ಈ ಬಾರಿಯೂ ಕೆಸರಿನಲ್ಲೇ ಪುತ್ತೂರು ಸಂತೆ!
ವ್ಯವಸ್ಥಿತ ಸಂತೆ ಕಟ್ಟೆ ಇಲ್ಲದೆ ವ್ಯಾಪಾರಿಗಳಿಗೆ, ಗ್ರಾಹಕರಿಗೆ ತೀವ್ರ ಸಮಸ್ಯೆ
Team Udayavani, Jul 23, 2019, 5:00 AM IST
ಪುತ್ತೂರು: ಇತಿಹಾಸದ ಜತೆಗೆ ಹೆಗ್ಗಳಿಕೆಯನ್ನು ಹೊಂದಿರುವ ಪುತ್ತೂರು ಸಂತೆ ಮಳೆಗಾಲದಲ್ಲಿ ಮಾತ್ರ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ನರಕ ಸದೃಶವಾಗಿ ಬದಲಾವಣೆಯಾಗುತ್ತಿದೆ. ಕಾರಣ ಸಂತೆ ಕಟ್ಟೆ ಇಲ್ಲದಿರುವುದು.
ಪ್ರಸ್ತುತ ಕಿಲ್ಲೆ ಮೈದಾನದಲ್ಲಿ ಪ್ರತಿ ಸೋಮವಾರ ನಡೆಯುತ್ತಿರುವ ಸಂತೆ ಯಲ್ಲಿ ಮಾರಾಟಗಾರರು ಮತ್ತು ಖರೀದಿ ದಾರರು ಮಳೆಯ ನಡುವೆ ತಮ್ಮ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಟರ್ಪಾಲು ಮತ್ತು ಕೆಸರು ಕೊಳಚೆ ನೀರಿನ ನಡುವೆ ಮಳೆಗಾಲದಲ್ಲಿ ಪುತ್ತೂರು ಸಂತೆ ನಡೆಯುವುದು ಮುಂದುವರಿದಿದೆ.
ಕಟ್ಟೆ ಆಗಿಲ್ಲ
ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ ಈ ವಾರದ ಸಂತೆಗೆ ಶಾಶ್ವತ ಸಂತೆ ಕಟ್ಟೆ ನಿರ್ಮಾಣ ಮಾಡಲು ನಗರಸಭೆ ಚಿಂತನೆ ನಡೆಸಿ ಒಂದೂವರೆ ವರ್ಷವಾಗಿದೆ. ಹಳೆಯ ಪುರಸಭೆಯ ಕಟ್ಟಡದ ಸ್ಥಳದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಂತೆಕಟ್ಟೆ ಮತ್ತು ವಾರದ ಸಂತೆಯ ಮಾರುಕಟ್ಟೆ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಅನಂತರ ವಾರದ ಸಂತೆಯನ್ನು ಇಲ್ಲಿಗೆ ಸ್ಥಳಾಂತರ ನಡೆಸಲು ತೀರ್ಮಾನಿಸಲಾಗಿತ್ತು. ಪುತ್ತೂರು ನಗರದ ಹೃದಯ ಭಾಗದ ನಾನಾ ಕಡೆ ಸಂತೆ ಮಾರುಕಟ್ಟೆ ನಿರ್ಮಿಸಲು ಈ ಹಿಂದಿನ ನಗರಸಭೆ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿತ್ತು. ಆದರೆ ಸೂಕ್ತ ಸ್ಥಳಾವಕಾಶ ಸಿಗದ ಕಾರಣ ವಾರದ ಸಂತೆ ಕಿಲ್ಲೆ ಮೈದಾನದಲ್ಲಿಯೇ ಉಳಿದಿದೆ. ಈ ನಡುವೆ 2016ರಲ್ಲಿ ಉಪವಿಭಾಗಾಧಿಕಾರಿ ಆದೇಶದಂತೆ ಎಪಿಎಂಸಿ ಪ್ರಾಂಗಣಕ್ಕೆ ಸಂತೆಯನ್ನು ಸ್ಥಳಾಂತರ ಮಾಡಲಾಗಿದ್ದು, ಈ ಬಗ್ಗೆ ಪ್ರತಿಭಟನೆ, ವಾದವಿವಾದಗಳು ನಡೆದಿದ್ದವು. ಮತ್ತೆ ವಾರದ ಸಂತೆ ಕಿಲ್ಲೆ ಮೈದಾನಕ್ಕೇ ಸ್ಥಳಾಂತರವಾಯಿತು.
ನಗರಸಭೆಯಿಂದ ಶಾಶ್ವತ ಮಾರುಕಟ್ಟೆ ನಿರ್ಮಾಣದ ಕನಸು ನನಸಾಗದೆ ಈ ವರ್ಷವೂ ಟಾರ್ಪಾಲು ಮಾಡಿನ ಕೆಳಗೆ ಕೆಂಪು ನೀರಿನ ಮಧ್ಯೆ ತರಕಾರಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಬೇಕಾದ ಅನಿವಾರ್ಯತೆ ಗ್ರಾಹಕರ ಪಾಲಿಗೆ ಬಂದಿದೆ.
ಬೇಸಗೆಯಲ್ಲಿ ವಿಶಾಲ ಮೈದಾನದಲ್ಲಿ ವಾರದ ಸಂತೆ ಸಮಸ್ಯೆ ಇಲ್ಲದೆ ನಡೆಯುತ್ತದೆ. ಮಳೆಗಾಲ ಮಾತ್ರ ವಸ್ತುಶಃ ನರಕದ ತಾಣವಾಗಿ ಬದಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ