‘ಸಮಸ್ಯೆ ನೀಗಿಸಲು ಅಧಿಕಾರಿಗಳಲ್ಲಿ ಹೊಂದಾಣಿಕೆ ಅಗತ್ಯ’


Team Udayavani, Jun 23, 2019, 5:00 AM IST

24

ಬೆಳ್ತಂಗಡಿ: ಮಳೆಗಾಲದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಈ ಸಮಸ್ಯೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಸಿಬಂದಿ ಹೊಂದಾಣಿಕೆ ಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಹರೀಶ್‌ ಪೂಂಜ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಬೆಳ್ತಂಗಡಿ ಮೆಸ್ಕಾಂ ಕಚೇರಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ದೂರ ಮಾಡುವ ನಿಟ್ಟಿನಲ್ಲಿ ತಾಲೂಕಿ ನಲ್ಲಿ ಮೊದಲ ಬಾರಿಗೆ ಮೆಸ್ಕಾಂನ ಎಂಜಿನಿ ಯರ್‌ಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ನಡೆಸಿದರು.

ತಾಲೂಕಿನ ಬಹುತೇಕ ವಿದ್ಯುತ್‌ ತಂತಿಗಳು ಅರಣ್ಯ ಇಲಾಖೆಯ ಸಂಬಂಧಿಸಿದ ಜಾಗದ ಮೂಲಕ ಹಾದು ಹೋಗಿರುವುದರಿಂದ ಇಲಾಖೆಯ ಸಿಬಂದಿಯ ಹೊಂದಾಣಿಕೆಯ ಕೊರತೆಯಿಂದ ಮರದ ರೆಂಬೆಗಳು ತಂತಿ ಗಳಿಗೆ ತಾಗುತ್ತಿವೆ. ಹೀಗಾಗಿ ಅದರ ತೆರವು ಕಾರ್ಯ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಪರಸ್ಪರ ಮಾತುಕತೆ ನಡೆಸಬೇಕಿದೆ.

ನಾಲ್ಕು ಇಲಾಖೆ ಸಭೆ
ವಿದ್ಯುತ್‌ ಸಮಸ್ಯೆ, ರಸ್ತೆ ಕಾಮ ಗಾರಿಗಳನ್ನು ಸುಸೂತ್ರವಾಗಿ ನಡೆಸಲು ಮೆಸ್ಕಾಂ, ಅರಣ್ಯ ಇಲಾಖೆಯ ಜತೆಗೆ ಲೋಕೋ ಪಯೋಗಿ, ಪಂಚಾಯತ್‌ರಾಜ್‌ ಎಂಜಿನಿಯರ್‌ಗಳನ್ನೂ ಸೇರಿಸಿ ಸಭೆ ನಡೆಸ ಲಾಗುವುದು. ಜನರಿಗೆ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಹೊಂದಾಣಿಕೆ ನಡೆಸಬೇಕು ಎಂದು ಹರೀಶ್‌ ಪೂಂಜ ಸೂಚಿಸಿದರು.

ರೆಂಬೆ ಕಡಿಯಲು ಅನುಮತಿ ಇಲ್ಲ
ವೇಣೂರಿನಲ್ಲಿ ಹೊಸದಾಗಿ ಸಬ್‌ಸ್ಟೇಷನ್‌ ನಿರ್ಮಾಣವಾಗಿದ್ದು, ಅದರಿಂದ ಹೊಸಂಗಡಿ, ಬಡಕೋಡಿ, ಕಾಶಿಪಟ್ಣ ಗ್ರಾಮಗಳ ವಿದ್ಯುತ್‌ ಸಮಸ್ಯೆ ನಿವಾರಣೆ ದೃಷ್ಟಿಯಿಂದ ತಂತಿ ಹಾದುಹೋಗಲು ಮೂಡುಬಿದಿರೆ ರಸ್ತೆಯಲ್ಲಿ ವಿದ್ಯುತ್‌ ಕಂಬಗಳನ್ನು ಅಳವಡಿಸಲಾಗಿದೆ. ಆದರೆ ಪ್ರಸ್ತುತ ರೆಂಬೆ ಕಡಿಯಲು ಅರಣ್ಯ ಇಲಾಖೆ ಅನುಮತಿ ನೀಡದೇ ಇರುವುದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಮೆಸ್ಕಾಂ ಎಇಇ ಶಿವಶಂಕರ್‌ ಅವರು ಶಾಸಕರ ಗಮನಕ್ಕೆ ತಂದರು.

20 ಕೋ. ರೂ. ಅನುದಾನ
ಪ್ರಸ್ತುತ ಅರಣ್ಯ ಇಲಾಖೆಯ ಅನುಮತಿ ಗಿಂತಲೂ ಮುಖ್ಯವಾಗಿ ಮೆಸ್ಕಾಂ ಲೋಕೋ ಪಯೋಗಿ ಇಲಾಖೆಯ ಅನುಮತಿ ಪಡೆಯ ಬೇಕಿದೆ. ಆ ರಸ್ತೆಯ ಅಭಿವೃದ್ಧಿಗೆ 20 ಕೋ. ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿ ವೇಳೆ ತೊಂದರೆಯಾಗ ಬಾರದು ಎಂದು ಶಾಸಕರು ತಿಳಿಸಿದರು. ಪ್ರಸ್ತುತ ಅಳವಡಿಸಿರುವ ಕಂಬಗಳನ್ನು ರಸ್ತೆಯಿಂದ ಸಾಕಷ್ಟು ದೂರದಲ್ಲಿದೆ ಎಂದು ಎಇಇ ಸಲಹೆ ನೀಡಿದರು.

ಅಪಾಯಕಾರಿ ಮರ ತೆರವು
ಹೆದ್ದಾರಿ ಬದಿ ಹಳೆಕೋಟೆ ವಾಣಿ ಕಾಲೇಜು ಸಮೀಪ ಹಾಗೂ ಧರ್ಮಸ್ಥಳ ರಸ್ತೆಯ ನೀರಚಿಲುಮೆ ಬಳಿ ಇರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಶಾಸಕರು ಸಲಹೆ ನೀಡಿದ್ದು, ಅದರ ಕುರಿತು ಗಮನಿಸಲಾಗುವುದು ಎಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ ಭರವಸೆ ನೀಡಿದರು. ನಾವುಂದ ರಸ್ತೆಯಲ್ಲಿರುವ ಅಪಾಯಕಾರಿ ಮರಗಳ ತೆರವಿನ ಕುರಿತು ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯವರು ಸ್ಥಳ ಪರಿಶೀಲನೆ ಮಾಡುವಂತೆ ಶಾಸಕರು ತಿಳಿಸಿದರು. ಕೊಕ್ಕಡ ಪೇಟೆ, ಎಂಜಿರ ರಸ್ತೆ ಅಪಾಯಕಾರಿ ಮರಗಳ ತೆರವಿಗೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕತ್ತರಿಗುಡ್ಡೆ, ಪೆರಾಲ್ದರಕಟ್ಟೆಯಲ್ಲಿರುವ ಅಪಾಯಕಾರಿ ಮರಗಳ ಕುರಿತು ಸಭೆಯ ಗಮನಕ್ಕೆ ತರಲಾಯಿತು.

ನೀರಿನ ಬರ ತಪ್ಪಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಮಳೆ ನೀರು ಇಂಗಿಸುವ ಕುರಿತು ದೊಡ್ಡ ಅಭಿಯಾನ ನಡೆಸುವ ಯೋಚನೆ ಇದ್ದು, ಹೀಗಾಗಿ ಅರಣ್ಯ ಹಾಗೂ ಮೆಸ್ಕಾಂನವರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒಂದೊಂದು ಯೋಜನೆಯನ್ನು ಅನುಷ್ಠಾನಗೊಳಿಸಿ ವರದಿ ನೀಡುವಂತೆ ಶಾಸಕ ಹರೀಶ್‌ ಪೂಂಜ ಅವರು ಸೂಚನೆ ನೀಡಿದರು. ಜತೆಗೆ ಇದೇ ವಿಚಾರವಾಗಿ ಮುಂದೆ ಪಿಡಿಒಗಳ ಸಭೆ ಕರೆಯಲಾಗು ವುದು ಎಂದು ತಿಳಿಸಿದರು.

ನೀರಿಂಗಿಸುವ ಯೋಜನೆ: ಸೂಚನೆ
ನೀರಿನ ಬರ ತಪ್ಪಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಮಳೆ ನೀರು ಇಂಗಿಸುವ ಕುರಿತು ದೊಡ್ಡ ಅಭಿಯಾನ ನಡೆಸುವ ಯೋಚನೆ ಇದ್ದು, ಹೀಗಾಗಿ ಅರಣ್ಯ ಹಾಗೂ ಮೆಸ್ಕಾಂನವರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಒಂದೊಂದು ಯೋಜನೆಯನ್ನು ಅನುಷ್ಠಾನಗೊಳಿಸಿ ವರದಿ ನೀಡುವಂತೆ ಶಾಸಕ ಹರೀಶ್‌ ಪೂಂಜ ಅವರು ಸೂಚನೆ ನೀಡಿದರು. ಜತೆಗೆ ಇದೇ ವಿಚಾರವಾಗಿ ಮುಂದೆ ಪಿಡಿಒಗಳ ಸಭೆ ಕರೆಯಲಾಗು ವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.