ಮಂಜೂರಾದ 27 ಹುದ್ದೆಗಳಲ್ಲಿ 6 ಮಂದಿ ಮಾತ್ರ ಕಾರ್ಯನಿರ್ವಹಣೆ


Team Udayavani, Jan 23, 2020, 4:37 AM IST

led-11

ಬಂಟ್ವಾಳ: ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರಕಾರ ವಿವಿಧ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದು, ಆದರೆ ಅದನ್ನು ಅನುಷ್ಠಾನಗೊಳಿಸುವ ಇಲಾಖೆಯಲ್ಲಿ ಸಿಬಂದಿ ಕೊರತೆ ಕಾಡುತ್ತಿದೆ. ಬಂಟ್ವಾಳ ತಾ| ಕೃಷಿ ಇಲಾಖೆಗೆ ಮಂಜೂರಾಗಿರುವ 27 ಹುದ್ದೆಗಳಲ್ಲಿ 6 ಮಂದಿ ಮಾತ್ರ ಕಾರ್ಯ ನಿರ್ವಹಿಸು ತ್ತಿದ್ದು, ಶೇ. 77.77ಕ್ಕಿಂತಲೂ ಹೆಚ್ಚು ಹುದ್ದೆ ಖಾಲಿ ಇವೆ.

ಈ ರೀತಿಯಲ್ಲಿ ಮಂಜೂರಾಗಿರುವ ಹುದ್ದೆಗಳಲ್ಲಿ ಖಾಲಿಯಾಗಿರುವುದೇ ಹೆಚ್ಚಿದ್ದಾಗ ಇರುವ ಸಿಬಂದಿಯೂ ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾದ ಅನಿವಾರ್ಯ ಎದುರಾಗುತ್ತದೆ. ಕಾರ್ಯನಿರ್ವ ಹಿಸುವವರೇ 2- 3 ಹುದ್ದೆಗಳನ್ನು ನಿರ್ವಹಿಸಬೇಕಾ ಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಕೆಲಸವೂ ಸಾಗುವುದಿಲ್ಲ.

ತಾಲೂಕಿನ ಬಿ.ಸಿ. ರೋಡ್‌ನ‌ಲ್ಲಿರುವ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯ ಜತೆಗೆ ಮೂರು ರೈತ ಸಂಪರ್ಕ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಬಂಟ್ವಾಳ ಕಸ್ಬಾ ಸಂಪರ್ಕ ಕೇಂದ್ರವು ಸಹಾಯಕ ನಿರ್ದೇಶಕರ ಕಚೇರಿಯ ವಠಾರದಲ್ಲಿದ್ದರೆ, ಪಾಣೆಮಂಗಳೂರು ಹಾಗೂ ವಿಟ್ಲದಲ್ಲಿ ರೈತ ಸಂಪರ್ಕ ಕೇಂದ್ರ ಗಳು ಕಾರ್ಯಾಚರಿಸುತ್ತಿವೆ.

ರೈತ ಸಂಪರ್ಕ ಕೇಂದ್ರಗಳಲ್ಲಿ ತಲಾ ಒಬ್ಬರು ಕೃಷಿ ಅಧಿಕಾರಿ, 4 ಮಂದಿ ಸಹಾಯಕ ಕೃಷಿ ಅಧಿಕಾರಿ ಕರ್ತವ್ಯ ನಿರ್ವ ಹಿಸಬೇಕಿದ್ದು, ಆದರೆ ಇಲ್ಲಿ ಸಾಧ್ಯವಾಗಿಲ್ಲ. ರೈತರ ಬಳಿಗೆ ತೆರಳಿ ಫೀಲ್ಡ್‌ನಲ್ಲೇ ಕಾರ್ಯ ನಿರ್ವಹಿಸ ಬೇಕಾದ ಕಾರಣ ಸಿಬಂದಿ ಕೊರತೆ ಹೆಚ್ಚಿನ ತೊಂದರೆ ನೀಡುತ್ತದೆ ಎಂದು ಇಲಾಖೆ ಮೂಲ ಹೇಳುತ್ತದೆ.

ಹೊರಗುತ್ತಿಗೆ ಸಿಬಂದಿ
ಹುದ್ದೆಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಒತ್ತಡ ನಿಭಾಯಿಸಲು, ಇಲಾಖೆಯ ಕಾರ್ಯ ಸರಾಗ ವಾಗುವ ನಿಟ್ಟಿನಲ್ಲಿ ಹೊರಗುತ್ತಿಗೆಯ ಸಿಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳಲ್ಲಿ ತಲಾ ಒಬ್ಬೊಬ್ಬರು ಲೆಕ್ಕಿಗರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಒಟ್ಟು 4 ಮಂದಿ ಹೊರಗುತ್ತಿಗೆಯ ಸಿಬಂದಿ ಇದ್ದಾರೆ.

ಮುಖ್ಯಸ್ಥರ ಹುದ್ದೆಯೇ ಖಾಲಿ !
ತಾಲೂಕಿನ ಕೃಷಿ ಇಲಾಖೆಯ ಮುಖ್ಯಸ್ಥರಾಗಿರುವ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯೇ ಖಾಲಿ ಇದೆ. 2018ರ ಎಪ್ರಿಲ್‌ನಿಂದ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯನ್ನು ಬಂಟ್ವಾಳ ಕಸ್ಬಾದ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ ಅವರು ನಿಭಾಯಿಸುತ್ತಿದ್ದಾರೆ. ಇದರ ಜತೆಗೆ ತಾಂತ್ರಿಕ ಅಧಿಕಾರಿ ಸಹಿತ ಅವರು ಮೂರು ಹುದ್ದೆಗಳನ್ನು ನಿಭಾಯಿಸಬೇಕಾದ ಸ್ಥಿತಿ ಇದೆ !

ಭರ್ತಿ-ಖಾಲಿ ವಿವರ
ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರ ಒಂದು ಹುದ್ದೆ ಖಾಲಿಯಿದ್ದು, ಕೃಷಿ ಅಧಿಕಾರಿ 5 ಹುದ್ದೆಗಳಲ್ಲಿ ಇಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಹಾಯಕ ಕೃಷಿ ಅಧಿಕಾರಿಯ 12 ಹುದ್ದೆಗಳಲ್ಲಿ ಮೂರು ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದಂತೆ ಅಧೀಕ್ಷಕರು, ಪ್ರಥಮದರ್ಜೆ ಸಹಾಯಕರು, ಬೆರಳಚ್ಚುಗಾರರು ಹಾಗೂ ವಾಹನ ಚಾಲಕರ ತಲಾ ಒಂದೊಂದು ಹುದ್ದೆಗಳಿದ್ದು, ಎಲ್ಲವೂ ಖಾಲಿ ಇವೆ.

ದ್ವಿತೀಯ ದರ್ಜೆ ಸಹಾಯಕರ ಮಂಜೂರಾದ ಎರಡೂ ಹುದ್ದೆಗಳೂ ಖಾಲಿ ಇವೆ. ಡಿ ದರ್ಜೆ ನೌಕರರ 3 ಹುದ್ದೆಗಳಲ್ಲಿ ಒಬ್ಬರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಒಟ್ಟು ಮಂಜೂರಾದ 27 ಹುದ್ದೆಗಳ ಪೈಕಿ 6 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 21 ಹುದ್ದೆಗಳು ಖಾಲಿ ಇವೆ.

 2-3 ಹುದ್ದೆಗಳ ನಿರ್ವಹಣೆ
ಇಲಾಖೆಯಲ್ಲಿ ಬಹುತೇಕ ಹುದ್ದೆಗಳು ಖಾಲಿಯಿದ್ದು, ಇರುವವರು 2-3 ಹುದ್ದೆಗಳನ್ನು ನಿಭಾಯಿಸುತ್ತಿದ್ದೇವೆ. ನನ್ನ ಖಾಯಂ ಹುದ್ದೆ ಕೃಷಿ ಅಧಿಕಾರಿಯಾಗಿದ್ದು, ಪ್ರಸ್ತುತ ಪ್ರಭಾರ ನೆಲೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯನ್ನು ನಿಭಾಯಿ ಸುತ್ತಿದ್ದೇನೆ. ಉಳಿದಂತೆ ಕೆಲವೊಂದು ಹುದ್ದೆಗಳಿಗೆ ಹೊರಗುತ್ತಿಗೆಯ ಆಧಾರದಲ್ಲಿ ಸಿಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ.
 - ನಾರಾಯಣ ಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕರು, ಬಂಟ್ವಾಳ

-  ಕಿರಣ್‌ ಸರಪಾಡಿ

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.