ಮಾಡಾವು ಸಬ್‌ಸ್ಟೇಷನ್‌ ಫೆಬ್ರವರಿಗೆ ಆರಂಭ?

ದಶಕದಿಂದ ಆಮೆಗತಿಯಲ್ಲೇ ಸಾಗುತ್ತಿರುವ ಕಾಮಗಾರಿ, ಈ ಬಾರಿ ಪೂರ್ಣಗೊಳ್ಳುವ ವಿಶ್ವಾಸ

Team Udayavani, Jan 23, 2020, 12:22 AM IST

led-23

ಪುತ್ತೂರು: ಸುಮಾರು 12 ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಮಾಡಾವು 110/11 ಕೆ.ವಿ. ವಿದ್ಯುತ್‌ ಸಬ್‌ ಸ್ಟೇಷನ್‌ ಫೆಬ್ರವರಿ ತಿಂಗಳಲ್ಲಿ ಕಾರ್ಯಾ ರಂಭಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಜನರು ಮಾತ್ರ ಇದನ್ನು ನಂಬಲು ಸಿದ್ಧರಿಲ್ಲ.

ಮೆಸ್ಕಾಂ ಪುತ್ತೂರು ವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿನ ವಿದ್ಯುತ್‌ ಪೂರೈಕೆ ಸಂಬಂಧಿ ಒತ್ತಡ ನಿವಾರಣೆ ಮಾಡಿ ಸಮಸ್ಯೆಗಳನ್ನು ದೂರ ಮಾಡುವ ನಿರೀಕ್ಷೆ ಈ ಸಬ್‌ಸ್ಟೇಷನ್‌ ಮೇಲಿದೆ. ದಶಕಗಳ ಹಿಂದಿನ ನಿರೀಕ್ಷೆ ಇದಾದರೂ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಂಟಾದ ಸುದೀರ್ಘ‌ ವಿಳಂಬ ಜನರು ನಂಬದಂತೆ ಮಾಡಿದೆ.

ವಿಳಂಬ ಏಕೆ?
ವಿದ್ಯುತ್‌ ಟವರ್‌ ಮತ್ತು ತಂತಿ ಹಾದು ಹೋಗುವಲ್ಲಿ ಪಟ್ಟಾ ಭೂಮಿ, ಅರಣ್ಯ ಪ್ರದೇಶಗಳು ಒಳಪಟ್ಟಿತ್ತು. ಈ ಕಾರಣದಿಂದ ಪರಿಹಾರದ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಹಲವು ಮಂದಿ ಪರಿಹಾರದ ದೃಷ್ಟಿಯಿಂದ ಹಾಗೂ ಅಪಾಯದ ಕಾರಣಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದರು. ಇತ್ತೀಚೆಗಷ್ಟೇ ಉಳಿಕೆಯಾಗಿದ್ದ ಕೊನೆಯ ವ್ಯಾಜ್ಯ ಉಚ್ಚ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದೆ.

ಅಂತಿಮ ಹಂತ
ಮಾಡಾವು ಸಬ್‌ಸ್ಟೇಷನ್‌ ಸುಮಾರು 4 ಎಕ್ರೆಯಲ್ಲಿ ನಿರ್ಮಾಣಗೊಂಡಿದೆ. ನೆಟ್ಲಮುಟ್ನೂರಿನಿಂದ ಮಾಡಾವಿಗೆ 110 ಕೆ.ವಿ. ವಿದ್ಯುತ್‌ ಸರಬರಾಜು ಮಾಡುವ 27 ಕಿ.ಮೀ. ವಿದ್ಯುತ್‌ ಲೈನ್‌ನಲ್ಲಿ ಇನ್ನು 2.50 ಕಿ.ಮೀ. ಬಾಕಿ ಇದೆ. ಒಟ್ಟು 115 ಟವರ್‌ಗಳಲ್ಲಿ 1 ಟವರ್‌ ನಿರ್ಮಾಣಕ್ಕೆ ಬಾಕಿ ಇದೆ. ಇದರ ಫೌಂಡೇಶನ್‌ ಕೆಲಸ ಆಗಿದೆ. ಸ್ಟೇಷನ್‌ ನಿರ್ಮಾಣ ಕೆಲಸ ಪೂರ್ಣಗೊಂಡಿದ್ದು, ಪರೀಕ್ಷಾ ಕೆಲಸ ನಡೆಯುತ್ತಿದೆ.

2.5 ಕೋಟಿ ರೂ. ಪರಿಹಾರ ಬಾಕಿ
ವಿದ್ಯುತ್‌ ಲೈನ್‌ ಮತ್ತು ಟವರ್‌ ನಿರ್ಮಾಣಕ್ಕಾಗಿ ಸ್ಥಳೀಯ ರೈತರ ಭೂಮಿಗೆ ಸಂಬಂಧಿಸಿ ಒಟ್ಟು 5.8 ಕೋಟಿ ರೂ. ಪರಿಹಾರ ನಿಗದಿಪಡಿಸಲಾಗಿದ್ದು, 110 ಮಂದಿಗೆ 2.5 ಕೋಟಿ ರೂ. ಪರಿಹಾರ ನೀಡಲು ಬಾಕಿ ಇದೆ. ಇದರಲ್ಲಿ 1 ಕೋಟಿ ರೂ. ಪರಿಹಾರಕ್ಕೆ ಸಂಬಂಧಿಸಿದ ಜಾಗದ ದಾಖಲೆಗಳನ್ನು ಪಡೆದುಕೊಳ್ಳಲಾಗಿದೆ. ಉಳಿದ 1.5 ಕೋಟಿ ರೂ. ಪರಿಹಾರದ ದಾಖಲೆಗಳನ್ನು ಸಂಬಂಧಪಟ್ಟ ಜನರಿಂದ ಪಡೆಯುವ ಕಾರ್ಯ ನಡೆಯುತ್ತಿದೆ. ಈ ಎಲ್ಲ ದಾಖಲೆಗಳನ್ನು ಕೆಪಿಟಿಸಿಎಲ್‌ ಕಾರ್ಪೊರೆಟ್‌ ಕಚೇರಿಗೆ ನೀಡಿ ಅಲ್ಲಿಂದ ನೇರವಾಗಿ ಫಲಾನುಭವಿಗಳ ಹೆಸರಿಗೆ ಡಿಡಿ ಮಾಡಲಾಗುತ್ತದೆ ಎಂದು ಕೆಪಿಟಿಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಾಡಾವು ಸಬ್‌ಸ್ಟೇಷನ್‌ ಕುರಿತು ಸಚಿವರು ಪರಿಶೀಲಿಸಿದ್ದಾರೆ. ಪರಿಹಾರ ಸಂದಾಯವಾದ ಬಳಿಕ 2.5 ಕಿ.ಮೀ. ದೂರದ ಲೈನ್‌ ಎಳೆಯುವ ಕಾರ್ಯ ಮತ್ತು 1 ಟವರ್‌ ನಿರ್ಮಾಣವನ್ನೂ ತತ್‌ಕ್ಷಣವೇ ಆರಂಭ ಮಾಡಲಿದ್ದು, ಫೆಬ್ರವರಿ ತಿಂಗಳ ಅಂತ್ಯದಲ್ಲಿ ಮಾಡಾವು ವಿದ್ಯುತ್‌ ಸಬ್‌ಸ್ಟೇಷನ್‌ ಲೋಕಾರ್ಪಣೆಗೆ ಸಿದ್ಧಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದರೂ ಈ ಪರಿಹಾರ ಸಂದಾಯ ಪೂರ್ಣಗೊಳ್ಳುವುದು ಯಾವಾಗ ಎನ್ನುವ ಪ್ರಶ್ನೆಯೂ ಇದೆ.

ಮಾಡಾವು ವಿದ್ಯುತ್‌ ಸಬ್‌ಸ್ಟೇಷನ್‌ ಲೋಕಾರ್ಪಣೆಯೊಂದಿಗೆ ಸುಳ್ಯ, ಕಡಬ ತಾಲೂಕು ಮತ್ತು ಕುಂಬ್ರ, ಪಾಣಾಜೆ, ಬೆಟ್ಟಂಪಾಡಿ ಸಹಿತ ಪುತ್ತೂರು ತಾಲೂಕಿನ ಕೆಲ ಭಾಗಗಳ ವಿದ್ಯುತ್‌ ಒತ್ತಡದ ಸಮಸ್ಯೆ ಸಂಪೂರ್ಣ ಪರಿಹಾರವಾಗುವ ಆಶಾವಾದ ಈ ಭಾಗದ ರೈತರದ್ದಾಗಿದೆ.

ರಾಜೇಶ್ ಪಟ್ಟೆ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.