ಕೇಸರಿ ಬಟ್ಟೆ  ಸುಟ್ಟವರ ವಿರುದ್ಧ ಪ್ರಕರಣ


Team Udayavani, Aug 30, 2018, 11:39 AM IST

30-agust-9.jpg

ಬೆಳ್ತಂಗಡಿ: ಇಲ್ಲಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ದಸಂಸ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ತರುವ ರೀತಿ ಹಾಗೂ ಧಾರ್ಮಿಕ ಭಾವನೆಗಳಿಗೆ ತೊಂದರೆ ಉಂಟು ಮಾಡುವ ರೀತಿಯಲ್ಲಿ ನಿಂದಿಸುವ ಜತೆಗೆ ಕೇಸರಿ ಬಣ್ಣದ ಬಟ್ಟೆಯನ್ನು ಸುಟ್ಟಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಹಿಂಜಾವೇ ಸ್ಥಾಪಕಾಧ್ಯಕ್ಷ ಮಹೇಶ್‌ ಶೆಟ್ಟಿ ತಿಮರೋಡಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಹಾಗೂ ಡಾ| ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದವರ ವಿರುದ್ಧ ಅವರು ಪ್ರತಿಭಟನೆ ಮಾಡಲಿ. ಅದನ್ನು ಬಿಟ್ಟು ಹಿಂದೂ ಧರ್ಮಕ್ಕೆ ಅವಮಾನ ಮಾಡಲು ಮುಂದಾದರೆ ತಕ್ಕ ಉತ್ತರ ನೀಡಲು ಸಂಘಟನೆ ಶಕ್ತವಾಗಿದೆ ಎಂದರು.

ಪ್ರತಿಭಟನೆ ಮಾಡುವಾಗ ಧರ್ಮನಿಂದನೆ ಸರಿಯಾದ ಕ್ರಮವಲ್ಲ. ಹೀಗಾಗಿ ನಾವು ಸಾಂಕೇತಿಕವಾಗಿ ಪ್ರತಿಭಟನೆ ಮಾಡಿ, ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು ನೀಡುತ್ತೇವೆ. ಕಾನೂನು ಕ್ರಮ ಜರಗಿಸದೇ ಇದ್ದಲ್ಲಿ ಮುಂದೆ ಇದರ ವಿರುದ್ಧ ಹೋರಾಟ ರೂಪಿಸಲಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಹಿಂಜಾವೇ ಪ್ರಮುಖರಾದ ರವಿಕುಮಾರ್‌ ಬರಮೇಲು, ಅನಿಲ್‌ಕುಮಾರ್‌, ಮನೋಜ್‌ ಕುಂಜರ್ಪ, ಸಂದೀಪ್‌ ಶೆಟ್ಟಿ ಉಪಸ್ಥಿತರಿದ್ದರು.

ಸಾಂಕೇತಿಕ ಪ್ರತಿಭಟನೆ 
ಪತ್ರಿಕಾಗೋಷ್ಠಿ ಬಳಿಕ ಇಲ್ಲಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ರಾಷ್ಟ್ರೀಯ ಹಿಂಜಾವೇ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಯಿತು. ನಿಂದನೆ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ, ತಹಶೀಲ್ದಾರ್‌ ಹಾಗೂ ಪೊಲೀಸರಿಗೆ ದೂರು ನೀಡಲಾಯಿತು. ಈ ಸಂದರ್ಭ ಮಹೇಶ್‌ ಶೆಟ್ಟಿ ತಿಮರೋಡಿ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ತಾ.ಪಂ.ಸದಸ್ಯ ವಿಜಯ ಗೌಡ, ರವಿಕುಮಾರ್‌ ಬರಮೇಲು ಮತ್ತಿತರರಿದ್ದರು.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.