪಾಯವೇ’ ವಿಷಯದ ಬಗ್ಗೆ ಮಾತನಾಡಿದರು. ನಾಲ್ಕನೇ ವಿಚಾರಗೋಷ್ಠಿ ಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮೈಸೂರಿನ ಬಿ.ವಿ. ವಸಂತ್‌ ಕುಮಾರ್‌ “ಬೌದ್ಧಿಕ ದಾಸ್ಯದಿಂದ ಮೇಲೇಳುತ್ತಿದೆಯೇ ಭಾರತ’ ಎಂಬ ವಿಷಯದ ಕುರಿತು ಮಾತನಾಡಿದರು.
ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ನಾರಾಯಣ ಸೋಮಯಾಜಿ, ವಸಂತ ಮಾಧವ ಉಪಸ್ಥಿತರಿದ್ದರು.
ಕೃಷ್ಣಪ್ರಸಾದ್‌ ಕಾಯರ್‌ಕಟ್ಟೆ ಸ್ವಾಗತಿಸಿ, ಯತಿರಾಜ್‌ ಪೆರಾಜೆ ವಂದಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.