ಪಜಿರಡ್ಕ ಸಂಗಮ ಕ್ಷೇತ್ರ: ಯಥೇತ್ಛ ನೀರು

ಪ್ರಕೃತಿದತ್ತ ಕಲ್ಲುಗಳಿಂದಲೇ ನಿರ್ಮಾಣವಾದ ಅಣೆಕಟ್ಟು

Team Udayavani, Jun 11, 2019, 5:50 AM IST

b-19

ಬೆಳ್ತಂಗಡಿ: ನದಿ, ಬಾವಿಗಳು ಬತ್ತಿಹೋಗಿ ನಾಡೆಲ್ಲ ಬರದಿಂದ ತತ್ತರಿಸಿದ್ದರೂ ಸಂಗಮ ಕ್ಷೇತ್ರವೆಂದೇ ಹೆಸರಾದ ಕನ್ಯಾಡಿ ಸಮೀಪದ ಪಜಿರಡ್ಕ ಶ್ರೀ ಸದಾಶಿವ ದೇವಸ್ಥಾನ ಮುಂಭಾಗ ಹೊಳೆ ತುಂಬಾ ನೀರು ಯಥೇತ್ಛವಾಗಿ ಹರಿಯುತ್ತಿದೆ.

ಕಲ್ಮಂಜ ಗ್ರಾಮದ ಸುತ್ತಮುತ್ತ 10 ಗ್ರಾಮಗಳಿಗೆ ಒಳಪಟ್ಟ 800 ವರ್ಷ ಇತಿಹಾಸವಿರುವ ಮಾಗಣೆ ದೇವಸ್ಥಾನ ವಾಗಿರುವ ಪಜಿರಡ್ಕ ಕ್ಷೇತ್ರದ ಮುಂಭಾಗ ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳೆರಡು ಸಂಗಮವಾಗುತ್ತವೆ. ಈ ಬಾರಿಯ ಅಂತರ್ಜಲ ಮಟ್ಟ ಕುಸಿತ ಕಂಡಿರುವ ಮಧ್ಯೆಯೂ ನದಿಯಲ್ಲಿ 10 ಅಡಿಗೂ ಹೆಚ್ಚು ನೀರು ನಿಂತಿದೆ.

ಪ್ರಾಕೃತಿಕ ಡ್ಯಾಂ
ದೇವಸ್ಥಾನ ಬಲಭಾಗದಲ್ಲಿ ನೂರು ಮೀಟರ್‌ ಕೆಳಗೆ ಕಲ್ಲಗಂಡಿ ಎಂಬ ಪ್ರದೇಶವಿದೆ. ಇಲ್ಲಿ ನದಿಗೆ ಅಡ್ಡಲಾಗಿ ಪ್ರಕೃತಿದತ್ತವಾಗಿ ಕಲ್ಲುಗಳಿಂದಲೇ ಡ್ಯಾಂ ರೂಪದಲ್ಲಿ ನಿರ್ಮಾಣ ಗೊಂಡಿದೆ. ಇದು ವರ್ಷಪೂರ್ತಿ ನೀರು ಹಿಡಿದಿಟ್ಟುಕೊಳ್ಳು ತ್ತಿರುವುದು ಇಲ್ಲಿನ ವಿಶೇಷ. ಈ ಬಾರಿ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಗೆ ನಿರ್ಮಿಸಿರುವ ಅಣೆಕಟ್ಟಿನಲ್ಲೂ ನೀರಿನ ಪ್ರಮಾಣ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸ್ವಲ್ಪ ಇಳಿಮುಖವಾಗಿತ್ತು. ಇಲ್ಲಿಂದ ಪಜಿರಡ್ಕ ದೇವಸ್ಥಾನಕ್ಕೆ ಕೆಲವೇ ಅಂತರವಿದೆ. ಮುಂದಿನ ದಿನಗಳಲ್ಲಿ ಪಜಿರಡ್ಕದಲ್ಲಿ ಡ್ಯಾಂ ನಿರ್ಮಾಣ ಗೊಂಡರೆ ಸುತ್ತಮುತ್ತ ಹತ್ತಾರು ಹಳ್ಳಿ ಗಳಿಗೆ ವರ್ಷಪೂರ್ತಿ ನೀರಿನಾಶ್ರಯ ದೊರೆಯಲಿದೆ.

ದೇವಸ್ಥಾನಕ್ಕೆ ರಸ್ತೆ ಸಮಸ್ಯೆ
ದೇವಸ್ಥಾನಕ್ಕೆ ತೆರಳುವ ಮಣ್ಣಿನ ರಸ್ತೆ ಮಳೆಗಾಲದಲ್ಲಿ ಕೆಸರುಮಯ. ದೇವರಗುಡ್ಡೆ ಆತ್ಮಾನಂದ ಸರಸ್ವತಿ ವಿದ್ಯಾಲಯದಿಂದ ದೇವಸ್ಥಾನ ವರೆಗಿನ ರಸ್ತೆ ಡಾಮರು ಕಾಣದೆ ಹಲವು ಕಾಲವಾಗಿದೆ. 10 ಮಾಗಣೆಗೊಳಪಟ್ಟ ದೇಗುಲಕ್ಕೆ ಸೂಕ್ತ ರಸ್ತೆ ನಿರ್ಮಿಸುವ ಬಗೆಗೆ ಸಂಬಂಧಪಟ್ಟವರು ಗಮನ ಹರಿಸದಿರುವುದು ವಿಪರ್ಯಾಸ.

ಕಳೆದ ಬಾರಿ ಸಿಇಒ ಭೇಟಿ
ಈ ಬಾರಿ ನೇತ್ರಾವತಿ ನದಿ ನೀರು ಬತ್ತಿಹೋಗಿರುವ ಹಿನ್ನೆಲೆ ನೇತ್ರಾವತಿ ನದಿಗೆ 2 ಕಡೆ ಸುಮಾರು 7 ಕೋ. ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ಸರಕಾರ ಶೀಘ್ರ ಅನುಮೋದನೆ ನೀಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಜಿ.ಪಂ. ಸಿ.ಇ.ಒ. ಸಹಿತ ಅಧಿಕಾರಿಗಳ ವಿಶೇಷ ಸಭೆ ಕರೆದು ಪರಿಶೀಲನೆಗೆ ಆದೇಶ ನೀಡಲಾಗಿತ್ತು. ಅದರಂತೆ ಇತ್ತೀಚೆಗೆ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಏರ್ಪಟ್ಟ ಬೆನ್ನಿಗೇ ಜಿ.ಪಂ. ಸಿಇಒ ಡಾ| ಸೆಲ್ವಮಣಿ ಮತ್ತು ಸಣ್ಣ ನೀರಾವರಿ ಇಲಾಖೆ ಮೂಲಕ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ವಾರದೊಳಗೆ ಪ್ರಾಜೆಕ್ಟ್ ರಿಪೋರ್ಟ್‌ ಸಿದ್ಧವಾಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ದೇವರ ಕೃಪೆ
ಸಂಗಮ ಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಪಜಿರಡ್ಕದಲ್ಲಿ ವರ್ಷಪೂರ್ತಿ ನೀರಿನ ಸೆಲೆಯಿದೆ. ಶಿಶಿಲ, ಕರಂಬಾರು ಹೊರತುಪಡಿಸಿ ತಾಲೂಕಿನ ಪಜಿರಡ್ಕ ಕ್ಷೇತ್ರದಲ್ಲಿ ಪೆರುವೊಲು ಜಾತಿಯ ದೇವರ ಮೀನು ಕಾಣಬಹುದು. ದೇವರ ಕೃಪೆಯಿಂದಲೇ ನೀರು ಯಥೇತ್ಛವಾಗಿದೆ.
-ತುಕಾರಾಮ ಸಾಲ್ಯಾನ್‌, ಪಜಿರಡ್ಕ ದೇವಸ್ಥಾನ ವ್ಯವಸ್ಥಾಪನ ಸಮಿತಿ

ಚೈತ್ರೇಶ್ ಇಳಂತಿಲ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.