ಪಾಣಾಜೆ: ಡಂಪಿಂಗ್‌ ಯಾರ್ಡ್‌ನಂತಾದ ಜಾಂಬ್ರಿ ಪರಿಸರ

ಕೋಳಿ ತ್ಯಾಜ್ಯದ ದುರ್ವಾಸನೆ, ರಾಶಿ ರಾಶಿ ಘನ ತ್ಯಾಜ್ಯ, ಸೂಕ್ತ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

Team Udayavani, Feb 27, 2020, 4:51 AM IST

JADU-27

ಪಾಣಾಜೆ: ಪಾಣಾಜೆ ಗ್ರಾಮದ ಐತಿಹಾಸಿಕ ಸ್ಥಳ ಜಾಂಬ್ರಿ ಗುಹೆ ಪರಿಸರ ಡಂಪಿಂಗ್‌ ಯಾರ್ಡ್‌ ಆಗಿ ಪರಿವರ್ತನೆಯಾಗುತ್ತಲಿದೆ. ಈ ಪರಿಸರ ತುಂಬಾ ಕೋಳಿ ತ್ಯಾಜ್ಯ, ಘನ ತ್ಯಾಜ್ಯಗಳು ತುಂಬಿ ಹೋಗುತ್ತಿವೆ. ಈಗಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದೆ ಪೂರ್ಣ ಪ್ರಮಾಣದ ಡಂಪಿಂಗ್‌ ಯಾರ್ಡ್‌ ಆಗಿ ಪರಿವರ್ತನೆಗೊಳ್ಳುವ ಭೀತಿಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ರಕ್ಷಿತಾರಣ್ಯ ಪ್ರದೇಶ
ಮಂಗಳೂರು ವಿಭಾಗದ ಪುತ್ತೂರು ವಲಯ ವ್ಯಾಪ್ತಿಗೆ ಬರುವ ರಕ್ಷಿತಾರಣ್ಯ ಪ್ರದೇಶದಲ್ಲಿ ಜಾಂಬ್ರಿ ಪ್ರದೇಶ ಇದೆ. ಸಮತಟ್ಟದ ಪ್ರದೇಶದ ಒಂದು ಭಾಗ ಕೇರಳವಾದರೆ ಮತ್ತೂಂದು ಭಾಗ ಬಂಟಾಜೆ ರಕ್ಷಿತಾರಣ್ಯ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಅಲ್ಲಲ್ಲಿ ಕೋಳಿ ತ್ಯಾಜ್ಯಗಳನ್ನು ಚೀಲಗಳಲ್ಲಿ, ಪ್ಲಾಸ್ಟಿಕ್‌ ಕ್ಯಾನ್‌ಗಳಲ್ಲಿ ಎಸೆಯಲಾಗಿದೆ. ಕಾಡು ಪ್ರಾಣಿಗಳು ತ್ಯಾಜ್ಯಗಳನ್ನು ಜನವಸತಿ ಪ್ರದೇಶಗಳಿಗೆ ತಂದು ಬೀಸಾಡುತ್ತಿವೆ. ಪ್ರದೇಶವೆಲ್ಲ ದುರ್ವಾಸನೆ ಬೀರುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇವೆ. ಹೀಗೆ ಮುಂದುವರಿದರೆ ಮಳೆಗಾಲದಲ್ಲಿ ತ್ಯಾಜ್ಯ ನೀರಿನ ಮೂಲವನ್ನು ಸೇರಿ ಸಾಂಕ್ರಾಮಿಕ ರೋಗ ಗಳು ಬರುವ ಸಾಧ್ಯತೆ ಇದೆ. ಅಲ್ಲದೆ ಪ್ಲಾಸ್ಟಿಕ್‌ ಬಾಟಲಿಗಳು ಎರಡೂ ಭಾಗಗಳಲ್ಲಿ ಕಂಡು ಬರುತ್ತಿವೆ.

ಮದ್ಯ ಸೇವನೆ
ಜಾಂಬ್ರಿ ಪರಿಸರವು ಸಂಜೆ ಸಮಯದಲ್ಲಿ ಮದ್ಯ ಸೇವನೆ ತಾಣವಾಗುತ್ತಿರುವುದಕ್ಕೆ ಅಲ್ಲಿ ಸಿಕ್ಕಿರುವ ಮದ್ಯದ ಬಾಟಲಿಗಳು ಸಾಕ್ಷಿಯಾಗುತ್ತಿವೆ. ಮದ್ಯವನ್ನು ಇಲ್ಲಿ ತಂದು ಸೇವನೆ ಮಾಡಿ ಪರಿಸರವನ್ನು ಹಾಳುಗೆಡಹುವ ಕಿಡಿಗೇಡಿಗಳು ಮದ್ಯದ ಬಾಟಲಿಗಳನ್ನು ಪುಡಿ ಮಾಡಿ ಎಸೆಯುತ್ತಿದ್ದಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕರಿಂದ ಬರುತ್ತಿವೆ. ಸಂಜೆ ಮತ್ತು ರಾತ್ರಿ ಕಿಡಿಗೇಡಿಗಳು ಈ ಪರಿಸರ ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸ್‌ ಮತ್ತು ಅರಣ್ಯ ಇಲಾಖೆ ಗಸ್ತು ನಿರತರಾಗಿ ಕಿಡಿಗೇಡಿಗಳನ್ನು ಗುರುತಿಸಿ ಶಿಕ್ಷಿಸುವ ಕೆಲಸವಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗಿಳಿಯಾಲು ಮನೆಯವರ ಕಾಳಜಿ
ಜಾಂಬ್ರಿ ಗುಹೆಯನ್ನು ಕಾಣಲು ಬರುವ ಪ್ರವಾಸಿಗರಿಗೆ ಮನದಟ್ಟು ಮಾಡುವ ಕೆಲಸ ಗಿಳಿಯಾಲು ಮನೆತನದಿಂದ ಆಗುತ್ತಿದೆ. ಕೆಲವು ವರ್ಷಗಳಿಂದ ಈ ಪ್ರದೇಶಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಈ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸ್ವತ್ಛತೆ ಪಾಠ, ಗುಹೆಯ ವಿಶೇಷತೆ ಬಗ್ಗೆ ಗಿಳಿಯಾಲು ಮನೆಯವರು ಮನವರಿಕೆ ಮಾಡುತ್ತಾರೆ. ಸ್ವತ್ಛತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಜಾಂಬ್ರಿ ಗುಹಾ ಪರಿಸರದಲ್ಲಿ ಸ್ವತ್ಛತೆ ಬಗ್ಗೆ ನಾಮ ಫ‌ಲಕ ಅಳವಡಿಸಲಾಗಿತ್ತು. ಆದರೆ ಅದೂ ಈಗ ನಾಪತ್ತೆಯಾಗಿದೆ.

ಸೂಕ್ತ ಕ್ರಮ ಕೈಗೊಳ್ಳಿ
ಹಲವು ತಿಂಗಳಿಂದ ಜಾಂಬ್ರಿ ಗುಹಾ ಪ್ರದೇಶದಲ್ಲಿ ಕೋಳಿ ತ್ಯಾಜ್ಯ ಹಾಗೂ ಇತರ ತ್ಯಾಜ್ಯ ಹೆಚ್ಚುತ್ತಿದೆ. ತ್ಯಾಜ್ಯಗಳನ್ನು ಎಸೆಯವವರು ಮತ್ತು ಪರಿಸರವನ್ನು ಹಾಳುಗೆಡುವವರನ್ನು ಸಂಬಂಧಪಟ್ಟ ಇಲಾಖೆಯವರು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಗಿಳಿಯಾಲು ಜಿ. ಮಹಾಬಲೇಶ್ವರ ಭಟ್‌.

ಇಲಾಖೆಯವರು ಗಮನಹರಿಸಿ
ಜಾಂಬ್ರಿ ಪ್ರದೇಶವು ರಕ್ಷಿತಾರಣ್ಯ ಪ್ರದೇಶದಲ್ಲಿ ಇದೆ. ಜಾಂಬ್ರಿ ಪರಿಸರವನ್ನು ಹಾನಿ ಮಾಡುವ ಕಿಡಿಗೇಡಿಗಳನ್ನು ಗುರುತಿಸಿ ಪೊಲೀಸ್‌ ಮತ್ತು ಅರಣ್ಯ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
– ನಾರಾಯಣ ಪೂಜಾರಿ, ಅಧ್ಯಕ್ಷ, ಪಾಣಾಜೆ ಗ್ರಾ.ಪಂ.

ಕ್ರಮ ಕೈಗೊಳ್ಳುತ್ತೇವೆ
ತ್ಯಾಜ್ಯದ ಬಗ್ಗೆ ಗ್ರಾಮ ಪಂಚಾಯತ್‌ ಗಮನಕ್ಕೆ ತರಲಾಗಿದೆ. ಕೋಳಿ ತ್ಯಾಜ್ಯವನ್ನು ಎಸೆಯುವವರನ್ನು ಗುರುತಿಸಿ ಎಚ್ಚರಿಕೆ ನೀಡಿದ್ದೇವೆ. ಪ್ರವಾಸಿ ತಾಣವಾಗಿರುವುದರಿಂದ ತ್ಯಾಜ್ಯವನ್ನು ಎಸೆಯುವವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಮೋಹನ್‌, ಅರಣ್ಯ ರಕ್ಷಕ, ಪಾಣಾಜೆ ವಲಯ

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.