ಕಾರಂತರ ಕರ್ಮಭೂಮಿಗೆ ಜೀವ ತುಂಬುವ ಯೋಜನೆ

ಪರ್ಲಡ್ಕದ ಬಾಲವನ ಸಾಹಿತ್ಯ -ಸಾಂಸ್ಕೃತಿಕ ತಾಣವಾಗಿಸಲು ಪ್ರಯತ್ನ: ಎ.ಸಿ. ಡಾ| ಯತೀಶ್‌

Team Udayavani, Feb 3, 2020, 11:14 PM IST

pro-28

ಪುತ್ತೂರು: ಕಡಲತಡಿಯ ಭಾರ್ಗವ, ಜ್ಞಾನಪೀಠ ಪುರಸ್ಕೃತ ಡಾ| ಶಿವರಾಮ ಕಾರಂತರ ಕರ್ಮಭೂಮಿಯಾದ ಪರ್ಲಡ್ಕದ ಬಾಲವನವನ್ನು ಇನ್ನಷ್ಟು ಸಾಹಿತ್ಯ-ಸಾಂಸ್ಕೃತಿಕ ತಾಣವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ| ಯತೀಶ್‌ ಉಳ್ಳಾಲ್‌ ತಿಳಿಸಿದ್ದಾರೆ. ಸೋಮವಾರ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಾಲವನಕ್ಕೆ ಇನ್ನಷ್ಟು ಜನರನ್ನು ಸೆಳೆಯುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದರು.

ಬಾಲವನಕ್ಕೆ ನಮ್ಮ ನಡಿಗೆ
“ಬಾಲವನದತ್ತ ಹೆಜ್ಜೆ ಇಡೋಣ, ಕಾರಂತರ ಕನಸುಗಳಿಗೆ ಜೀವ ತುಂಬೋಣ’ ಎಂಬ ಧ್ಯೇಯದೊಂದಿಗೆ ಬಾಲವನಕ್ಕೆ ನಮ್ಮ ನಡಿಗೆ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಸಾಹಿತಿಗಳು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು, ಸಂಘ ಸಂಸ್ಥೆಗಳು, ಮಕ್ಕಳು ಪತ್ರಕರ್ತರನ್ನು ಸೇರಿಸಿಕೊಳ್ಳಲಾಗುವುದು ಹಾಗೂ 5 ಸಾಂಸ್ಕೃತಿಕ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಸೇರ್ಪಡೆಗೊಳಿಸಿಕೊಂಡು ಪುತ್ತೂರು ಬಸ್‌ ನಿಲ್ದಾಣದ ಬಳಿಯ ಗಾಂಧಿಕಟ್ಟೆಯಿಂದ ಪರ್ಲಡ್ಕದ ಬಾಲವನದ ತನಕ ಜಾಥಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ನಾಟ್ಯರೂಪ ಶಿಲ್ಪ ನಿರ್ಮಾಣ
ಬಾಲವನದಲ್ಲಿ ಕಾರಂತರ ಕಾದಂಬರಿಗಳ ವಸ್ತುಗಳನ್ನು ಬಳಸಿಕೊಂಡು ಚಿತ್ರ ಗ್ಯಾಲರಿ ಮಾಡಲಾಗಿದೆ. ಬಾಲವನವನ್ನು ನಾಟ್ಯರೂಪಿ ಶಿಲ್ಪಗಳ ಬಾಲವನವನ್ನಾಗಿಸುವ ಹಿನ್ನೆಲೆಯಲ್ಲಿ ಇದೀಗ ಕಾರಂತರ ಯಕ್ಷಗಾನದ ವಿವಿಧ ನಾಟ್ಯರೂಪ ಶಿಲ್ಪಗಳನ್ನು ಸಿಮೆಂಟ್‌ ಅಥವಾ ಕ್ಲೇ ಮಾಡೆಲಿಂಗ್‌ ಮೂಲಕ ರಚಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಆ ಮೂಲಕ ಬಾಲವನವನ್ನು “ಕಾರಂತ ಥೀಮ್‌ ಪಾರ್ಕ್‌’ ಮಾಡಲು ಉದ್ದೇಶಿಸಲಾಗಿದೆ ಎಂದು ಸಹಾಯಕ ಆಯುಕ್ತ ಡಾ| ಯತೀಶ್‌ ಉಳ್ಳಾಲ್‌ ತಿಳಿಸಿದರು.

ಬಾಲವನ ಯೋಗ ಕೇಂದ್ರ
ಬಾಲವನದಲ್ಲಿ ಯೋಗ ಕೇಂದ್ರವನ್ನು ಮಾಡಲು ಉದ್ದೇಶಿಸಲಾಗಿದೆ. ಬಾಲವನ ವೆಬ್‌ಸೈಟ್‌ ಅಭಿವೃದ್ಧಿ ಪಡಿಸುವುದು, ಕಾರಂತರ ಜ್ಞಾನಪೀಠ ಪ್ರಶಸ್ತಿಯನ್ನು ಸಾರ್ವಜನಿಕ ಪ್ರದರ್ಶನಕ್ಕೆ ಬಾಲವನದಲ್ಲಿ ವ್ಯವಸ್ಥೆಗೊಳಿಸುವುದು, ಕಾರಂತರ ಕಾದಂಬರಿಗಳ ಚಿತ್ರಪಟಗಳನ್ನು ಖ್ಯಾತ ಕಲಾವಿದರ ಮೂಲಕ ರಚಿಸುವುದು, ಚಿತ್ರ ಗ್ಯಾಲರಿಯ ಕಟ್ಟಡ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನು ಕಾರ್ಯಗತ ಮಾಡಲು ಚಿಂತನೆ ನಡೆಸಲಾಗಿದೆ. ಬಾಲವನ ಅಭಿವೃದ್ಧಿಗೆ ರಾಜ್ಯಮಟ್ಟದಲ್ಲಿ ಸಮಿತಿ ಇರುವ ಹಾಗೆಯೇ ಸ್ಥಳೀಯವಾಗಿ ಬಾಲವನ ಅಭಿವೃದ್ಧಿ ಚಿಂತಕರನ್ನು ಒಗ್ಗೂಡಿಸಿಕೊಂಡು ಕಾರಂತ ತಪೋವನವನ್ನು ಕಾರಂತ ಪರಿಸರವನ್ನಾಗಿಸುವುದು ನಮ್ಮ ಉದ್ದೇಶ. ಬಾಲವನದತ್ತ ಜನತೆ ಹೆಜ್ಜೆ ಇಡುವಂತಾಗಲು ಈ ಪ್ರಯತ್ನ ಎಂದು ಅವರು ತಿಳಿಸಿದರು.

ಮಾ. 20ರಿಂದ ರಂಗಾಯಣ ನಾಟಕೋತ್ಸವ
ಕಾರಂತರ ಬಾಲವನದಲ್ಲಿ ಮೈಸೂರಿನ ರಂಗಾಯಣದ ಮೂರು ದಿನಗಳ ನಾಟಕೋತ್ಸವ ನಡೆಯಲಿದೆ. ಮಾ. 20, 21 ಮತ್ತು 22ರಂದು ಸಂಜೆ 7 ಗಂಟೆಯಿಂದ ರಾತ್ರಿ 9.30ರ ತನಕ ನಡೆಯಲಿದೆ ಎಂದು ಡಾ| ಯತೀಶ್‌ ಮಾಹಿತಿ ನೀಡಿದರು.ಪುತ್ತೂರು ತಹಶೀಲ್ದಾರ್‌ ರಾಹುಲ್‌ ಶಿಂಧೆ, ಕಡಬ ತಹಶೀಲ್ದಾರ್‌ ಜಾನ್‌ ಪ್ರಕಾಶ್‌, ಕಲಾವಿದ ಕೃಷ್ಣಪ್ಪ ಬಂಬಿಲ ಉಪಸ್ಥಿತರಿದ್ದರು.

“ಲಾಂಛನ’ ರಚಿಸುವ ಸ್ಪರ್ಧೆ
ಕಾರಂತರ ಬಾಲವನಕ್ಕೆ ಅದರದ್ದೇ ಆದ ಲಾಂಛನವೊಂದನ್ನು ತಯಾರಿಸುವ ನಿಟ್ಟಿನಲ್ಲಿ ಸ್ಪರ್ಧೆಯೊಂದನ್ನು ಏರ್ಪಡಿಸಲಾಗಿದೆ. ಕಾರಂತರ ಕಲ್ಪನೆ, ಸಾಹಿತ್ಯ, ಹಸಿರು, ಸಂಸ್ಕೃತಿ, ಬಾಲವನ, ಕಾದಂಬರಿಗಳು, ಅವರ ಅಸ್ಮಿತೆ, ಪುತ್ತೂರು ಸಹಿತ ಇಡೀ ಕಾರಂತರ ಬದುಕನ್ನು ಅವಲೋಕನ ಮಾಡುವ ಲಾಂಛನ ರಚನೆಯಾಗಬೇಕಾಗಿದ್ದು, ಸಾರ್ವಜನಿಕರು ಮುಕ್ತವಾಗಿ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಥಮ ಸ್ಥಾನ ಪಡೆದ ಲಾಂಛನಕ್ಕೆ ಬಹುಮಾನ ಹಾಗೂ ಆಯ್ಕೆಗೊಂಡ ಮೊದಲ 10 ಲಾಂಛನಗಳನ್ನು ಬಾಲವನದಲ್ಲಿ ಪ್ರದರ್ಶನ ಮಾಡಲಾಗುವುದು. ಮಾಣಿ – ಮೈಸೂರು ಹೆದ್ದಾರಿಯ ಬೈಪಾಸ್‌ ಬಳಿ ಈ ಲಾಂಛನ ಸಹಿತ ಬಾಲವನ ಪ್ರವೇಶ ದ್ವಾರವನ್ನೂ ರಚಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.