ನರಹರಿ ಪರ್ವತ-ಕಾರಿಂಜ ಕ್ಷೇತ್ರ: ನಾಳೆ ತೀರ್ಥಸ್ನಾನ


Team Udayavani, Jul 31, 2019, 5:00 AM IST

20

ಬಂಟ್ವಾಳ: ಸಮುದ್ರ ಮಟ್ಟದಿಂದ ಅತ್ಯಂತ ಎತ್ತರದಲ್ಲಿರುವ ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಕ್ಷೇತ್ರಗಳೆನಿಸಿಕೊಂಡಿರುವ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ ಹಾಗೂ ಕಾರಿಂಜ ಶ್ರೀ ಪಾರ್ವತೀ ಪರಮೇಶ್ವರ ದೇವಸ್ಥಾನಗಳು ಪ್ರತಿವರ್ಷ ಆಟಿ ಆಮಾವಾಸ್ಯೆಯ ಸಂದರ್ಭದಲ್ಲಿ ಸಾವಿರಾರು ಭಕ್ತರ ತೀರ್ಥಸ್ನಾನಕ್ಕೆ ಸಾಕ್ಷಿಯಾಗುತ್ತಿದ್ದು, ಈ ಬಾರಿ ಆ. 1ರಂದು ತೀರ್ಥಸ್ನಾನ ನಡೆಯಲಿದೆ.

ಉಭಯ ಕ್ಷೇತ್ರಗಳಲ್ಲಿನ ತೀರ್ಥ ಘಟ್ಟದಲ್ಲಿ ಭಕ್ತರು ಮಿಂದು ದೇವರ ದರ್ಶನ ಪಡೆಯಲಿದ್ದು, ಮುಂಜಾನೆ 4ರಿಂದಲೇ ಭಕ್ತರ ದಂಡು ಕ್ಷೇತ್ರದತ್ತ ಆಗಮಿಸಲಿದೆ. ಶ್ರೀ ನರಹರಿ ಕ್ಷೇತ್ರದಲ್ಲಿ ಪರ್ವತ ಹತ್ತಿದ ಬಳಿಕವೇ ತೀರ್ಥಸ್ನಾನ ಮಾಡುವ ಅವಕಾಶವಿದ್ದು, ಕಾರಿಂಜ ಕ್ಷೇತ್ರದಲ್ಲಿ ತೀರ್ಥಸ್ನಾನ ಮಾಡಿದ ಬಳಿಕ ಬೆಟ್ಟ ಹತ್ತಬೇಕಿದೆ.

ಆಟಿ ಆಮಾವಾಸ್ಯೆಯ ದಿನ ಕ್ಷೇತ್ರಗಳ ಸುತ್ತ ಎಲ್ಲಿ ನೋಡಿದರೂ ಭಕ್ತರ ದಂಡೇ ಗೋಚರಿಸಲಿದ್ದು, ಮುಂಜಾನೆಯಿಂದ ಮಧ್ಯಾಹ್ನದವರೆಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಂಡುಬರಲಿದ್ದಾರೆ. ಈ ದಿನ ಬಹುತೇಕ ಭಕ್ತರು ಎರಡೂ ಕ್ಷೇತ್ರಗಳಿಗೂ ಭೇಟಿ ನೀಡಿ, ತೀರ್ಥಸ್ನಾನ ಮಾಡುವುದು ವಿಶೇಷ.

ನರಹರಿಯಲ್ಲಿ ವಿಶೇಷತೆ
ಶ್ರೀಕೃಷ್ಣ, ಪಾಂಡವರಿಂದ ಸ್ಥಾಪಿತವಾಗಿ ಕ್ಷೇತ್ರವಾಗಿದ್ದು, ಹೀಗಾಗಿ ನರ (ಪಾಂಡವರು)- ಹರಿ (ಶ್ರೀಕೃಷ್ಣ) ಎಂದು ಹೆಸರು ಬಂದಿದೆ. ಆಟಿ ಅಮಾವಾಸ್ಯೆಯ ಹಿಂದಿನ ದಿನ ಕ್ಷೇತ್ರಕ್ಕೆ ಆಗಮಿಸಿದ್ದು, ಕೃಷ್ಣನು ತನ್ನ ಆಯುಧದಿಂದ ಶಂಖ, ಚಕ್ರ, ಗದಾ, ಪದ್ಮ ಎಂಬ ತೀರ್ಥಕೆರೆಗಳನ್ನು ನಿರ್ಮಿಸಿದನು. ಬಳಿಕ ಅರ್ಜುನನು ಪೂಜೆಗಾಗಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ್ದಾನೆ ಎಂದು ಪ್ರಸಿದ್ಧಿ ಇದೆ. 1988ರಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಪ್ರಾರಂಭಗೊಂಡು 1992ರಲ್ಲಿ ಬ್ರಹ್ಮಕಲಶೋತ್ಸವ ನಡೆದಿರುತ್ತದೆ.

15 ಸಾವಿರಕ್ಕೂ ಅಧಿಕ ಭಕ್ತರು
ರೋಗರುಜಿನಗಳ ನಿವಾರಣೆ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಹಗ್ಗ ಸೇವೆ ಇಲ್ಲಿನ ವಿಶೇಷತೆಯಾಗಿದ್ದು, ಆಟಿ ಆಮಾವಾಸ್ಯೆಯ ದಿನ 15 ಸಾವಿರಕ್ಕೂ ಅಧಿಕ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತೀರ್ಥಸ್ನಾನಗೈಯುತ್ತಾರೆ. ಕಾರ್ತಿಕ ದೀಪೋತ್ಸವ, ಪ್ರತಿಷ್ಠಾ ದಿನ ಶಿವರಾತ್ರಿ ಉತ್ಸವಗಳು ಕೂಡ ಕ್ಷೇತ್ರದ ವಿಶೇಷತೆಯಾಗಿವೆ.

ಕಾರಿಂಜದ ವಿಶೇಷತೆ
ಕಾರಿಂಜ ಕ್ಷೇತ್ರವು ಎಲ್ಲ ಯುಗಗಳಲ್ಲಿಯೂ ಇದ್ದು, ಬೇರೆ ಬೇರೆ ಹೆಸರುಗಳಿಂದ ಕರೆಸಿಕೊಳ್ಳುತ್ತಿತ್ತು. ಕಲಿಯುಗದಲ್ಲಿ ಕ್ಷೇತ್ರಕ್ಕೆ ಕಾರಿಂಜ ಎಂಬ ಹೆಸರು ಬಂದಿದ್ದು, ಕ್ಷೇತ್ರಕ್ಕೆ ಪಾಂಡವರು ಬಂದು ಭೀಮನ ಗದೆಯಿಂದ ನಿರ್ಮಾಣವಾದ ಗದಾತೀರ್ಥದಲ್ಲಿ ಭಕ್ತಾದಿಗಳು ತೀರ್ಥ ಸ್ನಾನ ಮಾಡುತ್ತಾರೆ. ಇದರ ಮಣ್ಣಿನಿಂದಲೇ ಕೊಡ್ಯಮಲೆ ಕಾಡು ನಿರ್ಮಾಣವಾಗಿದೆ. ಕ್ಷೇತ್ರದ ಮೇಲ್ಭಾಗದಲ್ಲಿ ಭೀಮನ ಮೊಣಕಾಲಿನಿಂದ ನಿರ್ಮಾಣವಾದ ಜಾನುತೀರ್ಥದಲ್ಲಿ ದೇವರಿಗೆ ಅಭಿಷೇಕ ಮಾಡಲಾಗುತ್ತದೆ. ಸೀತೆಯ ಹೆಬ್ಬೆರಳಿನಿಂದ ನಿರ್ಮಾಣವಾದ ಉಂಗುಷ್ಟ ತೀರ್ಥದಲ್ಲಿ ಭಕ್ತಾದಿಗಳಿಗೆ ಪ್ರೋಕ್ಷಣೆಗೆ ಅವಕಾಶವಿದೆ. ಜತೆಗೆ ಪಾಂಡವರಿಂದ ನಿರ್ಮಾಣವಾದ ವನಭೋಜನ ಗುಹೆಯೂ ಇದೆ. ಆಟಿ ಅಮಾವಾಸ್ಯೆಯ ಸಂದರ್ಭ ಗದಾ ತೀರ್ಥದಲ್ಲಿ ಔಷಧೀಯ ಅಂಶಗಳಿರುವುದಿಂದ ಅಂದು ಕೆರೆಯಲ್ಲಿ ಸ್ನಾನ ಮಾಡಿದರೆ ರೋಗರುಜಿನಗಳು ದೂರವಾಗುತ್ತವೆ ಎಂಬ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತೀರ್ಥಸ್ನಾನ ಮಾಡುತ್ತಾರೆ ಎಂಬ ನಂಬಿಕೆ ಇದೆ.

ಸಾವಿರಾರು ಭಕ್ತರು

ಆಟಿ ಅಮಾವಾಸ್ಯೆಯ ದಿನ ಕ್ಷೇತ್ರಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಹಗ್ಗಸೇವೆ ಇಲ್ಲಿನ ವಿಶೇಷತೆಯಾಗಿದ್ದು, ಇದರಿಂದ ರೋಗ ರುಜಿನ ದೂರವಾಗುತ್ತದೆ ಎಂಬ ನಂಬಿಕೆ ಇದೆ. ಜತೆಗೆ ನಾಗ ದೇವರಿಗೆ ಆಶ್ಲೇಷ ಪೂಜೆಯೂ ನಡೆಯುತ್ತದೆ. ತೀರ್ಥಸ್ನಾನಗೈದರೆ ಸರ್ವಪಾಪ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ.
– ಎನ್‌. ಪರಮೇಶ್ವರ ಮಯ್ಯ ಪ್ರಧಾನ ಅರ್ಚಕರು, ನರಹರಿ ಕ್ಷೇತ್ರ

ಔಷಧೀಯ ಗುಣ

ಕಾರಿಂಜ ಕ್ಷೇತ್ರದ ಗದಾತೀರ್ಥದಲ್ಲಿ ಆಟಿ ಅಮಾವಾಸ್ಯೆಯ ತೀರ್ಥಸ್ನಾನ ವಿಶೇಷತೆಯಾಗಿದ್ದು, ಆ ದಿನ ನೀರಿನಲ್ಲಿ ಔಷಧೀಯ ಅಂಶಗಳು ಇರುವುದರಿಂದ ಮಿಂದರೆ ರೋಗರುಜಿನಗಳು ದೂರವಾಗುತ್ತವೆ ಎಂಬ ನಂಬಿಕೆಯಿಂದ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡುತ್ತಾರೆ.
– ಮಿಥುನ್‌ ಭಟ್ ಪ್ರಧಾನ ಅರ್ಚಕರು, ಕಾರಿಂಜ ಕ್ಷೇತ್ರ

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.