ಹತ್ತೂರಿನ ಜ್ಞಾನದಾಹ ನೀಗಿಸಿದ ಬಂಗರಸರ ನಾಡಿನ ಬಂಗಾಡಿ ಶಾಲೆ

ಮುಳಿಹುಲ್ಲಿನ ಜೋಪಡಿಯಿಂದ ಸ್ಮಾರ್ಟ್‌ ಕ್ಲಾಸ್‌ವರೆಗೆ

Team Udayavani, Nov 22, 2019, 1:36 AM IST

pp-60

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1913 ಶಾಲೆ ಆರಂಭ
ಕಾರ್ಕಳ ಜೈನ ಮಠ, ಬಂಗಾಡಿ ಅರಸರಿಂದ ಸ್ಥಳದಾನ

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನವರು ಶಿಕ್ಷಣಕ್ಕಾಗಿ ಬಂಗಾಡಿಯಿಂದ 20 ಕಿ.ಮೀ. ಸಾಗಿ ಬೆಳ್ತಂಗಡಿಗೆ ಆಗಮಿಸಬೇಕಿತ್ತು. ಇದನ್ನರಿತ ಅಂದಿನ ಬಂಗಾಡಿ ಅರಸ ಶ್ರೀಧರ ಬಲ್ಲಾಳರು 1913ರಲ್ಲಿ ತಮ್ಮ ಸ್ಥಳದಲ್ಲಿ ಮುಳಿಹುಲ್ಲಿನ ಜೋಪಡಿ ಯಲ್ಲಿ ಆರಂಭಿಸಿದ್ದರು. ಪ್ರಸಕ್ತ ಈ ಶಾಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಕಾರ್ಕಳ ಜೈನ ಮಠ, ಬಂಗಾಡಿ ಅರಸರು ನೀಡಿದ ಮೂರುವರೆ ಎಕ್ರೆ ಪ್ರದೇಶದಲ್ಲಿ ಶಾಲೆ, ಕ್ರೀಡಾಂಗಣ ಹೊಂದಿದೆ. 1- 4ನೇ ತರಗತಿವರೆಗಿದ್ದ ಶಾಲೆಯನ್ನು 1965ರಲ್ಲಿ ಸರಕಾರದ ಸುಪರ್ದಿಗೆ ನೀಡಲಾಯಿತು. 2013ರಲ್ಲಿ ಉನ್ನತೀಕರಿಸಿದ ಶಾಲೆಯಾಗಿ ಬದಲಾಯಿತು. 2012-13ರಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದ ರಮಾನಂದ ಅವರ ನೇತೃತ್ವ ದಲ್ಲಿ 1 ವರ್ಷ 50 ಕಾರ್ಯಕ್ರಮ ಹಮ್ಮಿಕೊಂಡು ಶತಮಾನೋತ್ಸವ ಆಚರಿಸಿತ್ತು. 1990-91ರಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ವಜ್ರಮಹೋತ್ಸವ ಆಚರಿಸಲಾಗಿದೆ.

ಮುಖ್ಯೋಪಾಧ್ಯಾಯರು
ಆರಂಭದಲ್ಲಿ ಮುಖ್ಯೋಪಾಧ್ಯಾಯರಾಗಿ ಕೆ.ಜಿ. ಶೆಣೈ, ಶ್ರೀವರ್ಮ, ಶಿವರಾಮ್‌, ದೇವಕಿ, ಶಿವಮ್ಮ, ಸುಭಾಷ್‌ ಜಾಧವ್‌ ಸಹಿತ ಪ್ರಸಕ್ತ ಪ್ರಭಾರ ಮುಖ್ಯ ಶಿಕ್ಷಕರಾಗಿ ಅಮಿತಾನಂದ ಹೆಗ್ಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಸನತ್‌ ಕುಮಾರ್‌, ಶ್ರೀಪಾಲಿಂದ್ರ, ಇಬ್ರಾಹಿಂ, ಪುರುಷೋತ್ತಮ ಮತ್ತಿತರರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಆರಂಭದಲ್ಲಿ 10ಮಕ್ಕಳಿದ್ದ ಶಾಲೆ ಬಳಿಕ 1980ರ‌ಲ್ಲಿ 600ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದರು. ಪ್ರಸಕ್ತ 1-8ರ ವರೆಗೆ 208 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, 9 ಮಂದಿ ಶಿಕ್ಷಕರಿದ್ದಾರೆ.

ಹಳೆ ವಿದ್ಯಾರ್ಥಿಗಳು
ಅರಸು ಶ್ರೀಧರ ಬಳ್ಳಾಲರ ಚಿಕ್ಕಪ್ಪನ ಮಗ (ತಮ್ಮ) ಸಾಹಿತಿ ಬಿ. ರವಿರಾಜ ಬಲ್ಲಾಳ್‌ (97), ಮಾಜಿ ಸಚಿವ ಗಂಗಾಧರ ಗೌಡ, ಖ್ಯಾತ ಸಾಹಿತಿ ಅನಂತರಾಮ ಬಂಗಾಡಿ, ಖ್ಯಾತ ಚರ್ಮರೋಗ ತಜ್ಞ ಲೋಕೇಶ್‌, ಮಂಗಳೂರು ಕೆ.ಪಿ.ಟಿ. ನಿವೃತ್ತ ಪ್ರಾಂಶುಪಾಲ ಜೋಸ್‌, ಧರ್ಮಸ್ಥಳ ಜಮಉಗ್ರಾಣ ಮುತ್ಸದ್ಧಿ ಭುಜಬಲಿ ಬಿ., ಬಂಗಾಡಿ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಲಕ್ಷ್ಮಣ ಗೌಡ, ಶಾಲಾ ಎಸ್‌.ಡಿ.ಎಂ.ಸಿ. ಅಧ್ಯಕ್ಷ ವಿಶ್ವನಾಥ ಗೌಡ, ಬಂಗಾಡಿ ತಾ.ಪಂ. ಅಧ್ಯಕ್ಷ ಮುಕುಂದ ಸುವರ್ಣ, ನಿವೃತ್ತ ಗ್ರಾಮ ಲೆಕ್ಕಿಗ ನಾಬಿರಾಜ್‌ ಇಂದ್ರ, ತಾ.ಪಂ. ಸದಸ್ಯ ಗಣೇಶ್‌ ಕಣಲ್‌, ಅಗರಿಮಾರು ದಾಮೋದರ ಮತ್ತಿತರರು ಈ ಶಾಲೆಯಲ್ಲಿ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಗುರುತಿಸಿಕೊಂಡಿದ್ದಾರೆ.

ಶಾಲೆಗೆ ಸಂದ ಪುರಸ್ಕಾರಗಳು
2013ರಲ್ಲಿ ಈ ಶಾಲೆಗೆ ಉತ್ತಮ ಶಾಲೆ ಪ್ರಶಸ್ತಿ ಸಂದಿದೆ. ದೈಹಿಕ ಶಿಕ್ಷಣ ಶಿಕ್ಷಕ ಅಬ್ರಾಹಂ ಅವರ ಮಾರ್ಗದರ್ಶನದಲ್ಲಿ ಖೋ ಖೋ ಪಂದ್ಯಾಟದಲ್ಲಿ ತಾಲೂಕು ಮಟ್ಟದಲ್ಲಿ ನಿರಂತರ 10 ವರ್ಷ ಪ್ರಶಸ್ತಿ ಗೆದ್ದಿದೆ. ಶಾಲೆಯಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌, ಸ್ಕೌಟ್ಸ್‌-ಗೈಡ್ಸ್‌ ರ್ಯಾಲಿ, ಕರಾಟೆ ಪಂದ್ಯಾಟ, ಪ್ರತಿ¸ಭಾ ಕಾರಂಜಿ ಆಯೋಜಿಸುತ್ತಾ ಬಂದಿದೆ. ಸುಸಜ್ಜಿತ ಆಟದ ಮೈದಾನ, ತರಗತಿ ಕೊಠಡಿಗಳು, ಇಂಟರ್‌ಲಾಕ್‌ ಅಳವಡಿಕೆ, ಸ್ಮಾರ್ಟ್‌ ಕ್ಲಾಸ್‌ ಆರಂಭಗೊಳ್ಳುತ್ತಿದ್ದು, ಕಾರಂಜಿ, ಹೂ ತೋಟ, ಎಂ.ಆರ್‌.ಪಿ.ಎಲ್‌. ನಿಧಿಯಿಂದ ಶೌಚಾಲಯ ನಿರ್ಮಾಣಗೊಳ್ಳುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ 106 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು, ಇಲಾಖೆ ಹಾಗೂ ಊರವರ ಸಹಕಾರದಿಂದ ಉತ್ತಮ ಭೌತಿಕ ಸೌಲಭ್ಯ ಕಲ್ಪಿಸುವುದರೊಂದಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಲಾಗಿದೆ.
ಅಮಿತಾನಂದ ಹೆಗ್ಡೆ, ಮುಖ್ಯೋಪಾಧ್ಯಾಯರು

ನಾನು ಹುಟ್ಟುವ ಮುಂಚೆಯೇ ಅರಸು ಶ್ರೀಧರ ಬಲ್ಲಾಳರು ಸ್ಥಾಪಿಸಿದ್ದ ಬಂಗಾಡಿ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದೇನೆ. ಶಾಲೆ ಬಹಳಷ್ಟು ಅಭಿವೃದ್ಧಿ ಕಂಡಿದೆ.  ಅಂದು ಎಳನೀರು ಪ್ರದೇಶದಿಂದಲೂ ಮಕ್ಕಳು ಬರುತ್ತಿದ್ದರು.  ಇಂದು ಈ ಊರಿಗೆ ಇದೇ ಶಾಲೆ ಆಶ್ರಯ.
-ಬಿ. ರವಿರಾಜ ಬಲ್ಲಾಳ (ಬಂಗಾಡಿ ಅರಮನೆ), ಸಾಹಿತಿ, ಹಳೆ ವಿದ್ಯಾರ್ಥಿ

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.