ನೂಜಿಬಾಳ್ತಿಲ ಶಾಲೆ: ವಿವಿಧ ಬಗೆಯ ತರಕಾರಿ ತೋಟ

ಫ‌ಸಲು ಬಿಸಿಯೂಟಕ್ಕೆ ಬಳಕೆ; ಸಾರ್ಥಕವಾಯಿತು ವಿದ್ಯಾರ್ಥಿಗಳ ಶ್ರಮ

Team Udayavani, Nov 23, 2019, 4:01 AM IST

tt-9

ಕಲ್ಲುಗುಡ್ಡೆ: ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿಯೇ ಸಮೃದ್ಧ ತರಕಾರಿ ಕೃಷಿಯ ಕೈ ತೋಟ ನಿರ್ಮಿಸಿ, ಮಧ್ಯಾಹ್ನದ ಬಿಸಿಯೂಟಕ್ಕೆ ಅನುಕೂಲವಾಗುವಂತೆ ವಿವಿಧ ಬಗೆಯ ತರಕಾರಿಗಳನ್ನು ಬೆಳೆದು ಮಾದರಿಯಾಗಿದ್ದಾರೆ ಈ ಶಾಲೆಯವರು.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವಿಶೇಷ ತರಕಾರಿ ಕೈ ತೋಟವನ್ನು ಮಾಡಿದ್ದು, ಇದೀಗ ತರಕಾರಿ ಯಥೇತ್ಛವಾಗಿ ಬೆಳೆದು ಫ‌ಸಲು ಬಂದಿದೆ. ಶ್ರಮಪಟ್ಟ ತಂಡ ಇದೀಗ ಸಂತೋಷದ ನಗೆ ಬೀರಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 150ಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಶಾಲಾ ಆವರಣದ ಖಾಲಿ ಜಾಗದಲ್ಲಿ ತರಕಾರಿ ಬೆಳೆಯಲಾಗಿದೆ.  ರಕ್ಷಣೆಯ ದೃಷ್ಟಿಯಿಂದ ಕೈ ತೋಟಕ್ಕೆ ಸುತ್ತ ತಡೆಬೇಲಿ ನಿರ್ಮಿಸಲಾಗಿದೆ.

ವಿವಿಧ ಬಗೆಯ ತರಕಾರಿ
ಇಲ್ಲಿ ನಿರ್ಮಿಸಲಾದ ತರಕಾರಿ ತೋಟದಲ್ಲಿ ಅಲಸಂಡೆ, ಬಸಳೆ, ಬೆಂಡೆಕಾಯಿ, ಬದನೆ, ತೊಂಡೆಕಾಯಿ ಸಹಿತ ವಿವಿಧ ಬಗೆಯ ತರಕಾರಿಗಳನ್ನು ಬೆಳೆಯಲಾಗಿದೆ. ಸ್ಥಳೀಯವಾಗಿ ತರಕಾರಿ ಬೀಜಗಳನ್ನು ಪಡೆದು ಶಾಲಾ ಆವರಣದಲ್ಲಿಯೇ ಕೈತೋಟ ರಚಿಸಲಾಗಿದೆ.

ಎಸ್‌ಡಿಎಂಸಿ ಪ್ರಯತ್ನ
ಸರಕಾರಿ ಶಾಲೆಯಲ್ಲಿ ಈ ವಿನೂತನ ತರಕಾರಿ ತೋಟ ನಿರ್ಮಿಸಿರುವುದರ ಹಿಂದೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪ್ರಯತ್ನವಿದೆ. ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಗೌಡ ಅವರ ನೇತೃತ್ವದಲ್ಲಿ ತರಕಾರಿ ತೋಟ ರಚಿಸಲಾಗಿದೆ. ಶಾಲಾ ಶಿಕ್ಷಕರ, ಹೆತ್ತವರ ಸಹಕಾರದೊಂದಿಗೆ, ನೂಜಿಬಾಳ್ತಿಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರ ಶ್ರಮದಾನವನ್ನು ಪಡೆಯಲಾಗಿದೆ. ಇದೀಗ ತರಕಾರಿ ತೋಟಕ್ಕೆ ಸ್ವತಃ ಎಸ್‌ಡಿಎಂಸಿ ಅಧ್ಯಕ್ಷರೇ ನೀರು ಹಾಯಿಸಲು ಮುತುವರ್ಜಿ ವಹಿಸಿದ್ದಾರೆ. ಜತೆಗೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಮಿತಿಯವರು ಕೈಜೋಡಿಸುತ್ತಿದ್ದಾರೆ. ತರಕಾರಿ ಬೆಳೆದು ಫ‌ಸಲು ಬಂದಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಜಾಸ್ತಿಯಾದ್ದಲ್ಲಿ ಅಂಗಡಿಗಳಿಗೆ ಕೊಟ್ಟು ಬದಲಿ ತರಕಾರಿ ಪಡೆಯಲಾಗುತ್ತದೆ ಎನ್ನುತ್ತಾರೆ ಶಿಕ್ಷಕರು.

ಮಾದರಿ ನಡೆ
ಕೃಷಿಯಲ್ಲಿ ಆಸಕ್ತಿ ಕಳೆದು ಕೊಳ್ಳುತ್ತಿರುವ ಈ ಕಾಲದಲ್ಲಿ ಶಾಲೆ ಯಲ್ಲಿಯೇ ತರಕಾರಿ ತೋಟ ನಿರ್ಮಿಸಿ, ಶಾಲಾ ಬಳಕೆಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇಂತಹ ಪ್ರಯತ್ನಗಳಿಂದ ವಿದ್ಯಾರ್ಥಿಗಳಲ್ಲಿಯೂ ಕೃಷಿಯ ಕುರಿತು ಆಸಕ್ತಿ ಬೆಳೆಯಲು ಸಾಧ್ಯವಾಗಲಿದೆ.

ಅಧ್ಯಕ್ಷರ ಪ್ರಯತ್ನ
ನಮ್ಮ ಶಾಲೆಯಲ್ಲಿ ಸುಂದರವಾದ ತರಕಾರಿ ತೋಟ ನಿರ್ಮಿಸಿದ್ದು, ಇದೀಗ ಫ‌ಸಲು ಬಂದು ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಗೌಡ ಅವರ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೂ ಪ್ರತಿದಿನ ಬಗೆ ಬಗೆಯ ತರಕಾರಿಯಿಂದ ತಯಾರಿಸಿದ ಪದಾರ್ಥ ಸೇವಿಸಬಹುದಾಗಿದೆ.
– ಶ್ರೇಯಾನ್ಸ್‌ ಎಚ್‌.ಎಸ್‌.  ಮುಖ್ಯ ಶಿಕ್ಷಕ, ನೂಜಿಬಾಳ್ತಿಲ

ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.